Homeಮುಖಪುಟ'ದೊರೆ ಸದಾ ಜೊತೆಗಿದ್ದಾರೆ ಎಂದೇ ಭಾವಿಸಿದ್ದೇನೆ' : ಭಗವಾನ್

‘ದೊರೆ ಸದಾ ಜೊತೆಗಿದ್ದಾರೆ ಎಂದೇ ಭಾವಿಸಿದ್ದೇನೆ’ : ಭಗವಾನ್

ಇಂದು ದೊರೆ ಅವರ ಜನ್ಮದಿನ. ತಮ್ಮ ಯಶಸ್ವೀ ಸಿನಿಮಾ ಪಯಣದುದ್ದಕ್ಕೂ ಜೊತೆಯಾಗಿದ್ದ ಆತ್ಮೀಯ ಸ್ನೇಹಿತನನ್ನು ಭಗವಾನ್ ಅವರು ಇಲ್ಲಿ ಸ್ಮರಿಸಿಕೊಂಡಿದ್ದಾರೆ.

- Advertisement -
- Advertisement -

ದೊರೆ – ಭಗವಾನ್, ಕನ್ನಡ ಚಿತ್ರರಂಗದ ಪ್ರಭಾವಿ ನಿರ್ದೇಶಕದ್ವಯರು. ಸದಭಿರುಚಿಯ ಮತ್ತು ಕಾದಂಬರಿ ಆಧರಿಸಿದ ಚಿತ್ರಗಳ ಟ್ರೆಂಡ್ ಭದ್ರಗೊಳಿಸಿದ ಖ್ಯಾತಿ ಇವರದು. ಇಂದು ದೊರೆ ಅವರ ಜನ್ಮದಿನ. ತಮ್ಮ ಯಶಸ್ವೀ ಸಿನಿಮಾ ಪಯಣದುದ್ದಕ್ಕೂ ಜೊತೆಯಾಗಿದ್ದ ಆತ್ಮೀಯ ಸ್ನೇಹಿತನನ್ನು ಭಗವಾನ್ ಅವರು ಇಲ್ಲಿ ಸ್ಮರಿಸಿಕೊಂಡಿದ್ದಾರೆ.

***

ನಿರೂಪಣೆ: ಶಶಿಧರ ಚಿತ್ರದುರ್ಗ

ದೊರೆ ರಾಜ್ ನನಗೆ ಪರಿಚಯವಾಗಿದ್ದು 1956ರಲ್ಲಿ. ಅವರು ಪರಿಚಯದ ನಂತರ ನನ್ನ ಸಿನಿಮಾ ಬದುಕಿಗೆ ಹೊಸ ದಿಕ್ಕು ಸಿಕ್ಕಿತು. ಅಲ್ಲಿಂದ ಮುಂದೆ ಸುಮಾರು ಐದು ದಶಕಗಳ ಕಾಲ ನಾವಿಬ್ಬರು ಆತ್ಮೀಯ ಸ್ನೇಹಿತರಾಗಿದ್ದೆವು. ಸಾಕಷ್ಟು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದರೂ ಎಂದೂ ಇಬ್ಬರ ಮಧ್ಯೆ ಒಡಕು ಬಂದಿಲ್ಲ. ಮೂಲತಃ ಛಾಯಾಗ್ರಾಹಕರಾದ ಅವರಿಗೆ ಕ್ಯಾಮರಾ ಬಗ್ಗೆ ಉತ್ತಮ ಸೆನ್ಸ್ ಇತ್ತು. ಮಿತಭಾಷಿಯಾದ ಅವರಿಗೆ ಓದು ಪ್ರಮುಖ ಹವ್ಯಾಸ. ನಮ್ಮಿಬ್ಬರ ಮಧ್ಯೆ ಸೂಕ್ತ ಹೊಂದಾಣಿಕೆ ಇದ್ದುದರಿಂದಲೇ ನಮ್ಮಿಂದ ಉತ್ತಮ ಮತ್ತು ಯಶಸ್ವೀ ಚಿತ್ರಗಳನ್ನು ನೀಡಲು ಸಾಧ್ಯವಾಯ್ತು ಎಂದು ನಾನು ಭಾವಿಸುತ್ತೇನೆ. 2000ದಲ್ಲಿ ಅವರು ಅಗಲಿದರೂ ನನ್ನ ಭಾಗಕ್ಕೆ ಅವರು ಹೋಗಿಲ್ಲ. ಸದಾ ಜೊತೆಯಲ್ಲೇ ಇದ್ದಾರೆ.

