Homeಮುಖಪುಟ'ದೊರೆ ಸದಾ ಜೊತೆಗಿದ್ದಾರೆ ಎಂದೇ ಭಾವಿಸಿದ್ದೇನೆ' : ಭಗವಾನ್

‘ದೊರೆ ಸದಾ ಜೊತೆಗಿದ್ದಾರೆ ಎಂದೇ ಭಾವಿಸಿದ್ದೇನೆ’ : ಭಗವಾನ್

ಇಂದು ದೊರೆ ಅವರ ಜನ್ಮದಿನ. ತಮ್ಮ ಯಶಸ್ವೀ ಸಿನಿಮಾ ಪಯಣದುದ್ದಕ್ಕೂ ಜೊತೆಯಾಗಿದ್ದ ಆತ್ಮೀಯ ಸ್ನೇಹಿತನನ್ನು ಭಗವಾನ್ ಅವರು ಇಲ್ಲಿ ಸ್ಮರಿಸಿಕೊಂಡಿದ್ದಾರೆ.

- Advertisement -
- Advertisement -

ದೊರೆ – ಭಗವಾನ್, ಕನ್ನಡ ಚಿತ್ರರಂಗದ ಪ್ರಭಾವಿ ನಿರ್ದೇಶಕದ್ವಯರು. ಸದಭಿರುಚಿಯ ಮತ್ತು ಕಾದಂಬರಿ ಆಧರಿಸಿದ ಚಿತ್ರಗಳ ಟ್ರೆಂಡ್ ಭದ್ರಗೊಳಿಸಿದ ಖ್ಯಾತಿ ಇವರದು. ಇಂದು ದೊರೆ ಅವರ ಜನ್ಮದಿನ. ತಮ್ಮ ಯಶಸ್ವೀ ಸಿನಿಮಾ ಪಯಣದುದ್ದಕ್ಕೂ ಜೊತೆಯಾಗಿದ್ದ ಆತ್ಮೀಯ ಸ್ನೇಹಿತನನ್ನು ಭಗವಾನ್ ಅವರು ಇಲ್ಲಿ ಸ್ಮರಿಸಿಕೊಂಡಿದ್ದಾರೆ.

***

ನಿರೂಪಣೆ: ಶಶಿಧರ ಚಿತ್ರದುರ್ಗ

ದೊರೆ ರಾಜ್ ನನಗೆ ಪರಿಚಯವಾಗಿದ್ದು 1956ರಲ್ಲಿ. ಅವರು ಪರಿಚಯದ ನಂತರ ನನ್ನ ಸಿನಿಮಾ ಬದುಕಿಗೆ ಹೊಸ ದಿಕ್ಕು ಸಿಕ್ಕಿತು. ಅಲ್ಲಿಂದ ಮುಂದೆ ಸುಮಾರು ಐದು ದಶಕಗಳ ಕಾಲ ನಾವಿಬ್ಬರು ಆತ್ಮೀಯ ಸ್ನೇಹಿತರಾಗಿದ್ದೆವು. ಸಾಕಷ್ಟು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದರೂ ಎಂದೂ ಇಬ್ಬರ ಮಧ್ಯೆ ಒಡಕು ಬಂದಿಲ್ಲ. ಮೂಲತಃ ಛಾಯಾಗ್ರಾಹಕರಾದ ಅವರಿಗೆ ಕ್ಯಾಮರಾ ಬಗ್ಗೆ ಉತ್ತಮ ಸೆನ್ಸ್ ಇತ್ತು. ಮಿತಭಾಷಿಯಾದ ಅವರಿಗೆ ಓದು ಪ್ರಮುಖ ಹವ್ಯಾಸ. ನಮ್ಮಿಬ್ಬರ ಮಧ್ಯೆ ಸೂಕ್ತ ಹೊಂದಾಣಿಕೆ ಇದ್ದುದರಿಂದಲೇ ನಮ್ಮಿಂದ ಉತ್ತಮ ಮತ್ತು ಯಶಸ್ವೀ ಚಿತ್ರಗಳನ್ನು ನೀಡಲು ಸಾಧ್ಯವಾಯ್ತು ಎಂದು ನಾನು ಭಾವಿಸುತ್ತೇನೆ. 2000ದಲ್ಲಿ ಅವರು ಅಗಲಿದರೂ ನನ್ನ ಭಾಗಕ್ಕೆ ಅವರು ಹೋಗಿಲ್ಲ. ಸದಾ ಜೊತೆಯಲ್ಲೇ ಇದ್ದಾರೆ.

