Homeಅಂತರಾಷ್ಟ್ರೀಯ'ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ವ್ಯಾಪಾರ ಅಸ್ತ್ರ ಬಳಸಿದೆ': ಪುನರುಚ್ಚರಿಸಿದ ಟ್ರಂಪ್

‘ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ವ್ಯಾಪಾರ ಅಸ್ತ್ರ ಬಳಸಿದೆ’: ಪುನರುಚ್ಚರಿಸಿದ ಟ್ರಂಪ್

ಭೋಜನಕೂಟ ಆಯೋಜಿಸುವಂತೆ ಹೊಸ ಸಲಹೆ

- Advertisement -
- Advertisement -

‘ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ನಾನು ವ್ಯಾಪಾರವನ್ನು ಅಸ್ತ್ರವಾಗಿ ಬಳಸಿಕೊಂಡೆ’ ಎಂಬ ಮಾತನ್ನು ಸತತ ನಾಲ್ಕನೇ ದಿನವೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.

ತಮ್ಮ ನಡುವಿನ ಸಂಘರ್ಷವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಭಾರತ ಮತ್ತು ಪಾಕಿಸ್ತಾನ ಭೋಜನಕೂಟ ಆಯೋಜಿಸಬೇಕು ಎಂದು ಟ್ರಂಪ್ ಹೊಸ ಸಲಹೆ ನೀಡಿದ್ದಾರೆ.

ಮಂಗಳವಾರ ರಿಯಾದ್‌ನಲ್ಲಿ ಆಯೋಜಿಸಿದ್ದ ಸೌದಿ-ಯುಎಸ್ ಹೂಡಿಕೆ ಸಮಾವೇಶದಲ್ಲಿ ಮಾತನಾಡಿದ ಟ್ರಂಪ್, “ಲಕ್ಷಾಂತರ ಜನರನ್ನು ಬಲಿ ಪಡೆಯುವ ಸಾಧ್ಯತೆ ಇದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭಾವ್ಯ ಅಣ್ವಸ್ತ್ರ ಸಮರವನ್ನು ತಪ್ಪಿಸಲು ನಮ್ಮ ಆಡಳಿತ ಮಧ್ಯಸ್ಥಿಕೆ ವಹಿಸಿ ಶಾಂತಿ ಸ್ಥಾಪಿಸಲು ನೆರವಾಗಿದೆ” ಎಂದಿದ್ದಾರೆ.

ಹೂಡಿಕೆ ಸಮಾವೇಶದಲ್ಲಿ ಸೌದಿ ಅರೇಬಿಯಾ ದೊರೆ ಮುಹಮ್ಮದ್ ಬಿನ್ ಸಲ್ಮಾನ್, ಟೆಸ್ಲಾ ಸಿಇಒ ಎಲಾನ್ ಮಸ್ಕ್, ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕೊ ರುಬಿಯೊ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

ಕದನ ವಿರಾಮಕ್ಕೆ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುತ್ತೇನೆ ಎಂಬುವುದಾಗಿ ಟ್ರಂಪ್ ಬೆದರಿಸಿಲ್ಲ ಎಂದು ಭಾರತ ಸರ್ಕಾರ ಹೇಳಿಕೊಂಡಿದೆ. ಆದರೆ, ಟ್ರಂಪ್ ಹೋದಲ್ಲಿ ಬಂದಲ್ಲಿ ನಾನು ವ್ಯಾಪಾರ ನಿಲ್ಲಿಸುವುದಾಗಿ ಹೇಳಿಯೇ ಕದನ ವಿರಾಮಕ್ಕೆ ಒಪ್ಪಿಸಿದೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ.

“ಪರಮಾಣು ಕ್ಷಿಪಣಿಗಳ ವ್ಯಾಪಾರ ಬೇಡ, ನೀವು ತಯಾರಿಸುವ ಸುಂದರ ವಸ್ತುಗಳನ್ನು ವ್ಯಾಪಾರ ಮಾಡೋಣ. ಎರಡೂ ದೇಶಗಳ ನಾಯಕರು ಬಲಿಷ್ಠರು ಮತ್ತು ಬುದ್ದಿವಂತರು. ಸದ್ಯಕ್ಕೆ ಸಂಘರ್ಷ ನಿಂತಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ಭಾವಿಸುತ್ತೇನೆ” ಎಂದು ಭಾರತ-ಪಾಕಿಸ್ತಾನ ಕುರಿತು ಟ್ರಂಪ್ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ‘ಕದನ ವಿರಾಮ’ಕ್ಕೆ ಒಪ್ಪಿಗೆ ನೀಡುವಲ್ಲಿ ಶ್ರಮಿಸಿದ ವಿದೇಶಾಂಗ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಮಾರ್ಕೊ ರುಬಿಯೊ ಹಾಗೂ ಇತರರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ಎಂದು ಟ್ರಂಪ್ ಶ್ಲಾಘಿಸಿದ್ದಾರೆ.

ನಮ್ಮ ಮಧ್ಯಸ್ಥಿಕೆಯಿಂದ ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿತು ಎಂದು ಶನಿವಾರ, ಭಾನುವಾರ ಮತ್ತು ಸೋಮವಾರ ಟ್ರಂಪ್ ಹೇಳಿದ್ದರು. ಸತತ ನಾಲ್ಕನೇ ದಿನವೂ ಮಂಗಳವಾರ ಅದನ್ನು ಪುನರುಚ್ಚರಿಸಿದ್ದಾರೆ.

ಆದರೆ, ಟ್ರಂಪ್ ಹೇಳಿಕೆಗಳ ಕುರಿತು ಮಂಗಳವಾರ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ ಸಚಿವಾಲಯ “ಪಾಕಿಸ್ತಾನ ಜೊತೆಗಿನ ಉದ್ವಿಗ್ನತೆಯ ಸಂದರ್ಭದಲ್ಲಿ ಭಾರತ ಮತ್ತು ಅಮೆರಿಕ ನಾಯಕತ್ವ ಸಂಪರ್ಕದಲ್ಲಿತ್ತು. ಆದರೆ, ವ್ಯಾಪಾರದ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ.

ಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...