Homeಕರ್ನಾಟಕಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

ಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

- Advertisement -
- Advertisement -

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರು, ಪ್ರಹ್ಲಾದ್ ಜೋಶಿಯವರ ಬಗ್ಗೆ ಮಾತನಾಡುತ್ತ ಬ್ರಾಹ್ಮಣ ಸಮುದಾಯದ ಬಗ್ಗೆ ಮಾತನಾಡಿದ್ದರು. ಇದನ್ನು ಬಿಜೆಪಿ ನಾಯಕರು, ಕುಮಾರಸ್ವಾಮಿ ಬ್ರಾಹ್ಮಣರ ವಿರೋಧಿ ಎಂದು ಆರೋಪಿಸಿದ್ದರು. ಅದಕ್ಕೆ ಇದೀಗ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಅವರು ಮಾತನಾಡುವ ವೇಳೆ, ”ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಬ್ರಾಹ್ಮಣರಿದ್ದರಲ್ಲ, ಆ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು” ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದರು.

ಬಿಜೆಪಿಯು ಹೆಚ್‌ಡಿಕೆ ಅವರನ್ನು ಬ್ರಾಹ್ಮಣ ವಿರೋಧಿ ಎಂದು ಬಿಂಬಿಸಿತ್ತು. ಈ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

”ಪೇಶ್ವೆಗಳ ವಂಶಾವಳಿಗೆ ಸಂಬಂಧಪಟ್ಟ ವ್ಯಕ್ತಿಯನ್ನು ಬಿಜೆಪಿ ಪಕ್ಷ ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

”ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ, ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ” ಎಂದಿದ್ದಾರೆ.

”ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ” ಎಂದು ಅವರು ಹೇಳಿದ್ದಾರೆ.

”ಶಿವಾಜಿ ಮಹಾರಾಜರು, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದವರು ಇವರು. ಇನ್ನು ನನ್ನನ್ನು ಬಿಟ್ಟಾರೆಯೇ? ಕೀಳು ನಿಂದನೆ, ಚಿತಾವಣೆಯಷ್ಟೇ ಇವರ ಆಯುಧಗಳು. ನಿಂದನೆ ಮತ್ತು ನಿಂದಕರ ಬಗ್ಗೆ ನಾನು ಅಂಜುವ ಪೈಕಿ ಅಲ್ಲ” ಎಂದಿದ್ದಾರೆ.

”ನಾನು ಎತ್ತಿದ ವಿಚಾರಕ್ಕೆ ಸಂಬಂಧವೇ ಇಲ್ಲದಂತೆ ಬಿಜೆಪಿಯವರು ಅವೇಶಭರಿತರಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ, ವಿಧಾನಸೌಧದಲ್ಲಿ ಬಿಜೆಪಿಯು ಪೇಶ್ವೆಗಳ ವಂಶಾವಳಿಯ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು ತಾಕತ್ತು ತೋರಿಸುತ್ತಿಲ್ಲ, ಯಾಕೆ? ಇಂಥ ವಿಕೃತಿಗಳಿಗೆ ನಾನು ಸೊಪ್ಪು ಹಾಕುವುದಿಲ್ಲ.”

”ಯಾರೋ ಮಾಡಿದ ಆದೇಶ, ಕಟ್ಟಪ್ಪಣೆಗೆ ಅಂಜಿ ನನ್ನ ಬಗ್ಗೆ ಬಿಜೆಪಿ ನಾಯಕರು ಸರಣಿ ಹೇಳಿಕೆ ನೀಡಬಹುದು. ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿಸಬಹುದು. ಆದರೆ, ಅವರೆಲ್ಲ ತಮ್ಮ ಆತ್ಮಸಾಕ್ಷಿಯನ್ನು ಒಮ್ಮೆ ಪ್ರಶ್ನೆ ಮಾಡಿಕೊಳ್ಳಲಿ. ಪೇಶ್ವೆ ವಂಶಾವಳಿ ನಾಯಕನ ಸರಣಿ ಹುನ್ನಾರಗಳ ಬಗ್ಗೆ ಮಾತನಾಡುವ ಧೈರ್ಯ ಅವರು ತೋರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

”ನನಗೆ ಸೋಲುವ ಭಯವಂತೆ, ಹತಾಶೆಯಂತೆ ಎಂದು ಬೊಗಳೆ ಬಿಟ್ಟುಕೊಂಡು ಕೇಕೆ ಹಾಕಿದರೆ ಜನ ನಂಬುವುದಿಲ್ಲ, ಅವರಿಗೂ ಗರ್ಭಗುಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ಚೆನ್ನಾಗಿ ಗೊತ್ತು. ಸತ್ಯ ಸಾಯುವುದೂ ಇಲ್ಲ… ಅಲ್ಲವೇ?”

”ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ಇನ್ನು, ಬ್ರಾಹ್ಮಣ ಸಮೂಹವನ್ನು ನಿಂದಿಸುವ ಪ್ರಶ್ನೆ ಎಲ್ಲಿ? ನಾನು ನಿಂದಿಸಿಲ್ಲ, ನಿಂದಿಸುವುದೂ ಇಲ್ಲ. ಮತ್ತೆ ಮತ್ತೆ ಸ್ಪಷ್ಟನೆ ಅನಗತ್ಯ” ಎಂದು ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...