Homeಮುಖಪುಟ'ಪಕ್ಷಗಳನ್ನು ಲೆಕ್ಕಿಸದೆ ನಾನು ಮಹಿಳೆಯರಿಗೆ ಬೆಂಬಲ ನೀಡುತ್ತೇನೆ..'; ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ

‘ಪಕ್ಷಗಳನ್ನು ಲೆಕ್ಕಿಸದೆ ನಾನು ಮಹಿಳೆಯರಿಗೆ ಬೆಂಬಲ ನೀಡುತ್ತೇನೆ..’; ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ

- Advertisement -
- Advertisement -

“ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತರೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದೆ ಸ್ವಾತಿ ಮಲಿವಾಲ್ ಅವರೊಂದಿಗೆ ನಾನು ನಿಂತಿದ್ದೇನೆ” ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಗುರುವಾರ ಹೇಳಿದ್ದಾರೆ.

‘ಪಕ್ಷಗಳನ್ನು ಲೆಕ್ಕಿಸದೆ ಮಹಿಳೆಯರನ್ನು ಬೆಂಬಲಿಸುತ್ತೇನೆ’ ಎಂದು ಹೇಳಿದ ಪ್ರಿಯಾಂಕಾ, ‘ಎಎಪಿ ಈ ವಿಷಯವನ್ನು ಪರಿಹರಿಸುತ್ತದೆ ಮತ್ತು ಪರಿಹಾರವನ್ನು ಕಂಡುಕೊಳ್ಳುತ್ತದೆ’ ಎಂದು ಭರವಸೆ ವ್ಯಕ್ತಪಡಿಸಿದರು.

ಎಎಪಿ ರಾಜ್ಯಸಭಾ ಸಂಸದೆ ಮಲಿವಾಲ್ ಅವರು ಇತ್ತೀಚೆಗೆ ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.

“ಪ್ರಸ್ತುತ ನಾನು ಉತ್ತರ ಪ್ರದೇಶದಲ್ಲಿರುವುದರಿಂದ ಹೆಚ್ಚು ಗಮನಿಸಿಲ್ಲ, ಯಾವುದೇ ಮಹಿಳೆಯ ಮೇಲೆ ದೌರ್ಜನ್ಯ ನಡೆದರೆ ನಾನು ಮಹಿಳೆಯ ಪರವಾಗಿ ಮಾತ್ರ ಮಾತನಾಡುತ್ತೇನೆ. ಯಾವುದೇ ತಪ್ಪು ನಡೆದರೂ ನಾನು ಮಹಿಳೆಯ ಪರವಾಗಿ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.

“ಘಟನೆ ನಿಜವಾಗಿದ್ದರೆ, ಏನಾದರೂ ತಪ್ಪಾಗಿದ್ದರೆ, ನಾನು ಆ ಮಹಿಳೆಯೊಂದಿಗೆ ನಿಲ್ಲುತ್ತೇನೆ” ಎಂದು ಪ್ರತಿಪಾದಿಸಿದ ಅವರು, “ಸ್ವಾತಿ ಮಲಿವಾಲ್ ನನ್ನೊಂದಿಗೆ ಮಾತನಾಡಲು ಬಯಸಿದರೆ, ನಾನು ಮಾತನಾಡುತ್ತೇನೆ” ಎಂದು ಹೇಳಿದರು.

“ಈ ವಿಷಯ ಕೇಜ್ರಿವಾಲ್ ಅವರಿಗೆ ತಿಳಿದಿದ್ದರೆ, ಕೇಜ್ರಿವಾಲ್ ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಸ್ವಾತಿ ಮಲಿವಾಲ್ ಅವರಿಗೆ ಸ್ವೀಕಾರಾರ್ಹವಾದ ಪರಿಹಾರವನ್ನು ಕೇಜ್ರಿವಾಲ್ ಅವರು ಕಂಡುಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದರು

ಹತ್ರಾಸ್ ಮತ್ತು ಉನ್ನಾವೋ (ಗ್ಯಾಂಗ್ರೇಪ್) ಪ್ರಕರಣಗಳಲ್ಲಿ ಪಕ್ಷವು ಏನನ್ನೂ ಮಾಡದಿರುವಾಗ, ಬಿಜೆಪಿ ನಾಯಕರು ಈ ವಿಷಯದ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ ಮಹಿಳಾ ಕುಸ್ತಿಪಟುಗಳ ವಿಷಯದಲ್ಲಿ ಬಿಜೆಪಿ ಏನನ್ನೂ ಮಾಡಿಲ್ಲ ಎಂದು ಅವರು ಸ್ವಾತಿ ಮಲಿವಾಲ್ ವಿಚಾರದಲ್ಲಿ ಮಾತನಾಡುತ್ತಿರುವ ಬಿಜೆಪಿ ವಿರುದ್ಧ ಕಿಡಿಕಾರಿದರು.

ಸೋಮವಾರ ಬೆಳಗ್ಗೆ ನವದೆಹಲಿಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿದ ಮಲಿವಾಲ್, ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಕೇಜ್ರಿವಾಲ್ ಅವರ ವೈಯಕ್ತಿಕ ಸಿಬ್ಬಂದಿಯೊಬ್ಬರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. ಆದರೆ, ಆಕೆ ಔಪಚಾರಿಕವಾಗಿ ದೂರು ದಾಖಲಿಸಿಲ್ಲ. ಮಲಿವಾಲ್ ಅವರ ಆರೋಪದ ನಂತರ, ಹಿರಿಯ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಗಳನ್ನು ಒಪ್ಪಿಕೊಂಡಿದ್ದು, ಕೇಜ್ರಿವಾಲ್ ಈ ವಿಷಯದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ಈ ಬಗ್ಗೆ ದೆಹಲಿ ಮುಖ್ಯಮಂತ್ರಿ ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೇಜ್ರಿವಾಲ್ ಅವರನ್ನು ಗುರಿಯಾಗಿಸಿ ಬಿಜೆಪಿ, “ಅವರು ಮೌನವಾಗಿದ್ದಾರೆ, ಗೂಂಡಾನಂತೆ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದರು. ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ದೂರಿನಲ್ಲಿ ಎಎಪಿ ಮುಖ್ಯಸ್ಥರು ಪ್ರಮುಖ “ಅಪರಾಧಿ” ಎಂದು ಹೇಳಿದ್ದಾರೆ.

ಈ ಬೆಳವಣಿಗೆಗಳ ನಡುವೆ, ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಇಂದು ಮುಂಜಾನೆ ಮಲಿವಾಲ್ ಅವರ ಮನೆಗೆ ತಲುಪಿದೆ. ಮಲಿವಾಲ್ ಅವರ ಆರೋಪದ ಮೇಲೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡ್ಲ್ಯೂ) ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರಿಗೆ ಸಮನ್ಸ್ ನೀಡಿದೆ.

ಇದನ್ನೂ ಓದಿ; ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿಗೆ ಎನ್‌ಸಿಡಬ್ಲ್ಯೂ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...