Homeಮುಖಪುಟನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ:...

ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ತಿಂಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ಬೆಳಿಗ್ಗೆ ತೀರ್ಪು ನೀಡಿತ್ತು.

- Advertisement -
- Advertisement -

ನಾನು ಈ ಮೊದಲೇ ಹೇಳಿದ್ದೇ. ಸುಪ್ರೀಂ ಕೋರ್ಟ್ ಯಾವ ಶಿಕ್ಷೆ ನೀಡಿದರೂ ಅದನ್ನು ಖುಷಿಯಿಂದ ಒಪ್ಪಿಕೊಳ್ಳುತ್ತೇನೆ ಎಂದು. ಏಕೆಂದರೆ ಸುಪ್ರೀಂಕೋರ್ಟು ಜನರು ನ್ಯಾಯಕ್ಕಾಗಿ ತಲುಪಬಲ್ಲ ಅತ್ಯುನ್ನತ ಅಂಗವಾಗಿದ್ದು, ಅದು ದುರ್ಬಲವಾದರೆ, ಗಣರಾಜ್ಯವೇ ದುರ್ಬಲವಾದಂತೆ.

ಆದರೆ, ನಾನು ಯಾವ ಟ್ವೀಟ್‌ ಗಳನ್ನು ಮಾಡಿದ್ದಕ್ಕಾಗಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಿದೆಯೋ, ಅದು ಈ ದೇಶದ ನಾಗರಿಕನ ಅತ್ಯುನ್ನತ ಕರ್ತವ್ಯವಾಗಿತ್ತು ಎಂದೇ ನಾನು ಭಾವಿಸುತ್ತೇನೆ ಎಂದು ತಮ್ಮ ಈ ಹಿಂದಿನ ನಿಲುವನ್ನು ಅವರು ಪುನರುಚ್ಚರಿಸಿದ್ದಾರೆ.

ತನ್ನ ಪರವಾಗಿ ನಿಂತ ನಾಗರಿಕರು ಮತ್ತು ವಕೀಲರಿಗೆ ಅವರು ಕೃತಜ್ಞತೆಗಳನ್ನು ಸಲ್ಲಿಸಿ, ಸುಪ್ರೀಂಕೋರ್ಟು ಪ್ರಬಲವಾಗಬೇಕು ಮತ್ತು ಸ್ವತಂತ್ರವಾಗಿರಬೇಕು ಎಂದು ನಾನು ಬಯಸುತ್ತೇನೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಹಾಗೂ ಹಿಂದಿನ ನಾಲ್ಕು ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ವರ್ಷಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ಬೆಳಿಗ್ಗೆ ತೀರ್ಪು ನೀಡಿತ್ತು.

ತೀರ್ಪಿನಲ್ಲಿ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಹಾಗೂ ವಕೀಲಿ ವೃತ್ತಿ ನಿ‍ಷೇಧಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಭೂಷಣ್ ಯಾವುದು ಆಯ್ದುಕೊಳ್ಳಲಿದ್ದಾರೆ ಎಂದು ಹಲವರು ಚರ್ಚಿಸಿದ್ದರು. ಅದಕ್ಕೆ ತೆರೆ ಎಳೆದಿರುವ ಪ್ರಶಾಂತ್ ಭೂಷಣ್‌ರವರು “1 ರೂ ದಂಡವನ್ನು ಕಟ್ಟುತ್ತೇನೆಂದು’ ಘೋಷಿಸಿದ್ದಾರೆ.

ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಪ್ರಶಾಂತ್ ಭೂಷಣ್‌ರವರ ತಂದೆ ಶಾಂತಿ ಭೂಷಣ್‌ “ದೇಶದ ದನಿಯನ್ನು ಸುಪ್ರೀಂಕೋರ್ಟು ಕೇಳಲಿ ಎಂದು ನಾನು ಕೋರಿದ್ದೆ. ಈಗ ನಾನು ದೇಶದ ಪ್ರತಿಯೊಬ್ಬ ನಾಗರಿಕರು ಒಂದು ರೂಪಾಯಿಯನ್ನು ಸುಪ್ರೀಂಕೋರ್ಟಿಗೆ ಕಳಿಸಲಿ ಎಂದು ಕೋರುತ್ತೇನೆ” ಎಂದು ಭಾರತದ ಮಾಜಿ ಕಾನೂನು ಸಚಿವರು ಹಾಗೂ ಇಂದಿರಾಗಾಂಧಿಯವರ ವಿರುದ್ಧ ಐತಿಹಾಸಿಕ ಮೊಕದ್ದಮೆಯಲ್ಲಿ ವಾದಿಸಿದ್ದ ಶಾಂತಿ ಭೂಷಣ್ ಹೇಳಿದ್ದರು.

“ಇಂದಿನ ನ್ಯಾಯಾಂಗ ನಿಂದನೆಯ ತೀರ್ಪು ಹೊರಬಂದ ಕೂಡಲೇ ನನ್ನ ವಕೀಲರೂ ಮತ್ತು ಹಿರಿಯ ಸಹೋದ್ಯೋಗಿಗಳೂ ಆದ ರಾಜೀವ್ ಧವನ್ ಅವರು ನನಗೆ 1 ರೂಪಾಯಿ ದೇಣಿಗೆ ನೀಡಿದರು, ಮತ್ತು ನಾನದನ್ನು ಕೃತಜ್ಞಾಪೂರ್ವಕವಾಗಿ ಸ್ವೀಕರಿಸಿದೆ” ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದರು. ಇದಕ್ಕೆ ನ್ಯಾಯಾಂಗವನ್ನು ಟೀಕೆ ಮಾಡಬೇಕು, ಅಪಹಾಸ್ಯ ಮಾಡಬಾರದು ಎಂದು ಪರ ವಿರೋಧದ ಅಭಿಪ್ರಾಯಗಳು ದಾಖಲಾಗಿದ್ದವು.

ಪತ್ರಿಕಾ ಗೋಷ್ಟಿಯಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಮತ್ತು ಅಂಜಲಿ ಭಾರದ್ವಾಜ್ ಭಾಗವಹಿಸಿದ್ದರು.


ಇದನ್ನೂ ಓದಿ: ಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...