Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

- Advertisement -
- Advertisement -

ಅಮೆರಿಕಾದ ಮಿನ್ನಿಯಾಪೊಲೀಸ್‌‌ನಲ್ಲಿ ಪೊಲೀಸ್ ಅಧಿಕಾರಿಯಿಂದ ಹತ್ಯೆಗೀಡಾದ ಆಫ್ರಿಕನ್-ಅಮೆರಿಕನ್‌‌ ಜಾರ್ಜ್ ಫ್ಲಾಯ್ಡ್ ಪ್ರಕರಣದ ವಿಚಾರಣೆ ಪ್ರಾರಂಭವಾಗಿದೆ. ವೈರಲ್ ವಿಡಿಯೋವನ್ನು ಚಿತ್ರೀಕರಿಸಿದ ಹದಿಹರೆಯದ ಯುವತಿ, ಘಟನೆ ನಡೆಯುತ್ತಿದ್ದಾಗ ಅವರ ಜೀವ ಉಳಿಸಲು ಬೇಕಾಗಿ ತನ್ನಿಂದ ಏನೂ ಮಾಡಲಾಗಿಲ್ಲ ಎಂದು ಮಂಗಳವಾರ ಪಶ್ಚಾತ್ತಾಪ ಪಟ್ಟಿದ್ದಾರೆ.

ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ, ಹತ್ಯೆಯ ಪ್ರಮುಖ ಆರೋಪಿ ಡೆರೆಕ್ ಚೌವಿನ್‌ನ ವಿಚಾರಣೆ ನಡೆಯುತ್ತಿರುವಾಗ ಘಟನೆಯನ್ನು ಚಿತ್ರೀಕರಿಸಿದ 18 ವರ್ಷದ ಯುವತಿ ಡಾರ್ನೇಲ್ಲಾ ಫ್ರೇಜಿಯರ್‌ ಭಾವನಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

44 ವರ್ಷದ ಚೌವಿನ್‌ ಮೇಲೆ ಜಾರ್ಜ್‌ ಫ್ಲಾಯ್ಡ್‌ ಅವರನ್ನು ಮೇ 25, 2020 ರಂದು ಹತ್ಯೆ ಮಾಡಿದ ಆರೋಪವಿದೆ. ಇದನ್ನು ಫ್ರೇಜಿಯರ್ ವೀಡಿಯೊದಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋ ಭಾರಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಜಗತ್ತಿನಾದ್ಯಂತ ವರ್ಣಭೇದ ನೀತಿ ವಿರೋಧಿ ಪ್ರತಿಭಟನೆಯಾದ ‘ಬ್ಲಾಕ್ ಲೈವ್ಸ್‌ ಮ್ಯಾಟರ್ಸ್‌ ಚಳವಳಿಗೆ ಕಾರಣವಾಯಿತು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

ವೈರಲ್ ವಿಡಿಯೋದಲ್ಲಿ ಆಫ್ರಿಕನ್-ಅಮೆರಿಕನ್ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆ ಮೇಲೆ ಪೊಲೀಸ್ ಅಧಿಕಾರಿ ಚೌವಿನ್ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ತನ್ನ ಮಂಡಿಯನ್ನು ಒತ್ತಿ ಹಿಡಿದಿದ್ದನು. ಜಾರ್ಜ್‌ ಪ್ಲಾಯ್ಡ್‌ ತನಗೆ ಉಸಿರಾಡಲು ಆಗುತ್ತಿಲ್ಲ ಎಂದು ಮಾಡಿದ್ದರಾದರೂ ಪೊಲೀಸ್ ಅಧಿಕಾರಿ ಅದನ್ನು ಮನ್ನಿಸದೆ ಅವರ ಹತ್ಯೆಗೆ ಕಾರಣವಾಗುತ್ತಾನೆ.

