Homeಮುಖಪುಟ'ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ..'; ಬಿಜೆಪಿ ವಾಗ್ದಂಡನೆ ಬಳಿಕ ಯೂ-ಟರ್ನ್‌ ಹೊಡೆದ ಬಿಜೆಪಿ ಸಂಸದೆ ಕಂಗನಾ

‘ನನ್ನ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ..’; ಬಿಜೆಪಿ ವಾಗ್ದಂಡನೆ ಬಳಿಕ ಯೂ-ಟರ್ನ್‌ ಹೊಡೆದ ಬಿಜೆಪಿ ಸಂಸದೆ ಕಂಗನಾ

- Advertisement -
- Advertisement -

ತನ್ನ ಅಪ್ರಬುದ್ಧ ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಬಿಜೆಪಿ ಸಂಸದೆ ಕಂಗನಾ ರಣಾವತ್, ಕೇಂದ್ರ ಸರ್ಕಾರ ರದ್ದು ಮಾಡಿರುವ ಮೂರು ಕೃಷಿ ಕಾನೂನುಗಳ ಕುರಿತ ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳುವುದಾಗಿ ಇಂದು ಘೋಷಿಸಿದ್ದಾರೆ.

“ರದ್ದಾದ ಮೂರು ಕೃಷಿ ಸುಧಾರಣಾ ಕಾನೂನುಗಳನ್ನು ಮತ್ತೆ ಜಾರಿ ಮಾಡಬೇಕು” ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದ ಕಂಗನಾ ವಿರುದ್ಧ ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು. ಆಕೆಯ ಹೇಳಿಕೆಗಳು ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆ, ಮಂಡಿ ಲೋಕಸಭಾ ಸಂಸದರು ಸಾರ್ವಜನಿಕ ಕ್ಷಮೆಯಾಚಿಸಿದ್ದು, “ನಾನು ನನ್ನ ಮಾತುಗಳನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ” ಎಂದು ಹೇಳಿದರು.

ಕಂಗನಾ ಮಂಗಳವಾರ ನೀಡಿದ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದಯಕೊಂಡಿತ್ತು. ಪಕ್ಷದ ಪರವಾಗಿ ಇಂತಹ ಟೀಕೆಗಳನ್ನು ಮಾಡಲು ಕಂಗನಾ ರನೌತ್ ಅವರಿಗೆ ಅಧಿಕಾರವಿಲ್ಲ ಎಂದು ಹೇಳಿದೆ.

ವೀಡಿಯೊ ಸಂದೇಶ ನೀಡಿರುವ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, “ಕಂಗನಾ ಅವರ ವೈಯಕ್ತಿಕ ಹೇಳಿಕೆಯು ಕೃಷಿ ಮಸೂದೆಗಳ ಬಗ್ಗೆ ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ” ಎಂದು ಹೇಳಿದ್ದಾರೆ.

ಸ್ವಪಕ್ಷದಿಂದಲೇ ಟೀಕೆಗಳನ್ನು ಎದುರಿಸಿದ ನಂತರ, ಬಿಜೆಪಿ ಸಂಸದರು ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ. “ನನ್ನ ಹೇಳಿಕೆಯು ಹಲವಾರು ಜನರನ್ನು ನಿರಾಶೆಗೊಳಿಸಿದೆ” ಎಂದು ಹೇಳಿದರು.

“ನಾನು ಇನ್ನು ಮುಂದೆ ಕೇವಲ ನಟಿಯಲ್ಲ, ನಾನು ರಾಜಕಾರಣಿಯೂ ಆಗಿದ್ದೇನೆ. ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿರಬಾರದು. ಆದರೆ, ಪಕ್ಷದ ಪ್ರತಿಬಿಂಬವಾಗಿರಬೇಕು” ಎಂದು ಅವರು ಹೇಳಿದ್ದಾರೆ.

