Homeಕ್ರೀಡೆಒಲಂಪಿಕ್ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

- Advertisement -
- Advertisement -

ಮಿಜೋರಾಂನಿಂದ ಒಲಿಂಪಿಕ್ಸ್‌ಗೆ ಆಯ್ಕೆಯಾದ ಮೊದಲ ಹಾಕಿ ಆಟಗಾರ್ತಿ ಲಾಲ್‌ರೆಮ್ಸಿಯಾಮಿ. ನನಗೆ ಹಾಕಿ ಆಡಬೇಕು ಎಂಬ ‘ಅವಾಸ್ತವಿಕ’ವಾದ ಕನಸೊಂದಿತ್ತು ಎನ್ನುವ ರೆಮ್ಸಿಯಾಮಿ, ಅದು ನನಸಾಗಿದ್ದೇಗೆ? ಎಂದು ಮನಬಿಚ್ಚಿ ವಿವರಿಸಿದ್ದಾರೆ.

ನಮ್ಮದು ಬಡ ರೈತ ಕುಟುಂಬ. ಅಪ್ಪ ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ದಿನಕ್ಕೆ 250 ರೂ ಸಿಗುವುದು ಕೂಡ ಕಷ್ಟವಾಗಿತ್ತು. ಅಮ್ಮ ನನ್ನ ಹಾಗೂ ನನ್ನೊಂದಿಗೆ ಒಡಹುಟ್ಟಿದ ಏಳು ಜನರನ್ನು ನೋಡಿಕೊಳ್ಳುತ್ತಾ ಮನೆಯಲ್ಲಿದ್ದರು. ನಾವೆಲ್ಲರೂ ಸರ್ಕಾರಿ ಶಾಲೆಯಲ್ಲಿ ಓದಿದವರು. ನಾನು ಹಿರಿಯ ಮಗಳಾಗಿದ್ದೆ. ಅಪ್ಪ, ಅಮ್ಮನಿಗೆ ಸಹಾಯ ಮಾಡಬೇಕಿದ್ದ ಜವಾಬ್ದಾರಿ ನನಗಿತ್ತು. ಆದರೆ ನನಗೊಂದು ‘ಅವಾಸ್ತವಿಕ’ವಾದ ಕನಸೊಂದಿತ್ತು. ಅದೆಂದರೆ ನಾನು ಹಾಕಿ ಆಡಲು ಬಯಸಿದ್ದೆ.

ನನ್ನಮ್ಮ ಫುಟ್‌ಬಾಲ್‌ ಆಟಗಾರ್ತಿಯಾಗಿದ್ದರು. ನಮ್ಮನ್ನು ಆಟದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುತ್ತಿದ್ದರು. ನನಗೆ ಹಾಕಿ ಕ್ರೀಡೆಯಲ್ಲಿ ಆಸಕ್ತಿಯಿತ್ತು. ನಾವು ಇದ್ದ ಮನೆಯಿಂದ ಸುಮಾರು 84 ಕಿ.ಮೀ ದೂರದಲ್ಲಿ ಹಾಕಿ ಅಕಾಡೆಮಿಯಿತ್ತು. ನಾನು ಹಾಕಿ ಕಲಿಯಲು ಪ್ರತಿದಿನ ಅಲ್ಲಿಗೆ ಹೋಗಿ ಬರುವ ಖರ್ಚನ್ನು ವ್ಯಯಿಸುವಷ್ಟು ಹಣ ನಮ್ಮಲ್ಲಿರಲಿಲ್ಲ. ನನ್ನಪ್ಪ ‘ನಮ್ಮ ಬಳಿ ಹಣವಿಲ್ಲ’ ಎಂದು ಹೇಳಿದ್ದರು.

