Homeಕರ್ನಾಟಕನೆಲದ ಕಾನೂನು ಗೌರವಿಸುತ್ತೇನೆ: ಮಠಕ್ಕೆ ಮರಳಿದ ಬಳಿಕ ಮುರುಘಾ ಶರಣರ ಪ್ರತಿಕ್ರಿಯೆ

ನೆಲದ ಕಾನೂನು ಗೌರವಿಸುತ್ತೇನೆ: ಮಠಕ್ಕೆ ಮರಳಿದ ಬಳಿಕ ಮುರುಘಾ ಶರಣರ ಪ್ರತಿಕ್ರಿಯೆ

- Advertisement -
- Advertisement -

“ಕಾನೂನು ಎಲ್ಲರಿಗೂ ಒಂದೇ. ಈ ನೆಲದ ಕಾನೂನುಗಳನ್ನು ಗೌರವಿಸುತ್ತೇವೆ. ಈ ನೆಲದ ಕಾನೂನನ್ನು ಅರ್ಥಮಾಡಿಕೊಳ್ಳಬೇಕು” ಎಂದು ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರು ಹೇಳಿದರು.

ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶಿವಮೂರ್ತಿ ಮುರುಘಾ ಶರಣರು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದಾರೆಂಬ ವದಂತಿ ಹಬ್ಬಿತ್ತು. ಪೊಲೀಸರು ವಶಕ್ಕೆ ಪಡೆದಿದ್ದಾರೆಂಬ ಸುದ್ದಿಬಂದಿತು. ಮಠಕ್ಕೆ ಮರಳಿದ ಸ್ವಾಮೀಜಿಯವರು ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.

ಮಠದಲ್ಲಿ ಜಮಾಯಿಸಿದ್ದ ಭಕ್ತರು ಮುರುಘಾ ಶರಣರ ಪರ ಘೋಷಣೆಗಳನ್ನು ಕೂಗಿದರು. ಕಾರಿನಿಂದ ಇಳಿದು ಮಠದ ಮಹಡಿಯನ್ನು ಏರಿದ ಬಳಿಕ ಮೈಕ್‌ ಹಿಡಿದು ಸ್ವಾಮೀಜಿ ಮಠದ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ನೆಲದ ಕಾನೂನು ಎಲ್ಲರಿಗೂ ಒಂದೇ. ಅದನ್ನು ಗೌರವಿಸುತ್ತೇನೆ. ಪಲಾಯನವಾದ ಮಾಡುವುದಿಲ್ಲ. ಎಲ್ಲ ತನಿಖೆಗೂ ಸಹಕಾರ ಕೊಡುತ್ತೇವೆ. ಕಾನೂನಿಗೆ ಗೌರವ ಕೊಡುತ್ತೇವೆ. ಊಹಾಪೋಹಗಳಿಗೆ ಅವಕಾಶ ಇಲ್ಲ” ಎಂದು ತಿಳಿಸಿದರು.

“ಶ್ರೀ ಮಠದ ಅಸಂಖ್ಯಾತ ಭಕ್ತರು, ಅಭಿಮಾನಿಗಳು ಊಹಾಪೋಹಗಳನ್ನು, ಗಾಳಿ ಸುದ್ದಿಗಳನ್ನು ನಂಬಬಾರದು. ಈ ನೆಲದ ಕಾನೂನಿಗೆ ಬೆಲೆ ಕೊಡಬೇಕು. ಒಂದು ಕಾಲದಲ್ಲಿ ಮುರುಘಾ ಮಠ ಚಲಿಸುವ ನ್ಯಾಯಾಲಯವಾಗಿತ್ತು” ಎಂದರು.

“ವಿದ್ಯಾರ್ಥಿಗಳನ್ನು ಒಳಗೊಂಡಂತೆ ಎಲ್ಲ ಜನಾಂಗದವರನ್ನು, ಎಲ್ಲಾ ವರ್ಗದವರನ್ನು, ಪ್ರೀತಿಯಿಂದ ಅಕ್ಕರೆಯಿಂದ ನೋಡಿಕೊಂಡಿದ್ದೇವೆ. ಒಂದು ಅಹಿತಕರವಾದ ಬೆಳವಣಿಗೆಯಾಗಿದೆ. ಅದರಿಂದ ಹೊರಗಡೆ ಬಂದೇ ಬರುತ್ತೇನೆ. ಎಲ್ಲರಿಗೆ ಶುಭವಾಗಲಿ” ಎಂದು ಆಶಿಸಿದರು.

