Homeಕರ್ನಾಟಕಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

ಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

- Advertisement -
- Advertisement -

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರು, ಪ್ರಹ್ಲಾದ್ ಜೋಶಿಯವರ ಬಗ್ಗೆ ಮಾತನಾಡುತ್ತ ಬ್ರಾಹ್ಮಣ ಸಮುದಾಯದ ಬಗ್ಗೆ ಮಾತನಾಡಿದ್ದರು. ಇದನ್ನು ಬಿಜೆಪಿ ನಾಯಕರು, ಕುಮಾರಸ್ವಾಮಿ ಬ್ರಾಹ್ಮಣರ ವಿರೋಧಿ ಎಂದು ಆರೋಪಿಸಿದ್ದರು. ಅದಕ್ಕೆ ಇದೀಗ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಅವರು ಮಾತನಾಡುವ ವೇಳೆ, ”ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಬ್ರಾಹ್ಮಣರಿದ್ದರಲ್ಲ, ಆ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು” ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದರು.

ಬಿಜೆಪಿಯು ಹೆಚ್‌ಡಿಕೆ ಅವರನ್ನು ಬ್ರಾಹ್ಮಣ ವಿರೋಧಿ ಎಂದು ಬಿಂಬಿಸಿತ್ತು. ಈ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

”ಪೇಶ್ವೆಗಳ ವಂಶಾವಳಿಗೆ ಸಂಬಂಧಪಟ್ಟ ವ್ಯಕ್ತಿಯನ್ನು ಬಿಜೆಪಿ ಪಕ್ಷ ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

”ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ, ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ” ಎಂದಿದ್ದಾರೆ.

”ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ” ಎಂದು ಅವರು ಹೇಳಿದ್ದಾರೆ.

”ಶಿವಾಜಿ ಮಹಾರಾಜರು, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದವರು ಇವರು. ಇನ್ನು ನನ್ನನ್ನು ಬಿಟ್ಟಾರೆಯೇ? ಕೀಳು ನಿಂದನೆ, ಚಿತಾವಣೆಯಷ್ಟೇ ಇವರ ಆಯುಧಗಳು. ನಿಂದನೆ ಮತ್ತು ನಿಂದಕರ ಬಗ್ಗೆ ನಾನು ಅಂಜುವ ಪೈಕಿ ಅಲ್ಲ” ಎಂದಿದ್ದಾರೆ.

”ನಾನು ಎತ್ತಿದ ವಿಚಾರಕ್ಕೆ ಸಂಬಂಧವೇ ಇಲ್ಲದಂತೆ ಬಿಜೆಪಿಯವರು ಅವೇಶಭರಿತರಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ, ವಿಧಾನಸೌಧದಲ್ಲಿ ಬಿಜೆಪಿಯು ಪೇಶ್ವೆಗಳ ವಂಶಾವಳಿಯ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು ತಾಕತ್ತು ತೋರಿಸುತ್ತಿಲ್ಲ, ಯಾಕೆ? ಇಂಥ ವಿಕೃತಿಗಳಿಗೆ ನಾನು ಸೊಪ್ಪು ಹಾಕುವುದಿಲ್ಲ.”

”ಯಾರೋ ಮಾಡಿದ ಆದೇಶ, ಕಟ್ಟಪ್ಪಣೆಗೆ ಅಂಜಿ ನನ್ನ ಬಗ್ಗೆ ಬಿಜೆಪಿ ನಾಯಕರು ಸರಣಿ ಹೇಳಿಕೆ ನೀಡಬಹುದು. ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿಸಬಹುದು. ಆದರೆ, ಅವರೆಲ್ಲ ತಮ್ಮ ಆತ್ಮಸಾಕ್ಷಿಯನ್ನು ಒಮ್ಮೆ ಪ್ರಶ್ನೆ ಮಾಡಿಕೊಳ್ಳಲಿ. ಪೇಶ್ವೆ ವಂಶಾವಳಿ ನಾಯಕನ ಸರಣಿ ಹುನ್ನಾರಗಳ ಬಗ್ಗೆ ಮಾತನಾಡುವ ಧೈರ್ಯ ಅವರು ತೋರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

”ನನಗೆ ಸೋಲುವ ಭಯವಂತೆ, ಹತಾಶೆಯಂತೆ ಎಂದು ಬೊಗಳೆ ಬಿಟ್ಟುಕೊಂಡು ಕೇಕೆ ಹಾಕಿದರೆ ಜನ ನಂಬುವುದಿಲ್ಲ, ಅವರಿಗೂ ಗರ್ಭಗುಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ಚೆನ್ನಾಗಿ ಗೊತ್ತು. ಸತ್ಯ ಸಾಯುವುದೂ ಇಲ್ಲ… ಅಲ್ಲವೇ?”

”ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ಇನ್ನು, ಬ್ರಾಹ್ಮಣ ಸಮೂಹವನ್ನು ನಿಂದಿಸುವ ಪ್ರಶ್ನೆ ಎಲ್ಲಿ? ನಾನು ನಿಂದಿಸಿಲ್ಲ, ನಿಂದಿಸುವುದೂ ಇಲ್ಲ. ಮತ್ತೆ ಮತ್ತೆ ಸ್ಪಷ್ಟನೆ ಅನಗತ್ಯ” ಎಂದು ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...