Homeಮುಖಪುಟಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ, ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು ಎಂದು ಕೂಗುತ್ತಿತ್ತು.

- Advertisement -
- Advertisement -

ಜಮ್ಮುವಿನಲ್ಲಿರುವ ವಕೀಲೆ ದೀಪಿಕಾ ಸಿಂಗ್ ರಾಜಾವತ್, ಮೈಕ್ರೊ ಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನಲ್ಲಿ ಕಾರ್ಟೂನ್ ಒಂದನ್ನು ಪೋಸ್ಟ್ ಮಾಡಿದ ನಂತರ, ಪುರುಷರ ಗುಂಪೊಂದು ಮಂಗಳವಾರ ತಡರಾತ್ರಿ ಅವರ ನಿವಾಸದ ಹೊರಗೆ ಘೋಷಣೆಗಳನ್ನು ಕೂಗುತ್ತಾ ಜಮಾಯಿಸಿತ್ತು ಎಂದು ವರದಿಯಾಗಿದೆ.

“ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ ನನ್ನನ್ನು ಸಾಯಿಸುವುದಾಗಿ ಬೆದರಿಕೆ ಹಾಕಿತು. ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು” ಎಂದು ಕೂಗುತ್ತಿದ್ದರು ಎಂದು ದೀಪಿಕಾ ಸಿಂಗ್ ನ್ಯೂಸ್‌ಕ್ಲಿಕ್‌ಗೆ ತಿಳಿಸಿದ್ದಾರೆ.

“ಕೆಲವರು ನನ್ನ ಹೆಸರನ್ನು ಕೂಗಿದಾಗ ರಾತ್ರಿ 12.30 ಆಗಿತ್ತು. ನಾನು ಸಾವಿಗೆ ಹೆದರುತ್ತಿದ್ದೆ. ನಾನು ನನ್ನ ಪಿಎಸ್‌ಒಗಳನ್ನು ಎಚ್ಚರಿಸಿದೆ. ನಂತರ ತಕ್ಷಣ ಪ್ರತಿಕ್ರಿಯಿಸಿದ ಐಜಿಗೆ ಫೋನ್ ಮಾಡಿದೆ. ಆಗ ಕೆಲವು ಪೊಲೀಸರು ಬಂದು ಜನಸಮೂಹವನ್ನು ಚದುರಿಸಿದರು” ಎಂದು ಅವರು ವಿವರಿಸಿದರು.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ನವೀನ್‌ಗೆ ಜಾಮೀನು

“ವ್ಯಂಗ್ಯ” ಎಂಬ ಶೀರ್ಷಿಕೆಯೊಂದಿಗೆ ದೀಪಿಕಾ ಸಿಂಗ್ ಪೋಸ್ಟ್ ಮಾಡಿದ ವ್ಯಂಗ್ಯ ಚಿತ್ರವು ಎರಡು ವಿರೋಧಾಭಾಸದ ದೃಶ್ಯಗಳನ್ನು ಸಾರಾಸಗಟಾಗಿ ತೋರಿಸಿದೆ. ಒಂದು ಚಿತ್ರದಲ್ಲಿ, ನವರಾತ್ರಿಯ ಒಂಬತ್ತು ದಿನಗಳ ಹಿಂದೂ ಹಬ್ಬದ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಸ್ತ್ರೀ ಹಿಂದೂ ದೇವತೆಯ ಪಾದಗಳನ್ನು ಸ್ಪರ್ಶಿಸುತ್ತಾನೆ. ಇತರದ  ಚಿತ್ರದಲ್ಲಿ, “ಇತರೆ ದಿನಗಳು” ಎಂಬ ಶೀರ್ಷಿಕೆಯೊಂದಿಗೆ, ಅದೇ ಪುರುಷನು ಮಹಿಳೆಯ ಎರಡೂ ಕಾಲುಗಳನ್ನು ಆಕ್ರಮಣಕಾರಿಯಾಗಿ ಹಿಡಿದುಕೊಂಡಿರುತ್ತಾನೆ. ಇದು ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಧ್ವನಿಸುತ್ತದೆ.

