Homeಕ್ರೀಡೆಒಲಂಪಿಕ್ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ...

ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ಮಳೆ ಹೆಚ್ಚಾಗಿ ಪ್ರವಾಹಕ್ಕೆ ತುತ್ತಾಗುತ್ತಿದ್ದ ಮನೆ, ಅರೆ ಹೊಟ್ಟೆ, ಮಲಗಲು ಬಿಡದೇ ಕಿವಿಯಲ್ಲಿ ಗುಯ್‌ ಗುಟ್ಟುತ್ತಿದ್ದ ಸೊಳ್ಳೆ.... ಇದು ನನ್ನ ಕುಟುಂಬದ ಪ್ರತಿನಿತ್ಯದ ಬದುಕಾಗಿತ್ತು.

- Advertisement -
- Advertisement -

ರಾಣಿ ರಾಂಪಾಲ್‌ ನಾಯಕತ್ವದಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು 2020ರ ಟೋಕಿಯೋ ಒಲಂಪಿಕ್ಸ್‌ನಲ್ಲಿ ಅತ್ಯುತ್ತಮ ಆಟವಾಡುತ್ತಿದ್ದು, ಸೆಮಿ ಫೈನಲ್ ಪ್ರವೇಶಿಸಿದೆ. ಹರಿಯಾಣದ ಪುಟ್ಟ ಹಳ್ಳಿಯಿಂದ ಬಂದ ರಾಣಿ ರಾಂಪಾಲ್ ಹಾಕಿ ಕ್ರೀಡೆಯತ್ತ ಗಮನ ಸೆಳೆದಿದ್ದು ಹೇಗೆ? ಕುಟುಂಬದ ಬೆಂಬಲ ಹೇಗಿತ್ತು ಎಂಬುದರ ಬಗ್ಗೆ ಅವರೇ ಹೇಳಿರುವ ಮಾತುಗಳು ಇಲ್ಲಿವೆ.

ಮಳೆ ಹೆಚ್ಚಾಗಿ ಪ್ರವಾಹಕ್ಕೆ ತುತ್ತಾಗುತ್ತಿದ್ದ ಮನೆ, ಅರೆ ಹೊಟ್ಟೆ, ಮಲಗಲು ಬಿಡದೇ ಕಿವಿಯಲ್ಲಿ ಗುಯ್‌ ಗುಟ್ಟುತ್ತಿದ್ದ ಸೊಳ್ಳೆ…. ಇದು ನನ್ನ ಕುಟುಂಬದ ಪ್ರತಿನಿತ್ಯದ ಬದುಕಾಗಿತ್ತು. ಅಪ್ಪ ತಳ್ಳುಗಾಡಿಯಲ್ಲಿ ಸಾಮಾನು ಸಾಗಿಸುವ ಕೂಲಿ ಕೆಲಸ ಮಾಡುತ್ತಿದ್ದರು. ಅಮ್ಮ ಮನೆಕೆಲಸ ಮಾಡುತ್ತಿದ್ದರು. ನನ್ನ ಹೆತ್ತವರು ತಮ್ಮ ಕೈಲಾದಷ್ಟು ಪ್ರಯತ್ನ ಮಾಡಿ ಜೀವನ ನಡೆಸುತ್ತಿದ್ದರು. ಇವೆಲ್ಲದರಿಂದ ತಪ್ಪಿಸಿಕೊಳ್ಳಲು ನಾನು ಬಯಸುತ್ತಿದ್ದೆ.

