Homeಕ್ರೀಡೆಒಲಂಪಿಕ್ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ...

ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ಮಳೆ ಹೆಚ್ಚಾಗಿ ಪ್ರವಾಹಕ್ಕೆ ತುತ್ತಾಗುತ್ತಿದ್ದ ಮನೆ, ಅರೆ ಹೊಟ್ಟೆ, ಮಲಗಲು ಬಿಡದೇ ಕಿವಿಯಲ್ಲಿ ಗುಯ್‌ ಗುಟ್ಟುತ್ತಿದ್ದ ಸೊಳ್ಳೆ.... ಇದು ನನ್ನ ಕುಟುಂಬದ ಪ್ರತಿನಿತ್ಯದ ಬದುಕಾಗಿತ್ತು.

- Advertisement -
- Advertisement -

ರಾಣಿ ರಾಂಪಾಲ್‌ ನಾಯಕತ್ವದಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು 2020ರ ಟೋಕಿಯೋ ಒಲಂಪಿಕ್ಸ್‌ನಲ್ಲಿ ಅತ್ಯುತ್ತಮ ಆಟವಾಡುತ್ತಿದ್ದು, ಸೆಮಿ ಫೈನಲ್ ಪ್ರವೇಶಿಸಿದೆ. ಹರಿಯಾಣದ ಪುಟ್ಟ ಹಳ್ಳಿಯಿಂದ ಬಂದ ರಾಣಿ ರಾಂಪಾಲ್ ಹಾಕಿ ಕ್ರೀಡೆಯತ್ತ ಗಮನ ಸೆಳೆದಿದ್ದು ಹೇಗೆ? ಕುಟುಂಬದ ಬೆಂಬಲ ಹೇಗಿತ್ತು ಎಂಬುದರ ಬಗ್ಗೆ ಅವರೇ ಹೇಳಿರುವ ಮಾತುಗಳು ಇಲ್ಲಿವೆ.

ಮಳೆ ಹೆಚ್ಚಾಗಿ ಪ್ರವಾಹಕ್ಕೆ ತುತ್ತಾಗುತ್ತಿದ್ದ ಮನೆ, ಅರೆ ಹೊಟ್ಟೆ, ಮಲಗಲು ಬಿಡದೇ ಕಿವಿಯಲ್ಲಿ ಗುಯ್‌ ಗುಟ್ಟುತ್ತಿದ್ದ ಸೊಳ್ಳೆ…. ಇದು ನನ್ನ ಕುಟುಂಬದ ಪ್ರತಿನಿತ್ಯದ ಬದುಕಾಗಿತ್ತು. ಅಪ್ಪ ತಳ್ಳುಗಾಡಿಯಲ್ಲಿ ಸಾಮಾನು ಸಾಗಿಸುವ ಕೂಲಿ ಕೆಲಸ ಮಾಡುತ್ತಿದ್ದರು. ಅಮ್ಮ ಮನೆಕೆಲಸ ಮಾಡುತ್ತಿದ್ದರು. ನನ್ನ ಹೆತ್ತವರು ತಮ್ಮ ಕೈಲಾದಷ್ಟು ಪ್ರಯತ್ನ ಮಾಡಿ ಜೀವನ ನಡೆಸುತ್ತಿದ್ದರು. ಇವೆಲ್ಲದರಿಂದ ತಪ್ಪಿಸಿಕೊಳ್ಳಲು ನಾನು ಬಯಸುತ್ತಿದ್ದೆ.

