Homeಕರ್ನಾಟಕನೆಲದ ಕಾನೂನು ಗೌರವಿಸುತ್ತೇನೆ: ಮಠಕ್ಕೆ ಮರಳಿದ ಬಳಿಕ ಮುರುಘಾ ಶರಣರ ಪ್ರತಿಕ್ರಿಯೆ

ನೆಲದ ಕಾನೂನು ಗೌರವಿಸುತ್ತೇನೆ: ಮಠಕ್ಕೆ ಮರಳಿದ ಬಳಿಕ ಮುರುಘಾ ಶರಣರ ಪ್ರತಿಕ್ರಿಯೆ

- Advertisement -
- Advertisement -

“ಕಾನೂನು ಎಲ್ಲರಿಗೂ ಒಂದೇ. ಈ ನೆಲದ ಕಾನೂನುಗಳನ್ನು ಗೌರವಿಸುತ್ತೇವೆ. ಈ ನೆಲದ ಕಾನೂನನ್ನು ಅರ್ಥಮಾಡಿಕೊಳ್ಳಬೇಕು” ಎಂದು ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರು ಹೇಳಿದರು.

ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶಿವಮೂರ್ತಿ ಮುರುಘಾ ಶರಣರು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದಾರೆಂಬ ವದಂತಿ ಹಬ್ಬಿತ್ತು. ಪೊಲೀಸರು ವಶಕ್ಕೆ ಪಡೆದಿದ್ದಾರೆಂಬ ಸುದ್ದಿಬಂದಿತು. ಮಠಕ್ಕೆ ಮರಳಿದ ಸ್ವಾಮೀಜಿಯವರು ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.

ಮಠದಲ್ಲಿ ಜಮಾಯಿಸಿದ್ದ ಭಕ್ತರು ಮುರುಘಾ ಶರಣರ ಪರ ಘೋಷಣೆಗಳನ್ನು ಕೂಗಿದರು. ಕಾರಿನಿಂದ ಇಳಿದು ಮಠದ ಮಹಡಿಯನ್ನು ಏರಿದ ಬಳಿಕ ಮೈಕ್‌ ಹಿಡಿದು ಸ್ವಾಮೀಜಿ ಮಠದ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ನೆಲದ ಕಾನೂನು ಎಲ್ಲರಿಗೂ ಒಂದೇ. ಅದನ್ನು ಗೌರವಿಸುತ್ತೇನೆ. ಪಲಾಯನವಾದ ಮಾಡುವುದಿಲ್ಲ. ಎಲ್ಲ ತನಿಖೆಗೂ ಸಹಕಾರ ಕೊಡುತ್ತೇವೆ. ಕಾನೂನಿಗೆ ಗೌರವ ಕೊಡುತ್ತೇವೆ. ಊಹಾಪೋಹಗಳಿಗೆ ಅವಕಾಶ ಇಲ್ಲ” ಎಂದು ತಿಳಿಸಿದರು.

“ಶ್ರೀ ಮಠದ ಅಸಂಖ್ಯಾತ ಭಕ್ತರು, ಅಭಿಮಾನಿಗಳು ಊಹಾಪೋಹಗಳನ್ನು, ಗಾಳಿ ಸುದ್ದಿಗಳನ್ನು ನಂಬಬಾರದು. ಈ ನೆಲದ ಕಾನೂನಿಗೆ ಬೆಲೆ ಕೊಡಬೇಕು. ಒಂದು ಕಾಲದಲ್ಲಿ ಮುರುಘಾ ಮಠ ಚಲಿಸುವ ನ್ಯಾಯಾಲಯವಾಗಿತ್ತು” ಎಂದರು.

“ವಿದ್ಯಾರ್ಥಿಗಳನ್ನು ಒಳಗೊಂಡಂತೆ ಎಲ್ಲ ಜನಾಂಗದವರನ್ನು, ಎಲ್ಲಾ ವರ್ಗದವರನ್ನು, ಪ್ರೀತಿಯಿಂದ ಅಕ್ಕರೆಯಿಂದ ನೋಡಿಕೊಂಡಿದ್ದೇವೆ. ಒಂದು ಅಹಿತಕರವಾದ ಬೆಳವಣಿಗೆಯಾಗಿದೆ. ಅದರಿಂದ ಹೊರಗಡೆ ಬಂದೇ ಬರುತ್ತೇನೆ. ಎಲ್ಲರಿಗೆ ಶುಭವಾಗಲಿ” ಎಂದು ಆಶಿಸಿದರು.

