Homeಕ್ರೀಡೆಒಲಂಪಿಕ್ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

- Advertisement -
- Advertisement -

ಮಿಜೋರಾಂನಿಂದ ಒಲಿಂಪಿಕ್ಸ್‌ಗೆ ಆಯ್ಕೆಯಾದ ಮೊದಲ ಹಾಕಿ ಆಟಗಾರ್ತಿ ಲಾಲ್‌ರೆಮ್ಸಿಯಾಮಿ. ನನಗೆ ಹಾಕಿ ಆಡಬೇಕು ಎಂಬ ‘ಅವಾಸ್ತವಿಕ’ವಾದ ಕನಸೊಂದಿತ್ತು ಎನ್ನುವ ರೆಮ್ಸಿಯಾಮಿ, ಅದು ನನಸಾಗಿದ್ದೇಗೆ? ಎಂದು ಮನಬಿಚ್ಚಿ ವಿವರಿಸಿದ್ದಾರೆ.

ನಮ್ಮದು ಬಡ ರೈತ ಕುಟುಂಬ. ಅಪ್ಪ ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ದಿನಕ್ಕೆ 250 ರೂ ಸಿಗುವುದು ಕೂಡ ಕಷ್ಟವಾಗಿತ್ತು. ಅಮ್ಮ ನನ್ನ ಹಾಗೂ ನನ್ನೊಂದಿಗೆ ಒಡಹುಟ್ಟಿದ ಏಳು ಜನರನ್ನು ನೋಡಿಕೊಳ್ಳುತ್ತಾ ಮನೆಯಲ್ಲಿದ್ದರು. ನಾವೆಲ್ಲರೂ ಸರ್ಕಾರಿ ಶಾಲೆಯಲ್ಲಿ ಓದಿದವರು. ನಾನು ಹಿರಿಯ ಮಗಳಾಗಿದ್ದೆ. ಅಪ್ಪ, ಅಮ್ಮನಿಗೆ ಸಹಾಯ ಮಾಡಬೇಕಿದ್ದ ಜವಾಬ್ದಾರಿ ನನಗಿತ್ತು. ಆದರೆ ನನಗೊಂದು ‘ಅವಾಸ್ತವಿಕ’ವಾದ ಕನಸೊಂದಿತ್ತು. ಅದೆಂದರೆ ನಾನು ಹಾಕಿ ಆಡಲು ಬಯಸಿದ್ದೆ.

ನನ್ನಮ್ಮ ಫುಟ್‌ಬಾಲ್‌ ಆಟಗಾರ್ತಿಯಾಗಿದ್ದರು. ನಮ್ಮನ್ನು ಆಟದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುತ್ತಿದ್ದರು. ನನಗೆ ಹಾಕಿ ಕ್ರೀಡೆಯಲ್ಲಿ ಆಸಕ್ತಿಯಿತ್ತು. ನಾವು ಇದ್ದ ಮನೆಯಿಂದ ಸುಮಾರು 84 ಕಿ.ಮೀ ದೂರದಲ್ಲಿ ಹಾಕಿ ಅಕಾಡೆಮಿಯಿತ್ತು. ನಾನು ಹಾಕಿ ಕಲಿಯಲು ಪ್ರತಿದಿನ ಅಲ್ಲಿಗೆ ಹೋಗಿ ಬರುವ ಖರ್ಚನ್ನು ವ್ಯಯಿಸುವಷ್ಟು ಹಣ ನಮ್ಮಲ್ಲಿರಲಿಲ್ಲ. ನನ್ನಪ್ಪ ‘ನಮ್ಮ ಬಳಿ ಹಣವಿಲ್ಲ’ ಎಂದು ಹೇಳಿದ್ದರು.