ಅಕಾಡೆಮಿಯಲ್ಲಿ ಆಟಗಾರರಿಗೆ ತರಬೇತಿ ನೀಡಲು ಹಾಗೂ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳಲು ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂಬುದು ಹೇಗೋ ನನಗೆ ತಿಳಿಯಿತು. ಇದನ್ನು ಖುಷಿಯಿಂದಲೇ ನನ್ನ ಪೋಷಕರಿಗೆ ತಿಳಿಸಿದೆ. ಅಕಾಡೆಮಿಯಲ್ಲಿಯೇ ಉಳಿದು ತರಬೇತಿ ಪಡೆಯಲು ಸಮ್ಮತಿ ನೀಡುವಂತೆ ಅವರನ್ನು ಕೋರಿಕೊಂಡೆ. ಹಾಕಿ ಕ್ರೀಡೆ ಬಗ್ಗೆ ನನಗಿದ್ದ ಆಸಕ್ತಿಯನ್ನು ಅವರಿಗೆ ಮನವರಿಕೆ ಮಾಡಿದೆ. ಪದೇ ಪದೇ ಒತ್ತಾಯ ಮಾಡಿದ ನಂತರ ಅವರು ನಾನು ಅಕಾಡೆಮಿಯಲ್ಲಿ ಉಳಿಯಲು ಒಪ್ಪಿಗೆ ಸೂಚಿಸಿದರು.

ಹಾಕಿ ಟ್ರಯಲ್ಸ್‌ ರೌಂಡ್‌ನಲ್ಲಿ ನಾನು ಉತ್ತಮ ಪ್ರದರ್ಶನ ನೀಡಿ ಅಕಾಡೆಮಿಗೆ ಆಯ್ಕೆಯಾದೆ. ಅಪ್ಪ ನನ್ನನ್ನು ಅಕಾಡೆಮಿಯಲ್ಲಿ ಬಿಟ್ಟು ಮನೆಗೆ ಹೋಗುವಾಗ ‘ನಿನಗೆ ಇಷ್ಟವಾದದ್ದನ್ನೇ ಮಾಡುತ್ತಾ ಸಂತೋಷದಿಂದಿರು’ ಎಂದರು. ನನ್ನ ಕುಟುಂಬದವರನ್ನು ಬಿಟ್ಟಿರುವುದು ನನಗೂ ಕಷ್ಟವಾಗಿತ್ತು. ಪ್ರತಿವರ್ಷ ಕ್ರಿಸ್‌ಮಸ್‌ ರಜಾ ದಿನಗಳಲ್ಲಿ ಮಾತ್ರ ಕುಟುಂಬದವರನ್ನು ಭೇಟಿ ಮಾಡುತ್ತಿದ್ದೆ. ನಾನು ಮನೆಗೆ ಮರಳಿದ್ದಾಗ ಸುತ್ತಮುತ್ತಲಿನ ಜನ, ಸಂಬಂಧಿಕರು ಎಲ್ಲರೂ ‘ನಿಮ್ಮ ಮಗಳು ನಿಮ್ಮೊಟ್ಟಿಗೆ ಇದ್ದು, ಕುಟುಂಬ ನಿರ್ವಹಿಸಬೇಕಿತ್ತು’, ‘ಆಕೆಗೆ ಭವಿಷ್ಯವಿಲ್ಲ’ ಎಂದೆಲ್ಲಾ ನನ್ನ ಕುಟುಂಬದವನ್ನು ಹಂಗಿಸುತ್ತಿದ್ದರು. ಇದೆಲ್ಲವೂ ನನ್ನನ್ನು ಕಾಡದಂತೆ ನನ್ನ ಕುಟುಂಬದವರು ನೋಡಿಕೊಂಡರು. ಆದರೆ, ನನಗೆ ಭಯವಾಯಿತು. ‘ಒಂದಲ್ಲಾ ಒಂದು ದಿನ ನಾನು ಆ ನೀಲಿ ಜರ್ಸಿಯನ್ನು ಧರಿಸುತ್ತೇನೆ ಮತ್ತು ನಿಮಗೆ ಎಲ್ಲವನ್ನೂ ಕೊಡುತ್ತೇನೆ’ ಎಂದು ನಾನು ಅವರಿಗೆ ಭರವಸೆ ನೀಡಿದೆ. ಇದೇ ನನಗೆ ಅಕಾಡೆಮಿಯಲ್ಲಿ ಕಠಿಣ ತರಬೇತಿ ಪಡೆಯಲು ಸಹಕಾರಿಯಾಯಿತು.

