Homeಮುಖಪುಟ'ದೊರೆ ಸದಾ ಜೊತೆಗಿದ್ದಾರೆ ಎಂದೇ ಭಾವಿಸಿದ್ದೇನೆ' : ಭಗವಾನ್

‘ದೊರೆ ಸದಾ ಜೊತೆಗಿದ್ದಾರೆ ಎಂದೇ ಭಾವಿಸಿದ್ದೇನೆ’ : ಭಗವಾನ್

ಇಂದು ದೊರೆ ಅವರ ಜನ್ಮದಿನ. ತಮ್ಮ ಯಶಸ್ವೀ ಸಿನಿಮಾ ಪಯಣದುದ್ದಕ್ಕೂ ಜೊತೆಯಾಗಿದ್ದ ಆತ್ಮೀಯ ಸ್ನೇಹಿತನನ್ನು ಭಗವಾನ್ ಅವರು ಇಲ್ಲಿ ಸ್ಮರಿಸಿಕೊಂಡಿದ್ದಾರೆ.

- Advertisement -
- Advertisement -

ದೊರೆ – ಭಗವಾನ್, ಕನ್ನಡ ಚಿತ್ರರಂಗದ ಪ್ರಭಾವಿ ನಿರ್ದೇಶಕದ್ವಯರು. ಸದಭಿರುಚಿಯ ಮತ್ತು ಕಾದಂಬರಿ ಆಧರಿಸಿದ ಚಿತ್ರಗಳ ಟ್ರೆಂಡ್ ಭದ್ರಗೊಳಿಸಿದ ಖ್ಯಾತಿ ಇವರದು. ಇಂದು ದೊರೆ ಅವರ ಜನ್ಮದಿನ. ತಮ್ಮ ಯಶಸ್ವೀ ಸಿನಿಮಾ ಪಯಣದುದ್ದಕ್ಕೂ ಜೊತೆಯಾಗಿದ್ದ ಆತ್ಮೀಯ ಸ್ನೇಹಿತನನ್ನು ಭಗವಾನ್ ಅವರು ಇಲ್ಲಿ ಸ್ಮರಿಸಿಕೊಂಡಿದ್ದಾರೆ.

***

ನಿರೂಪಣೆ: ಶಶಿಧರ ಚಿತ್ರದುರ್ಗ

ದೊರೆ ರಾಜ್ ನನಗೆ ಪರಿಚಯವಾಗಿದ್ದು 1956ರಲ್ಲಿ. ಅವರು ಪರಿಚಯದ ನಂತರ ನನ್ನ ಸಿನಿಮಾ ಬದುಕಿಗೆ ಹೊಸ ದಿಕ್ಕು ಸಿಕ್ಕಿತು. ಅಲ್ಲಿಂದ ಮುಂದೆ ಸುಮಾರು ಐದು ದಶಕಗಳ ಕಾಲ ನಾವಿಬ್ಬರು ಆತ್ಮೀಯ ಸ್ನೇಹಿತರಾಗಿದ್ದೆವು. ಸಾಕಷ್ಟು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದರೂ ಎಂದೂ ಇಬ್ಬರ ಮಧ್ಯೆ ಒಡಕು ಬಂದಿಲ್ಲ. ಮೂಲತಃ ಛಾಯಾಗ್ರಾಹಕರಾದ ಅವರಿಗೆ ಕ್ಯಾಮರಾ ಬಗ್ಗೆ ಉತ್ತಮ ಸೆನ್ಸ್ ಇತ್ತು. ಮಿತಭಾಷಿಯಾದ ಅವರಿಗೆ ಓದು ಪ್ರಮುಖ ಹವ್ಯಾಸ. ನಮ್ಮಿಬ್ಬರ ಮಧ್ಯೆ ಸೂಕ್ತ ಹೊಂದಾಣಿಕೆ ಇದ್ದುದರಿಂದಲೇ ನಮ್ಮಿಂದ ಉತ್ತಮ ಮತ್ತು ಯಶಸ್ವೀ ಚಿತ್ರಗಳನ್ನು ನೀಡಲು ಸಾಧ್ಯವಾಯ್ತು ಎಂದು ನಾನು ಭಾವಿಸುತ್ತೇನೆ. 2000ದಲ್ಲಿ ಅವರು ಅಗಲಿದರೂ ನನ್ನ ಭಾಗಕ್ಕೆ ಅವರು ಹೋಗಿಲ್ಲ. ಸದಾ ಜೊತೆಯಲ್ಲೇ ಇದ್ದಾರೆ.

