Homeಅಂತರಾಷ್ಟ್ರೀಯ'ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ': ಶ್ವೇತಭವನದಲ್ಲಿ ಪುನರುಚ್ಚರಿಸಿದ ಟ್ರಂಪ್‌

‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ಶ್ವೇತಭವನದಲ್ಲಿ ಪುನರುಚ್ಚರಿಸಿದ ಟ್ರಂಪ್‌

- Advertisement -
- Advertisement -

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಾನೇ ನಿಲ್ಲಿಸಿದ್ದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಮತ್ತೊಮ್ಮೆ ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ತಮ್ಮ ಆಡಳಿತದ ಅಧಿಕಾರಿಗಳಿಗೆ ಆ ದೇಶಗಳೊಂದಿಗಿನ ಎಲ್ಲಾ ಒಪ್ಪಂದಗಳನ್ನು ರದ್ದುಪಡಿಸಿ ಎಂದು ಬೆದರಿಕೆ ಹಾಕಿದ ನಂತರವೇ ಎರಡೂ ದೇಶಗಳು ಯುದ್ಧವನ್ನು ನಿಲ್ಲಿಸಲು ಒಪ್ಪಿದವು ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಯುಎಸ್ ಸುಪ್ರೀಂ ಕೋರ್ಟ್‌ನ ಹಲವು ತೀರ್ಪುಗಳ ಕುರಿತು ಪ್ರಸ್ತಾಪಿಸಿದರು. “ನಾವು ಕೆಲವು ಉತ್ತಮ ಕೆಲಸಗಳನ್ನು ಮಾಡಿದ್ದೇವೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಬಹುಶಃ ಅಣು ಯುದ್ಧ ನಡೆಯಬಹುದಿತ್ತು. ನಾವು ಅದನ್ನು ನಿಲ್ಲಿಸಿದೆವು. ನಾವು ಸಾಕಷ್ಟು ಕೆಲಸ ಮಾಡಿದ್ದೇವೆ. ಇಷ್ಟು ಹೆಚ್ಚು ಕೆಲಸ ಮಾಡಿದ ಅಧ್ಯಕ್ಷರು ಯಾರಾದರೂ ಇದ್ದಾರೆಯೇ ಎಂದು ನನಗೆ ಗೊತ್ತಿಲ್ಲ,” ಎಂದು ಅವರು ಹೇಳಿದರು.

ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ತಾನೇ ನಿಲ್ಲಿಸಿದ್ದೇನೆ ಎಂದು ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ. ಆ ಯುದ್ಧ ಅಣು ಸಮರಕ್ಕೆ ತಿರುಗಬಹುದಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ಈ ಸಂಘರ್ಷವನ್ನು ಕೊನೆಗೊಳಿಸದಿದ್ದರೆ ಅಮೆರಿಕವು ಭಾರತ ಮತ್ತು ಪಾಕಿಸ್ತಾನದೊಂದಿಗೆ “ವ್ಯಾಪಾರ” ಮಾಡುವುದಿಲ್ಲ ಎಂದು ಈ ದೇಶಗಳಿಗೆ ಸ್ಪಷ್ಟವಾಗಿ ತಿಳಿಸಿದ್ದಾಗಿ ಅವರು ಹೇಳಿದ್ದಾರೆ.

“ಸರ್ಬಿಯಾ ಮತ್ತು ಕೊಸೊವೊ ದೇಶಗಳು ಯುದ್ಧ ಮಾಡಲು ಹೊರಟಿದ್ದವು, ಅದು ದೊಡ್ಡ ಯುದ್ಧವಾಗುತ್ತಿತ್ತು. ನಾನು ಅವರಿಗೆ, ‘ನೀವು ಯುದ್ಧಕ್ಕೆ ಮುಂದಾದರೆ, ಅಮೆರಿಕದೊಂದಿಗೆ ನಿಮಗೆ ಯಾವುದೇ ವ್ಯಾಪಾರ ಇರುವುದಿಲ್ಲ…’ ಎಂದು ಹೇಳಿದೆ. ಇದೇ ರೀತಿ ಭಾರತ ಮತ್ತು ಪಾಕಿಸ್ತಾನದ ವಿಷಯದಲ್ಲೂ ಆಯಿತು. ನಾನು ಭಾರತ ಮತ್ತು ಪಾಕ್‌ಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾಗ ನಮ್ಮ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸ್ಸೆಂಟ್ ಮತ್ತು ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಅವರಿಗೆ, ಭಾರತ ಮತ್ತು ಪಾಕಿಸ್ತಾನದೊಂದಿಗಿನ ಎಲ್ಲಾ ಒಪ್ಪಂದಗಳನ್ನು ರದ್ದುಗೊಳಿಸಿ. ಅವರು ಯುದ್ಧದಲ್ಲಿ ತೊಡಗಿರುವ ಕಾರಣ ನಮ್ಮೊಂದಿಗೆ ವ್ಯಾಪಾರ ಮಾಡಲು ಸಾಧ್ಯವಿಲ್ಲವೆಂದು ಹೇಳಿದ್ದಾಗಿ ಟ್ರಂಪ್ ವಿವರಿಸಿದರು.

