Homeಮುಖಪುಟ'ನವೆಂಬರ್‌ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ, ಆದರೆ ಗೌಪ್ಯವಾಗಿಡಲಾಗಿತ್ತು'; ಸಚಿವ ಛಗನ್ ಭುಜಬಲ್ ಅಚ್ಚರಿ...

‘ನವೆಂಬರ್‌ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ, ಆದರೆ ಗೌಪ್ಯವಾಗಿಡಲಾಗಿತ್ತು’; ಸಚಿವ ಛಗನ್ ಭುಜಬಲ್ ಅಚ್ಚರಿ ಹೇಳಿಕೆ

- Advertisement -
- Advertisement -

ಮರಾಠ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗೆ ಮಹಾರಾಷ್ಟ್ರದ ಬಿಜೆಪಿ-ಶಿವಸೇನೆ(ಶಿಂಧೆ) ಸರಕಾರ ಒಪ್ಪಿಕೊಂಡಿರುವುದು ಮಹರಾಷ್ಟ್ರದಲ್ಲಿ ಒಬಿಸಿಗಳ ವಿರೋಧಕ್ಕೆ ಕಾರಣವಾಗಿದೆ. ಮರಾಠ ಸಮುದಾಯಕ್ಕೆ ಒಬಿಸಿ ಕೋಟಾವನ್ನು ಹಿಂಬಾಗಿಲ ಮೂಲಕ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್, ನಾನು ರಾಜ್ಯ ಸಚಿವ ಸಂಪುಟಕ್ಕೆ ನವೆಂಬರ್‌ನಲ್ಲೇ ರಾಜೀನಾಮೆ ನೀಡಿದ್ದೇನೆ ಮತ್ತು ಒಬಿಸಿ ಪರವಾಗಿ ಹೋರಾಟವನ್ನು ನಡೆಸುತ್ತೇನೆ ಎಂದು ಹೇಳಿದ್ದಾರೆ.

ಎನ್‌ಸಿಪಿಯ ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಸೇರಿದ ಭುಜಬಲ್ ಸಾರ್ವಜನಿಕ ರ್ಯಾಲಿಯೊಂದನ್ನುದ್ದೇಶಿಸಿ ಮಾತನಾಡಿದ್ದು, ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ನನ್ನ ವಿರೋಧವಿಲ್ಲ. ಆದರೆ ಅವರಿಗೆ ಒಬಿಸಿ ಕೋಟಾದಡಿ ಮೀಸಲಾತಿ ನೀಡುವುದಕ್ಕೆ ವಿರೋಧವಿದೆ ಎಂದು ಹೇಳಿದ್ದಾರೆ.

ಪ್ರತಿಪಕ್ಷದ ಅನೇಕ ನಾಯಕರು, ನನ್ನ ಸರ್ಕಾರದ ನಾಯಕರು ಕೂಡ ನಾನು ರಾಜೀನಾಮೆ ನೀಡಬೇಕು ಎಂದು ಹೇಳುತ್ತಾರೆ. ಭುಜಬಲ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಯಾರೋ ಹೇಳಿದ್ದರು. ನವೆಂಬರ್ 17ರಂದು ಅಂಬಾಡ್‌ನಲ್ಲಿ ನಡೆದ ಒಬಿಸಿ ಎಲ್ಗರ್ ರ್ಯಾಲಿಗೆ ಮುಂಚಿತವಾಗಿ, ನಾನು ನವೆಂಬರ್ 16ರಂದು ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ್ದೇನೆ ಮತ್ತು ನಂತರ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗಿದ್ದೆ ಎಂದು ನಾನು ಪ್ರತಿಪಕ್ಷ, ಸರ್ಕಾರ ಮತ್ತು ನನ್ನ ಪಕ್ಷದ ನಾಯಕರಿಗೆ ಹೇಳಲು ಬಯಸುತ್ತೇನೆ.  ಮುಖ್ಯಮಂತ್ರಿ ಮತ್ತು ಡಿಸಿಎಂ ಈ ಬಗ್ಗೆ ಮಾತನಾಡಬೇಡಿ ಎಂದು ಹೇಳಿದ್ದರಿಂದ ಎರಡು ತಿಂಗಳಿನಿಂದ ನಾನು ಮೌನವಾಗಿದ್ದೆ ಎಂದು ಭುಜಬಲ್ ಹೇಳಿದ್ದಾರೆ.