ನನ್ನ ಪೋಷಕರು ನನ್ನನ್ನು ಬೆಂಬಲಿಸಿದ್ದು ಮಾತ್ರವಲ್ಲದೇ ಅದಕ್ಕೂ ಮೀರಿ ಜೊತೆಗಿದ್ದರು. ಹೀಗೆ ಒಮ್ಮೆ, ಒಂದು ಪಂದ್ಯಾವಳಿಯಲ್ಲಿ ಆಡಲು ನನ್ನ ಪೋಷಕರ ಸಹಿ ಬೇಕಿತ್ತು. ಅವರು 45 ಕಿ.ಮೀ ದೂರದಲ್ಲಿದ್ದರು. ನಾನು ಇರುವಲ್ಲಿಗೆ ಬಂದು ಸಹಿ ಮಾಡಲು ಬೇಕಾಗುವಷ್ಟು ಹಣ ಅವರ ಹತ್ತಿರವಿರಲಿಲ್ಲ. ಆದರೂ ನನ್ನಪ್ಪ ಬಂದರು; ಅಪ್ಪ ನನ್ನ ಹೀರೋ!

ನಾನು ರಾಷ್ಟ್ರೀಯ ಜೂನಿಯರ್‌ ಹಾಕಿ ತಂಡಕ್ಕೆ ಆಯ್ಕೆಯಾದೆ. ತಂಡದೊಂದಿಗೆ ಆಡಲು ನಾನು ದೆಹಲಿಗೆ ಹೋದೆ. ಹೊಸ ತಂಡ, ಹೊಸ ಪ್ರದೇಶ.. ಎಲ್ಲವೂ ನನಗೆ ಹೊಸದಾಗಿತ್ತು. ನಾನು ಮಾತನಾಡಲು ಸಂಕೋಚಪಡುತ್ತಿದ್ದೆ. ಆದರೆ ನನ್ನ ತಂಡದ ಸಂಗಾತಿಗಳು ತಂಡದ ಸಭೆಗಳಲ್ಲಿ ನಾನು ಮಾತನಾಡುವಂತೆ ಪ್ರೋತ್ಸಾಹಿಸಿದರು. ನನ್ನ ಆತ್ಮವಿಶ್ವಾಸ ಹೆಚ್ಚಾಯಿತು. ಅದನ್ನು ಮೈದಾನದಲ್ಲಿಯೂ ವ್ಯಕ್ತಪಡಿಸಲು ಸಾಧ್ಯವಾಯಿತು. 2016ರಲ್ಲಿ ನಡೆದ ಏಷ್ಯನ್‌ ಕಪ್‌ನಲ್ಲಿ ನಾನು ಭಾರತವನ್ನು ಪ್ರತಿನಿಧಿಸಿದ್ದ ತಂಡದಲ್ಲಿದೆ.

ನನ್ನ ಕಠಿಣ ದಿನಗಳು ಮುಂದಿದ್ದವು. 2019ರಲ್ಲಿ ಜಪಾನ್‌ನಲ್ಲಿ ನಡೆದ ಅಂತರಾಷ್ಟ್ರೀಯ ಹಾಕಿ ಫೇಡರೇಷನ್‌ನ ಸರಣಿಯಲ್ಲಿ ಚಿಲಿ ವಿರುದ್ಧ ಭಾರತದ ಸೆಮಿಫೈನಲ್‌ ಪಂದ್ಯವಿತ್ತು. ಆ ಪಂದ್ಯ ನಡೆಯುವ ಒಂದು ದಿನ ಮೊದಲು ಅಪ್ಪ ನಿಧನರಾದರು. ಅಪ್ಪನ ನಿಧನದಿಂದ ಸಂಪೂರ್ಣವಾಗಿ ಕುಗ್ಗಿಹೋದೆ, ಈ ಕೂಡಲೇ ಮನೆಗೆ ಹೋಗಬೇಕೆಂದು ತುಂಬಾ ಅನ್ನಿಸುತ್ತಿತ್ತು. ಆದರೆ, ಧೈರ್ಯ ಮಾಡಿ ನಾನು ಪಂದ್ಯದಲ್ಲಿ ಆಟವಾಡಲು ನಿರ್ಧರಿಸಿದ್ದೆ. ನನ್ನಪ್ಪ ಕೂಡ ಬಯಸುತ್ತಿದ್ದದ್ದು ಅದನ್ನೆ. ಅಪ್ಪನ ಪ್ರೀತಿ ಎಲ್ಲವನ್ನು ಮರೆತು ನಾನು ಚೆನ್ನಾಗಿ ಆಡುವಂತೆ ಮಾಡುತ್ತಿತ್ತು. ಆ ಟೂರ್ನಿಯಲ್ಲಿ ಭಾರತ ಜಯಗಳಿಸಿತು.