ಇದನ್ನೂ ಓದಿ: ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ಈ ಕಾರ್ಟೂನ್ ಹಿಂದೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಿ, ಇದರ ಪರಿಣಾಮವಾಗಿ ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ದೀಪಿಕಾ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಅಂದಿನಿಂದ, ಅವರು ಮತ್ತು ಅವರ ಕುಟುಂಬವು ಕಾರ್ಟೂನ್ ತೆಗೆದುಹಾಕಿ ಮತ್ತು ಕ್ಷಮೆಯಾಚಿಸುವಂತೆ ಬೆದರಿಕೆ ಹಾಕುವ ಕರೆಗಳನ್ನು ಸ್ವೀಕರಿಸುತ್ತಿದೆ ಎಂದು ದೀಪಿಕಾ ಸಿಂಗ್ ಹೇಳಿದ್ದಾರೆ.

ಇವುಗಳಿಗೆ ಪ್ರತಿಕ್ರಿಯಿಸಿದ ಅವರು “ಇಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲವೇ? ಭಾರತದಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲ ಎಂದು ಸಾಬೀತುಪಡಿಸಿದರೆ ನಾನು ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆ. ನಾನು ವ್ಯಂಗ್ಯಚಿತ್ರವನ್ನು ತೆಗೆದುಹಾಕಿಲ್ಲ. ಏಕೆಂದರೆ ಅದು ಧಾರ್ಮಿಕ ಭಾವನೆಗಳನ್ನು ನೋಯಿಸುವುದಿಲ್ಲ. ಆದರೆ ಮಹಿಳೆಯರ ಬಗ್ಗೆ ಸಮಾಜದ ಬೂಟಾಟಿಕೆಗಳನ್ನು ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

“ಈ ಜನಸಮೂಹ ಬಲಪಂಥೀಯ ಹಿಂದೂ ಗುಂಪುಗಳಿಗೆ ಸಂಬಂಧಿಸಿದವರು ಎಂದು ದೀಪಿಕಾ ಸಿಂಗ್ ಗುರುತಿಸಿದ್ದು, ಇದು ನನ್ನನ್ನು ಶಮನಗೊಳಿಸುವ ಪ್ರಯತ್ನವಾಗಿದ್ದು, ಆ ಸಮಯದಲ್ಲಿ, ನನಗೆ ಗೌರಿ ಲಂಕೇಶ್ ನೆನಪಾದರು. ಅವರ ಚಿತ್ರ ನನ್ನ ಮನಸ್ಸಿನಲ್ಲಿ ಸುಳಿಯುತ್ತಲೇ ಇತ್ತು. ನಾನು ನಡುಗುತ್ತಿದ್ದೆ. ಪತ್ರಕರ್ತೆ ಗೌರಿ ಲಂಕೇಶ್ ಅವರು ಬಲಪಂಥೀಯರನ್ನು ಟೀಕಿಸಿದ್ದರು ಎಂಬ ಆರೋಪದ ಮೇಲೆ ಅವರನ್ನು ಸೆಪ್ಟೆಂಬರ್ 5, 2017 ರಂದು ಗುಂಡಿಕ್ಕಿ ಕೊಲ್ಲಲಾಯಿತು. ಮೋದಿ ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ನಾನು ಧ್ವನಿ ಎತ್ತಿದ್ದರಿಂದ ನನ್ನ ಮೇಲೆ ಇಂತಹ ಬೆದರಿಕೆಗಳು ಸಹಜವಾಗಿವೆ” ಎಂದು ಹೇಳಿದರು.

#IStandWithDeepikaRajawat ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿರುವ ಬಾಲಿವುಡ್ ನಟರು, ನಿರ್ದೇಶಕರು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವಾರು ವಿಭಾಗಗಳಿಂದ ದೀಪಿಕಾ ಸಿಂಗ್ ಅವರಿಗೆ ಹೆಚ್ಚಿನ ಬೆಂಬಲ ಸೂಚಿಸಲಾಗಿದೆ.

ಈ ಹಿಂದೆಯೂ ಕೂಡ ಅತ್ಯಾಚಾರ ಪ್ರಕರಣವೊಂದರಲ್ಲಿ ಸಂತ್ರಸ್ತರ ಪರವಾಗಿ ಹಾಜರಾಗಿದ್ದಕ್ಕೆ ಇದೇ ರೀತಿಯ ತೊಂದರೆಗಳನ್ನು ಇವರು ಅನುಭವಿಸಬೇಕಾಯಿತು.


ಇದನ್ನೂ ಓದಿ: ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...