Homeಮುಖಪುಟನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ:...

ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ತಿಂಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ಬೆಳಿಗ್ಗೆ ತೀರ್ಪು ನೀಡಿತ್ತು.

- Advertisement -
- Advertisement -

ನಾನು ಈ ಮೊದಲೇ ಹೇಳಿದ್ದೇ. ಸುಪ್ರೀಂ ಕೋರ್ಟ್ ಯಾವ ಶಿಕ್ಷೆ ನೀಡಿದರೂ ಅದನ್ನು ಖುಷಿಯಿಂದ ಒಪ್ಪಿಕೊಳ್ಳುತ್ತೇನೆ ಎಂದು. ಏಕೆಂದರೆ ಸುಪ್ರೀಂಕೋರ್ಟು ಜನರು ನ್ಯಾಯಕ್ಕಾಗಿ ತಲುಪಬಲ್ಲ ಅತ್ಯುನ್ನತ ಅಂಗವಾಗಿದ್ದು, ಅದು ದುರ್ಬಲವಾದರೆ, ಗಣರಾಜ್ಯವೇ ದುರ್ಬಲವಾದಂತೆ.

ಆದರೆ, ನಾನು ಯಾವ ಟ್ವೀಟ್‌ ಗಳನ್ನು ಮಾಡಿದ್ದಕ್ಕಾಗಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಿದೆಯೋ, ಅದು ಈ ದೇಶದ ನಾಗರಿಕನ ಅತ್ಯುನ್ನತ ಕರ್ತವ್ಯವಾಗಿತ್ತು ಎಂದೇ ನಾನು ಭಾವಿಸುತ್ತೇನೆ ಎಂದು ತಮ್ಮ ಈ ಹಿಂದಿನ ನಿಲುವನ್ನು ಅವರು ಪುನರುಚ್ಚರಿಸಿದ್ದಾರೆ.

ತನ್ನ ಪರವಾಗಿ ನಿಂತ ನಾಗರಿಕರು ಮತ್ತು ವಕೀಲರಿಗೆ ಅವರು ಕೃತಜ್ಞತೆಗಳನ್ನು ಸಲ್ಲಿಸಿ, ಸುಪ್ರೀಂಕೋರ್ಟು ಪ್ರಬಲವಾಗಬೇಕು ಮತ್ತು ಸ್ವತಂತ್ರವಾಗಿರಬೇಕು ಎಂದು ನಾನು ಬಯಸುತ್ತೇನೆ.

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಹಾಗೂ ಹಿಂದಿನ ನಾಲ್ಕು ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ವರ್ಷಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ಬೆಳಿಗ್ಗೆ ತೀರ್ಪು ನೀಡಿತ್ತು.

ತೀರ್ಪಿನಲ್ಲಿ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಹಾಗೂ ವಕೀಲಿ ವೃತ್ತಿ ನಿ‍ಷೇಧಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಭೂಷಣ್ ಯಾವುದು ಆಯ್ದುಕೊಳ್ಳಲಿದ್ದಾರೆ ಎಂದು ಹಲವರು ಚರ್ಚಿಸಿದ್ದರು. ಅದಕ್ಕೆ ತೆರೆ ಎಳೆದಿರುವ ಪ್ರಶಾಂತ್ ಭೂಷಣ್‌ರವರು “1 ರೂ ದಂಡವನ್ನು ಕಟ್ಟುತ್ತೇನೆಂದು’ ಘೋಷಿಸಿದ್ದಾರೆ.

ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಪ್ರಶಾಂತ್ ಭೂಷಣ್‌ರವರ ತಂದೆ ಶಾಂತಿ ಭೂಷಣ್‌ “ದೇಶದ ದನಿಯನ್ನು ಸುಪ್ರೀಂಕೋರ್ಟು ಕೇಳಲಿ ಎಂದು ನಾನು ಕೋರಿದ್ದೆ. ಈಗ ನಾನು ದೇಶದ ಪ್ರತಿಯೊಬ್ಬ ನಾಗರಿಕರು ಒಂದು ರೂಪಾಯಿಯನ್ನು ಸುಪ್ರೀಂಕೋರ್ಟಿಗೆ ಕಳಿಸಲಿ ಎಂದು ಕೋರುತ್ತೇನೆ” ಎಂದು ಭಾರತದ ಮಾಜಿ ಕಾನೂನು ಸಚಿವರು ಹಾಗೂ ಇಂದಿರಾಗಾಂಧಿಯವರ ವಿರುದ್ಧ ಐತಿಹಾಸಿಕ ಮೊಕದ್ದಮೆಯಲ್ಲಿ ವಾದಿಸಿದ್ದ ಶಾಂತಿ ಭೂಷಣ್ ಹೇಳಿದ್ದರು.

“ಇಂದಿನ ನ್ಯಾಯಾಂಗ ನಿಂದನೆಯ ತೀರ್ಪು ಹೊರಬಂದ ಕೂಡಲೇ ನನ್ನ ವಕೀಲರೂ ಮತ್ತು ಹಿರಿಯ ಸಹೋದ್ಯೋಗಿಗಳೂ ಆದ ರಾಜೀವ್ ಧವನ್ ಅವರು ನನಗೆ 1 ರೂಪಾಯಿ ದೇಣಿಗೆ ನೀಡಿದರು, ಮತ್ತು ನಾನದನ್ನು ಕೃತಜ್ಞಾಪೂರ್ವಕವಾಗಿ ಸ್ವೀಕರಿಸಿದೆ” ಎಂದು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದರು. ಇದಕ್ಕೆ ನ್ಯಾಯಾಂಗವನ್ನು ಟೀಕೆ ಮಾಡಬೇಕು, ಅಪಹಾಸ್ಯ ಮಾಡಬಾರದು ಎಂದು ಪರ ವಿರೋಧದ ಅಭಿಪ್ರಾಯಗಳು ದಾಖಲಾಗಿದ್ದವು.

ಪತ್ರಿಕಾ ಗೋಷ್ಟಿಯಲ್ಲಿ ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಯಾದವ್ ಮತ್ತು ಅಂಜಲಿ ಭಾರದ್ವಾಜ್ ಭಾಗವಹಿಸಿದ್ದರು.


ಇದನ್ನೂ ಓದಿ: ಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...