Homeಮುಖಪುಟ'ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ..'; ಬಿಜೆಪಿ ವಾಗ್ದಂಡನೆ ಬಳಿಕ ಯೂ-ಟರ್ನ್‌ ಹೊಡೆದ ಬಿಜೆಪಿ ಸಂಸದೆ ಕಂಗನಾ

‘ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ..’; ಬಿಜೆಪಿ ವಾಗ್ದಂಡನೆ ಬಳಿಕ ಯೂ-ಟರ್ನ್‌ ಹೊಡೆದ ಬಿಜೆಪಿ ಸಂಸದೆ ಕಂಗನಾ

- Advertisement -
- Advertisement -

ತನ್ನ ಅಪ್ರಬುದ್ಧ ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಬಿಜೆಪಿ ಸಂಸದೆ ಕಂಗನಾ ರಣಾವತ್, ಕೇಂದ್ರ ಸರ್ಕಾರ ರದ್ದು ಮಾಡಿರುವ ಮೂರು ಕೃಷಿ ಕಾನೂನುಗಳ ಕುರಿತ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳುವುದಾಗಿ ಇಂದು ಘೋಷಿಸಿದ್ದಾರೆ.

“ರದ್ದಾದ ಮೂರು ಕೃಷಿ ಸುಧಾರಣಾ ಕಾನೂನುಗಳನ್ನು ಮತ್ತೆ ಜಾರಿ ಮಾಡಬೇಕು” ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದ ಕಂಗನಾ ವಿರುದ್ಧ ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು. ಆಕೆಯ ಹೇಳಿಕೆಗಳು ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆ, ಮಂಡಿ ಲೋಕಸಭಾ ಸಂಸದರು ಸಾರ್ವಜನಿಕ ಕ್ಷಮೆಯಾಚಿಸಿದ್ದು, “ನಾನು ನನ್ನ ಮಾತುಗಳನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ” ಎಂದು ಹೇಳಿದರು.

ಕಂಗನಾ ಮಂಗಳವಾರ ನೀಡಿದ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದಯಕೊಂಡಿತ್ತು. ಪಕ್ಷದ ಪರವಾಗಿ ಇಂತಹ ಟೀಕೆಗಳನ್ನು ಮಾಡಲು ಕಂಗನಾ ರನೌತ್ ಅವರಿಗೆ ಅಧಿಕಾರವಿಲ್ಲ ಎಂದು ಹೇಳಿದೆ.

ವೀಡಿಯೊ ಸಂದೇಶ ನೀಡಿರುವ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, “ಕಂಗನಾ ಅವರ ವೈಯಕ್ತಿಕ ಹೇಳಿಕೆಯು ಕೃಷಿ ಮಸೂದೆಗಳ ಬಗ್ಗೆ ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ” ಎಂದು ಹೇಳಿದ್ದಾರೆ.

ಸ್ವಪಕ್ಷದಿಂದಲೇ ಟೀಕೆಗಳನ್ನು ಎದುರಿಸಿದ ನಂತರ, ಬಿಜೆಪಿ ಸಂಸದರು ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ. “ನನ್ನ ಹೇಳಿಕೆಯು ಹಲವಾರು ಜನರನ್ನು ನಿರಾಶೆಗೊಳಿಸಿದೆ” ಎಂದು ಹೇಳಿದರು.

“ನಾನು ಇನ್ನು ಮುಂದೆ ಕೇವಲ ನಟಿಯಲ್ಲ, ನಾನು ರಾಜಕಾರಣಿಯೂ ಆಗಿದ್ದೇನೆ. ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿರಬಾರದು. ಆದರೆ, ಪಕ್ಷದ ಪ್ರತಿಬಿಂಬವಾಗಿರಬೇಕು” ಎಂದು ಅವರು ಹೇಳಿದ್ದಾರೆ.