ದೊರೆ ಮೂಲತಃ ಮೈಸೂರಿನವರು. ಅವರ ತಂದೆ ಬಾಬು ನಾಯ್ಡು ದೊಡ್ಡ ಚಿತ್ರಕಲಾವಿದ. ನಗರದ ಮಂಡಿ ಮೊಹಲ್ಲಾದಲ್ಲಿ ಅವರ ಮನೆ. ಗುಬ್ಬಿ ಕಂಪನಿ ಸೇರಿದಂತೆ ಹಲವು ಪ್ರಮುಖ ನಾಟಕ ಕಂಪನಿಗಳಿಗೆ ಅವರು ನಾಟಕದ ಪರದೆಗಳನ್ನು ಬರೆಯುತ್ತಿದ್ದರು. ಅಪ್ಪನ ಚಿತ್ರಕಲೆ ಪುತ್ರ ದೊರೆಗೂ ಬಂದಿತ್ತು. ಓದಿನ ಜೊತೆ ಚಿತ್ರಕಲೆಯಲ್ಲೂ ಅವರು ಪಳಗಿದ್ದರು. ಆರ್ಥಿಕ ಅನುಕೂಲತೆಗಳು ಇಲ್ಲದ್ದರಿಂದ ದೊರೆ ಇಂಟರ್‍ಮೀಡಿಯಟ್‍ಗೆ ಓದು ನಿಲ್ಲಿಸಿದರು. ಆಗ ಅದೇಕೆ ಅವರಿಗೆ ಹಾಗನ್ನಿಸಿತೋ, ಮೈಸೂರಿನಲ್ಲಿದ್ದ ನವಜ್ಯೋತಿ ಶೂಟಿಂಗ್ ಸ್ಟುಡಿಯೋದಲ್ಲಿ ಕೆಲಸ ಕೇಳಲೆಂದು ಹೋದರು. ಅದೃಷ್ಟಕ್ಕೆ ಅಲ್ಲಿ ಛಾಯಾಗ್ರಾಹಕ ಜಾನಕಿರಾಮ್ ತಮ್ಮ ಸಹಾಯಕನಾಗಿ ಕೆಲಸ ಮಾಡುವಂತೆ ದೊರೆ ಅವರಿಗೆ ಅವಕಾಶ ಕಲ್ಪಿಸಿದರು.

ಒಮ್ಮೆ ಪ್ರೇಮ್‍ನಜೀರ್ ಹೀರೋ ಆಗಿ ನಟಿಸುತ್ತಿದ್ದ ಮಲಯಾಳಂ ಚಿತ್ರಕ್ಕೆ ಜಾನಕಿರಾಮ್ ಅವರು ಛಾಯಾಗ್ರಾಹಕರಾಗಿ ಕೆಲಸ ಮಾಡಬೇಕಿತ್ತು. ಆಗ ಜಾನಕಿರಾಮ್ ಬೇರೆ ಚಿತ್ರದಲ್ಲಿ ಬ್ಯುಸಿಯಾಗಿದ್ದರು. ಆ ವೇಳೆಗಾಗಲೇ ಕ್ಯಾಮರಾ ಕಲೆಗಳನ್ನು ಅರಗಿಸಿಕೊಂಡಿದ್ದ ದೊರೆ ಅವರನ್ನು ಮಲಯಾಳಂ ಸಿನಿಮಾಗೆ ಕೆಲಸ ಮಾಡಲು ಕಳುಹಿಸಿಕೊಟ್ಟರು. ಅಲ್ಲಿಂದ ಮುಂದೆ ದೊರೆ ಸ್ವತಂತ್ರ್ಯ ಛಾಯಾಗ್ರಾಹಕನಾಗಿ ಗುರುತಿಸಿಕೊಂಡರು. ಮೈಸೂರಿನಲ್ಲಿ ನವಜ್ಯೋತಿ ಸ್ಟುಡಿಯೋದಲ್ಲಿ ಶೂಟಿಂಗ್ ಚಟುವಟಿಕೆಗಳು ಕಡಿಮೆಯಾಗುತ್ತಿದ್ದಂತೆ ದೊರೆ ಮದರಾಸಿಗೆ ತೆರಳಿದರು. ಕನ್ನಡದವರು ಎನ್ನುವ ಅಭಿಮಾನದಿಂದ ಜಿ.ವಿ.ಅಯ್ಯರ್ ತಮ್ಮ ‘ಸೋದರಿ’ ಚಿತ್ರದ ಛಾಯಾಗ್ರಹಣದ ಹೊಣೆಯನ್ನು ದೊರೆ ಹೆಗಲಿಗೆ ಹೊರಿಸಿದರು. ಈ ಚಿತ್ರದೊಂದಿಗೆ ದೊರೆಗೆ ರಾಜಕುಮಾರ್ ಅವರು ಆತ್ಮೀಯರಾದರು.

