Homeಮುಖಪುಟ'ನವೆಂಬರ್‌ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ, ಆದರೆ ಗೌಪ್ಯವಾಗಿಡಲಾಗಿತ್ತು'; ಸಚಿವ ಛಗನ್ ಭುಜಬಲ್ ಅಚ್ಚರಿ...

‘ನವೆಂಬರ್‌ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ, ಆದರೆ ಗೌಪ್ಯವಾಗಿಡಲಾಗಿತ್ತು’; ಸಚಿವ ಛಗನ್ ಭುಜಬಲ್ ಅಚ್ಚರಿ ಹೇಳಿಕೆ

- Advertisement -
- Advertisement -

ಮರಾಠ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗೆ ಮಹಾರಾಷ್ಟ್ರದ ಬಿಜೆಪಿ-ಶಿವಸೇನೆ(ಶಿಂಧೆ) ಸರಕಾರ ಒಪ್ಪಿಕೊಂಡಿರುವುದು ಮಹರಾಷ್ಟ್ರದಲ್ಲಿ ಒಬಿಸಿಗಳ ವಿರೋಧಕ್ಕೆ ಕಾರಣವಾಗಿದೆ. ಮರಾಠ ಸಮುದಾಯಕ್ಕೆ ಒಬಿಸಿ ಕೋಟಾವನ್ನು ಹಿಂಬಾಗಿಲ ಮೂಲಕ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್, ನಾನು ರಾಜ್ಯ ಸಚಿವ ಸಂಪುಟಕ್ಕೆ ನವೆಂಬರ್‌ನಲ್ಲೇ ರಾಜೀನಾಮೆ ನೀಡಿದ್ದೇನೆ ಮತ್ತು ಒಬಿಸಿ ಪರವಾಗಿ ಹೋರಾಟವನ್ನು ನಡೆಸುತ್ತೇನೆ ಎಂದು ಹೇಳಿದ್ದಾರೆ.

ಎನ್‌ಸಿಪಿಯ ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಸೇರಿದ ಭುಜಬಲ್ ಸಾರ್ವಜನಿಕ ರ್ಯಾಲಿಯೊಂದನ್ನುದ್ದೇಶಿಸಿ ಮಾತನಾಡಿದ್ದು, ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ನನ್ನ ವಿರೋಧವಿಲ್ಲ. ಆದರೆ ಅವರಿಗೆ ಒಬಿಸಿ ಕೋಟಾದಡಿ ಮೀಸಲಾತಿ ನೀಡುವುದಕ್ಕೆ ವಿರೋಧವಿದೆ ಎಂದು ಹೇಳಿದ್ದಾರೆ.

ಪ್ರತಿಪಕ್ಷದ ಅನೇಕ ನಾಯಕರು, ನನ್ನ ಸರ್ಕಾರದ ನಾಯಕರು ಕೂಡ ನಾನು ರಾಜೀನಾಮೆ ನೀಡಬೇಕು ಎಂದು ಹೇಳುತ್ತಾರೆ. ಭುಜಬಲ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಯಾರೋ ಹೇಳಿದ್ದರು. ನವೆಂಬರ್ 17ರಂದು ಅಂಬಾಡ್‌ನಲ್ಲಿ ನಡೆದ ಒಬಿಸಿ ಎಲ್ಗರ್ ರ್ಯಾಲಿಗೆ ಮುಂಚಿತವಾಗಿ, ನಾನು ನವೆಂಬರ್ 16ರಂದು ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ್ದೇನೆ ಮತ್ತು ನಂತರ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗಿದ್ದೆ ಎಂದು ನಾನು ಪ್ರತಿಪಕ್ಷ, ಸರ್ಕಾರ ಮತ್ತು ನನ್ನ ಪಕ್ಷದ ನಾಯಕರಿಗೆ ಹೇಳಲು ಬಯಸುತ್ತೇನೆ.  ಮುಖ್ಯಮಂತ್ರಿ ಮತ್ತು ಡಿಸಿಎಂ ಈ ಬಗ್ಗೆ ಮಾತನಾಡಬೇಡಿ ಎಂದು ಹೇಳಿದ್ದರಿಂದ ಎರಡು ತಿಂಗಳಿನಿಂದ ನಾನು ಮೌನವಾಗಿದ್ದೆ ಎಂದು ಭುಜಬಲ್ ಹೇಳಿದ್ದಾರೆ.