ದೊರೆ ಮೂಲತಃ ಮೈಸೂರಿನವರು. ಅವರ ತಂದೆ ಬಾಬು ನಾಯ್ಡು ದೊಡ್ಡ ಚಿತ್ರಕಲಾವಿದ. ನಗರದ ಮಂಡಿ ಮೊಹಲ್ಲಾದಲ್ಲಿ ಅವರ ಮನೆ. ಗುಬ್ಬಿ ಕಂಪನಿ ಸೇರಿದಂತೆ ಹಲವು ಪ್ರಮುಖ ನಾಟಕ ಕಂಪನಿಗಳಿಗೆ ಅವರು ನಾಟಕದ ಪರದೆಗಳನ್ನು ಬರೆಯುತ್ತಿದ್ದರು. ಅಪ್ಪನ ಚಿತ್ರಕಲೆ ಪುತ್ರ ದೊರೆಗೂ ಬಂದಿತ್ತು. ಓದಿನ ಜೊತೆ ಚಿತ್ರಕಲೆಯಲ್ಲೂ ಅವರು ಪಳಗಿದ್ದರು. ಆರ್ಥಿಕ ಅನುಕೂಲತೆಗಳು ಇಲ್ಲದ್ದರಿಂದ ದೊರೆ ಇಂಟರ್‍ಮೀಡಿಯಟ್‍ಗೆ ಓದು ನಿಲ್ಲಿಸಿದರು. ಆಗ ಅದೇಕೆ ಅವರಿಗೆ ಹಾಗನ್ನಿಸಿತೋ, ಮೈಸೂರಿನಲ್ಲಿದ್ದ ನವಜ್ಯೋತಿ ಶೂಟಿಂಗ್ ಸ್ಟುಡಿಯೋದಲ್ಲಿ ಕೆಲಸ ಕೇಳಲೆಂದು ಹೋದರು. ಅದೃಷ್ಟಕ್ಕೆ ಅಲ್ಲಿ ಛಾಯಾಗ್ರಾಹಕ ಜಾನಕಿರಾಮ್ ತಮ್ಮ ಸಹಾಯಕನಾಗಿ ಕೆಲಸ ಮಾಡುವಂತೆ ದೊರೆ ಅವರಿಗೆ ಅವಕಾಶ ಕಲ್ಪಿಸಿದರು.

ಒಮ್ಮೆ ಪ್ರೇಮ್‍ನಜೀರ್ ಹೀರೋ ಆಗಿ ನಟಿಸುತ್ತಿದ್ದ ಮಲಯಾಳಂ ಚಿತ್ರಕ್ಕೆ ಜಾನಕಿರಾಮ್ ಅವರು ಛಾಯಾಗ್ರಾಹಕರಾಗಿ ಕೆಲಸ ಮಾಡಬೇಕಿತ್ತು. ಆಗ ಜಾನಕಿರಾಮ್ ಬೇರೆ ಚಿತ್ರದಲ್ಲಿ ಬ್ಯುಸಿಯಾಗಿದ್ದರು. ಆ ವೇಳೆಗಾಗಲೇ ಕ್ಯಾಮರಾ ಕಲೆಗಳನ್ನು ಅರಗಿಸಿಕೊಂಡಿದ್ದ ದೊರೆ ಅವರನ್ನು ಮಲಯಾಳಂ ಸಿನಿಮಾಗೆ ಕೆಲಸ ಮಾಡಲು ಕಳುಹಿಸಿಕೊಟ್ಟರು. ಅಲ್ಲಿಂದ ಮುಂದೆ ದೊರೆ ಸ್ವತಂತ್ರ್ಯ ಛಾಯಾಗ್ರಾಹಕನಾಗಿ ಗುರುತಿಸಿಕೊಂಡರು. ಮೈಸೂರಿನಲ್ಲಿ ನವಜ್ಯೋತಿ ಸ್ಟುಡಿಯೋದಲ್ಲಿ ಶೂಟಿಂಗ್ ಚಟುವಟಿಕೆಗಳು ಕಡಿಮೆಯಾಗುತ್ತಿದ್ದಂತೆ ದೊರೆ ಮದರಾಸಿಗೆ ತೆರಳಿದರು. ಕನ್ನಡದವರು ಎನ್ನುವ ಅಭಿಮಾನದಿಂದ ಜಿ.ವಿ.ಅಯ್ಯರ್ ತಮ್ಮ ‘ಸೋದರಿ’ ಚಿತ್ರದ ಛಾಯಾಗ್ರಹಣದ ಹೊಣೆಯನ್ನು ದೊರೆ ಹೆಗಲಿಗೆ ಹೊರಿಸಿದರು. ಈ ಚಿತ್ರದೊಂದಿಗೆ ದೊರೆಗೆ ರಾಜಕುಮಾರ್ ಅವರು ಆತ್ಮೀಯರಾದರು.