ದೊರೆ ಮೂಲತಃ ಮೈಸೂರಿನವರು. ಅವರ ತಂದೆ ಬಾಬು ನಾಯ್ಡು ದೊಡ್ಡ ಚಿತ್ರಕಲಾವಿದ. ನಗರದ ಮಂಡಿ ಮೊಹಲ್ಲಾದಲ್ಲಿ ಅವರ ಮನೆ. ಗುಬ್ಬಿ ಕಂಪನಿ ಸೇರಿದಂತೆ ಹಲವು ಪ್ರಮುಖ ನಾಟಕ ಕಂಪನಿಗಳಿಗೆ ಅವರು ನಾಟಕದ ಪರದೆಗಳನ್ನು ಬರೆಯುತ್ತಿದ್ದರು. ಅಪ್ಪನ ಚಿತ್ರಕಲೆ ಪುತ್ರ ದೊರೆಗೂ ಬಂದಿತ್ತು. ಓದಿನ ಜೊತೆ ಚಿತ್ರಕಲೆಯಲ್ಲೂ ಅವರು ಪಳಗಿದ್ದರು. ಆರ್ಥಿಕ ಅನುಕೂಲತೆಗಳು ಇಲ್ಲದ್ದರಿಂದ ದೊರೆ ಇಂಟರ್‍ಮೀಡಿಯಟ್‍ಗೆ ಓದು ನಿಲ್ಲಿಸಿದರು. ಆಗ ಅದೇಕೆ ಅವರಿಗೆ ಹಾಗನ್ನಿಸಿತೋ, ಮೈಸೂರಿನಲ್ಲಿದ್ದ ನವಜ್ಯೋತಿ ಶೂಟಿಂಗ್ ಸ್ಟುಡಿಯೋದಲ್ಲಿ ಕೆಲಸ ಕೇಳಲೆಂದು ಹೋದರು. ಅದೃಷ್ಟಕ್ಕೆ ಅಲ್ಲಿ ಛಾಯಾಗ್ರಾಹಕ ಜಾನಕಿರಾಮ್ ತಮ್ಮ ಸಹಾಯಕನಾಗಿ ಕೆಲಸ ಮಾಡುವಂತೆ ದೊರೆ ಅವರಿಗೆ ಅವಕಾಶ ಕಲ್ಪಿಸಿದರು.

ಒಮ್ಮೆ ಪ್ರೇಮ್‍ನಜೀರ್ ಹೀರೋ ಆಗಿ ನಟಿಸುತ್ತಿದ್ದ ಮಲಯಾಳಂ ಚಿತ್ರಕ್ಕೆ ಜಾನಕಿರಾಮ್ ಅವರು ಛಾಯಾಗ್ರಾಹಕರಾಗಿ ಕೆಲಸ ಮಾಡಬೇಕಿತ್ತು. ಆಗ ಜಾನಕಿರಾಮ್ ಬೇರೆ ಚಿತ್ರದಲ್ಲಿ ಬ್ಯುಸಿಯಾಗಿದ್ದರು. ಆ ವೇಳೆಗಾಗಲೇ ಕ್ಯಾಮರಾ ಕಲೆಗಳನ್ನು ಅರಗಿಸಿಕೊಂಡಿದ್ದ ದೊರೆ ಅವರನ್ನು ಮಲಯಾಳಂ ಸಿನಿಮಾಗೆ ಕೆಲಸ ಮಾಡಲು ಕಳುಹಿಸಿಕೊಟ್ಟರು. ಅಲ್ಲಿಂದ ಮುಂದೆ ದೊರೆ ಸ್ವತಂತ್ರ್ಯ ಛಾಯಾಗ್ರಾಹಕನಾಗಿ ಗುರುತಿಸಿಕೊಂಡರು. ಮೈಸೂರಿನಲ್ಲಿ ನವಜ್ಯೋತಿ ಸ್ಟುಡಿಯೋದಲ್ಲಿ ಶೂಟಿಂಗ್ ಚಟುವಟಿಕೆಗಳು ಕಡಿಮೆಯಾಗುತ್ತಿದ್ದಂತೆ ದೊರೆ ಮದರಾಸಿಗೆ ತೆರಳಿದರು. ಕನ್ನಡದವರು ಎನ್ನುವ ಅಭಿಮಾನದಿಂದ ಜಿ.ವಿ.ಅಯ್ಯರ್ ತಮ್ಮ ‘ಸೋದರಿ’ ಚಿತ್ರದ ಛಾಯಾಗ್ರಹಣದ ಹೊಣೆಯನ್ನು ದೊರೆ ಹೆಗಲಿಗೆ ಹೊರಿಸಿದರು. ಈ ಚಿತ್ರದೊಂದಿಗೆ ದೊರೆಗೆ ರಾಜಕುಮಾರ್ ಅವರು ಆತ್ಮೀಯರಾದರು.

