Homeಮುಖಪುಟನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ:...

ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ತಿಂಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ಬೆಳಿಗ್ಗೆ ತೀರ್ಪು ನೀಡಿತ್ತು.

- Advertisement -
- Advertisement -

ನಾನು ಈ ಮೊದಲೇ ಹೇಳಿದ್ದೇ. ಸುಪ್ರೀಂ ಕೋರ್ಟ್ ಯಾವ ಶಿಕ್ಷೆ ನೀಡಿದರೂ ಅದನ್ನು ಖುಷಿಯಿಂದ ಒಪ್ಪಿಕೊಳ್ಳುತ್ತೇನೆ ಎಂದು. ಏಕೆಂದರೆ ಸುಪ್ರೀಂಕೋರ್ಟು ಜನರು ನ್ಯಾಯಕ್ಕಾಗಿ ತಲುಪಬಲ್ಲ ಅತ್ಯುನ್ನತ ಅಂಗವಾಗಿದ್ದು, ಅದು ದುರ್ಬಲವಾದರೆ, ಗಣರಾಜ್ಯವೇ ದುರ್ಬಲವಾದಂತೆ.

ಆದರೆ, ನಾನು ಯಾವ ಟ್ವೀಟ್‌ ಗಳನ್ನು ಮಾಡಿದ್ದಕ್ಕಾಗಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಿದೆಯೋ, ಅದು ಈ ದೇಶದ ನಾಗರಿಕನ ಅತ್ಯುನ್ನತ ಕರ್ತವ್ಯವಾಗಿತ್ತು ಎಂದೇ ನಾನು ಭಾವಿಸುತ್ತೇನೆ ಎಂದು ತಮ್ಮ ಈ ಹಿಂದಿನ ನಿಲುವನ್ನು ಅವರು ಪುನರುಚ್ಚರಿಸಿದ್ದಾರೆ.

ತನ್ನ ಪರವಾಗಿ ನಿಂತ ನಾಗರಿಕರು ಮತ್ತು ವಕೀಲರಿಗೆ ಅವರು ಕೃತಜ್ಞತೆಗಳನ್ನು ಸಲ್ಲಿಸಿ, ಸುಪ್ರೀಂಕೋರ್ಟು ಪ್ರಬಲವಾಗಬೇಕು ಮತ್ತು ಸ್ವತಂತ್ರವಾಗಿರಬೇಕು ಎಂದು ನಾನು ಬಯಸುತ್ತೇನೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಹಾಗೂ ಹಿಂದಿನ ನಾಲ್ಕು ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ವರ್ಷಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ಬೆಳಿಗ್ಗೆ ತೀರ್ಪು ನೀಡಿತ್ತು.

ತೀರ್ಪಿನಲ್ಲಿ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಹಾಗೂ ವಕೀಲಿ ವೃತ್ತಿ ನಿ‍ಷೇಧಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಭೂಷಣ್ ಯಾವುದು ಆಯ್ದುಕೊಳ್ಳಲಿದ್ದಾರೆ ಎಂದು ಹಲವರು ಚರ್ಚಿಸಿದ್ದರು. ಅದಕ್ಕೆ ತೆರೆ ಎಳೆದಿರುವ ಪ್ರಶಾಂತ್ ಭೂಷಣ್‌ರವರು “1 ರೂ ದಂಡವನ್ನು ಕಟ್ಟುತ್ತೇನೆಂದು’ ಘೋಷಿಸಿದ್ದಾರೆ.

ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಪ್ರಶಾಂತ್ ಭೂಷಣ್‌ರವರ ತಂದೆ ಶಾಂತಿ ಭೂಷಣ್‌ “ದೇಶದ ದನಿಯನ್ನು ಸುಪ್ರೀಂಕೋರ್ಟು ಕೇಳಲಿ ಎಂದು ನಾನು ಕೋರಿದ್ದೆ. ಈಗ ನಾನು ದೇಶದ ಪ್ರತಿಯೊಬ್ಬ ನಾಗರಿಕರು ಒಂದು ರೂಪಾಯಿಯನ್ನು ಸುಪ್ರೀಂಕೋರ್ಟಿಗೆ ಕಳಿಸಲಿ ಎಂದು ಕೋರುತ್ತೇನೆ” ಎಂದು ಭಾರತದ ಮಾಜಿ ಕಾನೂನು ಸಚಿವರು ಹಾಗೂ ಇಂದಿರಾಗಾಂಧಿಯವರ ವಿರುದ್ಧ ಐತಿಹಾಸಿಕ ಮೊಕದ್ದಮೆಯಲ್ಲಿ ವಾದಿಸಿದ್ದ ಶಾಂತಿ ಭೂಷಣ್ ಹೇಳಿದ್ದರು.

“ಇಂದಿನ ನ್ಯಾಯಾಂಗ ನಿಂದನೆಯ ತೀರ್ಪು ಹೊರಬಂದ ಕೂಡಲೇ ನನ್ನ ವಕೀಲರೂ ಮತ್ತು ಹಿರಿಯ ಸಹೋದ್ಯೋಗಿಗಳೂ ಆದ ರಾಜೀವ್ ಧವನ್ ಅವರು ನನಗೆ 1 ರೂಪಾಯಿ ದೇಣಿಗೆ ನೀಡಿದರು, ಮತ್ತು ನಾನದನ್ನು ಕೃತಜ್ಞಾಪೂರ್ವಕವಾಗಿ ಸ್ವೀಕರಿಸಿದೆ” ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದರು. ಇದಕ್ಕೆ ನ್ಯಾಯಾಂಗವನ್ನು ಟೀಕೆ ಮಾಡಬೇಕು, ಅಪಹಾಸ್ಯ ಮಾಡಬಾರದು ಎಂದು ಪರ ವಿರೋಧದ ಅಭಿಪ್ರಾಯಗಳು ದಾಖಲಾಗಿದ್ದವು.

ಪತ್ರಿಕಾ ಗೋಷ್ಟಿಯಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಮತ್ತು ಅಂಜಲಿ ಭಾರದ್ವಾಜ್ ಭಾಗವಹಿಸಿದ್ದರು.


ಇದನ್ನೂ ಓದಿ: ಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...