Homeಕ್ರೀಡೆಒಲಂಪಿಕ್ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ...

ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ಮಳೆ ಹೆಚ್ಚಾಗಿ ಪ್ರವಾಹಕ್ಕೆ ತುತ್ತಾಗುತ್ತಿದ್ದ ಮನೆ, ಅರೆ ಹೊಟ್ಟೆ, ಮಲಗಲು ಬಿಡದೇ ಕಿವಿಯಲ್ಲಿ ಗುಯ್‌ ಗುಟ್ಟುತ್ತಿದ್ದ ಸೊಳ್ಳೆ.... ಇದು ನನ್ನ ಕುಟುಂಬದ ಪ್ರತಿನಿತ್ಯದ ಬದುಕಾಗಿತ್ತು.

- Advertisement -
- Advertisement -

ರಾಣಿ ರಾಂಪಾಲ್‌ ನಾಯಕತ್ವದಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು 2020ರ ಟೋಕಿಯೋ ಒಲಂಪಿಕ್ಸ್‌ನಲ್ಲಿ ಅತ್ಯುತ್ತಮ ಆಟವಾಡುತ್ತಿದ್ದು, ಸೆಮಿ ಫೈನಲ್ ಪ್ರವೇಶಿಸಿದೆ. ಹರಿಯಾಣದ ಪುಟ್ಟ ಹಳ್ಳಿಯಿಂದ ಬಂದ ರಾಣಿ ರಾಂಪಾಲ್ ಹಾಕಿ ಕ್ರೀಡೆಯತ್ತ ಗಮನ ಸೆಳೆದಿದ್ದು ಹೇಗೆ? ಕುಟುಂಬದ ಬೆಂಬಲ ಹೇಗಿತ್ತು ಎಂಬುದರ ಬಗ್ಗೆ ಅವರೇ ಹೇಳಿರುವ ಮಾತುಗಳು ಇಲ್ಲಿವೆ.

ಮಳೆ ಹೆಚ್ಚಾಗಿ ಪ್ರವಾಹಕ್ಕೆ ತುತ್ತಾಗುತ್ತಿದ್ದ ಮನೆ, ಅರೆ ಹೊಟ್ಟೆ, ಮಲಗಲು ಬಿಡದೇ ಕಿವಿಯಲ್ಲಿ ಗುಯ್‌ ಗುಟ್ಟುತ್ತಿದ್ದ ಸೊಳ್ಳೆ…. ಇದು ನನ್ನ ಕುಟುಂಬದ ಪ್ರತಿನಿತ್ಯದ ಬದುಕಾಗಿತ್ತು. ಅಪ್ಪ ತಳ್ಳುಗಾಡಿಯಲ್ಲಿ ಸಾಮಾನು ಸಾಗಿಸುವ ಕೂಲಿ ಕೆಲಸ ಮಾಡುತ್ತಿದ್ದರು. ಅಮ್ಮ ಮನೆಕೆಲಸ ಮಾಡುತ್ತಿದ್ದರು. ನನ್ನ ಹೆತ್ತವರು ತಮ್ಮ ಕೈಲಾದಷ್ಟು ಪ್ರಯತ್ನ ಮಾಡಿ ಜೀವನ ನಡೆಸುತ್ತಿದ್ದರು. ಇವೆಲ್ಲದರಿಂದ ತಪ್ಪಿಸಿಕೊಳ್ಳಲು ನಾನು ಬಯಸುತ್ತಿದ್ದೆ.

ನನ್ನ ಮನೆಯ ಹತ್ತಿರ ಹಾಕಿ ಅಕಾಡೆಮಿ ಇತ್ತು. ಅಲ್ಲಿ ನಡೆಯುತ್ತಿದ್ದ ಹಾಕಿ ಆಟಗಾರರ ಅಭ್ಯಾಸವನ್ನು ಪ್ರತಿನಿತ್ಯ ಗಂಟೆಗಟ್ಟಲೆ ನೋಡುತ್ತಿದ್ದೆ. ಅಷ್ಟೆ ಅಲ್ಲ. ನಾನು ಕೂಡ ಆಡಬೇಕೆಂದು ಬಯಸುತ್ತಿದ್ದೆ. ಹಾಕಿ ಅಭ್ಯಾಸ ಮಾಡಲು ಹಾಕಿ ಸ್ಟಿಕ್‌ ಅಗತ್ಯವಿತ್ತು. ನನ್ನ ಅಪ್ಪನಿಗೆ ದಿನಕ್ಕೆ ದೊರೆಯುತ್ತಿದ್ದ 80 ರೂ ಕೂಲಿಯಲ್ಲಿ ಇಡೀ ಸಂಸಾರವನ್ನು ನಡೆಸುತ್ತಿದ್ದರು. ಆದ್ದರಿಂದ ನಾನು ಹಾಕಿ ಸ್ಟಿಕ್‌ ಖರೀದಿಸುವುದು ಕನಸಾಗಿತ್ತು.

