Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

- Advertisement -
- Advertisement -

ಅಮೆರಿಕಾದ ಮಿನ್ನಿಯಾಪೊಲೀಸ್‌‌ನಲ್ಲಿ ಪೊಲೀಸ್ ಅಧಿಕಾರಿಯಿಂದ ಹತ್ಯೆಗೀಡಾದ ಆಫ್ರಿಕನ್-ಅಮೆರಿಕನ್‌‌ ಜಾರ್ಜ್ ಫ್ಲಾಯ್ಡ್ ಪ್ರಕರಣದ ವಿಚಾರಣೆ ಪ್ರಾರಂಭವಾಗಿದೆ. ವೈರಲ್ ವಿಡಿಯೋವನ್ನು ಚಿತ್ರೀಕರಿಸಿದ ಹದಿಹರೆಯದ ಯುವತಿ, ಘಟನೆ ನಡೆಯುತ್ತಿದ್ದಾಗ ಅವರ ಜೀವ ಉಳಿಸಲು ಬೇಕಾಗಿ ತನ್ನಿಂದ ಏನೂ ಮಾಡಲಾಗಿಲ್ಲ ಎಂದು ಮಂಗಳವಾರ ಪಶ್ಚಾತ್ತಾಪ ಪಟ್ಟಿದ್ದಾರೆ.

ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ, ಹತ್ಯೆಯ ಪ್ರಮುಖ ಆರೋಪಿ ಡೆರೆಕ್ ಚೌವಿನ್‌ನ ವಿಚಾರಣೆ ನಡೆಯುತ್ತಿರುವಾಗ ಘಟನೆಯನ್ನು ಚಿತ್ರೀಕರಿಸಿದ 18 ವರ್ಷದ ಯುವತಿ ಡಾರ್ನೇಲ್ಲಾ ಫ್ರೇಜಿಯರ್‌ ಭಾವನಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

44 ವರ್ಷದ ಚೌವಿನ್‌ ಮೇಲೆ ಜಾರ್ಜ್‌ ಫ್ಲಾಯ್ಡ್‌ ಅವರನ್ನು ಮೇ 25, 2020 ರಂದು ಹತ್ಯೆ ಮಾಡಿದ ಆರೋಪವಿದೆ. ಇದನ್ನು ಫ್ರೇಜಿಯರ್ ವೀಡಿಯೊದಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋ ಭಾರಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಜಗತ್ತಿನಾದ್ಯಂತ ವರ್ಣಭೇದ ನೀತಿ ವಿರೋಧಿ ಪ್ರತಿಭಟನೆಯಾದ ‘ಬ್ಲಾಕ್ ಲೈವ್ಸ್‌ ಮ್ಯಾಟರ್ಸ್‌ ಚಳವಳಿಗೆ ಕಾರಣವಾಯಿತು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

ವೈರಲ್ ವಿಡಿಯೋದಲ್ಲಿ ಆಫ್ರಿಕನ್-ಅಮೆರಿಕನ್ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆ ಮೇಲೆ ಪೊಲೀಸ್ ಅಧಿಕಾರಿ ಚೌವಿನ್ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ತನ್ನ ಮಂಡಿಯನ್ನು ಒತ್ತಿ ಹಿಡಿದಿದ್ದನು. ಜಾರ್ಜ್‌ ಪ್ಲಾಯ್ಡ್‌ ತನಗೆ ಉಸಿರಾಡಲು ಆಗುತ್ತಿಲ್ಲ ಎಂದು ಮಾಡಿದ್ದರಾದರೂ ಪೊಲೀಸ್ ಅಧಿಕಾರಿ ಅದನ್ನು ಮನ್ನಿಸದೆ ಅವರ ಹತ್ಯೆಗೆ ಕಾರಣವಾಗುತ್ತಾನೆ.