“ಪ್ರವಾಹೋಪಾದಿಯಲ್ಲಿ ಜನರು ಮಠಕ್ಕೆ ಬರುತ್ತಾರೆ. ಮೊನ್ನೆಯಿಂದಲೂ ಲಕ್ಷೋಪಲಕ್ಷ ಜನರು ಮಠಕ್ಕೆ ಬರುತ್ತಿರುವುದು ಅತೀವ ಧೈರ್ಯವನ್ನು ಉಂಟು ಮಾಡಿದೆ. ಕಾನೂನುನನ್ನು ಗೌರವಿಸೋಣ. ಇಂತಹದೊಂದು ಅಭಿಮಾನದ ಚಿಲುಮೆ ಚುಮ್ಮಲು ಕಾರಣವಾದವರಿಗೂ ಧನ್ಯವಾದಗಳನ್ನು ಹೇಳುತ್ತೇವೆ. ಅಭಿಮಾನವನ್ನು ಜಾಗೃತಿಗೊಳಿಸಿದ್ದೇವೆ” ಎಂದು ಅಭಿಪ್ರಾಯಪಟ್ಟರು.

ಸ್ವಾಮೀಜಿಯವರನ್ನು ಪೊಲೀಸರು ಬಂಧಿಸಿಲ್ಲ: ಸ್ಪಷ್ಟನೆ

ಪೋಕ್ಸೋ ಪ್ರಕರಣದ ಅಡಿಯಲ್ಲಿ ಮುರುಘ ಶರಣರನ್ನು ಬಂಧಿಸಲಾಗಿದೆ ಎಂಬ ಸುದ್ದಿ ಹರಡಿತ್ತು. ಆದರೆ ಪೊಲೀಸರು ಬಂಧಿಸಿಲ್ಲ, ಆದರೆ ವಶಕ್ಕೆ ಪಡೆದು ಮಠಕ್ಕೆ ವಾಪಸ್‌ ಕರೆತಂದಿದ್ದಾರೆಂದು ವರದಿಯಾಗಿದೆ.

ಹಾವೇರಿ ಜಿಲ್ಲೆಯ ಬಂಕಾಪುರದ ಬಳಿ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗಾಗಿ ಮಠಕ್ಕೆ ಕರೆತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದರೂ ಯಾಕಿನ್ನೂ ಸ್ವಾಮೀಜಿಯ ಬಂಧನವಾಗಿಲ್ಲ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ ಅವರನ್ನು ಭಾನುವಾರ ಪ್ರಶ್ನಿಸಿದಾಗ, ‘ತನಿಖೆಯಾಗುತ್ತಿದೆ. ಕ್ರಮ ಜರುಗಿಸುತ್ತೇವೆ’ ಎಂದಿದ್ದರು. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು ಯಾವಾಗ ಬಂಧಿಸುತ್ತೀರಿ? ಪೋಕ್ಸೋ ಪ್ರಕರಣದಲ್ಲಿ ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕಲ್ಲ, ಬೇರೆಯವರಾಗಿದ್ದರೆ ಹೀಗೆಯೇ ವಿಳಂಬವಾಗುತ್ತಿತ್ತೇ ಎಂದು ಕೇಳಿದರೆ, “ಆರೋಪಗಳನ್ನು ಪರಿಶೀಲನೆ ಮಾಡಬೇಕು. ಏಕಾಏಕಿ ಬಂಧಿಸಲು ಆಗುವುದಿಲ್ಲ. ತನಿಖೆ ನಡೆಸುತ್ತಿದ್ದೇವೆ. ಮೈಸೂರಿನಿಂದ ನಿನ್ನೆಯಷ್ಟೇ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದೆ” ಎಂದು ತಿಳಿಸಿದ್ದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ದಲಿತ ಚಿಂತಕ ಸಿ.ಕೆ.ಮಹೇಶ್, “ಪೋಕ್ಸೋ ಪ್ರಕರಣ ದಾಖಲಾಗಿದೆ. ಸ್ವಾಮೀಜಿಯಾಗಲೀ, ಮತ್ತೆ ಯಾವನೇ ಆಗಿರಲಿ, ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಒಂದೇ. ಇದು ಮಠಕ್ಕೂ ಅನ್ವಯಿಸುತ್ತದೆ. ಸಾಮಾನ್ಯ ಮನುಷ್ಯನಿಗೆ ಅನ್ವಯವಾಗುವ ಕಾನೂನು ಈ ದೇಶದ ಪ್ರಭಾವಿಗೂ ಅನ್ವಯವಾಗುತ್ತದೆ” ಎಂದಿದ್ದಾರೆ.