ಆದರೆ ನಾನು ಮಾತ್ರ ಪ್ರತಿದಿನ ಆ ಅಕಾಡೆಮಿಯಲ್ಲಿ ಆಟ ಅಭ್ಯಾಸ ಮಾಡಿಸುತ್ತಿದ್ದ ತರಬೇತುದಾರರ (ಕೋಚ್‌) ಹತ್ತಿರ ಹೋಗಿ ನನಗೂ ಆಟ ಹೇಳಿಕೊಡಿ ಎಂದು ದುಂಬಾಲು ಬೀಳುತ್ತಿದ್ದೆ. ಆದರೆ ಕೋಚ್‌, ’ಪ್ರಾಕ್ಟೀಸ್‌ ಸಮಯದಲ್ಲಿ ಓಡಲು, ಆಡುವಷ್ಟು ಶಕ್ತಿ ನಿನ್ನಲ್ಲಿಲ್ಲ’ ಎನ್ನುತ್ತಿದ್ದ ಅವರು ನಾನು ಅಪೌಷ್ಟಿಕತೆಯಿಂದ ಬಳಲುತ್ತಿದ್ದದ್ದರಿಂದ ನನಗೆ ತರಬೇತಿ ನೀಡಲು ತಿರಸ್ಕರಿಸುತ್ತಿದ್ದರು.

ಒಂದು ದಿನ ಆಟದ ಮೈದಾನದಲ್ಲಿ ನನಗೊಂದು ಮುರಿದ ಹಾಕಿ ಸ್ಟಿಕ್‌ ಸಿಕ್ಕಿತು. ಅದನ್ನೇ ಹಿಡಿದುಕೊಂಡು ಆಟವಾಡಲು ಆರಂಭಿಸಿದೆ. ನನ್ನ ಹತ್ತಿರ ಟ್ರೈನಿಂಗ್‌ಗೆ ಅಗತ್ಯವಿರುವ ಬಟ್ಟೆ ಇರಲ್ಲಿಲ್ಲ. ನಾನು ಹಾಕಿಕೊಳ್ಳುತ್ತಿದ್ದ ಸೆಲ್ವಾರ್‌ ಕಮೀಜ್‌ನಲ್ಲಿಯೇ ನಾನು ಓಡುತ್ತಿದ್ದೆ. ನಾನು ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸಲು ನಿರ್ಧರಿಸಿದ್ದೆ. ಅವಕಾಶಕ್ಕಾಗಿ ಕೋಚ್‌ ಬಳಿ ವಿನಂತಿಸಿಕೊಂಡೆ. ಕೊನೆಗೂ ಕಷ್ಟಪಟ್ಟು ಅವರನ್ನು ಒಪ್ಪಿಸಿದೆ.

ರಾಣಿ ರಾಂಪಾಲ್‌

ಈ ಬಗ್ಗೆ ಕುಟುಂಬದವರಿಗೆ ತಿಳಿಸಿದಾಗ, ‘ಹೆಣ್ಣುಮಕ್ಕಳು ಮನೆಯಲ್ಲಿ ಕೆಲಸ ಮಾಡುತ್ತಾರೆ. ನಾವು ನಿನ್ನನ್ನು ಸ್ಕರ್ಟ್‌‌ನಲ್ಲಿ ಆಡಲು ಬಿಡುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದರು. ನಾನು ಅವರ ಬಳಿ ವಿನಂತಿಸಿಕೊಂಡೆ. ‘ದಯವಿಟ್ಟು ನನಗೆ ಹೋಗಲು ಬಿಡಿ, ನಾನು ಸೋತಿದ್ದೇ ಆದರೆ ನೀವೇಳಿದಂತೆ ಕೇಳುವೆ’ ಎಂದು ಕೇಳಿಕೊಂಡೆ. ಕೊನೆಗೆ ನನ್ನ ಕುಟುಂಬ ಒಲ್ಲದ ಮನಸ್ಸಿನಿಂದಲೇ ನನಗೆ ಆಟವಾಡಲು ಸಮ್ಮತಿ ನೀಡಿತ್ತು.