ಆ ದಿನ ಇಂದಿಗೂ ನನಗೆ ನೆನಪಿದೆ. ಆಟ ಮುಗಿಯಿತು ಎಂದು ಸೀಟಿ ಕೂಗುತ್ತಿದ್ದಂತೆ ನಾನು ಭಾವುಕಳಾದೆ. ಅಳಲು ಆರಂಭಿಸಿದೆ. ನನ್ನ ತಂಡದ ಸದಸ್ಯರು ನನ್ನ ಸುತ್ತಲೂ ಒಟ್ಟುಗೂಡಿ, ‘ನಿಮ್ಮ ತಂದೆ ತುಂಬಾ ಸಂತೋಷಪಡುತ್ತಾರೆ’ ಎಂದರು. ನಾನು ಬಯಸಿದ್ದು ಅಪ್ಪನಿಗೆ ನನ್ನ ಬಗ್ಗೆ ಹೆಮ್ಮೆ ಮೂಡಿಸುವುದಾಗಿತ್ತು. ನನ್ನನ್ನು ಬೆಂಬಲಿಸುತ್ತಿದ್ದ, ನನ್ನ ಬಗ್ಗೆ ಹೆಮ್ಮೆ ಪಡುತ್ತಿದ್ದ ನನ್ನ ಅಪ್ಪನಿಗೆ ವಿದಾಯ ಹೇಳಲಾಗಲಿಲ್ಲ ಎಂಬುದು ನನ್ನ ಜೀವನದ ದೊಡ್ಡ ವಿಷಾದದ ಸಂಗತಿ.

ಈಗ ನನ್ನ ಗುರಿ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗೋಲು ಗಳಿಸುವುದು, ಗೆಲ್ಲುವುದು ಮಾತ್ರ. ನನ್ನಪ್ಪನಿಗಾಗಿ, ನನ್ನ ತಂಡಕ್ಕಾಗಿ, ನನ್ನ ಭಾರತಕ್ಕಾಗಿ ನಾನು ಆಡುತ್ತೇನೆ ಎನ್ನುವ ಲಾಲ್‌ರೆಮ್ಸಿಯಾಮಿ ಭಾಗವಹಿಸಿರುವ ಭಾರತ ತಂಡ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್‌ ತಲುಪುವತ್ತ ದಾಪುಗಾಲಿಟ್ಟಿದೆ. ಇದೇ ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿರುವ ಭಾರತೀಯ ಮಹಿಳಾ ಹಾಕಿ ತಂಡ ಗೆಲುವು ಸಾಧಿಸಲಿ ಎಂಬುದು ನಮ್ಮಲ್ಲೆರ ಆಶಯ.

ಕೃಪೆ: ಹ್ಯೂಮನ್ಸ್‌ ಆಫ್‌ ಬಾಂಬೆ (Humans of Bombay)

ಲಾಲ್‌ರೆಮ್ಸಿಯಾಮಿ ಮಿಜೋರಾಂನಿಂದ ಒಲಿಂಪಿಕ್ಸ್‌ಗೆ ಆಯ್ಕೆಯಾದ ಮೊದಲ ಮಹಿಳೆ, ಹಾಕಿ ಆಟಗಾರ್ತಿ ಲಾಲ್‌ರೆಮ್ಸಿಯಾಮಿ ಜನಿಸಿದ್ದು 2000 ಮಾರ್ಚ್‌ 3ರಂದು. ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಮ್ಸಿಯಾಮಿ, 18 ವರ್ಷದೊಳಗಿನ ಭಾರತದ ಹಾಕಿ ತಂಡವನ್ನು ಪ್ರತಿನಿಧಿಸಿ 2018ರ ವರ್ಲ್ಡ್‌ ಕಪ್‌ನಲ್ಲಿ ಸ್ಪರ್ಧಿಸಿದ್ದರು. ಏಷ್ಯನ್‌ ಕಪ್‌ನಲ್ಲಿ ಇವರು ಪ್ರತಿನಿಧಿಸಿದ್ದ ಭಾರತ ತಂಡವು ಬೆಳ್ಳಿ ಪದಕ ಗೆದ್ದಿತ್ತು. ಪ್ರಸ್ತುತ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಇವರು ಪ್ರತಿನಿಧಿಸಿರುವ ಹಾಕಿ ತಂಡವು ಸೆಮಿಫೈನಲ್‌ ಪ್ರವೇಶಿಸಿದೆ.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...