Homeಕರ್ನಾಟಕಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ, ಇದರಲ್ಲಿ ತಪ್ಪೇನಿದೆ?: ಸಿಎಂ ಸಿದ್ದರಾಮಯ್ಯ

ಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ, ಇದರಲ್ಲಿ ತಪ್ಪೇನಿದೆ?: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ,ಇದರಲ್ಲಿ ತಪ್ಪೇನಿದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯ ಸಮಾವೇಶದಲ್ಲಿ ನೀಡಿರುವ ಹೇಳಿಕೆ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು, “ನಾನು ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ. ಅದನ್ನು ಬಿಟ್ಟು ಬರೆದರೆ ನಾನೇನು ಮಾಡುವುದು?” ಎಂದು ಪ್ರಶ್ನಿಸಿದ್ದಾರೆ.

“ನನ್ನ ಹೇಳಿಕೆಗೆ ಉಪ್ಪು, ಖಾರ ಹಾಕಿ ಪ್ರಚಾರ ಮಾಡುತ್ತಿದ್ದಾರೆ. ನಾನು ಮುಸ್ಲಿಮರು ಸೇರಿದಂತೆ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೆ” ಎಂದು ಸಿಎಂ ಪುನರುಚ್ಚರಿಸಿದ್ದಾರೆ.

ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ ದಕ್ಷಿಣ ಭಾರತ ಮುಸ್ಲಿಂ ಧರ್ಮ ಗುರುಗಳ ಸಮಾವೇಶದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, “ಹುಬ್ಬಳ್ಳಿಯ ಪೀರ್ ಬಾಷಾ ದರ್ಗಾಕ್ಕೆ ಅನುದಾನ ಕೊಡುತ್ತೇನೆ. ನಾನು ಹೇಳಿದ ಮೇಲೆ ಕೊಟ್ಟೇ ಕೊಡುತ್ತೇನೆ. ಅಲ್ಪ ಸಂಖ್ಯಾತ ಇಲಾಖೆಗೆ ಈಗಾಗಲೇ 4 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಇದನ್ನು ಹಂತ ಹಂತವಾಗಿ 10 ಸಾವಿರ ಕೋಟಿಗೆ ಹೆಚ್ಚಿಸಬೇಕು. ನಿಮ್ಮ ಧಾರ್ಮಿಕ ಕೇಂದ್ರಗಳಿಗೆ ಅನುದಾನ ಸಿಗಬೇಕು. ನೀವು ಭಾರತೀಯರು. ನಿಮಗೂ ಈ ದೇಶದ ಸಂಪತ್ತಿನಲ್ಲಿ ಹಕ್ಕಿದೆ. ನಿಮಗೆ ಅನ್ಯಾಯವಾಗಲು ಬಿಡುವುದಿಲ್ಲ” ಎಂದಿದ್ದರು.

“ಕೇವಲ ಅಕ್ಷರ ಕಲಿತರೆ ಸಾಲದು. ವೈಚಾರಿಕತೆಯಿಂದ ಕೂಡಿದ ಶಿಕ್ಷಣ ನಮಗೆಲ್ಲ ಸಿಗಬೇಕು. ಹಿಂದೂ, ಮುಸ್ಲಿಮರು ಒಂದೇ ತಾಯ ಮಕ್ಕಳು. ಕಾಯಿಲೆ ಬಂದರೆ ನಮ್ಮ ಜಾತಿಯವನ ರಕ್ಷ ಕೊಡಿ ಎಂದು ಕೇಳುತ್ತೇವಾ? ಯಾವುದೇ ರಕ್ತ ಆಗಬಹುದು ಬದುಕಿದರೆ ಸಾಕು ಎನ್ನುತ್ತೇವೆ” ಎಂದು ಸಿಎಂ ಹೇಳಿದ್ದರು.

ಸಿಎಂರಿಂದ ತುಷ್ಟೀಕರಣದ ರಾಜಕಾರಣ : ಬಸವರಾಜ ಬೊಮ್ಮಾಯಿ

ಸಿಎಂ ಹೇಳಿಕೆಗೆ ಬಿಜೆಪಿ ನಾಯಕರು ಅಪಸ್ವರ ಎತ್ತಿದ್ದರು. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, “ಮುಖ್ಯಮಂತ್ರಿಗಳು ನಿನ್ನೆ ಸಭೆಯೊಂದರಲ್ಲಿ ರಾಷ್ಟ್ರದ ಸಂಪತ್ತಿನಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾಗಿರುವ ಹಕ್ಕು ಕೊಡುವ ಮಾತನಾಡಿದ್ದಾರೆ. ಇದು ತುಷ್ಟೀಕರಣದ ರಾಜಕಾರಣ ಮತ ಬ್ಯಾಂಕಿನ ರಾಜಕಾರಣ. ಮುಖ್ಯಮಂತ್ರಿಯಾಗಿ ಎಲ್ಲರಿಗೂ ನ್ಯಾಯ ಕೊಡುವ ಅವರ ಕರ್ತವ್ಯವನ್ನು ಮರೆತಂತಿದೆ” ಎಂದು ಹೇಳಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಈಗಾಗಲೇ ಅಲ್ಪಸಂಖ್ಯಾತರಿಗೆ ವಕ್ಪ್ ಬೊರ್ಡ್, ಮೈನಾರಿಟಿ ಕಾರ್ಪೊರೇಷನ್, ಮೈನಾರಿಟಿ ಕಮಿಷನ್ ನಿಂದ ಹಲವಾರು ಕಾರ್ಯಕ್ರಮಗಳ ಮೂಲಕ ಅನುದಾನ ಬರುತ್ತಿದೆ.‌ ಅವರೂ ಕೂಡ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಆಗಬೇಕೆಂಬ ಆಸೆ ಎಲ್ಲ ಸರ್ಕಾರಗಳ ಉದ್ದೇಶವಾಗಿದೆ. ಆದರೆ, ಇತರ ಸಮುದಾಯಗಳ ಮೇಲೆ ಸವಾರಿ ಮಾಡುವ ರೀತಿಯ ಮುಖ್ಯಮಂತ್ರಿಯ ಮಾತು ಖಂಡನೀಯ ಎಂದು ಎಂದಿದ್ದಾರೆ.

ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್ಸಿಎಸ್ಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿಗಳಿಗೆ ವರ್ಗಾವಣೆ ಮಾಡಿ, ಅವರಿಗೆ ಅನ್ಯಾಯ ಮಾಡಿದ್ದೀರಿ. ಬರ ಪರಿಹಾರಕ್ಕೆ ಹಣ ನೀಡದೇ ಮುಸ್ಲಿಮರ ಓಲೈಕೆಗಾಗಿ ಹೆಚ್ಚಿನ ಅನುದಾನ‌ ನೀಡುವುದಾಗಿ ಹೇಳುತ್ತೀರಿ. ಇದರಿಂದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗುವುದಲ್ಲದೇ, ಸಾಮಾಜಿಕವಾಗಿ ತಾರತಮ್ಯ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೆಳಗಾವಿ: ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಕಿತ್ತಾಟಕ್ಕೆ ಕಾರಣವಾದ ಚಾಕು ಇರಿತ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...