ಎರಡೂ ದೇಶಗಳು ನಮಗೆ ಕರೆ ಮಾಡಿ, ‘ನಾವು ಏನು ಮಾಡಬೇಕು?’ ಎಂದು ಕೇಳಿದವು. ಆಗ ನಾನು, ‘ನೋಡಿ, ನೀವು ಅಮೆರಿಕದೊಂದಿಗೆ ವ್ಯಾಪಾರ ಮಾಡಲು ಬಯಸುವುದು ತುಂಬಾ ಒಳ್ಳೆಯದು. ಆದರೆ, ನೀವು ಪರಸ್ಪರ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಲು ಹೊರಟರೆ, ನಾವು ಅದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಉತ್ತರಿಸಿದೆ. ಇದಕ್ಕೆ ಅವರು ಒಪ್ಪಿದರು. ಭಾರತ ಮತ್ತು ಪಾಕಿಸ್ತಾನ ಎರಡೂ ಮಹಾನ್ ನಾಯಕರನ್ನು ಹೊಂದಿದ್ದು, ಪರಮಾಣು ಅಸ್ತ್ರಗಳನ್ನು ಬಳಸದಿರಲು ಸಮ್ಮತಿಸಿದವು. ಹೀಗೆ ನಾವು ಸಾಕಷ್ಟು ಕೆಲಸ ಮಾಡಿದೆವು” ಎಂದು ಟ್ರಂಪ್ ತಿಳಿಸಿದರು.

ಭಾರತದಂತಹ ಕೆಲವು ದೊಡ್ಡ ದೇಶಗಳೊಂದಿಗೆ ನಾವು ವ್ಯಾಪಾರ ಮಾಡುವ ಹಕ್ಕನ್ನು ಒಳಗೊಂಡ ಒಪ್ಪಂದವನ್ನು ಮಾಡಿಕೊಳ್ಳಬಹುದೆಂದು ನಾನು ಭಾವಿಸುತ್ತೇನೆ. ಸದ್ಯಕ್ಕೆ ಇದು ನಿರ್ಬಂಧಗಳೊಂದಿಗೆ ಕೂಡಿದೆ. ಅಲ್ಲಿಗೆ ಹೋಗಿ ವ್ಯಾಪಾರ ಮಾಡುವುದನ್ನು ಯೋಚಿಸಲೂ ಸಾಧ್ಯವಿಲ್ಲ. ನಾವು ಸಂಪೂರ್ಣ ವ್ಯಾಪಾರ ತಡೆಗೋಡೆಗಳನ್ನು ತೆಗೆದುಹಾಕಲು ಶ್ರಮಿಸುತ್ತಿದ್ದೇವೆ. ಇದು ಅಸಾಧ್ಯವೆಂದು ಕಾಣುತ್ತದೆ ಮತ್ತು ಇದು ವಾಸ್ತವವಾಗಿ ನಡೆಯುತ್ತದೆಯೇ ಎಂದು ನನಗೆ ಖಚಿತವಿಲ್ಲ. ಆದರೆ, ಸದ್ಯಕ್ಕೆ ನಾವು ಭಾರತದಲ್ಲಿ ವ್ಯಾಪಾರ ಮಾಡಲು ಒಪ್ಪಿಕೊಂಡಿದ್ದೇವೆ ಎಂದು ಟ್ರಂಪ್ ಹೇಳಿದರು.

