Homeಮುಖಪುಟ'ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ..'; ಬಿಜೆಪಿ ವಾಗ್ದಂಡನೆ ಬಳಿಕ ಯೂ-ಟರ್ನ್‌ ಹೊಡೆದ ಬಿಜೆಪಿ ಸಂಸದೆ ಕಂಗನಾ

‘ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ..’; ಬಿಜೆಪಿ ವಾಗ್ದಂಡನೆ ಬಳಿಕ ಯೂ-ಟರ್ನ್‌ ಹೊಡೆದ ಬಿಜೆಪಿ ಸಂಸದೆ ಕಂಗನಾ

- Advertisement -
- Advertisement -

ತನ್ನ ಅಪ್ರಬುದ್ಧ ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಬಿಜೆಪಿ ಸಂಸದೆ ಕಂಗನಾ ರಣಾವತ್, ಕೇಂದ್ರ ಸರ್ಕಾರ ರದ್ದು ಮಾಡಿರುವ ಮೂರು ಕೃಷಿ ಕಾನೂನುಗಳ ಕುರಿತ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳುವುದಾಗಿ ಇಂದು ಘೋಷಿಸಿದ್ದಾರೆ.

“ರದ್ದಾದ ಮೂರು ಕೃಷಿ ಸುಧಾರಣಾ ಕಾನೂನುಗಳನ್ನು ಮತ್ತೆ ಜಾರಿ ಮಾಡಬೇಕು” ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದ ಕಂಗನಾ ವಿರುದ್ಧ ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು. ಆಕೆಯ ಹೇಳಿಕೆಗಳು ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆ, ಮಂಡಿ ಲೋಕಸಭಾ ಸಂಸದರು ಸಾರ್ವಜನಿಕ ಕ್ಷಮೆಯಾಚಿಸಿದ್ದು, “ನಾನು ನನ್ನ ಮಾತುಗಳನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ” ಎಂದು ಹೇಳಿದರು.

ಕಂಗನಾ ಮಂಗಳವಾರ ನೀಡಿದ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದಯಕೊಂಡಿತ್ತು. ಪಕ್ಷದ ಪರವಾಗಿ ಇಂತಹ ಟೀಕೆಗಳನ್ನು ಮಾಡಲು ಕಂಗನಾ ರನೌತ್ ಅವರಿಗೆ ಅಧಿಕಾರವಿಲ್ಲ ಎಂದು ಹೇಳಿದೆ.

ವೀಡಿಯೊ ಸಂದೇಶ ನೀಡಿರುವ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, “ಕಂಗನಾ ಅವರ ವೈಯಕ್ತಿಕ ಹೇಳಿಕೆಯು ಕೃಷಿ ಮಸೂದೆಗಳ ಬಗ್ಗೆ ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ” ಎಂದು ಹೇಳಿದ್ದಾರೆ.

ಸ್ವಪಕ್ಷದಿಂದಲೇ ಟೀಕೆಗಳನ್ನು ಎದುರಿಸಿದ ನಂತರ, ಬಿಜೆಪಿ ಸಂಸದರು ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ. “ನನ್ನ ಹೇಳಿಕೆಯು ಹಲವಾರು ಜನರನ್ನು ನಿರಾಶೆಗೊಳಿಸಿದೆ” ಎಂದು ಹೇಳಿದರು.

“ನಾನು ಇನ್ನು ಮುಂದೆ ಕೇವಲ ನಟಿಯಲ್ಲ, ನಾನು ರಾಜಕಾರಣಿಯೂ ಆಗಿದ್ದೇನೆ. ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿರಬಾರದು. ಆದರೆ, ಪಕ್ಷದ ಪ್ರತಿಬಿಂಬವಾಗಿರಬೇಕು” ಎಂದು ಅವರು ಹೇಳಿದ್ದಾರೆ.