ದೊರೆ ಛಾಯಾಗ್ರಹಣ ಮಾಡುತ್ತಿದ್ದ ಚಿತ್ರಗಳಿಗೆ ನಾನು ಸಹ ನಿರ್ದೇಶಕನಾಗಿರುತ್ತಿದ್ದೆ. ಸಾಮಾನ್ಯವಾಗಿ ಚಿತ್ರದ ಛಾಯಾಗ್ರಾಹಕ ಮತ್ತು ಸಹನಿರ್ದೇಶಕನ ಮಧ್ಯೆ ಒಳ್ಳೆಯ ಒಡನಾಟ ಇರುತ್ತದೆ. ಅದರಲ್ಲೂ ನಮ್ಮಿಬ್ಬರ ಅಭಿರುಚಿ, ಹವ್ಯಾಸಗಳಲ್ಲೂ ಸಾಮ್ಯತೆಯಿತ್ತು. ಇಬ್ಬರೂ ಸಾಹಿತ್ಯಾಸಕ್ತರೇ. ಇದು ನಮ್ಮಿಬ್ಬರ ಬಾಂಧವ್ಯ ಹೆಚ್ಚಿಸಿತು. ‘ಸಂಧ್ಯಾರಾಗ’, ‘ರಾಜದುರ್ಗದ ರಹಸ್ಯ’ ಚಿತ್ರಗಳಿಗೆ ನಾನು ಸಹನಿರ್ದೇಶಕನಾದರೆ, ಅವರು ಛಾಯಾಗ್ರಾಹಕ. ಮುಂದೆ ಇಬ್ಬರೂ ಸೇರಿ ಏನಾದರೂ ಮಾಡಬೇಕು ಎಂದು ನಿರ್ಧರಿಸಿದೆವು.

ಶೂಟಿಂಗ್ ಇಲ್ಲದಿದ್ದಾಗ ಮದರಾಸಿನಲ್ಲಿ ನಾವಿಬ್ಬರೂ ಸಿನಿಮಾಗಳನ್ನು ವೀಕ್ಷಿಸಲು ಹೋಗುತ್ತಿದ್ದೆವು. ರಾಜಕುಮಾರ್ ಮತ್ತು ವರದಪ್ಪ ಇಬ್ಬರೂ ನಮಗೆ ಜೊತೆಯಾಗುತ್ತಿದ್ದರು. ಒಮ್ಮೆ ಶಾನ್ ಕಾನರಿ ನಟಿಸಿದ್ದ ‘ಡಾ.ನೋ’ ಬಾಂಡ್ ಸಿನಿಮಾ ನೋಡಿದೆವು. ಸಿನಿಮಾ ವೀಕ್ಷಣೆ ನಂತರ ವುಡ್‍ಲ್ಯಾಂಡ್ ಹೋಟೆಲ್‍ನಲ್ಲಿ ಮಸಾಲೆ ದೋಸೆ ತಿನ್ನುತ್ತಿದ್ದಾಗ, “ನಾವೇಕೆ ಕನ್ನಡದಲ್ಲಿ ರಾಜಕುಮಾರ್ ಅವರಿಗೆ ಬಾಂಡ್ ಸಿನಿಮಾ ಮಾಡಬಾರದು?” ಎಂದು ಪ್ರಸ್ತಾಪಿಸಿದೆವು. ರಾಜಕುಮಾರ್ ಜೋರಾಗಿ ನಗುತ್ತಾ, “ಇಂಗ್ಲಿಷ್ ಸಿನಿಮಾ ನೋಡಿ ಕನ್ನಡ ಸಿನಿಮಾ ಮಾಡೋಕೆ ಆಗುತ್ತದೆಯೇ? ಎಲ್ಲಾದರೂ ಸಾಧ್ಯವೇ?” ಎಂದರು. “ನೀವು ಹೂ ಅನ್ನಿ. ನಾವು ಮಾಡುತ್ತೀವಿ” ಎಂದು ಆತ್ಮವಿಶ್ವಾಸದಿಂದ ಹೇಳುತ್ತಿದ್ದಂತೆ ರಾಜ್ ಓಕೆ ಎಂದರು. ಆಗ ರೂಪುಗೊಂಡಿದ್ದೇ ‘ಜೇಡರ ಬಲೆ’ ಸಿನಿಮಾ.