ನನ್ನ ಮನೆಯ ಹತ್ತಿರ ಹಾಕಿ ಅಕಾಡೆಮಿ ಇತ್ತು. ಅಲ್ಲಿ ನಡೆಯುತ್ತಿದ್ದ ಹಾಕಿ ಆಟಗಾರರ ಅಭ್ಯಾಸವನ್ನು ಪ್ರತಿನಿತ್ಯ ಗಂಟೆಗಟ್ಟಲೆ ನೋಡುತ್ತಿದ್ದೆ. ಅಷ್ಟೆ ಅಲ್ಲ. ನಾನು ಕೂಡ ಆಡಬೇಕೆಂದು ಬಯಸುತ್ತಿದ್ದೆ. ಹಾಕಿ ಅಭ್ಯಾಸ ಮಾಡಲು ಹಾಕಿ ಸ್ಟಿಕ್‌ ಅಗತ್ಯವಿತ್ತು. ನನ್ನ ಅಪ್ಪನಿಗೆ ದಿನಕ್ಕೆ ದೊರೆಯುತ್ತಿದ್ದ 80 ರೂ ಕೂಲಿಯಲ್ಲಿ ಇಡೀ ಸಂಸಾರವನ್ನು ನಡೆಸುತ್ತಿದ್ದರು. ಆದ್ದರಿಂದ ನಾನು ಹಾಕಿ ಸ್ಟಿಕ್‌ ಖರೀದಿಸುವುದು ಕನಸಾಗಿತ್ತು.

ಆದರೆ ನಾನು ಮಾತ್ರ ಪ್ರತಿದಿನ ಆ ಅಕಾಡೆಮಿಯಲ್ಲಿ ಆಟ ಅಭ್ಯಾಸ ಮಾಡಿಸುತ್ತಿದ್ದ ತರಬೇತುದಾರರ (ಕೋಚ್‌) ಹತ್ತಿರ ಹೋಗಿ ನನಗೂ ಆಟ ಹೇಳಿಕೊಡಿ ಎಂದು ದುಂಬಾಲು ಬೀಳುತ್ತಿದ್ದೆ. ಆದರೆ ಕೋಚ್‌, ’ಪ್ರಾಕ್ಟೀಸ್‌ ಸಮಯದಲ್ಲಿ ಓಡಲು, ಆಡುವಷ್ಟು ಶಕ್ತಿ ನಿನ್ನಲ್ಲಿಲ್ಲ’ ಎನ್ನುತ್ತಿದ್ದ ಅವರು ನಾನು ಅಪೌಷ್ಟಿಕತೆಯಿಂದ ಬಳಲುತ್ತಿದ್ದದ್ದರಿಂದ ನನಗೆ ತರಬೇತಿ ನೀಡಲು ತಿರಸ್ಕರಿಸುತ್ತಿದ್ದರು.

ಒಂದು ದಿನ ಆಟದ ಮೈದಾನದಲ್ಲಿ ನನಗೊಂದು ಮುರಿದ ಹಾಕಿ ಸ್ಟಿಕ್‌ ಸಿಕ್ಕಿತು. ಅದನ್ನೇ ಹಿಡಿದುಕೊಂಡು ಆಟವಾಡಲು ಆರಂಭಿಸಿದೆ. ನನ್ನ ಹತ್ತಿರ ಟ್ರೈನಿಂಗ್‌ಗೆ ಅಗತ್ಯವಿರುವ ಬಟ್ಟೆ ಇರಲ್ಲಿಲ್ಲ. ನಾನು ಹಾಕಿಕೊಳ್ಳುತ್ತಿದ್ದ ಸೆಲ್ವಾರ್‌ ಕಮೀಜ್‌ನಲ್ಲಿಯೇ ನಾನು ಓಡುತ್ತಿದ್ದೆ. ನಾನು ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸಲು ನಿರ್ಧರಿಸಿದ್ದೆ. ಅವಕಾಶಕ್ಕಾಗಿ ಕೋಚ್‌ ಬಳಿ ವಿನಂತಿಸಿಕೊಂಡೆ. ಕೊನೆಗೂ ಕಷ್ಟಪಟ್ಟು ಅವರನ್ನು ಒಪ್ಪಿಸಿದೆ.