ಹಾಕಿ ಕೋಚಿಂಗ್‌ ಸೂರ್ಯ ಉದಯಿಸುವ ಮುನ್ನವೇ ಆರಂಭವಾಗುತ್ತಿತ್ತು. ನಾನು ಕೂಡ ಬೆಳಗ್ಗೆ ಬೇಗ ಎದ್ದು ಮೈದಾನಕ್ಕೆ ಹೋಗಬೇಕಾಗುತ್ತಿತ್ತು. ನಮ್ಮ ಮನೆಯಲ್ಲಿ ಗಡಿಯಾರ ಇರಲಿಲ್ಲ. ಹಾಗಾಗಿ ಅಮ್ಮ ಎದ್ದು ಆಕಾಶವನ್ನು ನೋಡಿ ನನ್ನನ್ನು ಎಚ್ಚರಿಸುತ್ತಿದ್ದರು.

ಅಕಾಡೆಮಿಯಲ್ಲಿ ‌ಪ್ರತಿಯೊಬ್ಬ ಆಟಗಾರನು ಅರ್ಧ ಲೀಟರ್‌ ಹಾಲು ತರಬೇಕು ಎಂಬುದು ಕಡ್ಡಾಯವಾಗಿತ್ತು. ನಮ್ಮ ಕುಟುಂಬದಲ್ಲಿ ಕಾಲು ಲೀಟರ್‌ ಹಾಲು ಸಿಗುವುದು ಕಷ್ಟವಾಗಿತ್ತು. ಹಾಗಾಗಿ ನಾನು ಯಾರಿಗೂ ತಿಳಿಯದ ಹಾಗೆ ಸ್ವಲ್ಪ ಹಾಲಿಗೆ ಹೆಚ್ಚು ನೀರನ್ನು ಮಿಶ್ರಣ ಮಾಡಿ ಕುಡಿಯುತ್ತಿದ್ದೆ. ಏಕೆಂದರೆ ನಾನು ಹೇಗಾದರೂ ಮಾಡಿ ಆಟವಾಡಲು ಬಯಸುತ್ತಿದ್ದೆ.

ನನ್ನ ಕೋಚ್‌ ನನಗೆ ಬೆನ್ನೆಲುಬಾಗಿ ನಿಂತಿದ್ದರು. ನನಗಾಗಿ ಅವರು ಹಾಕಿ ಕಿಟ್‌ ಮತ್ತು ಶೂಗಳನ್ನು ಕೊಡಿಸಿದರು. ಅವರ ಕುಟುಂಬದೊಂದಿಗೆ ಬೆರೆಯಲು ಅವಕಾಶ ನೀಡಿದರು. ನನ್ನ ಊಟದ ಅಗತ್ಯಗಳನ್ನು ಅವರೇ ನೋಡಿಕೊಂಡರು. ಕಷ್ಟಪಟ್ಟು ನಾನು ತರಬೇತಿ ಪಡೆಯುತ್ತಿದ್ದೆ. ಒಂದು ದಿನವೂ ತರಬೇತಿಯನ್ನು ತಪ್ಪಿಸುತ್ತಿರಲಿಲ್ಲ.

