Homeಕರ್ನಾಟಕಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ, ಇದರಲ್ಲಿ ತಪ್ಪೇನಿದೆ?: ಸಿಎಂ ಸಿದ್ದರಾಮಯ್ಯ

ಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ, ಇದರಲ್ಲಿ ತಪ್ಪೇನಿದೆ?: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ,ಇದರಲ್ಲಿ ತಪ್ಪೇನಿದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯ ಸಮಾವೇಶದಲ್ಲಿ ನೀಡಿರುವ ಹೇಳಿಕೆ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು, “ನಾನು ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ. ಅದನ್ನು ಬಿಟ್ಟು ಬರೆದರೆ ನಾನೇನು ಮಾಡುವುದು?” ಎಂದು ಪ್ರಶ್ನಿಸಿದ್ದಾರೆ.

“ನನ್ನ ಹೇಳಿಕೆಗೆ ಉಪ್ಪು, ಖಾರ ಹಾಕಿ ಪ್ರಚಾರ ಮಾಡುತ್ತಿದ್ದಾರೆ. ನಾನು ಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ” ಎಂದು ಸಿಎಂ ಪುನರುಚ್ಚರಿಸಿದ್ದಾರೆ.

ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ ದಕ್ಷಿಣ ಭಾರತ ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, “ಹುಬ್ಬಳ್ಳಿಯ ಪೀರ್ ಬಾಷಾ ದರ್ಗಾಕ್ಕೆ ಅನುದಾನ ಕೊಡುತ್ತೇನೆ. ನಾನು ಹೇಳಿದ ಮೇಲೆ ಕೊಟ್ಟೇ ಕೊಡುತ್ತೇನೆ. ಅಲ್ಪ ಸಂಖ್ಯಾತ ಇಲಾಖೆಗೆ ಈಗಾಗಲೇ 4 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಇದನ್ನು ಹಂತ ಹಂತವಾಗಿ 10 ಸಾವಿರ ಕೋಟಿಗೆ ಹೆಚ್ಚಿಸಬೇಕು. ನಿಮ್ಮ ಧಾರ್ಮಿಕ ಕೇಂದ್ರಗಳಿಗೆ ಅನುದಾನ ಸಿಗಬೇಕು. ನೀವು ಭಾರತೀಯರು. ನಿಮಗೂ ಈ ದೇಶದ ಸಂಪತ್ತಿನಲ್ಲಿ ಹಕ್ಕಿದೆ. ನಿಮಗೆ ಅನ್ಯಾಯವಾಗಲು ಬಿಡುವುದಿಲ್ಲ” ಎಂದಿದ್ದರು.

“ಕೇವಲ ಅಕ್ಷರ ಕಲಿತರೆ ಸಾಲದು. ವೈಚಾರಿಕತೆಯಿಂದ ಕೂಡಿದ ಶಿಕ್ಷಣ ನಮಗೆಲ್ಲ ಸಿಗಬೇಕು. ಹಿಂದೂ, ಮುಸ್ಲಿಮರು ಒಂದೇ ತಾಯ ಮಕ್ಕಳು. ಕಾಯಿಲೆ ಬಂದರೆ ನಮ್ಮ ಜಾತಿಯವನ ರಕ್ಷ ಕೊಡಿ ಎಂದು ಕೇಳುತ್ತೇವಾ? ಯಾವುದೇ ರಕ್ತ ಆಗಬಹುದು ಬದುಕಿದರೆ ಸಾಕು ಎನ್ನುತ್ತೇವೆ” ಎಂದು ಸಿಎಂ ಹೇಳಿದ್ದರು.

ಸಿಎಂರಿಂದ ತುಷ್ಟೀಕರಣದ ರಾಜಕಾರಣ : ಬಸವರಾಜ ಬೊಮ್ಮಾಯಿ

ಸಿಎಂ ಹೇಳಿಕೆಗೆ ಬಿಜೆಪಿ ನಾಯಕರು ಅಪಸ್ವರ ಎತ್ತಿದ್ದರು. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, “ಮುಖ್ಯಮಂತ್ರಿಗಳು ನಿನ್ನೆ ಸಭೆಯೊಂದರಲ್ಲಿ ರಾಷ್ಟ್ರದ ಸಂಪತ್ತಿನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾಗಿರುವ ಹಕ್ಕು ಕೊಡುವ ಮಾತನಾಡಿದ್ದಾರೆ. ಇದು ತುಷ್ಟೀಕರಣದ ರಾಜಕಾರಣ ಮತ ಬ್ಯಾಂಕಿನ ರಾಜಕಾರಣ. ಮುಖ್ಯಮಂತ್ರಿಯಾಗಿ ಎಲ್ಲರಿಗೂ ನ್ಯಾಯ ಕೊಡುವ ಅವರ ಕರ್ತವ್ಯವನ್ನು ಮರೆತಂತಿದೆ” ಎಂದು ಹೇಳಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಈಗಾಗಲೇ ಅಲ್ಪಸಂಖ್ಯಾತರಿಗೆ ವಕ್ಪ್ ಬೊರ್ಡ್, ಮೈನಾರಿಟಿ ಕಾರ್ಪೊರೇಷನ್, ಮೈನಾರಿಟಿ ಕಮಿಷನ್ ನಿಂದ ಹಲವಾರು ಕಾರ್ಯಕ್ರಮಗಳ ಮೂಲಕ ಅನುದಾನ ಬರುತ್ತಿದೆ.‌ ಅವರೂ ಕೂಡ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಆಗಬೇಕೆಂಬ ಆಸೆ ಎಲ್ಲ ಸರ್ಕಾರಗಳ ಉದ್ದೇಶವಾಗಿದೆ. ಆದರೆ, ಇತರ ಸಮುದಾಯಗಳ ಮೇಲೆ ಸವಾರಿ ಮಾಡುವ ರೀತಿಯ ಮುಖ್ಯಮಂತ್ರಿಯ ಮಾತು ಖಂಡನೀಯ ಎಂದು ಎಂದಿದ್ದಾರೆ.

ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್ಸಿಎಸ್ಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿಗಳಿಗೆ ವರ್ಗಾವಣೆ ಮಾಡಿ, ಅವರಿಗೆ ಅನ್ಯಾಯ ಮಾಡಿದ್ದೀರಿ. ಬರ ಪರಿಹಾರಕ್ಕೆ ಹಣ ನೀಡದೇ ಮುಸ್ಲಿಮರ ಓಲೈಕೆಗಾಗಿ ಹೆಚ್ಚಿನ ಅನುದಾನ‌ ನೀಡುವುದಾಗಿ ಹೇಳುತ್ತೀರಿ. ಇದರಿಂದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗುವುದಲ್ಲದೇ, ಸಾಮಾಜಿಕವಾಗಿ ತಾರತಮ್ಯ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೆಳಗಾವಿ: ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಕಿತ್ತಾಟಕ್ಕೆ ಕಾರಣವಾದ ಚಾಕು ಇರಿತ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...