Homeಕರ್ನಾಟಕಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

ಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

- Advertisement -
- Advertisement -

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರು, ಪ್ರಹ್ಲಾದ್ ಜೋಶಿಯವರ ಬಗ್ಗೆ ಮಾತನಾಡುತ್ತ ಬ್ರಾಹ್ಮಣ ಸಮುದಾಯದ ಬಗ್ಗೆ ಮಾತನಾಡಿದ್ದರು. ಇದನ್ನು ಬಿಜೆಪಿ ನಾಯಕರು, ಕುಮಾರಸ್ವಾಮಿ ಬ್ರಾಹ್ಮಣರ ವಿರೋಧಿ ಎಂದು ಆರೋಪಿಸಿದ್ದರು. ಅದಕ್ಕೆ ಇದೀಗ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಅವರು ಮಾತನಾಡುವ ವೇಳೆ, ”ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಬ್ರಾಹ್ಮಣರಿದ್ದರಲ್ಲ, ಆ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು” ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದರು.

ಬಿಜೆಪಿಯು ಹೆಚ್‌ಡಿಕೆ ಅವರನ್ನು ಬ್ರಾಹ್ಮಣ ವಿರೋಧಿ ಎಂದು ಬಿಂಬಿಸಿತ್ತು. ಈ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

”ಪೇಶ್ವೆಗಳ ವಂಶಾವಳಿಗೆ ಸಂಬಂಧಪಟ್ಟ ವ್ಯಕ್ತಿಯನ್ನು ಬಿಜೆಪಿ ಪಕ್ಷ ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

”ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ, ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ” ಎಂದಿದ್ದಾರೆ.

”ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ” ಎಂದು ಅವರು ಹೇಳಿದ್ದಾರೆ.

”ಶಿವಾಜಿ ಮಹಾರಾಜರು, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದವರು ಇವರು. ಇನ್ನು ನನ್ನನ್ನು ಬಿಟ್ಟಾರೆಯೇ? ಕೀಳು ನಿಂದನೆ, ಚಿತಾವಣೆಯಷ್ಟೇ ಇವರ ಆಯುಧಗಳು. ನಿಂದನೆ ಮತ್ತು ನಿಂದಕರ ಬಗ್ಗೆ ನಾನು ಅಂಜುವ ಪೈಕಿ ಅಲ್ಲ” ಎಂದಿದ್ದಾರೆ.

”ನಾನು ಎತ್ತಿದ ವಿಚಾರಕ್ಕೆ ಸಂಬಂಧವೇ ಇಲ್ಲದಂತೆ ಬಿಜೆಪಿಯವರು ಅವೇಶಭರಿತರಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ, ವಿಧಾನಸೌಧದಲ್ಲಿ ಬಿಜೆಪಿಯು ಪೇಶ್ವೆಗಳ ವಂಶಾವಳಿಯ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು ತಾಕತ್ತು ತೋರಿಸುತ್ತಿಲ್ಲ, ಯಾಕೆ? ಇಂಥ ವಿಕೃತಿಗಳಿಗೆ ನಾನು ಸೊಪ್ಪು ಹಾಕುವುದಿಲ್ಲ.”

”ಯಾರೋ ಮಾಡಿದ ಆದೇಶ, ಕಟ್ಟಪ್ಪಣೆಗೆ ಅಂಜಿ ನನ್ನ ಬಗ್ಗೆ ಬಿಜೆಪಿ ನಾಯಕರು ಸರಣಿ ಹೇಳಿಕೆ ನೀಡಬಹುದು. ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿಸಬಹುದು. ಆದರೆ, ಅವರೆಲ್ಲ ತಮ್ಮ ಆತ್ಮಸಾಕ್ಷಿಯನ್ನು ಒಮ್ಮೆ ಪ್ರಶ್ನೆ ಮಾಡಿಕೊಳ್ಳಲಿ. ಪೇಶ್ವೆ ವಂಶಾವಳಿ ನಾಯಕನ ಸರಣಿ ಹುನ್ನಾರಗಳ ಬಗ್ಗೆ ಮಾತನಾಡುವ ಧೈರ್ಯ ಅವರು ತೋರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

”ನನಗೆ ಸೋಲುವ ಭಯವಂತೆ, ಹತಾಶೆಯಂತೆ ಎಂದು ಬೊಗಳೆ ಬಿಟ್ಟುಕೊಂಡು ಕೇಕೆ ಹಾಕಿದರೆ ಜನ ನಂಬುವುದಿಲ್ಲ, ಅವರಿಗೂ ಗರ್ಭಗುಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ಚೆನ್ನಾಗಿ ಗೊತ್ತು. ಸತ್ಯ ಸಾಯುವುದೂ ಇಲ್ಲ… ಅಲ್ಲವೇ?”

”ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ಇನ್ನು, ಬ್ರಾಹ್ಮಣ ಸಮೂಹವನ್ನು ನಿಂದಿಸುವ ಪ್ರಶ್ನೆ ಎಲ್ಲಿ? ನಾನು ನಿಂದಿಸಿಲ್ಲ, ನಿಂದಿಸುವುದೂ ಇಲ್ಲ. ಮತ್ತೆ ಮತ್ತೆ ಸ್ಪಷ್ಟನೆ ಅನಗತ್ಯ” ಎಂದು ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...