ಅಕಾಡೆಮಿಯಲ್ಲಿ ಆಟಗಾರರಿಗೆ ತರಬೇತಿ ನೀಡಲು ಹಾಗೂ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳಲು ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂಬುದು ಹೇಗೋ ನನಗೆ ತಿಳಿಯಿತು. ಇದನ್ನು ಖುಷಿಯಿಂದಲೇ ನನ್ನ ಪೋಷಕರಿಗೆ ತಿಳಿಸಿದೆ. ಅಕಾಡೆಮಿಯಲ್ಲಿಯೇ ಉಳಿದು ತರಬೇತಿ ಪಡೆಯಲು ಸಮ್ಮತಿ ನೀಡುವಂತೆ ಅವರನ್ನು ಕೋರಿಕೊಂಡೆ. ಹಾಕಿ ಕ್ರೀಡೆ ಬಗ್ಗೆ ನನಗಿದ್ದ ಆಸಕ್ತಿಯನ್ನು ಅವರಿಗೆ ಮನವರಿಕೆ ಮಾಡಿದೆ. ಪದೇ ಪದೇ ಒತ್ತಾಯ ಮಾಡಿದ ನಂತರ ಅವರು ನಾನು ಅಕಾಡೆಮಿಯಲ್ಲಿ ಉಳಿಯಲು ಒಪ್ಪಿಗೆ ಸೂಚಿಸಿದರು.

ಹಾಕಿ ಟ್ರಯಲ್ಸ್‌ ರೌಂಡ್‌ನಲ್ಲಿ ನಾನು ಉತ್ತಮ ಪ್ರದರ್ಶನ ನೀಡಿ ಅಕಾಡೆಮಿಗೆ ಆಯ್ಕೆಯಾದೆ. ಅಪ್ಪ ನನ್ನನ್ನು ಅಕಾಡೆಮಿಯಲ್ಲಿ ಬಿಟ್ಟು ಮನೆಗೆ ಹೋಗುವಾಗ ‘ನಿನಗೆ ಇಷ್ಟವಾದದ್ದನ್ನೇ ಮಾಡುತ್ತಾ ಸಂತೋಷದಿಂದಿರು’ ಎಂದರು. ನನ್ನ ಕುಟುಂಬದವರನ್ನು ಬಿಟ್ಟಿರುವುದು ನನಗೂ ಕಷ್ಟವಾಗಿತ್ತು. ಪ್ರತಿವರ್ಷ ಕ್ರಿಸ್‌ಮಸ್‌ ರಜಾ ದಿನಗಳಲ್ಲಿ ಮಾತ್ರ ಕುಟುಂಬದವರನ್ನು ಭೇಟಿ ಮಾಡುತ್ತಿದ್ದೆ. ನಾನು ಮನೆಗೆ ಮರಳಿದ್ದಾಗ ಸುತ್ತಮುತ್ತಲಿನ ಜನ, ಸಂಬಂಧಿಕರು ಎಲ್ಲರೂ ‘ನಿಮ್ಮ ಮಗಳು ನಿಮ್ಮೊಟ್ಟಿಗೆ ಇದ್ದು, ಕುಟುಂಬ ನಿರ್ವಹಿಸಬೇಕಿತ್ತು’, ‘ಆಕೆಗೆ ಭವಿಷ್ಯವಿಲ್ಲ’ ಎಂದೆಲ್ಲಾ ನನ್ನ ಕುಟುಂಬದವನ್ನು ಹಂಗಿಸುತ್ತಿದ್ದರು. ಇದೆಲ್ಲವೂ ನನ್ನನ್ನು ಕಾಡದಂತೆ ನನ್ನ ಕುಟುಂಬದವರು ನೋಡಿಕೊಂಡರು. ಆದರೆ, ನನಗೆ ಭಯವಾಯಿತು. ‘ಒಂದಲ್ಲಾ ಒಂದು ದಿನ ನಾನು ಆ ನೀಲಿ ಜರ್ಸಿಯನ್ನು ಧರಿಸುತ್ತೇನೆ ಮತ್ತು ನಿಮಗೆ ಎಲ್ಲವನ್ನೂ ಕೊಡುತ್ತೇನೆ’ ಎಂದು ನಾನು ಅವರಿಗೆ ಭರವಸೆ ನೀಡಿದೆ. ಇದೇ ನನಗೆ ಅಕಾಡೆಮಿಯಲ್ಲಿ ಕಠಿಣ ತರಬೇತಿ ಪಡೆಯಲು ಸಹಕಾರಿಯಾಯಿತು.