“ಬುದ್ಧನ ಮೇಲೆ ಬ್ರಾಹ್ಮಣರು ಆರೋಪಗಳನ್ನು ಮಾಡಿದಾಗ ಸ್ವಯಃ ಬುದ್ಧ ಗುರುವೇ ತನಿಖೆಗೆ ಒಳಗಾಗುತ್ತಾರೆ. ತನಿಖೆಯಾದ ಬಳಿಕ ಹೊರಗೆ ಬರುತ್ತಾರೆ. ಬುದ್ಧನ ಬಗ್ಗೆ ಮಾತನಾಡುವ ಮುರುಘಾ ಶರಣರು, ತನಿಖೆಗೆ ಒಳಗಾಗಬೇಕು. ನೀವು ಎಷ್ಟೇ ಶುದ್ಧರಾಗಿರಿ, ಪ್ರಾಮಾಣಿಕರಾಗಿರಿ, ಆ ಸರ್ಟಿಫಿಕೇಟ್‌ಗಳನ್ನು ನೀವಾಗಿಯೇ ತೆಗೆದುಕೊಳ್ಳಬಾರದು. ನಿಮ್ಮ ಕ್ರಿಯೆಗಳನ್ನು ಗುರುತಿಸಿದ ಬಳಿಕ ಜನರು ಆ ಸರ್ಟಿಫಿಕೇಟ್‌ಗಳನ್ನು ದೃಢೀಕರಿಸಬೇಕು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಗತಿಪರ ಚಿಂತಕ ಶಿವಣ್ಣ, “ಅಂಬೇಡ್ಕರ್‌ ಕೊಟ್ಟ ಸಂವಿಧಾನ ಉಳಿಯಬೇಕು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಸ್ವಾಮೀಜಿ ಬಂಧನಕ್ಕೆ ಒಳಗಾಗಬೇಕು. ಇದಕ್ಕಾಗಿ ದಲಿತ ಶೋಷಿತರ ಬಳಗದಿಂದ ಹೋರಾಟ ರೂಪಿಸುತ್ತಿದ್ದೇವೆ” ಎಂದು ಸೂಚನೆ ನೀಡಿದ್ದಾರೆ.

ಅಟ್ರಾಸಿಟಿ ಪ್ರಕರಣ ದಾಖಲಿಸಲು ಆಗ್ರಹ

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಕೇವಲ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಇವರ ವಿರುದ್ಧ ಎಸ್‌.ಸಿ., ಎಸ್‌.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂದು ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿರಿ: ಮುರುಘಾ ಶರಣರು ಕಾನೂನಿಗಿಂತ ದೊಡ್ಡವರೇ?: ಬಂಧನಕ್ಕೆ ದಲಿತ ಮುಖಂಡರ ಆಗ್ರಹ

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಕೇಳಿ ಬಂದಿರುವ ಪೋಕ್ಸೋ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಸ್ವಾಮೀಜಿ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಲಿ ಎಂದು ಚಿತ್ರದುರ್ಗದಲ್ಲಿ ಸ್ಥಳೀಯರು ಆಗ್ರಹಿಸಿದ್ದಾರೆ.

ಭಾನುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಚಳ್ಳಕೆರೆಯ ಮಾಜಿ ಪುರಸಭಾ ಸದಸ್ಯ ಶಿವಮೂರ್ತಿ ಮಾತನಾಡಿ, “ಈ ಪ್ರಕರಣದಲ್ಲಿ ಸ್ವಾಮೀಜಿಯ ವಿರುದ್ಧ ಪರಿಶಿಷ್ಟ ಜಾತಿಗಳ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೇಸು ದಾಖಲಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಸದರಿ ಪ್ರಕರಣದಲ್ಲಿ ಮಾದಿಗ ಸಮುದಾಯಕ್ಕೆ ಸೇರಿದ ಹೆಣ್ಣುಮಗಳು ಸಂತ್ರಸ್ತೆಯಾಗಿದ್ದಾರೆ. ಈ ಪೊಲೀಸರಿಂದ, ಜಿಲ್ಲಾಧಿಕಾರಿಗಳಿಂದ ಏನೂ ಆಗುವುದಿಲ್ಲ. ಲಿಂಗಾಯತರ ಸರ್ಕಾರ ರಾಜ್ಯದಲ್ಲಿದೆ. ನ್ಯಾಯಾಂಗ ತನಿಖೆಯಾಗಬೇಕು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...