ನನ್ನ ಮನೆಯ ಹತ್ತಿರ ಹಾಕಿ ಅಕಾಡೆಮಿ ಇತ್ತು. ಅಲ್ಲಿ ನಡೆಯುತ್ತಿದ್ದ ಹಾಕಿ ಆಟಗಾರರ ಅಭ್ಯಾಸವನ್ನು ಪ್ರತಿನಿತ್ಯ ಗಂಟೆಗಟ್ಟಲೆ ನೋಡುತ್ತಿದ್ದೆ. ಅಷ್ಟೆ ಅಲ್ಲ. ನಾನು ಕೂಡ ಆಡಬೇಕೆಂದು ಬಯಸುತ್ತಿದ್ದೆ. ಹಾಕಿ ಅಭ್ಯಾಸ ಮಾಡಲು ಹಾಕಿ ಸ್ಟಿಕ್‌ ಅಗತ್ಯವಿತ್ತು. ನನ್ನ ಅಪ್ಪನಿಗೆ ದಿನಕ್ಕೆ ದೊರೆಯುತ್ತಿದ್ದ 80 ರೂ ಕೂಲಿಯಲ್ಲಿ ಇಡೀ ಸಂಸಾರವನ್ನು ನಡೆಸುತ್ತಿದ್ದರು. ಆದ್ದರಿಂದ ನಾನು ಹಾಕಿ ಸ್ಟಿಕ್‌ ಖರೀದಿಸುವುದು ಕನಸಾಗಿತ್ತು.

ಆದರೆ ನಾನು ಮಾತ್ರ ಪ್ರತಿದಿನ ಆ ಅಕಾಡೆಮಿಯಲ್ಲಿ ಆಟ ಅಭ್ಯಾಸ ಮಾಡಿಸುತ್ತಿದ್ದ ತರಬೇತುದಾರರ (ಕೋಚ್‌) ಹತ್ತಿರ ಹೋಗಿ ನನಗೂ ಆಟ ಹೇಳಿಕೊಡಿ ಎಂದು ದುಂಬಾಲು ಬೀಳುತ್ತಿದ್ದೆ. ಆದರೆ ಕೋಚ್‌, ’ಪ್ರಾಕ್ಟೀಸ್‌ ಸಮಯದಲ್ಲಿ ಓಡಲು, ಆಡುವಷ್ಟು ಶಕ್ತಿ ನಿನ್ನಲ್ಲಿಲ್ಲ’ ಎನ್ನುತ್ತಿದ್ದ ಅವರು ನಾನು ಅಪೌಷ್ಟಿಕತೆಯಿಂದ ಬಳಲುತ್ತಿದ್ದದ್ದರಿಂದ ನನಗೆ ತರಬೇತಿ ನೀಡಲು ತಿರಸ್ಕರಿಸುತ್ತಿದ್ದರು.

ಒಂದು ದಿನ ಆಟದ ಮೈದಾನದಲ್ಲಿ ನನಗೊಂದು ಮುರಿದ ಹಾಕಿ ಸ್ಟಿಕ್‌ ಸಿಕ್ಕಿತು. ಅದನ್ನೇ ಹಿಡಿದುಕೊಂಡು ಆಟವಾಡಲು ಆರಂಭಿಸಿದೆ. ನನ್ನ ಹತ್ತಿರ ಟ್ರೈನಿಂಗ್‌ಗೆ ಅಗತ್ಯವಿರುವ ಬಟ್ಟೆ ಇರಲ್ಲಿಲ್ಲ. ನಾನು ಹಾಕಿಕೊಳ್ಳುತ್ತಿದ್ದ ಸೆಲ್ವಾರ್‌ ಕಮೀಜ್‌ನಲ್ಲಿಯೇ ನಾನು ಓಡುತ್ತಿದ್ದೆ. ನಾನು ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸಲು ನಿರ್ಧರಿಸಿದ್ದೆ. ಅವಕಾಶಕ್ಕಾಗಿ ಕೋಚ್‌ ಬಳಿ ವಿನಂತಿಸಿಕೊಂಡೆ. ಕೊನೆಗೂ ಕಷ್ಟಪಟ್ಟು ಅವರನ್ನು ಒಪ್ಪಿಸಿದೆ.