ರಾಣಿ ರಾಂಪಾಲ್‌

ಈ ಬಗ್ಗೆ ಕುಟುಂಬದವರಿಗೆ ತಿಳಿಸಿದಾಗ, ‘ಹೆಣ್ಣುಮಕ್ಕಳು ಮನೆಯಲ್ಲಿ ಕೆಲಸ ಮಾಡುತ್ತಾರೆ. ನಾವು ನಿನ್ನನ್ನು ಸ್ಕರ್ಟ್‌‌ನಲ್ಲಿ ಆಡಲು ಬಿಡುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದರು. ನಾನು ಅವರ ಬಳಿ ವಿನಂತಿಸಿಕೊಂಡೆ. ‘ದಯವಿಟ್ಟು ನನಗೆ ಹೋಗಲು ಬಿಡಿ, ನಾನು ಸೋತಿದ್ದೇ ಆದರೆ ನೀವೇಳಿದಂತೆ ಕೇಳುವೆ’ ಎಂದು ಕೇಳಿಕೊಂಡೆ. ಕೊನೆಗೆ ನನ್ನ ಕುಟುಂಬ ಒಲ್ಲದ ಮನಸ್ಸಿನಿಂದಲೇ ನನಗೆ ಆಟವಾಡಲು ಸಮ್ಮತಿ ನೀಡಿತ್ತು.

ಹಾಕಿ ಕೋಚಿಂಗ್‌ ಸೂರ್ಯ ಉದಯಿಸುವ ಮುನ್ನವೇ ಆರಂಭವಾಗುತ್ತಿತ್ತು. ನಾನು ಕೂಡ ಬೆಳಗ್ಗೆ ಬೇಗ ಎದ್ದು ಮೈದಾನಕ್ಕೆ ಹೋಗಬೇಕಾಗುತ್ತಿತ್ತು. ನಮ್ಮ ಮನೆಯಲ್ಲಿ ಗಡಿಯಾರ ಇರಲಿಲ್ಲ. ಹಾಗಾಗಿ ಅಮ್ಮ ಎದ್ದು ಆಕಾಶವನ್ನು ನೋಡಿ ನನ್ನನ್ನು ಎಚ್ಚರಿಸುತ್ತಿದ್ದರು.

ಅಕಾಡೆಮಿಯಲ್ಲಿ ‌ಪ್ರತಿಯೊಬ್ಬ ಆಟಗಾರನು ಅರ್ಧ ಲೀಟರ್‌ ಹಾಲು ತರಬೇಕು ಎಂಬುದು ಕಡ್ಡಾಯವಾಗಿತ್ತು. ನಮ್ಮ ಕುಟುಂಬದಲ್ಲಿ ಕಾಲು ಲೀಟರ್‌ ಹಾಲು ಸಿಗುವುದು ಕಷ್ಟವಾಗಿತ್ತು. ಹಾಗಾಗಿ ನಾನು ಯಾರಿಗೂ ತಿಳಿಯದ ಹಾಗೆ ಸ್ವಲ್ಪ ಹಾಲಿಗೆ ಹೆಚ್ಚು ನೀರನ್ನು ಮಿಶ್ರಣ ಮಾಡಿ ಕುಡಿಯುತ್ತಿದ್ದೆ. ಏಕೆಂದರೆ ನಾನು ಹೇಗಾದರೂ ಮಾಡಿ ಆಟವಾಡಲು ಬಯಸುತ್ತಿದ್ದೆ.

ನನ್ನ ಕೋಚ್‌ ನನಗೆ ಬೆನ್ನೆಲುಬಾಗಿ ನಿಂತಿದ್ದರು. ನನಗಾಗಿ ಅವರು ಹಾಕಿ ಕಿಟ್‌ ಮತ್ತು ಶೂಗಳನ್ನು ಕೊಡಿಸಿದರು. ಅವರ ಕುಟುಂಬದೊಂದಿಗೆ ಬೆರೆಯಲು ಅವಕಾಶ ನೀಡಿದರು. ನನ್ನ ಊಟದ ಅಗತ್ಯಗಳನ್ನು ಅವರೇ ನೋಡಿಕೊಂಡರು. ಕಷ್ಟಪಟ್ಟು ನಾನು ತರಬೇತಿ ಪಡೆಯುತ್ತಿದ್ದೆ. ಒಂದು ದಿನವೂ ತರಬೇತಿಯನ್ನು ತಪ್ಪಿಸುತ್ತಿರಲಿಲ್ಲ.