ದೊರೆ ಛಾಯಾಗ್ರಹಣ ಮಾಡುತ್ತಿದ್ದ ಚಿತ್ರಗಳಿಗೆ ನಾನು ಸಹ ನಿರ್ದೇಶಕನಾಗಿರುತ್ತಿದ್ದೆ. ಸಾಮಾನ್ಯವಾಗಿ ಚಿತ್ರದ ಛಾಯಾಗ್ರಾಹಕ ಮತ್ತು ಸಹನಿರ್ದೇಶಕನ ಮಧ್ಯೆ ಒಳ್ಳೆಯ ಒಡನಾಟ ಇರುತ್ತದೆ. ಅದರಲ್ಲೂ ನಮ್ಮಿಬ್ಬರ ಅಭಿರುಚಿ, ಹವ್ಯಾಸಗಳಲ್ಲೂ ಸಾಮ್ಯತೆಯಿತ್ತು. ಇಬ್ಬರೂ ಸಾಹಿತ್ಯಾಸಕ್ತರೇ. ಇದು ನಮ್ಮಿಬ್ಬರ ಬಾಂಧವ್ಯ ಹೆಚ್ಚಿಸಿತು. ‘ಸಂಧ್ಯಾರಾಗ’, ‘ರಾಜದುರ್ಗದ ರಹಸ್ಯ’ ಚಿತ್ರಗಳಿಗೆ ನಾನು ಸಹನಿರ್ದೇಶಕನಾದರೆ, ಅವರು ಛಾಯಾಗ್ರಾಹಕ. ಮುಂದೆ ಇಬ್ಬರೂ ಸೇರಿ ಏನಾದರೂ ಮಾಡಬೇಕು ಎಂದು ನಿರ್ಧರಿಸಿದೆವು.

ಶೂಟಿಂಗ್ ಇಲ್ಲದಿದ್ದಾಗ ಮದರಾಸಿನಲ್ಲಿ ನಾವಿಬ್ಬರೂ ಸಿನಿಮಾಗಳನ್ನು ವೀಕ್ಷಿಸಲು ಹೋಗುತ್ತಿದ್ದೆವು. ರಾಜಕುಮಾರ್ ಮತ್ತು ವರದಪ್ಪ ಇಬ್ಬರೂ ನಮಗೆ ಜೊತೆಯಾಗುತ್ತಿದ್ದರು. ಒಮ್ಮೆ ಶಾನ್ ಕಾನರಿ ನಟಿಸಿದ್ದ ‘ಡಾ.ನೋ’ ಬಾಂಡ್ ಸಿನಿಮಾ ನೋಡಿದೆವು. ಸಿನಿಮಾ ವೀಕ್ಷಣೆ ನಂತರ ವುಡ್‍ಲ್ಯಾಂಡ್ ಹೋಟೆಲ್‍ನಲ್ಲಿ ಮಸಾಲೆ ದೋಸೆ ತಿನ್ನುತ್ತಿದ್ದಾಗ, “ನಾವೇಕೆ ಕನ್ನಡದಲ್ಲಿ ರಾಜಕುಮಾರ್ ಅವರಿಗೆ ಬಾಂಡ್ ಸಿನಿಮಾ ಮಾಡಬಾರದು?” ಎಂದು ಪ್ರಸ್ತಾಪಿಸಿದೆವು. ರಾಜಕುಮಾರ್ ಜೋರಾಗಿ ನಗುತ್ತಾ, “ಇಂಗ್ಲಿಷ್ ಸಿನಿಮಾ ನೋಡಿ ಕನ್ನಡ ಸಿನಿಮಾ ಮಾಡೋಕೆ ಆಗುತ್ತದೆಯೇ? ಎಲ್ಲಾದರೂ ಸಾಧ್ಯವೇ?” ಎಂದರು. “ನೀವು ಹೂ ಅನ್ನಿ. ನಾವು ಮಾಡುತ್ತೀವಿ” ಎಂದು ಆತ್ಮವಿಶ್ವಾಸದಿಂದ ಹೇಳುತ್ತಿದ್ದಂತೆ ರಾಜ್ ಓಕೆ ಎಂದರು. ಆಗ ರೂಪುಗೊಂಡಿದ್ದೇ ‘ಜೇಡರ ಬಲೆ’ ಸಿನಿಮಾ.

ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ,”ಬಾಡದ ಹೂವು’ ಚಿತ್ರೀಕರಣ ಸಂದರ್ಭದಲ್ಲಿ…

ಮುಂದೆ ನಾನು ಮತ್ತು ದೊರೆ ಇಬ್ಬರೂ ಸಾಲು, ಸಾಲು ಚಿತ್ರಗಳನ್ನು ಮಾಡಿದೆವು. ರಾಜಕುಮಾರ್ ಅವರಿಗೇ ಹದಿನಾರು ಸಿನಿಮಾಗಳನ್ನು ಮಾಡಿದೆವು. ದೊರೆ ಅವರ ಬಗ್ಗೆ ರಾಜ್ ಅವರಿಗಂತೂ ವಿಶೇಷ ಅಭಿಮಾನ. ನಮ್ಮ ನಿರ್ದೇಶನದ ಚಿತ್ರವೆಂದರೆ ಅವರು ನಿರಾಳವಾಗಿರುತ್ತಿದ್ದರು. ನಮ್ಮಿಬ್ಬರ ನಿರ್ದೇಶನ, ನಿರ್ಮಾಣದಲ್ಲಿ ನಲವತ್ತು ಸಿನಿಮಾಗಳು ತಯಾರಾಗಿವೆ. ಯಾವುದೇ ಹಂತದಲ್ಲೂ ನಮ್ಮಿಬ್ಬರ ಮಧ್ಯೆ ಮನಸ್ತಾಪ ತಲೆದೋರಿಲ್ಲ. ಪ್ರತಿಯೊಂದು ವಿಚಾರದಲ್ಲಿಯೂ ಪರಸ್ಪರ ಸಲಹೆ, ಸೂಚನೆಗಳೊಂದಿಗೆ ಮುಂದುವರಿಯುತ್ತಿದ್ದೆವು. ಇದರಿಂದಾಗಿ ಒಳ್ಳೆಯ ಸಿನಿಮಾಗಳನ್ನು ಮಾಡಲು ಸಾಧ್ಯವಾಯ್ತು. ಅವರು ಈಗಲೂ ನನ್ನೊಂದಿಗಿದ್ದಾರೆ ಎಂದೇ ನಾನು ಭಾವಿಸಿದ್ದೇನೆ.

ದೊರೆ ಲವ್‍ಸ್ಟೋರಿ

ಎಚ್.ಎಲ್.ಎನ್.ಸಿಂಹ ನಿರ್ದೇಶನದ ’ಅಬ್ಬಾ ಆ ಹುಡುಗಿ’ (1959) ಸಿನಿಮಾ ತಯಾರಾಗುತ್ತಿದ್ದ ಸಂದರ್ಭ. ಮದ್ರಾಸ್‍ನ ವಾಹಿನಿ ಸ್ಟುಡಿಯೋದಲ್ಲಿ ಶೂಟಿಂಗ್ ನಡೆಯುತ್ತಿತ್ತು. ನಿರ್ದೇಶಕ ಸಿಂಹ ಅವರಿಗೆ ನಾನು ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದೆ. ದೊರೆರಾಜ್ ಚಿತ್ರದ ಕ್ಯಾಮರಾಮನ್. ಈ ಚಿತ್ರದೊಂದಿಗೆ ರಾಜಾಶಂಕರ್ ಮತ್ತು ಲೀಲಾಂಜಲಿ, ನಾಯಕ – ನಾಯಕಿಯಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ಆಗಿನ್ನೂ ಛಾಯಾಗ್ರಾಹಣ ಮಾಡುತ್ತಿದ್ದ ದೊರೆ ತಮ್ಮದೇ ಆದ ವಿಶಿಷ್ಟ ಕ್ಯಾಮರಾ ತಂತ್ರಗಳಿಗೆ ಹೆಸರಾಗಿದ್ದರು. ಸ್ಪೆಷಲ್ ಲೈಟಿಂಗ್‍ನಲ್ಲಿ ಅವರು ಸೆರೆಹಿಡಿಯುತ್ತಿದ್ದ ಕ್ಲೋಸ್‍ಅಪ್ ಶಾಟ್‍ಗಳು ಗಮನ ಸೆಳೆಯುತ್ತಿದ್ದವು.

