Homeಮುಖಪುಟಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ, ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು ಎಂದು ಕೂಗುತ್ತಿತ್ತು.

- Advertisement -
- Advertisement -

ಜಮ್ಮುವಿನಲ್ಲಿರುವ ವಕೀಲೆ ದೀಪಿಕಾ ಸಿಂಗ್ ರಾಜಾವತ್, ಮೈಕ್ರೊ ಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನಲ್ಲಿ ಕಾರ್ಟೂನ್ ಒಂದನ್ನು ಪೋಸ್ಟ್ ಮಾಡಿದ ನಂತರ, ಪುರುಷರ ಗುಂಪೊಂದು ಮಂಗಳವಾರ ತಡರಾತ್ರಿ ಅವರ ನಿವಾಸದ ಹೊರಗೆ ಘೋಷಣೆಗಳನ್ನು ಕೂಗುತ್ತಾ ಜಮಾಯಿಸಿತ್ತು ಎಂದು ವರದಿಯಾಗಿದೆ.

“ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ ನನ್ನನ್ನು ಸಾಯಿಸುವುದಾಗಿ ಬೆದರಿಕೆ ಹಾಕಿತು. ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು” ಎಂದು ಕೂಗುತ್ತಿದ್ದರು ಎಂದು ದೀಪಿಕಾ ಸಿಂಗ್ ನ್ಯೂಸ್‌ಕ್ಲಿಕ್‌ಗೆ ತಿಳಿಸಿದ್ದಾರೆ.

“ಕೆಲವರು ನನ್ನ ಹೆಸರನ್ನು ಕೂಗಿದಾಗ ರಾತ್ರಿ 12.30 ಆಗಿತ್ತು. ನಾನು ಸಾವಿಗೆ ಹೆದರುತ್ತಿದ್ದೆ. ನಾನು ನನ್ನ ಪಿಎಸ್‌ಒಗಳನ್ನು ಎಚ್ಚರಿಸಿದೆ. ನಂತರ ತಕ್ಷಣ ಪ್ರತಿಕ್ರಿಯಿಸಿದ ಐಜಿಗೆ ಫೋನ್ ಮಾಡಿದೆ. ಆಗ ಕೆಲವು ಪೊಲೀಸರು ಬಂದು ಜನಸಮೂಹವನ್ನು ಚದುರಿಸಿದರು” ಎಂದು ಅವರು ವಿವರಿಸಿದರು.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ನವೀನ್‌ಗೆ ಜಾಮೀನು

“ವ್ಯಂಗ್ಯ” ಎಂಬ ಶೀರ್ಷಿಕೆಯೊಂದಿಗೆ ದೀಪಿಕಾ ಸಿಂಗ್ ಪೋಸ್ಟ್ ಮಾಡಿದ ವ್ಯಂಗ್ಯ ಚಿತ್ರವು ಎರಡು ವಿರೋಧಾಭಾಸದ ದೃಶ್ಯಗಳನ್ನು ಸಾರಾಸಗಟಾಗಿ ತೋರಿಸಿದೆ. ಒಂದು ಚಿತ್ರದಲ್ಲಿ, ನವರಾತ್ರಿಯ ಒಂಬತ್ತು ದಿನಗಳ ಹಿಂದೂ ಹಬ್ಬದ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಸ್ತ್ರೀ ಹಿಂದೂ ದೇವತೆಯ ಪಾದಗಳನ್ನು ಸ್ಪರ್ಶಿಸುತ್ತಾನೆ. ಇತರದ  ಚಿತ್ರದಲ್ಲಿ, “ಇತರೆ ದಿನಗಳು” ಎಂಬ ಶೀರ್ಷಿಕೆಯೊಂದಿಗೆ, ಅದೇ ಪುರುಷನು ಮಹಿಳೆಯ ಎರಡೂ ಕಾಲುಗಳನ್ನು ಆಕ್ರಮಣಕಾರಿಯಾಗಿ ಹಿಡಿದುಕೊಂಡಿರುತ್ತಾನೆ. ಇದು ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಧ್ವನಿಸುತ್ತದೆ.