“ಪ್ರವಾಹೋಪಾದಿಯಲ್ಲಿ ಜನರು ಮಠಕ್ಕೆ ಬರುತ್ತಾರೆ. ಮೊನ್ನೆಯಿಂದಲೂ ಲಕ್ಷೋಪಲಕ್ಷ ಜನರು ಮಠಕ್ಕೆ ಬರುತ್ತಿರುವುದು ಅತೀವ ಧೈರ್ಯವನ್ನು ಉಂಟು ಮಾಡಿದೆ. ಕಾನೂನುನನ್ನು ಗೌರವಿಸೋಣ. ಇಂತಹದೊಂದು ಅಭಿಮಾನದ ಚಿಲುಮೆ ಚುಮ್ಮಲು ಕಾರಣವಾದವರಿಗೂ ಧನ್ಯವಾದಗಳನ್ನು ಹೇಳುತ್ತೇವೆ. ಅಭಿಮಾನವನ್ನು ಜಾಗೃತಿಗೊಳಿಸಿದ್ದೇವೆ” ಎಂದು ಅಭಿಪ್ರಾಯಪಟ್ಟರು.

ಸ್ವಾಮೀಜಿಯವರನ್ನು ಪೊಲೀಸರು ಬಂಧಿಸಿಲ್ಲ: ಸ್ಪಷ್ಟನೆ

ಪೋಕ್ಸೋ ಪ್ರಕರಣದ ಅಡಿಯಲ್ಲಿ ಮುರುಘ ಶರಣರನ್ನು ಬಂಧಿಸಲಾಗಿದೆ ಎಂಬ ಸುದ್ದಿ ಹರಡಿತ್ತು. ಆದರೆ ಪೊಲೀಸರು ಬಂಧಿಸಿಲ್ಲ, ಆದರೆ ವಶಕ್ಕೆ ಪಡೆದು ಮಠಕ್ಕೆ ವಾಪಸ್‌ ಕರೆತಂದಿದ್ದಾರೆಂದು ವರದಿಯಾಗಿದೆ.

ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗಾಗಿ ಮಠಕ್ಕೆ ಕರೆತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದರೂ ಯಾಕಿನ್ನೂ ಸ್ವಾಮೀಜಿಯ ಬಂಧನವಾಗಿಲ್ಲ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ ಅವರನ್ನು ಭಾನುವಾರ ಪ್ರಶ್ನಿಸಿದಾಗ, ‘ತನಿಖೆಯಾಗುತ್ತಿದೆ. ಕ್ರಮ ಜರುಗಿಸುತ್ತೇವೆ’ ಎಂದಿದ್ದರು. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು ಯಾವಾಗ ಬಂಧಿಸುತ್ತೀರಿ? ಪೋಕ್ಸೋ ಪ್ರಕರಣದಲ್ಲಿ ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕಲ್ಲ, ಬೇರೆಯವರಾಗಿದ್ದರೆ ಹೀಗೆಯೇ ವಿಳಂಬವಾಗುತ್ತಿತ್ತೇ ಎಂದು ಕೇಳಿದರೆ, “ಆರೋಪಗಳನ್ನು ಪರಿಶೀಲನೆ ಮಾಡಬೇಕು. ಏಕಾಏಕಿ ಬಂಧಿಸಲು ಆಗುವುದಿಲ್ಲ. ತನಿಖೆ ನಡೆಸುತ್ತಿದ್ದೇವೆ. ಮೈಸೂರಿನಿಂದ ನಿನ್ನೆಯಷ್ಟೇ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದೆ” ಎಂದು ತಿಳಿಸಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ದಲಿತ ಚಿಂತಕ ಸಿ.ಕೆ.ಮಹೇಶ್, “ಪೋಕ್ಸೋ ಪ್ರಕರಣ ದಾಖಲಾಗಿದೆ. ಸ್ವಾಮೀಜಿಯಾಗಲೀ, ಮತ್ತೆ ಯಾವನೇ ಆಗಿರಲಿ, ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಒಂದೇ. ಇದು ಮಠಕ್ಕೂ ಅನ್ವಯಿಸುತ್ತದೆ. ಸಾಮಾನ್ಯ ಮನುಷ್ಯನಿಗೆ ಅನ್ವಯವಾಗುವ ಕಾನೂನು ಈ ದೇಶದ ಪ್ರಭಾವಿಗೂ ಅನ್ವಯವಾಗುತ್ತದೆ” ಎಂದಿದ್ದಾರೆ.