ರಾಣಿ ರಾಂಪಾಲ್‌

ಈ ಬಗ್ಗೆ ಕುಟುಂಬದವರಿಗೆ ತಿಳಿಸಿದಾಗ, ‘ಹೆಣ್ಣುಮಕ್ಕಳು ಮನೆಯಲ್ಲಿ ಕೆಲಸ ಮಾಡುತ್ತಾರೆ. ನಾವು ನಿನ್ನನ್ನು ಸ್ಕರ್ಟ್‌‌ನಲ್ಲಿ ಆಡಲು ಬಿಡುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದರು. ನಾನು ಅವರ ಬಳಿ ವಿನಂತಿಸಿಕೊಂಡೆ. ‘ದಯವಿಟ್ಟು ನನಗೆ ಹೋಗಲು ಬಿಡಿ, ನಾನು ಸೋತಿದ್ದೇ ಆದರೆ ನೀವೇಳಿದಂತೆ ಕೇಳುವೆ’ ಎಂದು ಕೇಳಿಕೊಂಡೆ. ಕೊನೆಗೆ ನನ್ನ ಕುಟುಂಬ ಒಲ್ಲದ ಮನಸ್ಸಿನಿಂದಲೇ ನನಗೆ ಆಟವಾಡಲು ಸಮ್ಮತಿ ನೀಡಿತ್ತು.

ಹಾಕಿ ಕೋಚಿಂಗ್‌ ಸೂರ್ಯ ಉದಯಿಸುವ ಮುನ್ನವೇ ಆರಂಭವಾಗುತ್ತಿತ್ತು. ನಾನು ಕೂಡ ಬೆಳಗ್ಗೆ ಬೇಗ ಎದ್ದು ಮೈದಾನಕ್ಕೆ ಹೋಗಬೇಕಾಗುತ್ತಿತ್ತು. ನಮ್ಮ ಮನೆಯಲ್ಲಿ ಗಡಿಯಾರ ಇರಲಿಲ್ಲ. ಹಾಗಾಗಿ ಅಮ್ಮ ಎದ್ದು ಆಕಾಶವನ್ನು ನೋಡಿ ನನ್ನನ್ನು ಎಚ್ಚರಿಸುತ್ತಿದ್ದರು.

ಅಕಾಡೆಮಿಯಲ್ಲಿ ‌ಪ್ರತಿಯೊಬ್ಬ ಆಟಗಾರನು ಅರ್ಧ ಲೀಟರ್‌ ಹಾಲು ತರಬೇಕು ಎಂಬುದು ಕಡ್ಡಾಯವಾಗಿತ್ತು. ನಮ್ಮ ಕುಟುಂಬದಲ್ಲಿ ಕಾಲು ಲೀಟರ್‌ ಹಾಲು ಸಿಗುವುದು ಕಷ್ಟವಾಗಿತ್ತು. ಹಾಗಾಗಿ ನಾನು ಯಾರಿಗೂ ತಿಳಿಯದ ಹಾಗೆ ಸ್ವಲ್ಪ ಹಾಲಿಗೆ ಹೆಚ್ಚು ನೀರನ್ನು ಮಿಶ್ರಣ ಮಾಡಿ ಕುಡಿಯುತ್ತಿದ್ದೆ. ಏಕೆಂದರೆ ನಾನು ಹೇಗಾದರೂ ಮಾಡಿ ಆಟವಾಡಲು ಬಯಸುತ್ತಿದ್ದೆ.

ನನ್ನ ಕೋಚ್‌ ನನಗೆ ಬೆನ್ನೆಲುಬಾಗಿ ನಿಂತಿದ್ದರು. ನನಗಾಗಿ ಅವರು ಹಾಕಿ ಕಿಟ್‌ ಮತ್ತು ಶೂಗಳನ್ನು ಕೊಡಿಸಿದರು. ಅವರ ಕುಟುಂಬದೊಂದಿಗೆ ಬೆರೆಯಲು ಅವಕಾಶ ನೀಡಿದರು. ನನ್ನ ಊಟದ ಅಗತ್ಯಗಳನ್ನು ಅವರೇ ನೋಡಿಕೊಂಡರು. ಕಷ್ಟಪಟ್ಟು ನಾನು ತರಬೇತಿ ಪಡೆಯುತ್ತಿದ್ದೆ. ಒಂದು ದಿನವೂ ತರಬೇತಿಯನ್ನು ತಪ್ಪಿಸುತ್ತಿರಲಿಲ್ಲ.