ಫೋಟೋ ಕೃಪೆ: ಪ್ರಗತಿ ಅಶ್ವತ್ಥ ನಾರಾಯಣ,”ಬಾಡದ ಹೂವು’ ಚಿತ್ರೀಕರಣ ಸಂದರ್ಭದಲ್ಲಿ…

ಮುಂದೆ ನಾನು ಮತ್ತು ದೊರೆ ಇಬ್ಬರೂ ಸಾಲು, ಸಾಲು ಚಿತ್ರಗಳನ್ನು ಮಾಡಿದೆವು. ರಾಜಕುಮಾರ್ ಅವರಿಗೇ ಹದಿನಾರು ಸಿನಿಮಾಗಳನ್ನು ಮಾಡಿದೆವು. ದೊರೆ ಅವರ ಬಗ್ಗೆ ರಾಜ್ ಅವರಿಗಂತೂ ವಿಶೇಷ ಅಭಿಮಾನ. ನಮ್ಮ ನಿರ್ದೇಶನದ ಚಿತ್ರವೆಂದರೆ ಅವರು ನಿರಾಳವಾಗಿರುತ್ತಿದ್ದರು. ನಮ್ಮಿಬ್ಬರ ನಿರ್ದೇಶನ, ನಿರ್ಮಾಣದಲ್ಲಿ ನಲವತ್ತು ಸಿನಿಮಾಗಳು ತಯಾರಾಗಿವೆ. ಯಾವುದೇ ಹಂತದಲ್ಲೂ ನಮ್ಮಿಬ್ಬರ ಮಧ್ಯೆ ಮನಸ್ತಾಪ ತಲೆದೋರಿಲ್ಲ. ಪ್ರತಿಯೊಂದು ವಿಚಾರದಲ್ಲಿಯೂ ಪರಸ್ಪರ ಸಲಹೆ, ಸೂಚನೆಗಳೊಂದಿಗೆ ಮುಂದುವರಿಯುತ್ತಿದ್ದೆವು. ಇದರಿಂದಾಗಿ ಒಳ್ಳೆಯ ಸಿನಿಮಾಗಳನ್ನು ಮಾಡಲು ಸಾಧ್ಯವಾಯ್ತು. ಅವರು ಈಗಲೂ ನನ್ನೊಂದಿಗಿದ್ದಾರೆ ಎಂದೇ ನಾನು ಭಾವಿಸಿದ್ದೇನೆ.

ದೊರೆ ಲವ್‍ಸ್ಟೋರಿ

ಎಚ್.ಎಲ್.ಎನ್.ಸಿಂಹ ನಿರ್ದೇಶನದ ’ಅಬ್ಬಾ ಆ ಹುಡುಗಿ’ (1959) ಸಿನಿಮಾ ತಯಾರಾಗುತ್ತಿದ್ದ ಸಂದರ್ಭ. ಮದ್ರಾಸ್‍ನ ವಾಹಿನಿ ಸ್ಟುಡಿಯೋದಲ್ಲಿ ಶೂಟಿಂಗ್ ನಡೆಯುತ್ತಿತ್ತು. ನಿರ್ದೇಶಕ ಸಿಂಹ ಅವರಿಗೆ ನಾನು ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದೆ. ದೊರೆರಾಜ್ ಚಿತ್ರದ ಕ್ಯಾಮರಾಮನ್. ಈ ಚಿತ್ರದೊಂದಿಗೆ ರಾಜಾಶಂಕರ್ ಮತ್ತು ಲೀಲಾಂಜಲಿ, ನಾಯಕ – ನಾಯಕಿಯಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ಆಗಿನ್ನೂ ಛಾಯಾಗ್ರಾಹಣ ಮಾಡುತ್ತಿದ್ದ ದೊರೆ ತಮ್ಮದೇ ಆದ ವಿಶಿಷ್ಟ ಕ್ಯಾಮರಾ ತಂತ್ರಗಳಿಗೆ ಹೆಸರಾಗಿದ್ದರು. ಸ್ಪೆಷಲ್ ಲೈಟಿಂಗ್‍ನಲ್ಲಿ ಅವರು ಸೆರೆಹಿಡಿಯುತ್ತಿದ್ದ ಕ್ಲೋಸ್‍ಅಪ್ ಶಾಟ್‍ಗಳು ಗಮನ ಸೆಳೆಯುತ್ತಿದ್ದವು.

