Homeಕರ್ನಾಟಕಬೊಮ್ಮಾಯಿಯವರು ಅವಿವೇಕದ ತುತ್ತತುದಿಗೆ ಏರಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

ಬೊಮ್ಮಾಯಿಯವರು ಅವಿವೇಕದ ತುತ್ತತುದಿಗೆ ಏರಿದ್ದಾರೆ: ದಿನೇಶ್ ಗುಂಡೂರಾವ್ ವಾಗ್ದಾಳಿ

- Advertisement -
- Advertisement -

”ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ ಆದರೆ ಅವರು ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಅತಿ ಶೀಘ್ರದಲ್ಲೇ ತುರ್ತು ಪರಿಸ್ಥಿತಿ ತಲೆದೋರಬಹುದು ಎಂದು ಬೊಮ್ಮಾಯಿ ಅವರು ಹೇಳಿಕೆ ನೀಡಿದ ಬಳಿಕ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದರು. ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡ ಬಳಿಕ ಬಾಲ ಸುಟ್ಟ ಬೆಕ್ಕಿನಂತಾಗಿದ್ದಾರೆ ಎಂದು ಕೆಣಕಿದ್ದರು. ಅದಕ್ಕೆ ಪ್ರತಿಯಾಗಿ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದರು. ಇದೀಗ ಬೊಮ್ಮಾಯಿ ಹಾಗೂ ದಿನೇಶ್ ಗುಂಡೂರಾವ್ ನಡುವೆ ಟ್ವಿಟ್ಟರ್ ವಾರ್ ಶುರುವಾಗಿದೆ.

ಗುಂಡುರಾವ್ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿದ್ದ ಬೊಮ್ಮಾಯಿ ಅವರು, ”ಕೇಂದ್ರದಲ್ಲಿ ಇಷ್ಟು ದಿನ ಅಪರಾಧಗಳನ್ನು ಮಾಡಿ ರಾಜಕೀಯ ರಕ್ಷಣೆಯನ್ನು ಯುಪಿಎ ಕಾಲದಲ್ಲಿ ಪಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ ಅಪರಾಧ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡಿದೆ‌. ಇವೆಲ್ಲವೂ ಕೂಡ ನ್ಯಾಯಾಂಗದ ಪರಿಶೀಲನೆಯಲ್ಲಿ ನಡೆಯುತ್ತಿದೆ. ಇಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹದಿನೈದು ದಿನಗಳು ಕಳೆದಿಲ್ಲ‌ ಬರಿ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂದು ಮಂತ್ರಿಗಳ ಬಾಯಲ್ಲಿ ಬರುತ್ತಿರುವುದು, ವಿರೋಧಿಗಳನ್ನು ನಿಮ್ಮ ಅಧಿಕಾರ ಬಲದಿಂದ ದಮನ ಮಾಡುವ ತಂತ್ರ 1975 ರ ಎಮರ್ಜನ್ಸಿಯನ್ನು ನೆನಪಿಸುತ್ತದೆ. ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ” ಎಂದಿದ್ದರು.

ಇದೀಗ ಬೊಮ್ಮಾಯಿ ಅವರ ಟ್ವೀಟ್‌ಗೆ ಪ್ರತಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಅವರು, ”ಬೊಮ್ಮಾಯಿ ಅವರನ್ನು ನಾನು ಪ್ರಾಜ್ಞರು ಹಾಗೂ ಪ್ರಜ್ಞಾವಂತರೆಂದು ಭಾವಿಸಿದ್ದೆ. ಆದರೆ, ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ ಜನತಾ ಪರಿವಾರದ ಬೊಮ್ಮಾಯಿ, ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುತ್ತತುದಿಗೆ ಏರಿದ್ದಾರೆ. ಬೊಮ್ಮಾಯಿಯವರೇ, ನೀವು ಮುಖ್ಯಮಂತ್ರಿ ಆಗಿದ್ದವರು. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತಪ್ಪೇ” ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.

”ಬೊಮ್ಮಾಯಿಯವರೇ, UPA ಅವಧಿಯಲ್ಲಿ ಅಪರಾಧಿಗಳ ರಕ್ಷಣೆಯಾಗುತಿತ್ತು ಎಂದು ಹೇಳಿದ್ದೀರಿ‌. ನಮ್ಮ ಅವಧಿಯಲ್ಲಿ ಯಾವ ಅಪರಾಧಿಯ ರಕ್ಷಣೆಯಾಗಿದೆ ಎಂದು ಹೇಳಿ? ನಾರಾಯಣ ರಾಣೆ, ಸುವೇಂದು ಅಧಿಕಾರಿಯನ್ನು ಮಹಾಭ್ರಷ್ಟರೆಂದು ಬಿಂಬಿಸಿದ್ದು ನಿಮ್ಮ ಪಕ್ಷವೇ ಅಲ್ಲವೇ? ಅವರೀಗ ನಿಮ್ಮ ಪಕ್ಷದ ಸದಸ್ಯರು, ಬೇರೆ ಪಕ್ಷದಲ್ಲಿದ್ದಾಗ ಮಹಾಭ್ರಷ್ಟರು. ಈಗ ಅವರೇನು?” ಎಂದು ಸರಣಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರ ಕಳೆದುಕೊಂಡ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌: ಬೊಮ್ಮಾಯಿಗೆ ದಿನೇಶ್ ಗುಂಡೂರಾವ್ ತಿರುಗೇಟು

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಂಗಳವಾರ ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದ ಸಚಿವರು, ”ಮಂಗಳೂರಿನಲ್ಲಿ ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳನ್ನು ಪರಿಶೀಲಿಸಿದ್ದೇನೆ. ಇದು ನನಗೆ ಹೊಸ ಹುದ್ದೆ ಅಲ್ಲ. ಹೊಸ ಸವಾಲುಗಳು ಹುಟ್ಟಿಕೊಂಡಿವೆ ಮತ್ತು ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪೊಲೀಸ್ ಇಲಾಖೆಗೂ ಹೊಸ ಸವಾಲುಗಳು ಎದುರಾಗಿವೆ” ಎಂದರು.

”ನೈತಿಕ ಪೊಲೀಸ್​ಗಿರಿ ತಡೆಯಲು ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಎಂಬ ಹೊಸ ಘಟಕ ಸ್ಥಾಪಿಸುತ್ತೇವೆ. ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ” ಎಂದರು.

”ಈ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಎಂದು ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನ ಮಾತನಾಡುತ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

”ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು. ಹಾಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು” ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...