ದೊರೆ ಛಾಯಾಗ್ರಹಣ ಮಾಡುತ್ತಿದ್ದ ಚಿತ್ರಗಳಿಗೆ ನಾನು ಸಹ ನಿರ್ದೇಶಕನಾಗಿರುತ್ತಿದ್ದೆ. ಸಾಮಾನ್ಯವಾಗಿ ಚಿತ್ರದ ಛಾಯಾಗ್ರಾಹಕ ಮತ್ತು ಸಹನಿರ್ದೇಶಕನ ಮಧ್ಯೆ ಒಳ್ಳೆಯ ಒಡನಾಟ ಇರುತ್ತದೆ. ಅದರಲ್ಲೂ ನಮ್ಮಿಬ್ಬರ ಅಭಿರುಚಿ, ಹವ್ಯಾಸಗಳಲ್ಲೂ ಸಾಮ್ಯತೆಯಿತ್ತು. ಇಬ್ಬರೂ ಸಾಹಿತ್ಯಾಸಕ್ತರೇ. ಇದು ನಮ್ಮಿಬ್ಬರ ಬಾಂಧವ್ಯ ಹೆಚ್ಚಿಸಿತು. ‘ಸಂಧ್ಯಾರಾಗ’, ‘ರಾಜದುರ್ಗದ ರಹಸ್ಯ’ ಚಿತ್ರಗಳಿಗೆ ನಾನು ಸಹನಿರ್ದೇಶಕನಾದರೆ, ಅವರು ಛಾಯಾಗ್ರಾಹಕ. ಮುಂದೆ ಇಬ್ಬರೂ ಸೇರಿ ಏನಾದರೂ ಮಾಡಬೇಕು ಎಂದು ನಿರ್ಧರಿಸಿದೆವು.

ಶೂಟಿಂಗ್ ಇಲ್ಲದಿದ್ದಾಗ ಮದರಾಸಿನಲ್ಲಿ ನಾವಿಬ್ಬರೂ ಸಿನಿಮಾಗಳನ್ನು ವೀಕ್ಷಿಸಲು ಹೋಗುತ್ತಿದ್ದೆವು. ರಾಜಕುಮಾರ್ ಮತ್ತು ವರದಪ್ಪ ಇಬ್ಬರೂ ನಮಗೆ ಜೊತೆಯಾಗುತ್ತಿದ್ದರು. ಒಮ್ಮೆ ಶಾನ್ ಕಾನರಿ ನಟಿಸಿದ್ದ ‘ಡಾ.ನೋ’ ಬಾಂಡ್ ಸಿನಿಮಾ ನೋಡಿದೆವು. ಸಿನಿಮಾ ವೀಕ್ಷಣೆ ನಂತರ ವುಡ್‍ಲ್ಯಾಂಡ್ ಹೋಟೆಲ್‍ನಲ್ಲಿ ಮಸಾಲೆ ದೋಸೆ ತಿನ್ನುತ್ತಿದ್ದಾಗ, “ನಾವೇಕೆ ಕನ್ನಡದಲ್ಲಿ ರಾಜಕುಮಾರ್ ಅವರಿಗೆ ಬಾಂಡ್ ಸಿನಿಮಾ ಮಾಡಬಾರದು?” ಎಂದು ಪ್ರಸ್ತಾಪಿಸಿದೆವು. ರಾಜಕುಮಾರ್ ಜೋರಾಗಿ ನಗುತ್ತಾ, “ಇಂಗ್ಲಿಷ್ ಸಿನಿಮಾ ನೋಡಿ ಕನ್ನಡ ಸಿನಿಮಾ ಮಾಡೋಕೆ ಆಗುತ್ತದೆಯೇ? ಎಲ್ಲಾದರೂ ಸಾಧ್ಯವೇ?” ಎಂದರು. “ನೀವು ಹೂ ಅನ್ನಿ. ನಾವು ಮಾಡುತ್ತೀವಿ” ಎಂದು ಆತ್ಮವಿಶ್ವಾಸದಿಂದ ಹೇಳುತ್ತಿದ್ದಂತೆ ರಾಜ್ ಓಕೆ ಎಂದರು. ಆಗ ರೂಪುಗೊಂಡಿದ್ದೇ ‘ಜೇಡರ ಬಲೆ’ ಸಿನಿಮಾ.

ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ,”ಬಾಡದ ಹೂವು’ ಚಿತ್ರೀಕರಣ ಸಂದರ್ಭದಲ್ಲಿ…

ಮುಂದೆ ನಾನು ಮತ್ತು ದೊರೆ ಇಬ್ಬರೂ ಸಾಲು, ಸಾಲು ಚಿತ್ರಗಳನ್ನು ಮಾಡಿದೆವು. ರಾಜಕುಮಾರ್ ಅವರಿಗೇ ಹದಿನಾರು ಸಿನಿಮಾಗಳನ್ನು ಮಾಡಿದೆವು. ದೊರೆ ಅವರ ಬಗ್ಗೆ ರಾಜ್ ಅವರಿಗಂತೂ ವಿಶೇಷ ಅಭಿಮಾನ. ನಮ್ಮ ನಿರ್ದೇಶನದ ಚಿತ್ರವೆಂದರೆ ಅವರು ನಿರಾಳವಾಗಿರುತ್ತಿದ್ದರು. ನಮ್ಮಿಬ್ಬರ ನಿರ್ದೇಶನ, ನಿರ್ಮಾಣದಲ್ಲಿ ನಲವತ್ತು ಸಿನಿಮಾಗಳು ತಯಾರಾಗಿವೆ. ಯಾವುದೇ ಹಂತದಲ್ಲೂ ನಮ್ಮಿಬ್ಬರ ಮಧ್ಯೆ ಮನಸ್ತಾಪ ತಲೆದೋರಿಲ್ಲ. ಪ್ರತಿಯೊಂದು ವಿಚಾರದಲ್ಲಿಯೂ ಪರಸ್ಪರ ಸಲಹೆ, ಸೂಚನೆಗಳೊಂದಿಗೆ ಮುಂದುವರಿಯುತ್ತಿದ್ದೆವು. ಇದರಿಂದಾಗಿ ಒಳ್ಳೆಯ ಸಿನಿಮಾಗಳನ್ನು ಮಾಡಲು ಸಾಧ್ಯವಾಯ್ತು. ಅವರು ಈಗಲೂ ನನ್ನೊಂದಿಗಿದ್ದಾರೆ ಎಂದೇ ನಾನು ಭಾವಿಸಿದ್ದೇನೆ.

ದೊರೆ ಲವ್‍ಸ್ಟೋರಿ

ಎಚ್.ಎಲ್.ಎನ್.ಸಿಂಹ ನಿರ್ದೇಶನದ ’ಅಬ್ಬಾ ಆ ಹುಡುಗಿ’ (1959) ಸಿನಿಮಾ ತಯಾರಾಗುತ್ತಿದ್ದ ಸಂದರ್ಭ. ಮದ್ರಾಸ್‍ನ ವಾಹಿನಿ ಸ್ಟುಡಿಯೋದಲ್ಲಿ ಶೂಟಿಂಗ್ ನಡೆಯುತ್ತಿತ್ತು. ನಿರ್ದೇಶಕ ಸಿಂಹ ಅವರಿಗೆ ನಾನು ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದೆ. ದೊರೆರಾಜ್ ಚಿತ್ರದ ಕ್ಯಾಮರಾಮನ್. ಈ ಚಿತ್ರದೊಂದಿಗೆ ರಾಜಾಶಂಕರ್ ಮತ್ತು ಲೀಲಾಂಜಲಿ, ನಾಯಕ – ನಾಯಕಿಯಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ಆಗಿನ್ನೂ ಛಾಯಾಗ್ರಾಹಣ ಮಾಡುತ್ತಿದ್ದ ದೊರೆ ತಮ್ಮದೇ ಆದ ವಿಶಿಷ್ಟ ಕ್ಯಾಮರಾ ತಂತ್ರಗಳಿಗೆ ಹೆಸರಾಗಿದ್ದರು. ಸ್ಪೆಷಲ್ ಲೈಟಿಂಗ್‍ನಲ್ಲಿ ಅವರು ಸೆರೆಹಿಡಿಯುತ್ತಿದ್ದ ಕ್ಲೋಸ್‍ಅಪ್ ಶಾಟ್‍ಗಳು ಗಮನ ಸೆಳೆಯುತ್ತಿದ್ದವು.