ನನ್ನ ಮೊದಲ ಸಂಬಳ ಈಗಲೂ ನೆನಪಿದೆ. ಟೂರ್ನಮೆಂಟ್‌ ಒಂದರಲ್ಲಿ ನಾನು 500ರೂ ಗೆದ್ದಿದ್ದೆ. ಆ ಹಣವನ್ನು ಅಪ್ಪನಿಗೆ ಕೊಟ್ಟಿದ್ದೆ. ಅಲ್ಲಿಯವರೆಗೂ ಎಂದೂ ಅಪ್ಪ ಅಷ್ಟೊಂದು ಹಣವನ್ನು ತನ್ನ ಕೈನಲ್ಲಿ ಹಿಡಿದಿರಲಿಲ್ಲ. ‘ಒಂದಲ್ಲಾ ಒಂದು ದಿನ ನಾವು ನಮ್ಮ ಸ್ವಂತ ಮನೆಯನ್ನು ಕಟ್ಟಿಸುತ್ತೇನೆ’ ಎಂದು ಅಂದು ನಾನು ನನ್ನ ಕುಟುಂಬದವರಿಗೆ ಪ್ರಮಾಣ ಮಾಡಿದೆ. ಆ ನಿಟ್ಟಿನಲ್ಲಿ ನನ್ನೆಲ್ಲಾ ಶಕ್ತಿಯನ್ನು ಬಳಸಿ ಎಲ್ಲವನ್ನು ಮಾಡಿದ್ದೇನೆ.

ರಾಣಿ ರಾಂಪಾಲ್‌
PC: Reuters / Bernadett Szabo

ನನ್ನ ರಾಜ್ಯವನ್ನು ಪ್ರತಿನಿಧಿಸಿ ಹಲವಾರು ಚಾಂಪಿಯನ್‌ಶಿಪ್‌ಗಳಲ್ಲಿ ಆಡಿದ್ದ ನನಗೆ, ನನ್ನ 15ನೇ ವಯಸ್ಸಿನಲ್ಲಿ ರಾಷ್ಟ್ರೀಯ ತಂಡಕ್ಕೆ ಸೇರುವಂತೆ ಕರೆ ಬಂದಿತು. ಇಷ್ಟೆಲ್ಲಾ ಅವಕಾಶಗಳು ನನಗೆ ದೊರೆತಿದ್ದರೂ ನನ್ನ ಸಂಬಂಧಿಕರು ಮಾತ್ರ ಯಾವಾಗ ಮದುವೆಯಾಗುತ್ತೀಯಾ? ಎಂದು ಕೇಳುತ್ತಿದ್ದರು. ಆದರೆ ಅಪ್ಪ, ‘ನಿನ್ನ ಮನಸ್ಸಿಗೆ ಇಷ್ಟವಾಗುವವರೆಗೂ ಆಟವಾಡು’ ಎಂದರು. ನನ್ನ ಕುಟುಂಬದ ಬೆಂಬಲದೊಂದಿಗೆ ನಾನು ಆಟದ ಕಡೆ ಗಮನ ಹರಿಸಿದೆ. ಅಂತಿಮವಾಗಿ ನಾನು ಭಾರತದ ಮಹಿಳಾ ಹಾಕಿ ತಂಡದ ನಾಯಕಿಯಾಗಿದ್ದೇನೆ.

ಇದಾದ ಸ್ವಲ್ಪ ಸಮಯದ ನಂತರ ಅಪ್ಪನೊಂದಿಗೆ ಅವರ ಸ್ನೇಹಿತರೊಬ್ಬರ ಮನೆಗೆ ಹೋಗಿದ್ದೇವು. ಅವರು ತಮ್ಮ ಮೊಮ್ಮಗಳನ್ನು ಕರೆದು ನನಗೆ ‘ಅವಳು ನಿನ್ನಿಂದ ಸ್ಫೂರ್ತಿ ಪಡೆದಿದ್ದಾಳೆ. ಅವಳೂ ಹಾಕಿ ಆಟಗಾರಳಾಗಲು ಬಯಸುತ್ತಾಳೆ’ ಎಂದರು. ನನಗೆ ತುಂಬಾ ಸಂತೋಷವಾಯಿತು. ದುಖಃ ಒತ್ತರಿಸಿ ಬಂತು. ಕಣ್ಣೀರು ತಡೆಯಲಾಗಲಿಲ್ಲ.