ವಿಚಾರಣೆ ಸಮಯದಲ್ಲಿ ಕಣ್ಣೀರಿಡುತ್ತಾ ಹೇಳಿಕೆ ನೀಡಿದ ಫ್ರೇಜಿಯರ್‌, “ನನಗೆ ಕಪ್ಪುವರ್ಣೀಯ ತಂದೆ, ಸಹೋದರರಿದ್ದಾರೆ. ಜಾರ್ಜ್ ಫ್ಲಾಯ್ಡ್ ಅವರ ಜೀವ ಉಳಿಸಲು ಏನೂ ಮಾಡದಿದ್ದಕ್ಕಾಗಿ ಹಲವಾರು ರಾತ್ರಿ ಕಣ್ಣೀರಿಟ್ಟಿದ್ದೇನೆ. ಅವರನ್ನು ಉಳಿಸಲು ದೈಹಿಕವಾಗಿ ಪ್ರತಿಕ್ರಿಯೆ ನೀಡದ್ದಕ್ಕಾಗಿ ನಾನು ಅವರಲ್ಲಿ ಕ್ಷಮೆಯಾಚಿಸುಯತ್ತಿದ್ದೇನೆ ಮತ್ತು ಕ್ಷಮೆಯಾಚಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಜಾರ್ಜ್ ಫ್ಲಾಯ್ಡ್ ಭಯಭೀತರಾಗಿ, ಪ್ರಾಣ ಭಿಕ್ಷೆ ಬೇಡುತ್ತಿದ್ದರು. ಅವರು ನೋವಿನಿಂದ ಬಳಲುತ್ತಿದ್ದರು. ಚೌವಿನ್ ಮಾಡುತ್ತಿರುವುದು ತಪ್ಪು ಎಂದು ನನಗೆ ಹಾಗೂ ಅಲ್ಲಿದ್ದ ಎಲ್ಲರಿಗೂ ತಿಳಿದಿತ್ತು. ಅಂತಿಮವಾಗಿ ಕೊಲೆಗೆ ಸಾಕ್ಷಿಯಾಗಿದೆ” ಎಂದು ಫ್ರೇಜಿಯರ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಘಟನೆ ನಡೆದ ಕೂಡಲೆ ನಾನು ತುರ್ತು 911 ಕರೆ ಮಾಡಿದ್ದೇನೆ ಎಂದು ಮತ್ತೊಬ್ಬ ಸಾಕ್ಷಿ ಹೇಳಿದ್ದಾರೆ.

ಜಾರ್ಜ್ ಫ್ಲಾಯ್ಡ್‌ನನ್ನು ಹತ್ಯೆ ಮಾಡಿದ ಪ್ರಧಾನ ಆರೋಪಿ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ ವಿಚಾರಣೆ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ಐಎಎನ್‌ಎಸ್ ನಿನ್ನೆ ವರದಿ ಮಾಡಿತ್ತು.

ಸೋಮವಾರದ ವಿಚಾರಣೆಯಲ್ಲಿ ಆರಂಭಿಕ ಹೇಳಿಕೆಗಳನ್ನು ಪಡೆಯಲಾಗಿದ್ದು, ಹತ್ಯೆಗೀಡಾದ ಫ್ಲಾಯ್ಡ್ ಕುಟುಂಬದ ಸದಸ್ಯರು ಮತ್ತು ಅವರ ಕಾನೂನು ತಂಡದ ತಂಡವು ಮಿನ್ನಿಯಾಪೋಲಿಸ್ ನ್ಯಾಯಾಲಯದ ಮುಂದೆ ಎಂಟು ನಿಮಿಷ 46 ಸೆಕೆಂಡುಗಳ ಕಾಲ ಹೇಳಿಕೆ ನೀಡಿತ್ತು.

ಘಟನಾ ಸ್ಥಳದಲ್ಲಿದ್ದ ಇತರ ಮೂವರು ಮಾಜಿ ಅಧಿಕಾರಿಗಳಾದ ಜೆ. ಅಲೆಕ್ಸಾಂಡರ್ ಕುಯೆಂಗ್, ಥಾಮಸ್ ಲೇನ್ ಮತ್ತು ಟೌ ಥಾವೊ ಕೂಡ ಹತ್ಯೆಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿಚಾರಣೆ ಆಗಸ್ಟ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.


 

 

ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...