“ಬುದ್ಧನ ಮೇಲೆ ಬ್ರಾಹ್ಮಣರು ಆರೋಪಗಳನ್ನು ಮಾಡಿದಾಗ ಸ್ವಯಃ ಬುದ್ಧ ಗುರುವೇ ತನಿಖೆಗೆ ಒಳಗಾಗುತ್ತಾರೆ. ತನಿಖೆಯಾದ ಬಳಿಕ ಹೊರಗೆ ಬರುತ್ತಾರೆ. ಬುದ್ಧನ ಬಗ್ಗೆ ಮಾತನಾಡುವ ಮುರುಘಾ ಶರಣರು, ತನಿಖೆಗೆ ಒಳಗಾಗಬೇಕು. ನೀವು ಎಷ್ಟೇ ಶುದ್ಧರಾಗಿರಿ, ಪ್ರಾಮಾಣಿಕರಾಗಿರಿ, ಆ ಸರ್ಟಿಫಿಕೇಟ್‌ಗಳನ್ನು ನೀವಾಗಿಯೇ ತೆಗೆದುಕೊಳ್ಳಬಾರದು. ನಿಮ್ಮ ಕ್ರಿಯೆಗಳನ್ನು ಗುರುತಿಸಿದ ಬಳಿಕ ಜನರು ಆ ಸರ್ಟಿಫಿಕೇಟ್‌ಗಳನ್ನು ದೃಢೀಕರಿಸಬೇಕು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಗತಿಪರ ಚಿಂತಕ ಶಿವಣ್ಣ, “ಅಂಬೇಡ್ಕರ್‌ ಕೊಟ್ಟ ಸಂವಿಧಾನ ಉಳಿಯಬೇಕು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಸ್ವಾಮೀಜಿ ಬಂಧನಕ್ಕೆ ಒಳಗಾಗಬೇಕು. ಇದಕ್ಕಾಗಿ ದಲಿತ ಶೋಷಿತರ ಬಳಗದಿಂದ ಹೋರಾಟ ರೂಪಿಸುತ್ತಿದ್ದೇವೆ” ಎಂದು ಸೂಚನೆ ನೀಡಿದ್ದಾರೆ.

ಅಟ್ರಾಸಿಟಿ ಪ್ರಕರಣ ದಾಖಲಿಸಲು ಆಗ್ರಹ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಕೇವಲ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಇವರ ವಿರುದ್ಧ ಎಸ್‌.ಸಿ., ಎಸ್‌.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂದು ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ಮುರುಘಾ ಶರಣರು ಕಾನೂನಿಗಿಂತ ದೊಡ್ಡವರೇ?: ಬಂಧನಕ್ಕೆ ದಲಿತ ಮುಖಂಡರ ಆಗ್ರಹ

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಕೇಳಿ ಬಂದಿರುವ ಪೋಕ್ಸೋ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಸ್ವಾಮೀಜಿ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಲಿ ಎಂದು ಚಿತ್ರದುರ್ಗದಲ್ಲಿ ಸ್ಥಳೀಯರು ಆಗ್ರಹಿಸಿದ್ದಾರೆ.

ಭಾನುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಚಳ್ಳಕೆರೆಯ ಮಾಜಿ ಪುರಸಭಾ ಸದಸ್ಯ ಶಿವಮೂರ್ತಿ ಮಾತನಾಡಿ, “ಈ ಪ್ರಕರಣದಲ್ಲಿ ಸ್ವಾಮೀಜಿಯ ವಿರುದ್ಧ ಪರಿಶಿಷ್ಟ ಜಾತಿಗಳ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೇಸು ದಾಖಲಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಸದರಿ ಪ್ರಕರಣದಲ್ಲಿ ಮಾದಿಗ ಸಮುದಾಯಕ್ಕೆ ಸೇರಿದ ಹೆಣ್ಣುಮಗಳು ಸಂತ್ರಸ್ತೆಯಾಗಿದ್ದಾರೆ. ಈ ಪೊಲೀಸರಿಂದ, ಜಿಲ್ಲಾಧಿಕಾರಿಗಳಿಂದ ಏನೂ ಆಗುವುದಿಲ್ಲ. ಲಿಂಗಾಯತರ ಸರ್ಕಾರ ರಾಜ್ಯದಲ್ಲಿದೆ. ನ್ಯಾಯಾಂಗ ತನಿಖೆಯಾಗಬೇಕು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...