2017ರಲ್ಲಿ, ಅಂತಿಮವಾಗಿ ನಾನು ನನ್ನ ಕುಟುಂಬಕ್ಕೆ ನೀಡಿದ್ದ ಭರವಸೆ ಈಡೇರಿಸಿದೆ. ಅವರಿಗಾಗಿ ಸ್ವಂತ ಮನೆಯನ್ನು ಖರೀದಿಸಿದೆ. ಆ ದಿನ ನಾವು ಒಬ್ಬರನ್ನೊಬ್ಬರು ಬಿಗಿದಪ್ಪಿಕೊಂಡು ಒಟ್ಟಿಗೆ ಅಳುತ್ತಿದ್ದೆವು.

ಇದು ಇಲ್ಲಿಗೆ ಮುಗಿದಿಲ್ಲ. ನನ್ನ ಕೋಚ್‌ ಟೊಕಿಯೋ ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಕನಸು ಕಂಡಿದ್ದರು. ಈ ವರ್ಷ ನಾನು ಆ ಕನಸನ್ನು ನನಸು ಮಾಡಲು ತೀರ್ಮಾನಿಸಿದ್ದೇನೆ.

ಕೃಪೆ: ಹ್ಯೂಮನ್ಸ್‌ ಆಫ್‌ ಬಾಂಬೆ (Humans of Bombay)

ರಾಣಿ ರಾಂಪಾಲ್‌ ಪರಿಚಯ:

2010ರ ವಿಶ್ವಕಪ್‌ನಲ್ಲಿ ಭಾಗವಹಿಸಿದ ರಾಷ್ಟ್ರೀಯ ತಂಡದ ಅತ್ಯಂತ ಕಿರಿಯ ಆಟಗಾರ್ತಿ, ಪ್ರಸ್ತುತ ಭಾರತದ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್‌ ಜನಿಸಿದ್ದು 1994 ಡಿಸೆಂಬರ್‌ 4ರಂದು. ಹರಿಯಾಣ ರಾಜ್ಯದ ಕುರುಕ್ಷೇತ್ರ ಜಿಲ್ಲೆ, ಶಹಾಬಾದ್‌ ಮಾರ್ಕಂಡ ಇವರ ಹುಟ್ಟೂರು. ತನ್ನ 15ನೇ ವಯಸ್ಸಿಗೆ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪಾರ್ದಾಪಣೆ ಮಾಡಿದ ರಾಣಿ ಈವರೆಗೂ ಸುಮಾರು 212 ಪಂದ್ಯಗಳಲ್ಲಿ ಆಡಿದ್ದಾರೆ. ಸುಮಾರು 134ಗೋಲುಗಳನ್ನು ಗಳಿಸಿದ್ದಾರೆ. ಸ್ಟ್ರೈಕರ್‌ ಆಗಿಯೂ ಪ್ರಸಿದ್ಧರಾಗಿರುವ ಇವರಿಗೆ 2020ರಲ್ಲಿ ಭಾರತ ಸರ್ಕಾರ ಪದ್ಮಶ್ರೀ ನೀಡಿ ಗೌರವಿಸಿದೆ.

2013ರಲ್ಲಿ ನಡೆದ ಜೂನಿಯರ್‌ ವರ್ಲ್ಡ್‌ ಕಪ್‌ನಲ್ಲಿ ಇವರಿದ್ದ ಮಹಿಳಾ ತಂಡವು ಕಂಚು, 2018ರಲ್ಲಿ ಜಕರ್ತಾದಲ್ಲಿ ನಡೆದ ಏಷ್ಯನ್‌ ಕಪ್‌ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಸೇರಿದಂತೆ ಹಲವು ಪದಕಗಳನ್ನು ಗೆದ್ದಿದ್ದಾರೆ. ಪ್ರಸ್ತುತ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ರಾಣಿ ನಾಯಕತ್ವದ ಮಹಿಳಾ ಹಾಕಿ ತಂಡವು ಸೆಮಿಫೈನಲ್‌ ತಲುಪಿ ಇತಿಹಾಸ ನಿರ್ಮಿಸಿದೆ.


ಇದನ್ನೂ ಓದಿ; ಒಂದೇ ಒಲಂಪಿಕ್ಸ್‌ನಲ್ಲಿ 7 ಪದಕ ಗೆದ್ದ ಮೊದಲ ಮಹಿಳೆ ಎನಿಸಿಕೊಂಡ ಎಮ್ಮ ಮಕೀನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...