ಚಿತ್ರೀಕರಣ ಆರಂಭವಾಗಿ ಕೆಲವು ದಿನಗಳಾಗಿತ್ತಷ್ಟೆ. ಛಾಯಾಗ್ರಾಹಕ ದೊರೆ, ನೂತನ ನಟಿ ಲೀಲಾಂಜಲಿ ಅವರಲ್ಲಿ ಅನುರಕ್ತರಾಗಿದ್ದರು! ಆಗ ಅವರು ನಟಿಯ ಕ್ಲೋಸ್‍ಅಪ್ ಶಾಟ್‍ಗಳನ್ನು ತೆಗೆದದ್ದೇ ತೆಗೆದದ್ದು!  ನಟಿ ಲೀಲಾಂಜಲಿ ಅವರ ಮನೆ ಮದರಾಸಿನ ಪಟೇಲ್ ಸ್ಟ್ರೀಟ್‍ನಲ್ಲಿತ್ತು. ಸಂಜೆ ಶೂಟಿಂಗ್ ಮುಗಿಯುತ್ತಲೇ ದೊರೆ, ಪಟೇಲ್ ಸ್ಟ್ರೀಟ್‍ನತ್ತ ಹೆಜ್ಜೆ ಹಾಕುತ್ತಿದ್ದರು! ಒಂದಷ್ಟು ದಿನ ಈ ಒನ್‍ವೇ ಪ್ರೀತಿ ಹೀಗೇ ಮುಂದುವರೆಯಿತು. ಅದೊಂದು ದಿನ ದೊರೆ ಧೈರ್ಯ ಮಾಡಿ ಲೀಲಾಂಜಲಿ ಅವರಿಗೆ ತಮ್ಮ ಪ್ರೀತಿ ನಿವೇದಿಸಿಕೊಂಡರು. ಮೈಸೂರಿನ ಸಂಪ್ರದಾಯಸ್ಥ ಕುಟುಂಬದಲ್ಲಿ ಬೆಳೆದವರು ಲೀಲಾಂಜಲಿ. ಅವರಿಗೆ ಕೂಡ ಸಿನಿಮಾದಲ್ಲಿ ಮುಂದುವರೆಯುವುದು ಇಷ್ಟವಿರಲಿಲ್ಲ. ಅಲ್ಲದೆ ದೊರೆಗೆ ಆಗ ಒಳ್ಳೆಯ ಹೆಸರಿತ್ತು. ಒಳ್ಳೆಯ ಘಳಿಗೆಯೊಂದರಲ್ಲಿ ದೊರೆ ಪ್ರೀತಿಯನ್ನು ಲೀಲಾಂಜಲಿ ಒಪ್ಪಿಕೊಂಡರು. ಹಾಗೆ, ಚಿತ್ರೀಕರಣ ಪೂರ್ಣಗೊಳ್ಳುವ ವೇಳೆಗೆ ದೊರೆ ಲವ್‍ಸ್ಟೋರಿಯೂ ಸುಖಾಂತ್ಯಗೊಂಡಿತು.

ಮುಂದೆ ಇವರಿಬ್ಬರಿಗೂ ಮದುವೆ ಮಾಡಿಸಬೇಕಾದ ಜವಾಬ್ದಾರಿ ನಮ್ಮ ಹೆಗಲೇರಿತು. ದೊರೆಗೆ ಮದುವೆ ಮಾಡಿಕೊಳ್ಳುವ ಧೈರ್ಯವೇನೋ ಇತ್ತು. ಆದರೆ ಹಣಕಾಸಿನ ಅನುಕೂಲತೆ ಇರಲಿಲ್ಲ. ಆಗ ನಮಗೆಲ್ಲಾ ಮಾರ್ಗದರ್ಶಕರಾಗಿದ್ದ ನಿರ್ದೇಶಕ ಜಿ.ವಿ.ಅಯ್ಯರ್ ನೆರವಿಗೆ ಧಾವಿಸಿದರು. ಅವರ ನೇತೃತ್ವದಲ್ಲಿ ತಿರುಪತಿಯಲ್ಲಿ ಮದುವೆ ಮಾಡಿಸುವುದೆಂದು ತೀರ್ಮಾನವಾಯ್ತು. ತಿರುಪತಿಯ ಛತ್ರದಲ್ಲಿ ಪುರೋಹಿತರ ಸಮಕ್ಷಮದೊಂದಿಗೆ ದೊರೆ – ಲೀಲಾಂಜಲಿ ವಿವಾಹ ನೆರವೇರಿತು. ’ಅಬ್ಬಾ ಆ ಹುಡುಗಿ’, ನಟಿ ಲೀಲಾಂಜಲಿ ಅವರ ಮೊದಲ ಮತ್ತು ಕಡೆಯ ಚಿತ್ರವಾಯ್ತು. ಮುಂದೆ ದೊರೆ-ಲೀಲಾಂಜಲಿ ಆದರ್ಶ ದಂಪತಿಯಾಗಿ ಬಾಳ್ವೆ ನಡೆಸಿದರು.


ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...