Homeಮುಖಪುಟನಾವು ಅಧಿಕಾರಕ್ಕೆ ಬಂದ ಮೇಲೆ ಈಶಾನ್ಯ ರಾಜ್ಯಗಳು ಸೇನಾ ಹಿಡಿತದಿಂದ ಮುಕ್ತವಾಗಿವೆ : ನರೇಂದ್ರ ಮೋದಿ

ನಾವು ಅಧಿಕಾರಕ್ಕೆ ಬಂದ ಮೇಲೆ ಈಶಾನ್ಯ ರಾಜ್ಯಗಳು ಸೇನಾ ಹಿಡಿತದಿಂದ ಮುಕ್ತವಾಗಿವೆ : ನರೇಂದ್ರ ಮೋದಿ

- Advertisement -
- Advertisement -

ಹಿಂದೆ ಈಶಾನ್ಯ ರಾಜ್ಯಗಳ ಜನರು ಸಶಸ್ತ್ರ ಸೇನಾ ಪಡೆಗಳ ಕಣ್ಗಾವಲಿನಲ್ಲಿ ಜೀವಿಸುತ್ತಿದ್ದರು. ನಾವು ಅಧಿಕಾರಕ್ಕೆ ಬಂದ ಮೇಲೆ ಈಶಾನ್ಯ ರಾಜ್ಯಗಳು ಸೇನಾ ಹಿಡಿತದಿಂದ ಮುಕ್ತವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದರು.

ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀರಿರುವ ಪ್ರಧಾನಿ ಮೋದಿ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಮಾತನಾಡಿ ಈಶಾನ್ಯ ರಾಜ್ಯಗಳು ಈಗ ಸೇನೆಯಿಂದ ಮುಕ್ತವಾಗಿವೆ. ಹಿಂದೆ ಇಲ್ಲಿ ವ್ಯಾಪಾರಿಗಳು ಬಂಡವಾಳ ಹೂಡಲು ಒಪ್ಪುತ್ತಿರಲಿಲ್ಲ. ಈಗ ಪರಿಸ್ಥಿತಿ ಬದಲಾಗಿದೆ ಎಂದು ವಿವರಿಸಿದರು.

ಈಶಾನ್ಯ ರಾಜ್ಯಗಳ ಸಾವಿರಾರು ಯುವಕರು ತಮ್ಮ ನೆಲದಲ್ಲೇ ನಿರಾಶ್ರಿತರಂತೆ ಬದುಕುತ್ತಿದ್ದರು. ನಾವು ಅಧಿಕಾರ ಹಿಡಿದ ನಂತರ ಅಲ್ಲಿನ ಜನರಿಗೆ ಸಂಪೂರ್ಣ ಪುನರ್ವಸತಿ ಸೌಲಭ್ಯ ಕಲ್ಪಿಸಿರುವುದರಿಂದ ಬದಲಾವಣೆ ಗಾಳಿ ಬೀಸಿದೆ. ಒಂದು ಅವಧಿಯಲ್ಲಿ ಜನರು ಇಲ್ಲಿಗೆ ಬರಲು ಹೆದರುತ್ತಿದ್ದರು. ಈಗ ಅಂತಹ ವಾತಾವರಣ ಇಲ್ಲ. ಮುಂದೆ ಈಶಾನ್ಯ ರಾಜ್ಯಗಳು ಪ್ರವಾಸಿ ತಾಣಗಳಾಗಲಿವೆ. ಇಂತಹ ಬದಲಾವಣೆ ಕ್ಷಣಾರ್ಧಲ್ಲಿ ಆಯಿತೆ ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ ಇಲ್ಲ ಎಂದರು.

ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳ ಶಿಕ್ಷಣ, ಕೌಶಲ್ಯ ಮತ್ತು ಕ್ರೀಡೆಗಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಅದರ ಭಾಗವಾಗಿ ಇಂತಹ ಕಾರ್ಯಗಳನ್ನು ಮಾಡುತ್ತಿದ್ದೇವೆ. ನಾವು ಈಶಾನ್ಯ ಭಾಗದ ವಿದ್ಯಾರ್ಥಿಗಳಿಗಾಗಿ ದೆಹಲಿ ಮತ್ತು ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಿಸಿದ್ದೇವೆ. ಹೊಸ ರೈಲ್ವೆ ನಿಲ್ದಾಣ, ಹೊಸ ರೈಲ್ವೆ ಮಾರ್ಗಗಳು, ಹೊಸ ವಿಮಾನ ನಿಲ್ದಾಣಗಳು, ಹೊಸ ಜಲಮಾರ್ಗಗಳು ಮತ್ತು ಇಂಟರ್ ನೆಟ್ ಸಂಪರ್ಕ ಕಲ್ಪಿಸಿದ್ದೇವೆ ಎಂದು ತಿಳಿಸಿದರು.

ನಾವು ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಪೂರ್ಣಗೊಳಿಸುವುದು ಮಾತ್ರವಲ್ಲ, ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಕಳೆದ ಬಾರಿ 9 ಸಾವಿರ ಕೋಟಿ ರೂಪಾಯಿ ವೆಚ್ಚದ ಗ್ಯಾಸ್ ಗ್ರಿಡ್ ಯೋಜನೆ ಜಾರಿಗೊಳಿಸಿದ್ದೇವೆ. ಬೋಗಿ ಸೇತುವೆ ನಿರ್ಮಾಣ ಮಾಡಿದ್ದೇವೆ. ಈ ಸೇತುವೆ ಲಕ್ಷಾಂತರ ಮಂದಿಗೆ ಸಂಪರ್ಕ ಸೇತುವೆಯಾಗಿದೆ ಎಂದು ಹೇಳಿದರು.

ಕಳೆದ 3-4 ವರ್ಷಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ 3 ಸಾವಿರ ಕಿಲೋ ಮೀಟರ್ ರಸ್ತೆಯನ್ನು ನಿರ್ಮಿಸಿದ್ದೇವೆ. 13ನೇ ಹಣಕಾಸು ಆಯೋಗದಲ್ಲಿ ಈಶಾನ್ಯ ರಾಜ್ಯಗಳಿಗೆ 90 ಸಾವಿರ ಕೋಟಿ ವೆಚ್ಚ ಮಾಡಲಾಗಿತ್ತು. 14ನೇ ಹಣಕಾಸು ಆಯೋಗದ ನಂತರ ನಾವು ಅಧಿಕಾರಕ್ಕೆ ಬಂದಿದ್ದೇವೆ. ನಾವು 3 ಲಕ್ಷ ಕೋಟಿಗೆ ಹೆಚ್ಚಿಸಿದ್ದೇವೆ. ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದೇವೆ. ಈಶಾನ್ಯ ರಾಜ್ಯಗಳ ರೈಲ್ವೆ ಮಾರ್ಗಗಳನ್ನು ಬ್ರಾಡ್ ಬಾಂಡ್ ಗೆ ಬದಲಾವಣೆ ಮಾಡಿದೆ. ಹಳೆಯ ವಿಮಾನ ನಿಲ್ದಾಣವನ್ನು ಆಧುನೀಕರಣಗೊಳಿಸಿದೆ ಎಂದು ಅಭಿವೃದ್ಧಿ ಕೆಲಸಗಳ ಪಟ್ಟಿ ಮಾಡಿದರು.

ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ 1,500 ಕೋಟಿ ರೂಪಾಯಿಯ ವಿಶೇಷ ಅಭಿವೃದ್ಧಿ ಪ್ಯಾಕೇಜ್ ನೀಡುವುದಾಗಿ ಘೋಷಣೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...