“ನನ್ನ ಅಭಿಪ್ರಾಯಗಳು ಮತ್ತು ಮಾತುಗಳಿಂದ ನಾನು ಯಾರನ್ನಾದರೂ ನಿರಾಶೆಗೊಳಿಸಿದ್ದರೆ, ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ನನ್ನ ಮಾತನ್ನು ನಾನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ, ಪ್ರಧಾನಿಯವರ ತೀರ್ಪಿಗೆ ನಿಲ್ಲುವ ಬಿಜೆಪಿ ಸದಸ್ಯರ ಸಾಮೂಹಿಕ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಖಂಡಿತವಾಗಿಯೂ, ರೈತರ ಕಾನೂನುಗಳ ಬಗ್ಗೆ ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿವೆ, ಆ ಮಸೂದೆಗಳಲ್ಲಿ ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ. ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ, “ಈ ಹೇಳಿಕೆ ವಿವಾದಾಸ್ಪದವಾಗಬಹುದು ಎಂದು ನನಗೆ ತಿಳಿದಿದೆ. ಆದರೆ, ಮೂರು ಕೃಷಿ ಕಾನೂನುಗಳನ್ನು ಹಿಂದಕ್ಕೆ ತರಬೇಕು. ರೈತರೇ ಅದನ್ನು ಒತ್ತಾಯಿಸಬೇಕು” ಎಂದು ಮಂಗಳವಾರ ಹೇಳುವ ಮೂಲಕ ವಿವಾದಕ್ಕೆ ನಾಂದಿ ಹಾಡಿದ್ದರು.

ಮೂರು ಕಾನೂನುಗಳು ರೈತರಿಗೆ ಪ್ರಯೋಜನಕಾರಿ. ಆದರೆ, ಕೆಲವು ರಾಜ್ಯಗಳಲ್ಲಿ ರೈತ ಗುಂಪುಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರವು ಅದನ್ನು ರದ್ದುಗೊಳಿಸಿದೆ ಎಂದು ಅವರು ವಾದಿಸಿದರು.

“ರೈತರು ರಾಷ್ಟ್ರದ ಅಭಿವೃದ್ಧಿಯಲ್ಲಿ ಶಕ್ತಿಯ ಆಧಾರ ಸ್ತಂಭವಾಗಿದ್ದಾರೆ. ಅವರ ಒಳಿತಿಗಾಗಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವಂತೆ ನಾನು ಅವರಿಗೆ ಮನವಿ ಮಾಡಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಲೋಕಸಭೆಯ ಸಂಸದರ ಟೀಕೆಗಳನ್ನು ಬಿಜೆಪಿ ಖಂಡಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು, ರೈತರ ಪ್ರತಿಭಟನೆಯ ಕುರಿತು ಕಂಗನಾ ರಣಾವತ್ ಅವರ ಟೀಕೆಗಳಿಂದ ಪಕ್ಷವು ದೂರವಿತ್ತು. ಭವಿಷ್ಯದಲ್ಲಿ ಅಂತಹ ಹೇಳಿಕೆಗಳನ್ನು ನೀಡದಂತೆ ಹಾಗೂ ಸಂಯಮದಿಂದ ವರ್ತಿಸುವಂತೆ ತಾಕೀತು ಮಾಡಿತ್ತು.

ರೈತ ಪ್ರತಿಭಟನೆಗಳು “ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿ” ನಿರ್ಮಾಣವಾಗಿದೆ ಎಂದು ಬಿಜೆಪಿ ಸಂಸದೆ ಆಗ ಹೇಳಿಕೊಂಡಿದ್ದರು. ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ ಮತ್ತು ಪ್ರತಿಭಟನಾ ಸ್ಥಳಗಳಲ್ಲಿ ಅತ್ಯಾಚಾರಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಮತ್ತು ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ; ಕೃಷಿ ಕಾನೂನು : ಸಂಸದೆ ಕಂಗನಾ ರಣಾವತ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...