Homeಮುಖಪುಟನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ:...

ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ತಿಂಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ಬೆಳಿಗ್ಗೆ ತೀರ್ಪು ನೀಡಿತ್ತು.

- Advertisement -
- Advertisement -

ನಾನು ಈ ಮೊದಲೇ ಹೇಳಿದ್ದೇ. ಸುಪ್ರೀಂ ಕೋರ್ಟ್ ಯಾವ ಶಿಕ್ಷೆ ನೀಡಿದರೂ ಅದನ್ನು ಖುಷಿಯಿಂದ ಒಪ್ಪಿಕೊಳ್ಳುತ್ತೇನೆ ಎಂದು. ಏಕೆಂದರೆ ಸುಪ್ರೀಂಕೋರ್ಟು ಜನರು ನ್ಯಾಯಕ್ಕಾಗಿ ತಲುಪಬಲ್ಲ ಅತ್ಯುನ್ನತ ಅಂಗವಾಗಿದ್ದು, ಅದು ದುರ್ಬಲವಾದರೆ, ಗಣರಾಜ್ಯವೇ ದುರ್ಬಲವಾದಂತೆ.

ಆದರೆ, ನಾನು ಯಾವ ಟ್ವೀಟ್‌ ಗಳನ್ನು ಮಾಡಿದ್ದಕ್ಕಾಗಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಿದೆಯೋ, ಅದು ಈ ದೇಶದ ನಾಗರಿಕನ ಅತ್ಯುನ್ನತ ಕರ್ತವ್ಯವಾಗಿತ್ತು ಎಂದೇ ನಾನು ಭಾವಿಸುತ್ತೇನೆ ಎಂದು ತಮ್ಮ ಈ ಹಿಂದಿನ ನಿಲುವನ್ನು ಅವರು ಪುನರುಚ್ಚರಿಸಿದ್ದಾರೆ.

ತನ್ನ ಪರವಾಗಿ ನಿಂತ ನಾಗರಿಕರು ಮತ್ತು ವಕೀಲರಿಗೆ ಅವರು ಕೃತಜ್ಞತೆಗಳನ್ನು ಸಲ್ಲಿಸಿ, ಸುಪ್ರೀಂಕೋರ್ಟು ಪ್ರಬಲವಾಗಬೇಕು ಮತ್ತು ಸ್ವತಂತ್ರವಾಗಿರಬೇಕು ಎಂದು ನಾನು ಬಯಸುತ್ತೇನೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಹಾಗೂ ಹಿಂದಿನ ನಾಲ್ಕು ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ವರ್ಷಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ಬೆಳಿಗ್ಗೆ ತೀರ್ಪು ನೀಡಿತ್ತು.

ತೀರ್ಪಿನಲ್ಲಿ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಹಾಗೂ ವಕೀಲಿ ವೃತ್ತಿ ನಿ‍ಷೇಧಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಭೂಷಣ್ ಯಾವುದು ಆಯ್ದುಕೊಳ್ಳಲಿದ್ದಾರೆ ಎಂದು ಹಲವರು ಚರ್ಚಿಸಿದ್ದರು. ಅದಕ್ಕೆ ತೆರೆ ಎಳೆದಿರುವ ಪ್ರಶಾಂತ್ ಭೂಷಣ್‌ರವರು “1 ರೂ ದಂಡವನ್ನು ಕಟ್ಟುತ್ತೇನೆಂದು’ ಘೋಷಿಸಿದ್ದಾರೆ.

ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಪ್ರಶಾಂತ್ ಭೂಷಣ್‌ರವರ ತಂದೆ ಶಾಂತಿ ಭೂಷಣ್‌ “ದೇಶದ ದನಿಯನ್ನು ಸುಪ್ರೀಂಕೋರ್ಟು ಕೇಳಲಿ ಎಂದು ನಾನು ಕೋರಿದ್ದೆ. ಈಗ ನಾನು ದೇಶದ ಪ್ರತಿಯೊಬ್ಬ ನಾಗರಿಕರು ಒಂದು ರೂಪಾಯಿಯನ್ನು ಸುಪ್ರೀಂಕೋರ್ಟಿಗೆ ಕಳಿಸಲಿ ಎಂದು ಕೋರುತ್ತೇನೆ” ಎಂದು ಭಾರತದ ಮಾಜಿ ಕಾನೂನು ಸಚಿವರು ಹಾಗೂ ಇಂದಿರಾಗಾಂಧಿಯವರ ವಿರುದ್ಧ ಐತಿಹಾಸಿಕ ಮೊಕದ್ದಮೆಯಲ್ಲಿ ವಾದಿಸಿದ್ದ ಶಾಂತಿ ಭೂಷಣ್ ಹೇಳಿದ್ದರು.

“ಇಂದಿನ ನ್ಯಾಯಾಂಗ ನಿಂದನೆಯ ತೀರ್ಪು ಹೊರಬಂದ ಕೂಡಲೇ ನನ್ನ ವಕೀಲರೂ ಮತ್ತು ಹಿರಿಯ ಸಹೋದ್ಯೋಗಿಗಳೂ ಆದ ರಾಜೀವ್ ಧವನ್ ಅವರು ನನಗೆ 1 ರೂಪಾಯಿ ದೇಣಿಗೆ ನೀಡಿದರು, ಮತ್ತು ನಾನದನ್ನು ಕೃತಜ್ಞಾಪೂರ್ವಕವಾಗಿ ಸ್ವೀಕರಿಸಿದೆ” ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದರು. ಇದಕ್ಕೆ ನ್ಯಾಯಾಂಗವನ್ನು ಟೀಕೆ ಮಾಡಬೇಕು, ಅಪಹಾಸ್ಯ ಮಾಡಬಾರದು ಎಂದು ಪರ ವಿರೋಧದ ಅಭಿಪ್ರಾಯಗಳು ದಾಖಲಾಗಿದ್ದವು.

ಪತ್ರಿಕಾ ಗೋಷ್ಟಿಯಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಮತ್ತು ಅಂಜಲಿ ಭಾರದ್ವಾಜ್ ಭಾಗವಹಿಸಿದ್ದರು.


ಇದನ್ನೂ ಓದಿ: ಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....