ಚಿತ್ರೀಕರಣ ಆರಂಭವಾಗಿ ಕೆಲವು ದಿನಗಳಾಗಿತ್ತಷ್ಟೆ. ಛಾಯಾಗ್ರಾಹಕ ದೊರೆ, ನೂತನ ನಟಿ ಲೀಲಾಂಜಲಿ ಅವರಲ್ಲಿ ಅನುರಕ್ತರಾಗಿದ್ದರು! ಆಗ ಅವರು ನಟಿಯ ಕ್ಲೋಸ್‍ಅಪ್ ಶಾಟ್‍ಗಳನ್ನು ತೆಗೆದದ್ದೇ ತೆಗೆದದ್ದು!  ನಟಿ ಲೀಲಾಂಜಲಿ ಅವರ ಮನೆ ಮದರಾಸಿನ ಪಟೇಲ್ ಸ್ಟ್ರೀಟ್‍ನಲ್ಲಿತ್ತು. ಸಂಜೆ ಶೂಟಿಂಗ್ ಮುಗಿಯುತ್ತಲೇ ದೊರೆ, ಪಟೇಲ್ ಸ್ಟ್ರೀಟ್‍ನತ್ತ ಹೆಜ್ಜೆ ಹಾಕುತ್ತಿದ್ದರು! ಒಂದಷ್ಟು ದಿನ ಈ ಒನ್‍ವೇ ಪ್ರೀತಿ ಹೀಗೇ ಮುಂದುವರೆಯಿತು. ಅದೊಂದು ದಿನ ದೊರೆ ಧೈರ್ಯ ಮಾಡಿ ಲೀಲಾಂಜಲಿ ಅವರಿಗೆ ತಮ್ಮ ಪ್ರೀತಿ ನಿವೇದಿಸಿಕೊಂಡರು. ಮೈಸೂರಿನ ಸಂಪ್ರದಾಯಸ್ಥ ಕುಟುಂಬದಲ್ಲಿ ಬೆಳೆದವರು ಲೀಲಾಂಜಲಿ. ಅವರಿಗೆ ಕೂಡ ಸಿನಿಮಾದಲ್ಲಿ ಮುಂದುವರೆಯುವುದು ಇಷ್ಟವಿರಲಿಲ್ಲ. ಅಲ್ಲದೆ ದೊರೆಗೆ ಆಗ ಒಳ್ಳೆಯ ಹೆಸರಿತ್ತು. ಒಳ್ಳೆಯ ಘಳಿಗೆಯೊಂದರಲ್ಲಿ ದೊರೆ ಪ್ರೀತಿಯನ್ನು ಲೀಲಾಂಜಲಿ ಒಪ್ಪಿಕೊಂಡರು. ಹಾಗೆ, ಚಿತ್ರೀಕರಣ ಪೂರ್ಣಗೊಳ್ಳುವ ವೇಳೆಗೆ ದೊರೆ ಲವ್‍ಸ್ಟೋರಿಯೂ ಸುಖಾಂತ್ಯಗೊಂಡಿತು.

ಮುಂದೆ ಇವರಿಬ್ಬರಿಗೂ ಮದುವೆ ಮಾಡಿಸಬೇಕಾದ ಜವಾಬ್ದಾರಿ ನಮ್ಮ ಹೆಗಲೇರಿತು. ದೊರೆಗೆ ಮದುವೆ ಮಾಡಿಕೊಳ್ಳುವ ಧೈರ್ಯವೇನೋ ಇತ್ತು. ಆದರೆ ಹಣಕಾಸಿನ ಅನುಕೂಲತೆ ಇರಲಿಲ್ಲ. ಆಗ ನಮಗೆಲ್ಲಾ ಮಾರ್ಗದರ್ಶಕರಾಗಿದ್ದ ನಿರ್ದೇಶಕ ಜಿ.ವಿ.ಅಯ್ಯರ್ ನೆರವಿಗೆ ಧಾವಿಸಿದರು. ಅವರ ನೇತೃತ್ವದಲ್ಲಿ ತಿರುಪತಿಯಲ್ಲಿ ಮದುವೆ ಮಾಡಿಸುವುದೆಂದು ತೀರ್ಮಾನವಾಯ್ತು. ತಿರುಪತಿಯ ಛತ್ರದಲ್ಲಿ ಪುರೋಹಿತರ ಸಮಕ್ಷಮದೊಂದಿಗೆ ದೊರೆ – ಲೀಲಾಂಜಲಿ ವಿವಾಹ ನೆರವೇರಿತು. ’ಅಬ್ಬಾ ಆ ಹುಡುಗಿ’, ನಟಿ ಲೀಲಾಂಜಲಿ ಅವರ ಮೊದಲ ಮತ್ತು ಕಡೆಯ ಚಿತ್ರವಾಯ್ತು. ಮುಂದೆ ದೊರೆ-ಲೀಲಾಂಜಲಿ ಆದರ್ಶ ದಂಪತಿಯಾಗಿ ಬಾಳ್ವೆ ನಡೆಸಿದರು.


ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...