Homeಮುಖಪುಟರೈತರ ವಿರುದ್ದ ಹಾಡು ಬರೆಯದ್ದಕ್ಕೆ ವಿಶೇಷ ಪ್ರಚಾರ ಸಮಿತಿಯ ಅಧ್ಯಕ್ಷನನ್ನು ವಜಾ ಮಾಡಿದ ಹರ್ಯಾಣ ಸರ್ಕಾರ!

ರೈತರ ವಿರುದ್ದ ಹಾಡು ಬರೆಯದ್ದಕ್ಕೆ ವಿಶೇಷ ಪ್ರಚಾರ ಸಮಿತಿಯ ಅಧ್ಯಕ್ಷನನ್ನು ವಜಾ ಮಾಡಿದ ಹರ್ಯಾಣ ಸರ್ಕಾರ!

ಪ್ರಧಾನಿ ನರೇಂದ್ರ ಮೋದಿಯ ಪರ ಹಾಡು ರಚಿಸುವುದಕ್ಕಾಗಿ ನನಗೆ ತಿಂಗಳಿಗೆ ಒಂದು ಲಕ್ಷ ರೂ. ವೇತನ ನೀಡಲಾಗುತ್ತಿತ್ತು ಎಂದು ರಾಕಿ ಮಿತ್ತಲ್ ಹೇಳಿದ್ದಾರೆ

- Advertisement -
- Advertisement -

ರೈತರ ವಿರುದ್ಧ ಹಾಡುಗಳನ್ನು ಬರೆಯದ ಕಾರಣಕ್ಕಾಗಿ ಹರ್ಯಾಣ ಸರಕಾರದ ವಿಶೇಷ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದ ತನ್ನನ್ನು ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿದ್ದಾರೆ ಎಂದು ಸ್ವತಃ ರಾಕಿ ಮಿತ್ತಲ್( ಜೈ ಭಗವಾನ್) ಸ್ಪಷ್ಟನೆ ನೀಡಿದ್ದಾರೆ. ವಿಶೇಷ ಪ್ರಚಾರ ಸಮಿತಿಯ ಅಧ್ಯಕ್ಷಾಗಿದ್ದ ಅ‌‌ವರನ್ನು ಸೋಮವಾರದಂದು ಹರ್ಯಾಣ ಸರಕಾರ ತತ್‌ಕ್ಷಣಕ್ಕೆ ಜಾರಿಗೆ ಬರುವಂತೆ ಅಧಿಕಾರದಿಂದ ವಜಾ ಮಾಡಿತ್ತು.

ಹರ್ಯಾಣದ ಮಾಹಿತಿ, ಸಾರ್ವಜನಿಕ ಸಂಪರ್ಕ ಮತ್ತು ಭಾಷೆ ವಿಭಾಗದ ಸಹಾಯಕ ಪ್ರಧಾನ ಕಾರ್ಯದರ್ಶಿಯಾಗಿರುವ ಧೀರ ಖಂಡೇಲ್ವಾಲ್ ಎಂಬವರು ರಾಕಿ ಮಿತ್ತಲ್ ಅವರನ್ನು ವಿಶೇಷ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನದಿಂದ ತತ್‌‌ಕ್ಷಣಕ್ಕೆ ಜಾರಿಗೆ ಬರುವಂತೆ ವಜಾ ಮಾಡಿ ಆದೇಶ ಹೊರಡಿಸಿದ್ದರು. ಆದರೆ ಅವರನ್ನು ಹುದ್ದೆಯಿಂದ ಕೆಳಗಿಳಿಸಿದ್ದಕ್ಕೆ ಕಾರಣ ನೀಡಿರಲಿಲ್ಲ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

“ಡಿಸೆಂಬರ್‌ 4 ರಂದು ಬಿಜೆಪಿಯ ಹಿರಿಯ ಕಾರ್ಯಕಾರಿಯೋರ್ವರನ್ನು ಭೇಟಿಯಾಗಲು ತೆರಳಿದ್ದ ವೇಳೆ, ಅವರು ’ರೈತ ಆಂದೋಲನದ ವಿರುದ್ಧ ಹಾಡೊಂದನ್ನು ರಚಿಸು’ ಎಂದಿದ್ದರು. ನಾನೊಬ್ಬ ರೈತ ಹಾಗೂ ಮಧ್ಯವರ್ತಿಯೂ ಆಗಿರುವುದರಿಂದ ನನ್ನಿಂದ ರೈತರ ವಿರುದ್ಧ ಹಾಡು ರಚಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾಗಿ ಅವರು ಹೇಳಿದ್ದಾರೆ.

“ಹಾಡು ರಚಿಸಿ, ಆ ಹಾಡಿನ ಮುಖಾಂತರ ರೈತರಿಗೆ ಮತ್ತು ಮಧ್ಯವರ್ತಿಗಳಿಗೆ ಸರಕಾರದ ನೂತನ ಕೃಷಿ ಕಾಯ್ದೆಯು ನಿಮಗೆ ಲಾಭವನ್ನೇ ತರುತ್ತದೆ ಎಂದು ಪೊಳ್ಳು ಮನವರಿಕೆ ಮಾಡಿಸಬೇಕಿತ್ತು. ನನ್ನ ತಂದೆ ಓರ್ವ ದಲ್ಲಾಳಿಯಾಗಿದ್ದರು ಮತ್ತು ನಮ್ಮದು ರೈತ ಕುಟುಂಬ. ನಾನು ಓಲೈಕೆಗೆ ಮಣಿದು ನಮ್ಮವರ ಬೆನ್ನಿಗೆ ಚೂರಿ ಇರಿಯಲು ಹೇಗೆ ಸಾಧ್ಯ? ನಾನು ರೈತರ ವಿರುದ್ಧ ಹಾಡು ರಚಿಸದ್ದು ನನ್ನ ತಪ್ಪೇ? ಪ್ರಧಾನಿ ನರೇಂದ್ರ ಮೋದಿಯ ಪರ ಹಾಡು ರಚಿಸುವುದಕ್ಕಾಗಿ ನನಗೆ ತಿಂಗಳಿಗೆ ಒಂದು ಲಕ್ಷ ರೂ. ವೇತನ ನೀಡಲಾಗುತ್ತಿತ್ತು” ಎಂದು ರಾಕಿ ಮಿತ್ತಲ್ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

ರಾಕಿ ಮಿತ್ತಲ್ 2014 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಯ ಪರವಾಗಿ ಹಾಡುಗಳನ್ನು ರಚಿಸಿದ ಬಳಿಕ ‘ಮೋದಿ ಭಗತ್’ ಎಂದೇ ಪ್ರಸಿದ್ಧರಾಗಿದ್ದರು. ಅವರನ್ನು ವಜಾ ಮಾಡಿರುವ ಕುರಿತು ಬಿಜೆಪಿಯ ಪ್ರಮುಖ ನಾಯಕರಲ್ಲಿ ಪ್ರಶ್ನಿಸಿದ್ದು, ಅವರು ’ನಮಗೆ ಅದರ ಅರಿವಿಲ್ಲ’ ಎಂದಿದ್ದಾರೆಂದು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್ ದೋಸಾಂಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...