ನನ್ನ ಮೊದಲ ಸಂಬಳ ಈಗಲೂ ನೆನಪಿದೆ. ಟೂರ್ನಮೆಂಟ್‌ ಒಂದರಲ್ಲಿ ನಾನು 500ರೂ ಗೆದ್ದಿದ್ದೆ. ಆ ಹಣವನ್ನು ಅಪ್ಪನಿಗೆ ಕೊಟ್ಟಿದ್ದೆ. ಅಲ್ಲಿಯವರೆಗೂ ಎಂದೂ ಅಪ್ಪ ಅಷ್ಟೊಂದು ಹಣವನ್ನು ತನ್ನ ಕೈನಲ್ಲಿ ಹಿಡಿದಿರಲಿಲ್ಲ. ‘ಒಂದಲ್ಲಾ ಒಂದು ದಿನ ನಾವು ನಮ್ಮ ಸ್ವಂತ ಮನೆಯನ್ನು ಕಟ್ಟಿಸುತ್ತೇನೆ’ ಎಂದು ಅಂದು ನಾನು ನನ್ನ ಕುಟುಂಬದವರಿಗೆ ಪ್ರಮಾಣ ಮಾಡಿದೆ. ಆ ನಿಟ್ಟಿನಲ್ಲಿ ನನ್ನೆಲ್ಲಾ ಶಕ್ತಿಯನ್ನು ಬಳಸಿ ಎಲ್ಲವನ್ನು ಮಾಡಿದ್ದೇನೆ.

ರಾಣಿ ರಾಂಪಾಲ್‌
PC: Reuters / Bernadett Szabo

ನನ್ನ ರಾಜ್ಯವನ್ನು ಪ್ರತಿನಿಧಿಸಿ ಹಲವಾರು ಚಾಂಪಿಯನ್‌ಶಿಪ್‌ಗಳಲ್ಲಿ ಆಡಿದ್ದ ನನಗೆ, ನನ್ನ 15ನೇ ವಯಸ್ಸಿನಲ್ಲಿ ರಾಷ್ಟ್ರೀಯ ತಂಡಕ್ಕೆ ಸೇರುವಂತೆ ಕರೆ ಬಂದಿತು. ಇಷ್ಟೆಲ್ಲಾ ಅವಕಾಶಗಳು ನನಗೆ ದೊರೆತಿದ್ದರೂ ನನ್ನ ಸಂಬಂಧಿಕರು ಮಾತ್ರ ಯಾವಾಗ ಮದುವೆಯಾಗುತ್ತೀಯಾ? ಎಂದು ಕೇಳುತ್ತಿದ್ದರು. ಆದರೆ ಅಪ್ಪ, ‘ನಿನ್ನ ಮನಸ್ಸಿಗೆ ಇಷ್ಟವಾಗುವವರೆಗೂ ಆಟವಾಡು’ ಎಂದರು. ನನ್ನ ಕುಟುಂಬದ ಬೆಂಬಲದೊಂದಿಗೆ ನಾನು ಆಟದ ಕಡೆ ಗಮನ ಹರಿಸಿದೆ. ಅಂತಿಮವಾಗಿ ನಾನು ಭಾರತದ ಮಹಿಳಾ ಹಾಕಿ ತಂಡದ ನಾಯಕಿಯಾಗಿದ್ದೇನೆ.

ಇದಾದ ಸ್ವಲ್ಪ ಸಮಯದ ನಂತರ ಅಪ್ಪನೊಂದಿಗೆ ಅವರ ಸ್ನೇಹಿತರೊಬ್ಬರ ಮನೆಗೆ ಹೋಗಿದ್ದೇವು. ಅವರು ತಮ್ಮ ಮೊಮ್ಮಗಳನ್ನು ಕರೆದು ನನಗೆ ‘ಅವಳು ನಿನ್ನಿಂದ ಸ್ಫೂರ್ತಿ ಪಡೆದಿದ್ದಾಳೆ. ಅವಳೂ ಹಾಕಿ ಆಟಗಾರಳಾಗಲು ಬಯಸುತ್ತಾಳೆ’ ಎಂದರು. ನನಗೆ ತುಂಬಾ ಸಂತೋಷವಾಯಿತು. ದುಖಃ ಒತ್ತರಿಸಿ ಬಂತು. ಕಣ್ಣೀರು ತಡೆಯಲಾಗಲಿಲ್ಲ.