ನನ್ನ ಪೋಷಕರು ನನ್ನನ್ನು ಬೆಂಬಲಿಸಿದ್ದು ಮಾತ್ರವಲ್ಲದೇ ಅದಕ್ಕೂ ಮೀರಿ ಜೊತೆಗಿದ್ದರು. ಹೀಗೆ ಒಮ್ಮೆ, ಒಂದು ಪಂದ್ಯಾವಳಿಯಲ್ಲಿ ಆಡಲು ನನ್ನ ಪೋಷಕರ ಸಹಿ ಬೇಕಿತ್ತು. ಅವರು 45 ಕಿ.ಮೀ ದೂರದಲ್ಲಿದ್ದರು. ನಾನು ಇರುವಲ್ಲಿಗೆ ಬಂದು ಸಹಿ ಮಾಡಲು ಬೇಕಾಗುವಷ್ಟು ಹಣ ಅವರ ಹತ್ತಿರವಿರಲಿಲ್ಲ. ಆದರೂ ನನ್ನಪ್ಪ ಬಂದರು; ಅಪ್ಪ ನನ್ನ ಹೀರೋ!

ನಾನು ರಾಷ್ಟ್ರೀಯ ಜೂನಿಯರ್‌ ಹಾಕಿ ತಂಡಕ್ಕೆ ಆಯ್ಕೆಯಾದೆ. ತಂಡದೊಂದಿಗೆ ಆಡಲು ನಾನು ದೆಹಲಿಗೆ ಹೋದೆ. ಹೊಸ ತಂಡ, ಹೊಸ ಪ್ರದೇಶ.. ಎಲ್ಲವೂ ನನಗೆ ಹೊಸದಾಗಿತ್ತು. ನಾನು ಮಾತನಾಡಲು ಸಂಕೋಚಪಡುತ್ತಿದ್ದೆ. ಆದರೆ ನನ್ನ ತಂಡದ ಸಂಗಾತಿಗಳು ತಂಡದ ಸಭೆಗಳಲ್ಲಿ ನಾನು ಮಾತನಾಡುವಂತೆ ಪ್ರೋತ್ಸಾಹಿಸಿದರು. ನನ್ನ ಆತ್ಮವಿಶ್ವಾಸ ಹೆಚ್ಚಾಯಿತು. ಅದನ್ನು ಮೈದಾನದಲ್ಲಿಯೂ ವ್ಯಕ್ತಪಡಿಸಲು ಸಾಧ್ಯವಾಯಿತು. 2016ರಲ್ಲಿ ನಡೆದ ಏಷ್ಯನ್‌ ಕಪ್‌ನಲ್ಲಿ ನಾನು ಭಾರತವನ್ನು ಪ್ರತಿನಿಧಿಸಿದ್ದ ತಂಡದಲ್ಲಿದೆ.

ನನ್ನ ಕಠಿಣ ದಿನಗಳು ಮುಂದಿದ್ದವು. 2019ರಲ್ಲಿ ಜಪಾನ್‌ನಲ್ಲಿ ನಡೆದ ಅಂತರಾಷ್ಟ್ರೀಯ ಹಾಕಿ ಫೇಡರೇಷನ್‌ನ ಸರಣಿಯಲ್ಲಿ ಚಿಲಿ ವಿರುದ್ಧ ಭಾರತದ ಸೆಮಿಫೈನಲ್‌ ಪಂದ್ಯವಿತ್ತು. ಆ ಪಂದ್ಯ ನಡೆಯುವ ಒಂದು ದಿನ ಮೊದಲು ಅಪ್ಪ ನಿಧನರಾದರು. ಅಪ್ಪನ ನಿಧನದಿಂದ ಸಂಪೂರ್ಣವಾಗಿ ಕುಗ್ಗಿಹೋದೆ, ಈ ಕೂಡಲೇ ಮನೆಗೆ ಹೋಗಬೇಕೆಂದು ತುಂಬಾ ಅನ್ನಿಸುತ್ತಿತ್ತು. ಆದರೆ, ಧೈರ್ಯ ಮಾಡಿ ನಾನು ಪಂದ್ಯದಲ್ಲಿ ಆಟವಾಡಲು ನಿರ್ಧರಿಸಿದ್ದೆ. ನನ್ನಪ್ಪ ಕೂಡ ಬಯಸುತ್ತಿದ್ದದ್ದು ಅದನ್ನೆ. ಅಪ್ಪನ ಪ್ರೀತಿ ಎಲ್ಲವನ್ನು ಮರೆತು ನಾನು ಚೆನ್ನಾಗಿ ಆಡುವಂತೆ ಮಾಡುತ್ತಿತ್ತು. ಆ ಟೂರ್ನಿಯಲ್ಲಿ ಭಾರತ ಜಯಗಳಿಸಿತು.