ಚಿತ್ರೀಕರಣ ಆರಂಭವಾಗಿ ಕೆಲವು ದಿನಗಳಾಗಿತ್ತಷ್ಟೆ. ಛಾಯಾಗ್ರಾಹಕ ದೊರೆ, ನೂತನ ನಟಿ ಲೀಲಾಂಜಲಿ ಅವರಲ್ಲಿ ಅನುರಕ್ತರಾಗಿದ್ದರು! ಆಗ ಅವರು ನಟಿಯ ಕ್ಲೋಸ್‍ಅಪ್ ಶಾಟ್‍ಗಳನ್ನು ತೆಗೆದದ್ದೇ ತೆಗೆದದ್ದು!  ನಟಿ ಲೀಲಾಂಜಲಿ ಅವರ ಮನೆ ಮದರಾಸಿನ ಪಟೇಲ್ ಸ್ಟ್ರೀಟ್‍ನಲ್ಲಿತ್ತು. ಸಂಜೆ ಶೂಟಿಂಗ್ ಮುಗಿಯುತ್ತಲೇ ದೊರೆ, ಪಟೇಲ್ ಸ್ಟ್ರೀಟ್‍ನತ್ತ ಹೆಜ್ಜೆ ಹಾಕುತ್ತಿದ್ದರು! ಒಂದಷ್ಟು ದಿನ ಈ ಒನ್‍ವೇ ಪ್ರೀತಿ ಹೀಗೇ ಮುಂದುವರೆಯಿತು. ಅದೊಂದು ದಿನ ದೊರೆ ಧೈರ್ಯ ಮಾಡಿ ಲೀಲಾಂಜಲಿ ಅವರಿಗೆ ತಮ್ಮ ಪ್ರೀತಿ ನಿವೇದಿಸಿಕೊಂಡರು. ಮೈಸೂರಿನ ಸಂಪ್ರದಾಯಸ್ಥ ಕುಟುಂಬದಲ್ಲಿ ಬೆಳೆದವರು ಲೀಲಾಂಜಲಿ. ಅವರಿಗೆ ಕೂಡ ಸಿನಿಮಾದಲ್ಲಿ ಮುಂದುವರೆಯುವುದು ಇಷ್ಟವಿರಲಿಲ್ಲ. ಅಲ್ಲದೆ ದೊರೆಗೆ ಆಗ ಒಳ್ಳೆಯ ಹೆಸರಿತ್ತು. ಒಳ್ಳೆಯ ಘಳಿಗೆಯೊಂದರಲ್ಲಿ ದೊರೆ ಪ್ರೀತಿಯನ್ನು ಲೀಲಾಂಜಲಿ ಒಪ್ಪಿಕೊಂಡರು. ಹಾಗೆ, ಚಿತ್ರೀಕರಣ ಪೂರ್ಣಗೊಳ್ಳುವ ವೇಳೆಗೆ ದೊರೆ ಲವ್‍ಸ್ಟೋರಿಯೂ ಸುಖಾಂತ್ಯಗೊಂಡಿತು.

ಮುಂದೆ ಇವರಿಬ್ಬರಿಗೂ ಮದುವೆ ಮಾಡಿಸಬೇಕಾದ ಜವಾಬ್ದಾರಿ ನಮ್ಮ ಹೆಗಲೇರಿತು. ದೊರೆಗೆ ಮದುವೆ ಮಾಡಿಕೊಳ್ಳುವ ಧೈರ್ಯವೇನೋ ಇತ್ತು. ಆದರೆ ಹಣಕಾಸಿನ ಅನುಕೂಲತೆ ಇರಲಿಲ್ಲ. ಆಗ ನಮಗೆಲ್ಲಾ ಮಾರ್ಗದರ್ಶಕರಾಗಿದ್ದ ನಿರ್ದೇಶಕ ಜಿ.ವಿ.ಅಯ್ಯರ್ ನೆರವಿಗೆ ಧಾವಿಸಿದರು. ಅವರ ನೇತೃತ್ವದಲ್ಲಿ ತಿರುಪತಿಯಲ್ಲಿ ಮದುವೆ ಮಾಡಿಸುವುದೆಂದು ತೀರ್ಮಾನವಾಯ್ತು. ತಿರುಪತಿಯ ಛತ್ರದಲ್ಲಿ ಪುರೋಹಿತರ ಸಮಕ್ಷಮದೊಂದಿಗೆ ದೊರೆ – ಲೀಲಾಂಜಲಿ ವಿವಾಹ ನೆರವೇರಿತು. ’ಅಬ್ಬಾ ಆ ಹುಡುಗಿ’, ನಟಿ ಲೀಲಾಂಜಲಿ ಅವರ ಮೊದಲ ಮತ್ತು ಕಡೆಯ ಚಿತ್ರವಾಯ್ತು. ಮುಂದೆ ದೊರೆ-ಲೀಲಾಂಜಲಿ ಆದರ್ಶ ದಂಪತಿಯಾಗಿ ಬಾಳ್ವೆ ನಡೆಸಿದರು.


ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...