2017ರಲ್ಲಿ, ಅಂತಿಮವಾಗಿ ನಾನು ನನ್ನ ಕುಟುಂಬಕ್ಕೆ ನೀಡಿದ್ದ ಭರವಸೆ ಈಡೇರಿಸಿದೆ. ಅವರಿಗಾಗಿ ಸ್ವಂತ ಮನೆಯನ್ನು ಖರೀದಿಸಿದೆ. ಆ ದಿನ ನಾವು ಒಬ್ಬರನ್ನೊಬ್ಬರು ಬಿಗಿದಪ್ಪಿಕೊಂಡು ಒಟ್ಟಿಗೆ ಅಳುತ್ತಿದ್ದೆವು.

ಇದು ಇಲ್ಲಿಗೆ ಮುಗಿದಿಲ್ಲ. ನನ್ನ ಕೋಚ್‌ ಟೊಕಿಯೋ ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಕನಸು ಕಂಡಿದ್ದರು. ಈ ವರ್ಷ ನಾನು ಆ ಕನಸನ್ನು ನನಸು ಮಾಡಲು ತೀರ್ಮಾನಿಸಿದ್ದೇನೆ.

ಕೃಪೆ: ಹ್ಯೂಮನ್ಸ್‌ ಆಫ್‌ ಬಾಂಬೆ (Humans of Bombay)

ರಾಣಿ ರಾಂಪಾಲ್‌ ಪರಿಚಯ:

2010ರ ವಿಶ್ವಕಪ್‌ನಲ್ಲಿ ಭಾಗವಹಿಸಿದ ರಾಷ್ಟ್ರೀಯ ತಂಡದ ಅತ್ಯಂತ ಕಿರಿಯ ಆಟಗಾರ್ತಿ, ಪ್ರಸ್ತುತ ಭಾರತದ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್‌ ಜನಿಸಿದ್ದು 1994 ಡಿಸೆಂಬರ್‌ 4ರಂದು. ಹರಿಯಾಣ ರಾಜ್ಯದ ಕುರುಕ್ಷೇತ್ರ ಜಿಲ್ಲೆ, ಶಹಾಬಾದ್‌ ಮಾರ್ಕಂಡ ಇವರ ಹುಟ್ಟೂರು. ತನ್ನ 15ನೇ ವಯಸ್ಸಿಗೆ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪಾರ್ದಾಪಣೆ ಮಾಡಿದ ರಾಣಿ ಈವರೆಗೂ ಸುಮಾರು 212 ಪಂದ್ಯಗಳಲ್ಲಿ ಆಡಿದ್ದಾರೆ. ಸುಮಾರು 134ಗೋಲುಗಳನ್ನು ಗಳಿಸಿದ್ದಾರೆ. ಸ್ಟ್ರೈಕರ್‌ ಆಗಿಯೂ ಪ್ರಸಿದ್ಧರಾಗಿರುವ ಇವರಿಗೆ 2020ರಲ್ಲಿ ಭಾರತ ಸರ್ಕಾರ ಪದ್ಮಶ್ರೀ ನೀಡಿ ಗೌರವಿಸಿದೆ.

2013ರಲ್ಲಿ ನಡೆದ ಜೂನಿಯರ್‌ ವರ್ಲ್ಡ್‌ ಕಪ್‌ನಲ್ಲಿ ಇವರಿದ್ದ ಮಹಿಳಾ ತಂಡವು ಕಂಚು, 2018ರಲ್ಲಿ ಜಕರ್ತಾದಲ್ಲಿ ನಡೆದ ಏಷ್ಯನ್‌ ಕಪ್‌ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವು ಪದಕಗಳನ್ನು ಗೆದ್ದಿದ್ದಾರೆ. ಪ್ರಸ್ತುತ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ರಾಣಿ ನಾಯಕತ್ವದ ಮಹಿಳಾ ಹಾಕಿ ತಂಡವು ಸೆಮಿಫೈನಲ್‌ ತಲುಪಿ ಇತಿಹಾಸ ನಿರ್ಮಿಸಿದೆ.


ಇದನ್ನೂ ಓದಿ; ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...