ಇದನ್ನೂ ಓದಿ: ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ಈ ಕಾರ್ಟೂನ್ ಹಿಂದೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಿ, ಇದರ ಪರಿಣಾಮವಾಗಿ ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ದೀಪಿಕಾ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಅಂದಿನಿಂದ, ಅವರು ಮತ್ತು ಅವರ ಕುಟುಂಬವು ಕಾರ್ಟೂನ್ ತೆಗೆದುಹಾಕಿ ಮತ್ತು ಕ್ಷಮೆಯಾಚಿಸುವಂತೆ ಬೆದರಿಕೆ ಹಾಕುವ ಕರೆಗಳನ್ನು ಸ್ವೀಕರಿಸುತ್ತಿದೆ ಎಂದು ದೀಪಿಕಾ ಸಿಂಗ್ ಹೇಳಿದ್ದಾರೆ.

ಇವುಗಳಿಗೆ ಪ್ರತಿಕ್ರಿಯಿಸಿದ ಅವರು “ಇಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲವೇ? ಭಾರತದಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲ ಎಂದು ಸಾಬೀತುಪಡಿಸಿದರೆ ನಾನು ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆ. ನಾನು ವ್ಯಂಗ್ಯಚಿತ್ರವನ್ನು ತೆಗೆದುಹಾಕಿಲ್ಲ. ಏಕೆಂದರೆ ಅದು ಧಾರ್ಮಿಕ ಭಾವನೆಗಳನ್ನು ನೋಯಿಸುವುದಿಲ್ಲ. ಆದರೆ ಮಹಿಳೆಯರ ಬಗ್ಗೆ ಸಮಾಜದ ಬೂಟಾಟಿಕೆಗಳನ್ನು ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

“ಈ ಜನಸಮೂಹ ಬಲಪಂಥೀಯ ಹಿಂದೂ ಗುಂಪುಗಳಿಗೆ ಸಂಬಂಧಿಸಿದವರು ಎಂದು ದೀಪಿಕಾ ಸಿಂಗ್ ಗುರುತಿಸಿದ್ದು, ಇದು ನನ್ನನ್ನು ಶಮನಗೊಳಿಸುವ ಪ್ರಯತ್ನವಾಗಿದ್ದು, ಆ ಸಮಯದಲ್ಲಿ, ನನಗೆ ಗೌರಿ ಲಂಕೇಶ್ ನೆನಪಾದರು. ಅವರ ಚಿತ್ರ ನನ್ನ ಮನಸ್ಸಿನಲ್ಲಿ ಸುಳಿಯುತ್ತಲೇ ಇತ್ತು. ನಾನು ನಡುಗುತ್ತಿದ್ದೆ. ಪತ್ರಕರ್ತೆ ಗೌರಿ ಲಂಕೇಶ್ ಅವರು ಬಲಪಂಥೀಯರನ್ನು ಟೀಕಿಸಿದ್ದರು ಎಂಬ ಆರೋಪದ ಮೇಲೆ ಅವರನ್ನು ಸೆಪ್ಟೆಂಬರ್ 5, 2017 ರಂದು ಗುಂಡಿಕ್ಕಿ ಕೊಲ್ಲಲಾಯಿತು. ಮೋದಿ ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ನಾನು ಧ್ವನಿ ಎತ್ತಿದ್ದರಿಂದ ನನ್ನ ಮೇಲೆ ಇಂತಹ ಬೆದರಿಕೆಗಳು ಸಹಜವಾಗಿವೆ” ಎಂದು ಹೇಳಿದರು.

#IStandWithDeepikaRajawat ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿರುವ ಬಾಲಿವುಡ್ ನಟರು, ನಿರ್ದೇಶಕರು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವಾರು ವಿಭಾಗಗಳಿಂದ ದೀಪಿಕಾ ಸಿಂಗ್ ಅವರಿಗೆ ಹೆಚ್ಚಿನ ಬೆಂಬಲ ಸೂಚಿಸಲಾಗಿದೆ.

ಈ ಹಿಂದೆಯೂ ಕೂಡ ಅತ್ಯಾಚಾರ ಪ್ರಕರಣವೊಂದರಲ್ಲಿ ಸಂತ್ರಸ್ತರ ಪರವಾಗಿ ಹಾಜರಾಗಿದ್ದಕ್ಕೆ ಇದೇ ರೀತಿಯ ತೊಂದರೆಗಳನ್ನು ಇವರು ಅನುಭವಿಸಬೇಕಾಯಿತು.


ಇದನ್ನೂ ಓದಿ: ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...