ನನ್ನ ಮೊದಲ ಸಂಬಳ ಈಗಲೂ ನೆನಪಿದೆ. ಟೂರ್ನಮೆಂಟ್‌ ಒಂದರಲ್ಲಿ ನಾನು 500ರೂ ಗೆದ್ದಿದ್ದೆ. ಆ ಹಣವನ್ನು ಅಪ್ಪನಿಗೆ ಕೊಟ್ಟಿದ್ದೆ. ಅಲ್ಲಿಯವರೆಗೂ ಎಂದೂ ಅಪ್ಪ ಅಷ್ಟೊಂದು ಹಣವನ್ನು ತನ್ನ ಕೈನಲ್ಲಿ ಹಿಡಿದಿರಲಿಲ್ಲ. ‘ಒಂದಲ್ಲಾ ಒಂದು ದಿನ ನಾವು ನಮ್ಮ ಸ್ವಂತ ಮನೆಯನ್ನು ಕಟ್ಟಿಸುತ್ತೇನೆ’ ಎಂದು ಅಂದು ನಾನು ನನ್ನ ಕುಟುಂಬದವರಿಗೆ ಪ್ರಮಾಣ ಮಾಡಿದೆ. ಆ ನಿಟ್ಟಿನಲ್ಲಿ ನನ್ನೆಲ್ಲಾ ಶಕ್ತಿಯನ್ನು ಬಳಸಿ ಎಲ್ಲವನ್ನು ಮಾಡಿದ್ದೇನೆ.

ರಾಣಿ ರಾಂಪಾಲ್‌
PC: Reuters / Bernadett Szabo

ನನ್ನ ರಾಜ್ಯವನ್ನು ಪ್ರತಿನಿಧಿಸಿ ಹಲವಾರು ಚಾಂಪಿಯನ್‌ಶಿಪ್‌ಗಳಲ್ಲಿ ಆಡಿದ್ದ ನನಗೆ, ನನ್ನ 15ನೇ ವಯಸ್ಸಿನಲ್ಲಿ ರಾಷ್ಟ್ರೀಯ ತಂಡಕ್ಕೆ ಸೇರುವಂತೆ ಕರೆ ಬಂದಿತು. ಇಷ್ಟೆಲ್ಲಾ ಅವಕಾಶಗಳು ನನಗೆ ದೊರೆತಿದ್ದರೂ ನನ್ನ ಸಂಬಂಧಿಕರು ಮಾತ್ರ ಯಾವಾಗ ಮದುವೆಯಾಗುತ್ತೀಯಾ? ಎಂದು ಕೇಳುತ್ತಿದ್ದರು. ಆದರೆ ಅಪ್ಪ, ‘ನಿನ್ನ ಮನಸ್ಸಿಗೆ ಇಷ್ಟವಾಗುವವರೆಗೂ ಆಟವಾಡು’ ಎಂದರು. ನನ್ನ ಕುಟುಂಬದ ಬೆಂಬಲದೊಂದಿಗೆ ನಾನು ಆಟದ ಕಡೆ ಗಮನ ಹರಿಸಿದೆ. ಅಂತಿಮವಾಗಿ ನಾನು ಭಾರತದ ಮಹಿಳಾ ಹಾಕಿ ತಂಡದ ನಾಯಕಿಯಾಗಿದ್ದೇನೆ.

ಇದಾದ ಸ್ವಲ್ಪ ಸಮಯದ ನಂತರ ಅಪ್ಪನೊಂದಿಗೆ ಅವರ ಸ್ನೇಹಿತರೊಬ್ಬರ ಮನೆಗೆ ಹೋಗಿದ್ದೇವು. ಅವರು ತಮ್ಮ ಮೊಮ್ಮಗಳನ್ನು ಕರೆದು ನನಗೆ ‘ಅವಳು ನಿನ್ನಿಂದ ಸ್ಫೂರ್ತಿ ಪಡೆದಿದ್ದಾಳೆ. ಅವಳೂ ಹಾಕಿ ಆಟಗಾರಳಾಗಲು ಬಯಸುತ್ತಾಳೆ’ ಎಂದರು. ನನಗೆ ತುಂಬಾ ಸಂತೋಷವಾಯಿತು. ದುಖಃ ಒತ್ತರಿಸಿ ಬಂತು. ಕಣ್ಣೀರು ತಡೆಯಲಾಗಲಿಲ್ಲ.

