Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

- Advertisement -
- Advertisement -

ಅಮೆರಿಕಾದ ಮಿನ್ನಿಯಾಪೊಲೀಸ್‌‌ನಲ್ಲಿ ಪೊಲೀಸ್ ಅಧಿಕಾರಿಯಿಂದ ಹತ್ಯೆಗೀಡಾದ ಆಫ್ರಿಕನ್-ಅಮೆರಿಕನ್‌‌ ಜಾರ್ಜ್ ಫ್ಲಾಯ್ಡ್ ಪ್ರಕರಣದ ವಿಚಾರಣೆ ಪ್ರಾರಂಭವಾಗಿದೆ. ವೈರಲ್ ವಿಡಿಯೋವನ್ನು ಚಿತ್ರೀಕರಿಸಿದ ಹದಿಹರೆಯದ ಯುವತಿ, ಘಟನೆ ನಡೆಯುತ್ತಿದ್ದಾಗ ಅವರ ಜೀವ ಉಳಿಸಲು ಬೇಕಾಗಿ ತನ್ನಿಂದ ಏನೂ ಮಾಡಲಾಗಿಲ್ಲ ಎಂದು ಮಂಗಳವಾರ ಪಶ್ಚಾತ್ತಾಪ ಪಟ್ಟಿದ್ದಾರೆ.

ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ, ಹತ್ಯೆಯ ಪ್ರಮುಖ ಆರೋಪಿ ಡೆರೆಕ್ ಚೌವಿನ್‌ನ ವಿಚಾರಣೆ ನಡೆಯುತ್ತಿರುವಾಗ ಘಟನೆಯನ್ನು ಚಿತ್ರೀಕರಿಸಿದ 18 ವರ್ಷದ ಯುವತಿ ಡಾರ್ನೇಲ್ಲಾ ಫ್ರೇಜಿಯರ್‌ ಭಾವನಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

44 ವರ್ಷದ ಚೌವಿನ್‌ ಮೇಲೆ ಜಾರ್ಜ್‌ ಫ್ಲಾಯ್ಡ್‌ ಅವರನ್ನು ಮೇ 25, 2020 ರಂದು ಹತ್ಯೆ ಮಾಡಿದ ಆರೋಪವಿದೆ. ಇದನ್ನು ಫ್ರೇಜಿಯರ್ ವೀಡಿಯೊದಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋ ಭಾರಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಜಗತ್ತಿನಾದ್ಯಂತ ವರ್ಣಭೇದ ನೀತಿ ವಿರೋಧಿ ಪ್ರತಿಭಟನೆಯಾದ ‘ಬ್ಲಾಕ್ ಲೈವ್ಸ್‌ ಮ್ಯಾಟರ್ಸ್‌ ಚಳವಳಿಗೆ ಕಾರಣವಾಯಿತು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

ವೈರಲ್ ವಿಡಿಯೋದಲ್ಲಿ ಆಫ್ರಿಕನ್-ಅಮೆರಿಕನ್ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆ ಮೇಲೆ ಪೊಲೀಸ್ ಅಧಿಕಾರಿ ಚೌವಿನ್ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ತನ್ನ ಮಂಡಿಯನ್ನು ಒತ್ತಿ ಹಿಡಿದಿದ್ದನು. ಜಾರ್ಜ್‌ ಪ್ಲಾಯ್ಡ್‌ ತನಗೆ ಉಸಿರಾಡಲು ಆಗುತ್ತಿಲ್ಲ ಎಂದು ಮಾಡಿದ್ದರಾದರೂ ಪೊಲೀಸ್ ಅಧಿಕಾರಿ ಅದನ್ನು ಮನ್ನಿಸದೆ ಅವರ ಹತ್ಯೆಗೆ ಕಾರಣವಾಗುತ್ತಾನೆ.