ನನ್ನನ್ನು ಸರಕಾರದಿಂದ ವಜಾ ಮಾಡುವ ಅಗತ್ಯವಿಲ್ಲ, ನಾನು ರಾಜೀನಾಮೆ ನೀಡಿದ್ದೇನೆ. ನಾನು ಕೊನೆಯವರೆಗೂ ಒಬಿಸಿ ಸಮುದಾಯಕ್ಕಾಗಿ ಹೋರಾಡುತ್ತೇನೆ. ನಾವು ಮರಾಠ ಸಮುದಾಯಕ್ಕೆ ಮೀಸಲಾತಿಯನ್ನು ವಿರೋಧಿಸುವುದಿಲ್ಲ, ಆದರೆ ಅದನ್ನು ಅವರಿಗೆ ಪ್ರತ್ಯೇಕವಾಗಿ ನೀಡಬೇಕು. ಅದನ್ನು ನಮ್ಮ ಒಬಿಸಿ ಕೋಟಾದ ಅಡಿಯಲ್ಲಿ ನೀಡಬೇಡಿ. ಆದರೆ ಮನೋಜ್ ಜಾರಂಗೆ ಒಬಿಸಿ ಕೋಟಾದಿಂದಲೇ ನೀಡಬೇಕು ಎನ್ನುತ್ತಾರೆ ಎಂದು ಭುಜಬಲ್ ಹೇಳಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆಯ ಮೂಲಕ ಮರಾಠ ಸಮುದಾಯದ ಹಿಂದುಳಿದಿರುವಿಕೆಯನ್ನು ನಿರ್ಧರಿಸಿದ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯು ದೋಷಪೂರಿತವಾಗಿದೆ. ರಾಜ್ಯದ ಜನಸಂಖ್ಯೆಯಲ್ಲಿ ಒಬಿಸಿಗಳು ಶೇ 54-60, ಎಸ್ಸಿ-ಎಸ್ಟಿಗಳು 20ಶೇ ಮತ್ತು ಬ್ರಾಹ್ಮಣರು 3% ದಷ್ಟಿದ್ದರೆ, ಎಲ್ಲಾ ಶಾಸಕರು ಮತ್ತು ಸಂಸದರು ಮರಾಠ ಮತಗಳನ್ನು ಕಳೆದುಕೊಳ್ಳುವ ಭಯದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಭುಜಬಲ್ ಅವರು ಮರಾಠ ಕೋಟಾ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸುತ್ತಿರುವುದರಿಂದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹ ಕೇಳಿ ಬಂದ ಹಿನ್ನೆಲೆ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಅವರ ಬೇಡಿಕೆಗಳಿಗೆ ಸರ್ಕಾರ ಮಣಿಯುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಮೊದಲು ಏಕನಾಥ್ ಶಿಂಧೆ ಪಾಳೆಯದ ಶಿವಸೇನೆ ಶಾಸಕರೊಬ್ಬರು ಮಾತನಾಡಿ, ಸಮಾಜದಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿರುವ ಭುಜಬಲ್ ಅವರನ್ನು ವಜಾಗೊಳಿಸಬೇಕು ಎಂದು ಹೇಳಿದ್ದರು.

ಮರಾಠರಿಗೆ ಕುಂಬಿ ಪ್ರಮಾಣಪತ್ರಕ್ಕೆ ವಿರೋಧ: 

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸುತ್ತಲೇ ಬಂದಿದ್ದಾರೆ. ಈ ಮೊದಲು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದರು.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಶೀಘ್ರದಲ್ಲೇ ಈ ಬಗ್ಗೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದರು.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಹೇಳಿದ್ದರು. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ. ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ‘ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆಯಿದೆ’: ಗಾಂಧಿ ಹಂತಕನನ್ನು ಶ್ಲಾಘಿಸಿದ NIT ಪ್ರಾಧ್ಯಾಪಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...