ನಾವು ಚೀನಾದಲ್ಲಿ ವ್ಯಾಪಾರ ಆರಂಭಿಸಲಿದ್ದೇವೆ. ಅದು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು, ಆದರೆ ನಾವು ಖಂಡಿತವಾಗಿಯೂ ಚೀನಾದೊಂದಿಗೆ ವ್ಯಾಪಾರ ಮಾಡುತ್ತೇವೆ. ನಮ್ಮ ನಡುವೆ ಸಾಕಷ್ಟು ಚರ್ಚೆ ನಡೆಯುತ್ತಿದೆ ಮತ್ತು ನಾವು ಹಲವು ದೇಶಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇವೆ. ಅದೂ ಹಣದುಬ್ಬರಕ್ಕೆ ಕಾರಣವಾಗದೆ, ನಾವು ಈಗಾಗಲೇ ನೂರಾರು ಶತಕೋಟಿ ಡಾಲರ್‌ಗಳನ್ನು ಸುಂಕದ ರೂಪದಲ್ಲಿ ಸಂಗ್ರಹಿಸಿದ್ದೇವೆ. ಕೆಲವರು ಸುಂಕವನ್ನು ಪಾವತಿಸಬೇಕಾಗುತ್ತದೆಂದು ನಿರಾಶೆಗೊಳ್ಳುತ್ತಾರೆ ಎಂದು ನಮಗೆ ಅನಿಸುತ್ತದೆ ಎಂದು ಟ್ರಂಪ್ ಹೇಳಿದರು.

ನಾಲ್ಕು ದಿನಗಳ ತೀವ್ರ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಿದ ನಂತರ, ಭಾರತ ಮತ್ತು ಪಾಕಿಸ್ತಾನವು ಮೇ 10 ರಂದು ಸಂಘರ್ಷವನ್ನು ಕೊನೆಗೊಳಿಸಲು ಒಪ್ಪಂದಕ್ಕೆ ಬಂದವು.

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡಿದೆ ಎಂದು ಟ್ರಂಪ್ ಹಲವು ಬಾರಿ ಹೇಳಿಕೊಂಡಿದ್ದಾರೆ.

ಪಾಕಿಸ್ತಾನದೊಂದಿಗಿನ ಕದನವಿರಾಮವು ಎರಡೂ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMOs) ನಡುವಿನ ನೇರ ಮಾತುಕತೆಗಳ ನಂತರವೇ ಸಾಧ್ಯವಾಯಿತು ಎಂದು ಭಾರತವು ಸತತವಾಗಿ ಹೇಳುತ್ತಿದೆ.

ಕಳೆದ ವಾರ ಟ್ರಂಪ್ ಅವರೊಂದಿಗಿನ ಸುಮಾರು 35 ನಿಮಿಷಗಳ ಫೋನ್ ಕರೆಯಲ್ಲಿ, ಭಾರತ-ಪಾಕ್ ನಡುವಿನ ಕದನವಿರಾಮದ ಮಧ್ಯಸ್ಥಿಕೆಯನ್ನು ಇನ್ಯಾವುದೋ ದೇಶ ವಹಿಸಿತು ಎಂದು ಹೇಳಿಕೊಳ್ಳುವುದನ್ನು ಭಾರತವು ಸಂಪೂರ್ಣವಾಗಿ ತಿರಸ್ಕರಿಸುತ್ತದೆ ಎಂದು ಮೋದಿ ಸ್ಪಷ್ಟವಾಗಿ ಹೇಳಿದ್ದರು. ಹಾಗೆಯೇ, ಸೈನಿಕ ಕಾರ್ಯಾಚರಣೆಗಳನ್ನು ನಿಲ್ಲಿಸುವ ಕುರಿತು ಭಾರತೀಯ ಮತ್ತು ಪಾಕಿಸ್ತಾನಿ ಸೇನೆಗಳ ನಡುವಿನ ಚರ್ಚೆಗಳು ಪಾಕಿಸ್ತಾನದ ವಿನಂತಿಯ ಮೇರೆಗೆ ಪ್ರಾರಂಭವಾಗಿವೆ ಎಂದೂ ಪ್ರಧಾನಿ ಮೋದಿ ತಿಳಿಸಿದ್ದರು.

ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ: 1 ಸಾವು, 11 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...