ವಿಚಾರಣೆ ಸಮಯದಲ್ಲಿ ಕಣ್ಣೀರಿಡುತ್ತಾ ಹೇಳಿಕೆ ನೀಡಿದ ಫ್ರೇಜಿಯರ್‌, “ನನಗೆ ಕಪ್ಪುವರ್ಣೀಯ ತಂದೆ, ಸಹೋದರರಿದ್ದಾರೆ. ಜಾರ್ಜ್ ಫ್ಲಾಯ್ಡ್ ಅವರ ಜೀವ ಉಳಿಸಲು ಏನೂ ಮಾಡದಿದ್ದಕ್ಕಾಗಿ ಹಲವಾರು ರಾತ್ರಿ ಕಣ್ಣೀರಿಟ್ಟಿದ್ದೇನೆ. ಅವರನ್ನು ಉಳಿಸಲು ದೈಹಿಕವಾಗಿ ಪ್ರತಿಕ್ರಿಯೆ ನೀಡದ್ದಕ್ಕಾಗಿ ನಾನು ಅವರಲ್ಲಿ ಕ್ಷಮೆಯಾಚಿಸುಯತ್ತಿದ್ದೇನೆ ಮತ್ತು ಕ್ಷಮೆಯಾಚಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಜಾರ್ಜ್ ಫ್ಲಾಯ್ಡ್ ಭಯಭೀತರಾಗಿ, ಪ್ರಾಣ ಭಿಕ್ಷೆ ಬೇಡುತ್ತಿದ್ದರು. ಅವರು ನೋವಿನಿಂದ ಬಳಲುತ್ತಿದ್ದರು. ಚೌವಿನ್ ಮಾಡುತ್ತಿರುವುದು ತಪ್ಪು ಎಂದು ನನಗೆ ಹಾಗೂ ಅಲ್ಲಿದ್ದ ಎಲ್ಲರಿಗೂ ತಿಳಿದಿತ್ತು. ಅಂತಿಮವಾಗಿ ಕೊಲೆಗೆ ಸಾಕ್ಷಿಯಾಗಿದೆ” ಎಂದು ಫ್ರೇಜಿಯರ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಘಟನೆ ನಡೆದ ಕೂಡಲೆ ನಾನು ತುರ್ತು 911 ಕರೆ ಮಾಡಿದ್ದೇನೆ ಎಂದು ಮತ್ತೊಬ್ಬ ಸಾಕ್ಷಿ ಹೇಳಿದ್ದಾರೆ.

ಜಾರ್ಜ್ ಫ್ಲಾಯ್ಡ್‌ನನ್ನು ಹತ್ಯೆ ಮಾಡಿದ ಪ್ರಧಾನ ಆರೋಪಿ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ ವಿಚಾರಣೆ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ಐಎಎನ್‌ಎಸ್ ನಿನ್ನೆ ವರದಿ ಮಾಡಿತ್ತು.

ಸೋಮವಾರದ ವಿಚಾರಣೆಯಲ್ಲಿ ಆರಂಭಿಕ ಹೇಳಿಕೆಗಳನ್ನು ಪಡೆಯಲಾಗಿದ್ದು, ಹತ್ಯೆಗೀಡಾದ ಫ್ಲಾಯ್ಡ್ ಕುಟುಂಬದ ಸದಸ್ಯರು ಮತ್ತು ಅವರ ಕಾನೂನು ತಂಡದ ತಂಡವು ಮಿನ್ನಿಯಾಪೋಲಿಸ್ ನ್ಯಾಯಾಲಯದ ಮುಂದೆ ಎಂಟು ನಿಮಿಷ 46 ಸೆಕೆಂಡುಗಳ ಕಾಲ ಹೇಳಿಕೆ ನೀಡಿತ್ತು.

ಘಟನಾ ಸ್ಥಳದಲ್ಲಿದ್ದ ಇತರ ಮೂವರು ಮಾಜಿ ಅಧಿಕಾರಿಗಳಾದ ಜೆ. ಅಲೆಕ್ಸಾಂಡರ್ ಕುಯೆಂಗ್, ಥಾಮಸ್ ಲೇನ್ ಮತ್ತು ಟೌ ಥಾವೊ ಕೂಡ ಹತ್ಯೆಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿಚಾರಣೆ ಆಗಸ್ಟ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.


 

 

ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...