Homeಕರ್ನಾಟಕಬೊಮ್ಮಾಯಿಯವರು ಅವಿವೇಕದ ತುತ್ತತುದಿಗೆ ಏರಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

ಬೊಮ್ಮಾಯಿಯವರು ಅವಿವೇಕದ ತುತ್ತತುದಿಗೆ ಏರಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

- Advertisement -
- Advertisement -

”ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ ಆದರೆ ಅವರು ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಅತಿ ಶೀಘ್ರದಲ್ಲೇ ತುರ್ತು ಪರಿಸ್ಥಿತಿ ತಲೆದೋರಬಹುದು ಎಂದು ಬೊಮ್ಮಾಯಿ ಅವರು ಹೇಳಿಕೆ ನೀಡಿದ ಬಳಿಕ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದರು. ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡ ಬಳಿಕ ಬಾಲ ಸುಟ್ಟ ಬೆಕ್ಕಿನಂತಾಗಿದ್ದಾರೆ ಎಂದು ಕೆಣಕಿದ್ದರು. ಅದಕ್ಕೆ ಪ್ರತಿಯಾಗಿ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದರು. ಇದೀಗ ಬೊಮ್ಮಾಯಿ ಹಾಗೂ ದಿನೇಶ್ ಗುಂಡೂರಾವ್ ನಡುವೆ ಟ್ವಿಟ್ಟರ್ ವಾರ್ ಶುರುವಾಗಿದೆ.

ಗುಂಡುರಾವ್ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿದ್ದ ಬೊಮ್ಮಾಯಿ ಅವರು, ”ಕೇಂದ್ರದಲ್ಲಿ ಇಷ್ಟು ದಿನ ಅಪರಾಧಗಳನ್ನು ಮಾಡಿ ರಾಜಕೀಯ ರಕ್ಷಣೆಯನ್ನು ಯುಪಿಎ ಕಾಲದಲ್ಲಿ ಪಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ ಅಪರಾಧ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡಿದೆ‌. ಇವೆಲ್ಲವೂ ಕೂಡ ನ್ಯಾಯಾಂಗದ ಪರಿಶೀಲನೆಯಲ್ಲಿ ನಡೆಯುತ್ತಿದೆ. ಇಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹದಿನೈದು ದಿನಗಳು ಕಳೆದಿಲ್ಲ‌ ಬರಿ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂದು ಮಂತ್ರಿಗಳ ಬಾಯಲ್ಲಿ ಬರುತ್ತಿರುವುದು, ವಿರೋಧಿಗಳನ್ನು ನಿಮ್ಮ ಅಧಿಕಾರ ಬಲದಿಂದ ದಮನ ಮಾಡುವ ತಂತ್ರ 1975 ರ ಎಮರ್ಜನ್ಸಿಯನ್ನು ನೆನಪಿಸುತ್ತದೆ. ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ” ಎಂದಿದ್ದರು.

ಇದೀಗ ಬೊಮ್ಮಾಯಿ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಅವರು, ”ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ. ಆದರೆ, ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ ಜನತಾ ಪರಿವಾರದ ಬೊಮ್ಮಾಯಿ, ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ. ಬೊಮ್ಮಾಯಿಯವರೇ, ನೀವು ಮುಖ್ಯಮಂತ್ರಿ ಆಗಿದ್ದವರು. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತಪ್ಪೇ” ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.

”ಬೊಮ್ಮಾಯಿಯವರೇ, UPA ಅವಧಿಯಲ್ಲಿ ಅಪರಾಧಿಗಳ ರಕ್ಷಣೆಯಾಗುತಿತ್ತು ಎಂದು ಹೇಳಿದ್ದೀರಿ‌. ನಮ್ಮ ಅವಧಿಯಲ್ಲಿ ಯಾವ ಅಪರಾಧಿಯ ರಕ್ಷಣೆಯಾಗಿದೆ ಎಂದು ಹೇಳಿ? ನಾರಾಯಣ ರಾಣೆ, ಸುವೇಂದು ಅಧಿಕಾರಿಯನ್ನು ಮಹಾಭ್ರಷ್ಟರೆಂದು ಬಿಂಬಿಸಿದ್ದು ನಿಮ್ಮ ಪಕ್ಷವೇ ಅಲ್ಲವೇ? ಅವರೀಗ ನಿಮ್ಮ ಪಕ್ಷದ ಸದಸ್ಯರು, ಬೇರೆ ಪಕ್ಷದಲ್ಲಿದ್ದಾಗ ಮಹಾಭ್ರಷ್ಟರು. ಈಗ ಅವರೇನು?” ಎಂದು ಸರಣಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರ ಕಳೆದುಕೊಂಡ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌: ಬೊಮ್ಮಾಯಿಗೆ ದಿನೇಶ್ ಗುಂಡೂರಾವ್ ತಿರುಗೇಟು

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಂಗಳವಾರ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದ ಸಚಿವರು, ”ಮಂಗಳೂರಿನಲ್ಲಿ ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳನ್ನು ಪರಿಶೀಲಿಸಿದ್ದೇನೆ. ಇದು ನನಗೆ ಹೊಸ ಹುದ್ದೆ ಅಲ್ಲ. ಹೊಸ ಸವಾಲುಗಳು ಹುಟ್ಟಿಕೊಂಡಿವೆ ಮತ್ತು ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪೊಲೀಸ್ ಇಲಾಖೆಗೂ ಹೊಸ ಸವಾಲುಗಳು ಎದುರಾಗಿವೆ” ಎಂದರು.

”ನೈತಿಕ ಪೊಲೀಸ್​ಗಿರಿ ತಡೆಯಲು ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಎಂಬ ಹೊಸ ಘಟಕ ಸ್ಥಾಪಿಸುತ್ತೇವೆ. ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ” ಎಂದರು.

”ಈ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಎಂದು ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನ ಮಾತನಾಡುತ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

”ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು” ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...