2017ರಲ್ಲಿ, ಅಂತಿಮವಾಗಿ ನಾನು ನನ್ನ ಕುಟುಂಬಕ್ಕೆ ನೀಡಿದ್ದ ಭರವಸೆ ಈಡೇರಿಸಿದೆ. ಅವರಿಗಾಗಿ ಸ್ವಂತ ಮನೆಯನ್ನು ಖರೀದಿಸಿದೆ. ಆ ದಿನ ನಾವು ಒಬ್ಬರನ್ನೊಬ್ಬರು ಬಿಗಿದಪ್ಪಿಕೊಂಡು ಒಟ್ಟಿಗೆ ಅಳುತ್ತಿದ್ದೆವು.

ಇದು ಇಲ್ಲಿಗೆ ಮುಗಿದಿಲ್ಲ. ನನ್ನ ಕೋಚ್‌ ಟೊಕಿಯೋ ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಕನಸು ಕಂಡಿದ್ದರು. ಈ ವರ್ಷ ನಾನು ಆ ಕನಸನ್ನು ನನಸು ಮಾಡಲು ತೀರ್ಮಾನಿಸಿದ್ದೇನೆ.

ಕೃಪೆ: ಹ್ಯೂಮನ್ಸ್‌ ಆಫ್‌ ಬಾಂಬೆ (Humans of Bombay)

ರಾಣಿ ರಾಂಪಾಲ್‌ ಪರಿಚಯ:

2010ರ ವಿಶ್ವಕಪ್‌ನಲ್ಲಿ ಭಾಗವಹಿಸಿದ ರಾಷ್ಟ್ರೀಯ ತಂಡದ ಅತ್ಯಂತ ಕಿರಿಯ ಆಟಗಾರ್ತಿ, ಪ್ರಸ್ತುತ ಭಾರತದ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್‌ ಜನಿಸಿದ್ದು 1994 ಡಿಸೆಂಬರ್‌ 4ರಂದು. ಹರಿಯಾಣ ರಾಜ್ಯದ ಕುರುಕ್ಷೇತ್ರ ಜಿಲ್ಲೆ, ಶಹಾಬಾದ್‌ ಮಾರ್ಕಂಡ ಇವರ ಹುಟ್ಟೂರು. ತನ್ನ 15ನೇ ವಯಸ್ಸಿಗೆ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪಾರ್ದಾಪಣೆ ಮಾಡಿದ ರಾಣಿ ಈವರೆಗೂ ಸುಮಾರು 212 ಪಂದ್ಯಗಳಲ್ಲಿ ಆಡಿದ್ದಾರೆ. ಸುಮಾರು 134ಗೋಲುಗಳನ್ನು ಗಳಿಸಿದ್ದಾರೆ. ಸ್ಟ್ರೈಕರ್‌ ಆಗಿಯೂ ಪ್ರಸಿದ್ಧರಾಗಿರುವ ಇವರಿಗೆ 2020ರಲ್ಲಿ ಭಾರತ ಸರ್ಕಾರ ಪದ್ಮಶ್ರೀ ನೀಡಿ ಗೌರವಿಸಿದೆ.

2013ರಲ್ಲಿ ನಡೆದ ಜೂನಿಯರ್‌ ವರ್ಲ್ಡ್‌ ಕಪ್‌ನಲ್ಲಿ ಇವರಿದ್ದ ಮಹಿಳಾ ತಂಡವು ಕಂಚು, 2018ರಲ್ಲಿ ಜಕರ್ತಾದಲ್ಲಿ ನಡೆದ ಏಷ್ಯನ್‌ ಕಪ್‌ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವು ಪದಕಗಳನ್ನು ಗೆದ್ದಿದ್ದಾರೆ. ಪ್ರಸ್ತುತ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ರಾಣಿ ನಾಯಕತ್ವದ ಮಹಿಳಾ ಹಾಕಿ ತಂಡವು ಸೆಮಿಫೈನಲ್‌ ತಲುಪಿ ಇತಿಹಾಸ ನಿರ್ಮಿಸಿದೆ.


ಇದನ್ನೂ ಓದಿ; ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...