“ನನ್ನ ಅಭಿಪ್ರಾಯಗಳು ಮತ್ತು ಮಾತುಗಳಿಂದ ನಾನು ಯಾರನ್ನಾದರೂ ನಿರಾಶೆಗೊಳಿಸಿದ್ದರೆ, ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ನನ್ನ ಮಾತನ್ನು ನಾನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ, ಪ್ರಧಾನಿಯವರ ತೀರ್ಪಿಗೆ ನಿಲ್ಲುವ ಬಿಜೆಪಿ ಸದಸ್ಯರ ಸಾಮೂಹಿಕ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಖಂಡಿತವಾಗಿಯೂ, ರೈತರ ಕಾನೂನುಗಳ ಬಗ್ಗೆ ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿವೆ, ಆ ಮಸೂದೆಗಳಲ್ಲಿ ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ. ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ, “ಈ ಹೇಳಿಕೆ ವಿವಾದಾಸ್ಪದವಾಗಬಹುದು ಎಂದು ನನಗೆ ತಿಳಿದಿದೆ. ಆದರೆ, ಮೂರು ಕೃಷಿ ಕಾನೂನುಗಳನ್ನು ಹಿಂದಕ್ಕೆ ತರಬೇಕು. ರೈತರೇ ಅದನ್ನು ಒತ್ತಾಯಿಸಬೇಕು” ಎಂದು ಮಂಗಳವಾರ ಹೇಳುವ ಮೂಲಕ ವಿವಾದಕ್ಕೆ ನಾಂದಿ ಹಾಡಿದ್ದರು.

ಮೂರು ಕಾನೂನುಗಳು ರೈತರಿಗೆ ಪ್ರಯೋಜನಕಾರಿ. ಆದರೆ, ಕೆಲವು ರಾಜ್ಯಗಳಲ್ಲಿ ರೈತ ಗುಂಪುಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರವು ಅದನ್ನು ರದ್ದುಗೊಳಿಸಿದೆ ಎಂದು ಅವರು ವಾದಿಸಿದರು.

“ರೈತರು ರಾಷ್ಟ್ರದ ಅಭಿವೃದ್ಧಿಯಲ್ಲಿ ಶಕ್ತಿಯ ಆಧಾರ ಸ್ತಂಭವಾಗಿದ್ದಾರೆ. ಅವರ ಒಳಿತಿಗಾಗಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವಂತೆ ನಾನು ಅವರಿಗೆ ಮನವಿ ಮಾಡಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಲೋಕಸಭೆಯ ಸಂಸದರ ಟೀಕೆಗಳನ್ನು ಬಿಜೆಪಿ ಖಂಡಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು, ರೈತರ ಪ್ರತಿಭಟನೆಯ ಕುರಿತು ಕಂಗನಾ ರಣಾವತ್ ಅವರ ಟೀಕೆಗಳಿಂದ ಪಕ್ಷವು ದೂರವಿತ್ತು. ಭವಿಷ್ಯದಲ್ಲಿ ಅಂತಹ ಹೇಳಿಕೆಗಳನ್ನು ನೀಡದಂತೆ ಹಾಗೂ ಸಂಯಮದಿಂದ ವರ್ತಿಸುವಂತೆ ತಾಕೀತು ಮಾಡಿತ್ತು.

ರೈತ ಪ್ರತಿಭಟನೆಗಳು “ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿ” ನಿರ್ಮಾಣವಾಗಿದೆ ಎಂದು ಬಿಜೆಪಿ ಸಂಸದೆ ಆಗ ಹೇಳಿಕೊಂಡಿದ್ದರು. ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ ಮತ್ತು ಪ್ರತಿಭಟನಾ ಸ್ಥಳಗಳಲ್ಲಿ ಅತ್ಯಾಚಾರಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಮತ್ತು ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ; ಕೃಷಿ ಕಾನೂನು : ಸಂಸದೆ ಕಂಗನಾ ರಣಾವತ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...