Homeಮುಖಪುಟ'ಪಕ್ಷಗಳನ್ನು ಲೆಕ್ಕಿಸದೆ ನಾನು ಮಹಿಳೆಯರಿಗೆ ಬೆಂಬಲ ನೀಡುತ್ತೇನೆ..'; ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ

‘ಪಕ್ಷಗಳನ್ನು ಲೆಕ್ಕಿಸದೆ ನಾನು ಮಹಿಳೆಯರಿಗೆ ಬೆಂಬಲ ನೀಡುತ್ತೇನೆ..’; ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ

- Advertisement -
- Advertisement -

“ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತರೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದೆ ಸ್ವಾತಿ ಮಲಿವಾಲ್ ಅವರೊಂದಿಗೆ ನಾನು ನಿಂತಿದ್ದೇನೆ” ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಗುರುವಾರ ಹೇಳಿದ್ದಾರೆ.

‘ಪಕ್ಷಗಳನ್ನು ಲೆಕ್ಕಿಸದೆ ಮಹಿಳೆಯರನ್ನು ಬೆಂಬಲಿಸುತ್ತೇನೆ’ ಎಂದು ಹೇಳಿದ ಪ್ರಿಯಾಂಕಾ, ‘ಎಎಪಿ ಈ ವಿಷಯವನ್ನು ಪರಿಹರಿಸುತ್ತದೆ ಮತ್ತು ಪರಿಹಾರವನ್ನು ಕಂಡುಕೊಳ್ಳುತ್ತದೆ’ ಎಂದು ಭರವಸೆ ವ್ಯಕ್ತಪಡಿಸಿದರು.

ಎಎಪಿ ರಾಜ್ಯಸಭಾ ಸಂಸದೆ ಮಲಿವಾಲ್ ಅವರು ಇತ್ತೀಚೆಗೆ ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.

“ಪ್ರಸ್ತುತ ನಾನು ಉತ್ತರ ಪ್ರದೇಶದಲ್ಲಿರುವುದರಿಂದ ಹೆಚ್ಚು ಗಮನಿಸಿಲ್ಲ, ಯಾವುದೇ ಮಹಿಳೆಯ ಮೇಲೆ ದೌರ್ಜನ್ಯ ನಡೆದರೆ ನಾನು ಮಹಿಳೆಯ ಪರವಾಗಿ ಮಾತ್ರ ಮಾತನಾಡುತ್ತೇನೆ. ಯಾವುದೇ ತಪ್ಪು ನಡೆದರೂ ನಾನು ಮಹಿಳೆಯ ಪರವಾಗಿ ನಿಲ್ಲುತ್ತೇನೆ” ಎಂದು ಹೇಳಿದ್ದಾರೆ.

“ಘಟನೆ ನಿಜವಾಗಿದ್ದರೆ, ಏನಾದರೂ ತಪ್ಪಾಗಿದ್ದರೆ, ನಾನು ಆ ಮಹಿಳೆಯೊಂದಿಗೆ ನಿಲ್ಲುತ್ತೇನೆ” ಎಂದು ಪ್ರತಿಪಾದಿಸಿದ ಅವರು, “ಸ್ವಾತಿ ಮಲಿವಾಲ್ ನನ್ನೊಂದಿಗೆ ಮಾತನಾಡಲು ಬಯಸಿದರೆ, ನಾನು ಮಾತನಾಡುತ್ತೇನೆ” ಎಂದು ಹೇಳಿದರು.

“ಈ ವಿಷಯ ಕೇಜ್ರಿವಾಲ್ ಅವರಿಗೆ ತಿಳಿದಿದ್ದರೆ, ಕೇಜ್ರಿವಾಲ್ ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಸ್ವಾತಿ ಮಲಿವಾಲ್ ಅವರಿಗೆ ಸ್ವೀಕಾರಾರ್ಹವಾದ ಪರಿಹಾರವನ್ನು ಕೇಜ್ರಿವಾಲ್ ಅವರು ಕಂಡುಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದರು

ಹತ್ರಾಸ್ ಮತ್ತು ಉನ್ನಾವೋ (ಗ್ಯಾಂಗ್ರೇಪ್) ಪ್ರಕರಣಗಳಲ್ಲಿ ಪಕ್ಷವು ಏನನ್ನೂ ಮಾಡದಿರುವಾಗ, ಬಿಜೆಪಿ ನಾಯಕರು ಈ ವಿಷಯದ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ. ನಮ್ಮ ಮಹಿಳಾ ಕುಸ್ತಿಪಟುಗಳ ವಿಷಯದಲ್ಲಿ ಬಿಜೆಪಿ ಏನನ್ನೂ ಮಾಡಿಲ್ಲ ಎಂದು ಅವರು ಸ್ವಾತಿ ಮಲಿವಾಲ್ ವಿಚಾರದಲ್ಲಿ ಮಾತನಾಡುತ್ತಿರುವ ಬಿಜೆಪಿ ವಿರುದ್ಧ ಕಿಡಿಕಾರಿದರು.

ಸೋಮವಾರ ಬೆಳಗ್ಗೆ ನವದೆಹಲಿಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿದ ಮಲಿವಾಲ್, ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಕೇಜ್ರಿವಾಲ್ ಅವರ ವೈಯಕ್ತಿಕ ಸಿಬ್ಬಂದಿಯೊಬ್ಬರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. ಆದರೆ, ಆಕೆ ಔಪಚಾರಿಕವಾಗಿ ದೂರು ದಾಖಲಿಸಿಲ್ಲ. ಮಲಿವಾಲ್ ಅವರ ಆರೋಪದ ನಂತರ, ಹಿರಿಯ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಆರೋಪಗಳನ್ನು ಒಪ್ಪಿಕೊಂಡಿದ್ದು, ಕೇಜ್ರಿವಾಲ್ ಈ ವಿಷಯದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ಈ ಬಗ್ಗೆ ದೆಹಲಿ ಮುಖ್ಯಮಂತ್ರಿ ಸಾರ್ವಜನಿಕವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೇಜ್ರಿವಾಲ್ ಅವರನ್ನು ಗುರಿಯಾಗಿಸಿ ಬಿಜೆಪಿ, “ಅವರು ಮೌನವಾಗಿದ್ದಾರೆ, ಗೂಂಡಾನಂತೆ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದರು. ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ದೂರಿನಲ್ಲಿ ಎಎಪಿ ಮುಖ್ಯಸ್ಥರು ಪ್ರಮುಖ “ಅಪರಾಧಿ” ಎಂದು ಹೇಳಿದ್ದಾರೆ.

ಈ ಬೆಳವಣಿಗೆಗಳ ನಡುವೆ, ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಇಂದು ಮುಂಜಾನೆ ಮಲಿವಾಲ್ ಅವರ ಮನೆಗೆ ತಲುಪಿದೆ. ಮಲಿವಾಲ್ ಅವರ ಆರೋಪದ ಮೇಲೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡ್ಲ್ಯೂ) ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರಿಗೆ ಸಮನ್ಸ್ ನೀಡಿದೆ.

ಇದನ್ನೂ ಓದಿ; ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿಗೆ ಎನ್‌ಸಿಡಬ್ಲ್ಯೂ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...