ವಿಚಾರಣೆ ಸಮಯದಲ್ಲಿ ಕಣ್ಣೀರಿಡುತ್ತಾ ಹೇಳಿಕೆ ನೀಡಿದ ಫ್ರೇಜಿಯರ್‌, “ನನಗೆ ಕಪ್ಪುವರ್ಣೀಯ ತಂದೆ, ಸಹೋದರರಿದ್ದಾರೆ. ಜಾರ್ಜ್ ಫ್ಲಾಯ್ಡ್ ಅವರ ಜೀವ ಉಳಿಸಲು ಏನೂ ಮಾಡದಿದ್ದಕ್ಕಾಗಿ ಹಲವಾರು ರಾತ್ರಿ ಕಣ್ಣೀರಿಟ್ಟಿದ್ದೇನೆ. ಅವರನ್ನು ಉಳಿಸಲು ದೈಹಿಕವಾಗಿ ಪ್ರತಿಕ್ರಿಯೆ ನೀಡದ್ದಕ್ಕಾಗಿ ನಾನು ಅವರಲ್ಲಿ ಕ್ಷಮೆಯಾಚಿಸುಯತ್ತಿದ್ದೇನೆ ಮತ್ತು ಕ್ಷಮೆಯಾಚಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಜಾರ್ಜ್ ಫ್ಲಾಯ್ಡ್ ಭಯಭೀತರಾಗಿ, ಪ್ರಾಣ ಭಿಕ್ಷೆ ಬೇಡುತ್ತಿದ್ದರು. ಅವರು ನೋವಿನಿಂದ ಬಳಲುತ್ತಿದ್ದರು. ಚೌವಿನ್ ಮಾಡುತ್ತಿರುವುದು ತಪ್ಪು ಎಂದು ನನಗೆ ಹಾಗೂ ಅಲ್ಲಿದ್ದ ಎಲ್ಲರಿಗೂ ತಿಳಿದಿತ್ತು. ಅಂತಿಮವಾಗಿ ಕೊಲೆಗೆ ಸಾಕ್ಷಿಯಾಗಿದೆ” ಎಂದು ಫ್ರೇಜಿಯರ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಘಟನೆ ನಡೆದ ಕೂಡಲೆ ನಾನು ತುರ್ತು 911 ಕರೆ ಮಾಡಿದ್ದೇನೆ ಎಂದು ಮತ್ತೊಬ್ಬ ಸಾಕ್ಷಿ ಹೇಳಿದ್ದಾರೆ.

ಜಾರ್ಜ್ ಫ್ಲಾಯ್ಡ್‌ನನ್ನು ಹತ್ಯೆ ಮಾಡಿದ ಪ್ರಧಾನ ಆರೋಪಿ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ ವಿಚಾರಣೆ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ಐಎಎನ್‌ಎಸ್ ನಿನ್ನೆ ವರದಿ ಮಾಡಿತ್ತು.

ಸೋಮವಾರದ ವಿಚಾರಣೆಯಲ್ಲಿ ಆರಂಭಿಕ ಹೇಳಿಕೆಗಳನ್ನು ಪಡೆಯಲಾಗಿದ್ದು, ಹತ್ಯೆಗೀಡಾದ ಫ್ಲಾಯ್ಡ್ ಕುಟುಂಬದ ಸದಸ್ಯರು ಮತ್ತು ಅವರ ಕಾನೂನು ತಂಡದ ತಂಡವು ಮಿನ್ನಿಯಾಪೋಲಿಸ್ ನ್ಯಾಯಾಲಯದ ಮುಂದೆ ಎಂಟು ನಿಮಿಷ 46 ಸೆಕೆಂಡುಗಳ ಕಾಲ ಹೇಳಿಕೆ ನೀಡಿತ್ತು.

ಘಟನಾ ಸ್ಥಳದಲ್ಲಿದ್ದ ಇತರ ಮೂವರು ಮಾಜಿ ಅಧಿಕಾರಿಗಳಾದ ಜೆ. ಅಲೆಕ್ಸಾಂಡರ್ ಕುಯೆಂಗ್, ಥಾಮಸ್ ಲೇನ್ ಮತ್ತು ಟೌ ಥಾವೊ ಕೂಡ ಹತ್ಯೆಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿಚಾರಣೆ ಆಗಸ್ಟ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.


 

 

ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...