ಆ ದಿನ ಇಂದಿಗೂ ನನಗೆ ನೆನಪಿದೆ. ಆಟ ಮುಗಿಯಿತು ಎಂದು ಸೀಟಿ ಕೂಗುತ್ತಿದ್ದಂತೆ ನಾನು ಭಾವುಕಳಾದೆ. ಅಳಲು ಆರಂಭಿಸಿದೆ. ನನ್ನ ತಂಡದ ಸದಸ್ಯರು ನನ್ನ ಸುತ್ತಲೂ ಒಟ್ಟುಗೂಡಿ, ‘ನಿಮ್ಮ ತಂದೆ ತುಂಬಾ ಸಂತೋಷಪಡುತ್ತಾರೆ’ ಎಂದರು. ನಾನು ಬಯಸಿದ್ದು ಅಪ್ಪನಿಗೆ ನನ್ನ ಬಗ್ಗೆ ಹೆಮ್ಮೆ ಮೂಡಿಸುವುದಾಗಿತ್ತು. ನನ್ನನ್ನು ಬೆಂಬಲಿಸುತ್ತಿದ್ದ, ನನ್ನ ಬಗ್ಗೆ ಹೆಮ್ಮೆ ಪಡುತ್ತಿದ್ದ ನನ್ನ ಅಪ್ಪನಿಗೆ ವಿದಾಯ ಹೇಳಲಾಗಲಿಲ್ಲ ಎಂಬುದು ನನ್ನ ಜೀವನದ ದೊಡ್ಡ ವಿಷಾದದ ಸಂಗತಿ.

ಈಗ ನನ್ನ ಗುರಿ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಗೋಲು ಗಳಿಸುವುದು, ಗೆಲ್ಲುವುದು ಮಾತ್ರ. ನನ್ನಪ್ಪನಿಗಾಗಿ, ನನ್ನ ತಂಡಕ್ಕಾಗಿ, ನನ್ನ ಭಾರತಕ್ಕಾಗಿ ನಾನು ಆಡುತ್ತೇನೆ ಎನ್ನುವ ಲಾಲ್‌ರೆಮ್ಸಿಯಾಮಿ ಭಾಗವಹಿಸಿರುವ ಭಾರತ ತಂಡ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್‌ ತಲುಪುವತ್ತ ದಾಪುಗಾಲಿಟ್ಟಿದೆ. ಇದೇ ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿರುವ ಭಾರತೀಯ ಮಹಿಳಾ ಹಾಕಿ ತಂಡ ಗೆಲುವು ಸಾಧಿಸಲಿ ಎಂಬುದು ನಮ್ಮಲ್ಲೆರ ಆಶಯ.

ಕೃಪೆ: ಹ್ಯೂಮನ್ಸ್‌ ಆಫ್‌ ಬಾಂಬೆ (Humans of Bombay)

ಲಾಲ್‌ರೆಮ್ಸಿಯಾಮಿ ಮಿಜೋರಾಂನಿಂದ ಒಲಿಂಪಿಕ್ಸ್‌ಗೆ ಆಯ್ಕೆಯಾದ ಮೊದಲ ಮಹಿಳೆ, ಹಾಕಿ ಆಟಗಾರ್ತಿ ಲಾಲ್‌ರೆಮ್ಸಿಯಾಮಿ ಜನಿಸಿದ್ದು 2000 ಮಾರ್ಚ್‌ 3ರಂದು. ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಮ್ಸಿಯಾಮಿ, 18 ವರ್ಷದೊಳಗಿನ ಭಾರತದ ಹಾಕಿ ತಂಡವನ್ನು ಪ್ರತಿನಿಧಿಸಿ 2018ರ ವರ್ಲ್ಡ್‌ ಕಪ್‌ನಲ್ಲಿ ಸ್ಪರ್ಧಿಸಿದ್ದರು. ಏಷ್ಯನ್‌ ಕಪ್‌ನಲ್ಲಿ ಇವರು ಪ್ರತಿನಿಧಿಸಿದ್ದ ಭಾರತ ತಂಡವು ಬೆಳ್ಳಿ ಪದಕ ಗೆದ್ದಿತ್ತು. ಪ್ರಸ್ತುತ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಇವರು ಪ್ರತಿನಿಧಿಸಿರುವ ಹಾಕಿ ತಂಡವು ಸೆಮಿಫೈನಲ್‌ ಪ್ರವೇಶಿಸಿದೆ.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...