ನನ್ನನ್ನು ಸರಕಾರದಿಂದ ವಜಾ ಮಾಡುವ ಅಗತ್ಯವಿಲ್ಲ, ನಾನು ರಾಜೀನಾಮೆ ನೀಡಿದ್ದೇನೆ. ನಾನು ಕೊನೆಯವರೆಗೂ ಒಬಿಸಿ ಸಮುದಾಯಕ್ಕಾಗಿ ಹೋರಾಡುತ್ತೇನೆ. ನಾವು ಮರಾಠ ಸಮುದಾಯಕ್ಕೆ ಮೀಸಲಾತಿಯನ್ನು ವಿರೋಧಿಸುವುದಿಲ್ಲ, ಆದರೆ ಅದನ್ನು ಅವರಿಗೆ ಪ್ರತ್ಯೇಕವಾಗಿ ನೀಡಬೇಕು. ಅದನ್ನು ನಮ್ಮ ಒಬಿಸಿ ಕೋಟಾದ ಅಡಿಯಲ್ಲಿ ನೀಡಬೇಡಿ. ಆದರೆ ಮನೋಜ್ ಜಾರಂಗೆ ಒಬಿಸಿ ಕೋಟಾದಿಂದಲೇ ನೀಡಬೇಕು ಎನ್ನುತ್ತಾರೆ ಎಂದು ಭುಜಬಲ್ ಹೇಳಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆಯ ಮೂಲಕ ಮರಾಠ ಸಮುದಾಯದ ಹಿಂದುಳಿದಿರುವಿಕೆಯನ್ನು ನಿರ್ಧರಿಸಿದ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯು ದೋಷಪೂರಿತವಾಗಿದೆ. ರಾಜ್ಯದ ಜನಸಂಖ್ಯೆಯಲ್ಲಿ ಒಬಿಸಿಗಳು ಶೇ 54-60, ಎಸ್ಸಿ-ಎಸ್ಟಿಗಳು 20ಶೇ ಮತ್ತು ಬ್ರಾಹ್ಮಣರು 3% ದಷ್ಟಿದ್ದರೆ, ಎಲ್ಲಾ ಶಾಸಕರು ಮತ್ತು ಸಂಸದರು ಮರಾಠ ಮತಗಳನ್ನು ಕಳೆದುಕೊಳ್ಳುವ ಭಯದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಭುಜಬಲ್ ಅವರು ಮರಾಠ ಕೋಟಾ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸುತ್ತಿರುವುದರಿಂದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹ ಕೇಳಿ ಬಂದ ಹಿನ್ನೆಲೆ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಅವರ ಬೇಡಿಕೆಗಳಿಗೆ ಸರ್ಕಾರ ಮಣಿಯುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಮೊದಲು ಏಕನಾಥ್ ಶಿಂಧೆ ಪಾಳೆಯದ ಶಿವಸೇನೆ ಶಾಸಕರೊಬ್ಬರು ಮಾತನಾಡಿ, ಸಮಾಜದಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿರುವ ಭುಜಬಲ್ ಅವರನ್ನು ವಜಾಗೊಳಿಸಬೇಕು ಎಂದು ಹೇಳಿದ್ದರು.

ಮರಾಠರಿಗೆ ಕುಂಬಿ ಪ್ರಮಾಣಪತ್ರಕ್ಕೆ ವಿರೋಧ: 

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸುತ್ತಲೇ ಬಂದಿದ್ದಾರೆ. ಈ ಮೊದಲು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದರು.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಶೀಘ್ರದಲ್ಲೇ ಈ ಬಗ್ಗೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದರು.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಹೇಳಿದ್ದರು. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ. ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ‘ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆಯಿದೆ’: ಗಾಂಧಿ ಹಂತಕನನ್ನು ಶ್ಲಾಘಿಸಿದ NIT ಪ್ರಾಧ್ಯಾಪಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...