“ನನ್ನ ಅಭಿಪ್ರಾಯಗಳು ಮತ್ತು ಮಾತುಗಳಿಂದ ನಾನು ಯಾರನ್ನಾದರೂ ನಿರಾಶೆಗೊಳಿಸಿದ್ದರೆ, ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ನನ್ನ ಮಾತನ್ನು ನಾನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ, ಪ್ರಧಾನಿಯವರ ತೀರ್ಪಿಗೆ ನಿಲ್ಲುವ ಬಿಜೆಪಿ ಸದಸ್ಯರ ಸಾಮೂಹಿಕ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಖಂಡಿತವಾಗಿಯೂ, ರೈತರ ಕಾನೂನುಗಳ ಬಗ್ಗೆ ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿವೆ, ಆ ಮಸೂದೆಗಳಲ್ಲಿ ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ. ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ, “ಈ ಹೇಳಿಕೆ ವಿವಾದಾಸ್ಪದವಾಗಬಹುದು ಎಂದು ನನಗೆ ತಿಳಿದಿದೆ. ಆದರೆ, ಮೂರು ಕೃಷಿ ಕಾನೂನುಗಳನ್ನು ಹಿಂದಕ್ಕೆ ತರಬೇಕು. ರೈತರೇ ಅದನ್ನು ಒತ್ತಾಯಿಸಬೇಕು” ಎಂದು ಮಂಗಳವಾರ ಹೇಳುವ ಮೂಲಕ ವಿವಾದಕ್ಕೆ ನಾಂದಿ ಹಾಡಿದ್ದರು.

ಮೂರು ಕಾನೂನುಗಳು ರೈತರಿಗೆ ಪ್ರಯೋಜನಕಾರಿ. ಆದರೆ, ಕೆಲವು ರಾಜ್ಯಗಳಲ್ಲಿ ರೈತ ಗುಂಪುಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರವು ಅದನ್ನು ರದ್ದುಗೊಳಿಸಿದೆ ಎಂದು ಅವರು ವಾದಿಸಿದರು.

“ರೈತರು ರಾಷ್ಟ್ರದ ಅಭಿವೃದ್ಧಿಯಲ್ಲಿ ಶಕ್ತಿಯ ಆಧಾರ ಸ್ತಂಭವಾಗಿದ್ದಾರೆ. ಅವರ ಒಳಿತಿಗಾಗಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವಂತೆ ನಾನು ಅವರಿಗೆ ಮನವಿ ಮಾಡಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಲೋಕಸಭೆಯ ಸಂಸದರ ಟೀಕೆಗಳನ್ನು ಬಿಜೆಪಿ ಖಂಡಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು, ರೈತರ ಪ್ರತಿಭಟನೆಯ ಕುರಿತು ಕಂಗನಾ ರಣಾವತ್ ಅವರ ಟೀಕೆಗಳಿಂದ ಪಕ್ಷವು ದೂರವಿತ್ತು. ಭವಿಷ್ಯದಲ್ಲಿ ಅಂತಹ ಹೇಳಿಕೆಗಳನ್ನು ನೀಡದಂತೆ ಹಾಗೂ ಸಂಯಮದಿಂದ ವರ್ತಿಸುವಂತೆ ತಾಕೀತು ಮಾಡಿತ್ತು.

ರೈತ ಪ್ರತಿಭಟನೆಗಳು “ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿ” ನಿರ್ಮಾಣವಾಗಿದೆ ಎಂದು ಬಿಜೆಪಿ ಸಂಸದೆ ಆಗ ಹೇಳಿಕೊಂಡಿದ್ದರು. ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ ಮತ್ತು ಪ್ರತಿಭಟನಾ ಸ್ಥಳಗಳಲ್ಲಿ ಅತ್ಯಾಚಾರಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಮತ್ತು ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ; ಕೃಷಿ ಕಾನೂನು : ಸಂಸದೆ ಕಂಗನಾ ರಣಾವತ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...