Homeಮುಖಪುಟಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ, ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು ಎಂದು ಕೂಗುತ್ತಿತ್ತು.

- Advertisement -
- Advertisement -

ಜಮ್ಮುವಿನಲ್ಲಿರುವ ವಕೀಲೆ ದೀಪಿಕಾ ಸಿಂಗ್ ರಾಜಾವತ್, ಮೈಕ್ರೊ ಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನಲ್ಲಿ ಕಾರ್ಟೂನ್ ಒಂದನ್ನು ಪೋಸ್ಟ್ ಮಾಡಿದ ನಂತರ, ಪುರುಷರ ಗುಂಪೊಂದು ಮಂಗಳವಾರ ತಡರಾತ್ರಿ ಅವರ ನಿವಾಸದ ಹೊರಗೆ ಘೋಷಣೆಗಳನ್ನು ಕೂಗುತ್ತಾ ಜಮಾಯಿಸಿತ್ತು ಎಂದು ವರದಿಯಾಗಿದೆ.

“ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ ನನ್ನನ್ನು ಸಾಯಿಸುವುದಾಗಿ ಬೆದರಿಕೆ ಹಾಕಿತು. ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು” ಎಂದು ಕೂಗುತ್ತಿದ್ದರು ಎಂದು ದೀಪಿಕಾ ಸಿಂಗ್ ನ್ಯೂಸ್‌ಕ್ಲಿಕ್‌ಗೆ ತಿಳಿಸಿದ್ದಾರೆ.

“ಕೆಲವರು ನನ್ನ ಹೆಸರನ್ನು ಕೂಗಿದಾಗ ರಾತ್ರಿ 12.30 ಆಗಿತ್ತು. ನಾನು ಸಾವಿಗೆ ಹೆದರುತ್ತಿದ್ದೆ. ನಾನು ನನ್ನ ಪಿಎಸ್‌ಒಗಳನ್ನು ಎಚ್ಚರಿಸಿದೆ. ನಂತರ ತಕ್ಷಣ ಪ್ರತಿಕ್ರಿಯಿಸಿದ ಐಜಿಗೆ ಫೋನ್ ಮಾಡಿದೆ. ಆಗ ಕೆಲವು ಪೊಲೀಸರು ಬಂದು ಜನಸಮೂಹವನ್ನು ಚದುರಿಸಿದರು” ಎಂದು ಅವರು ವಿವರಿಸಿದರು.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ನವೀನ್‌ಗೆ ಜಾಮೀನು

“ವ್ಯಂಗ್ಯ” ಎಂಬ ಶೀರ್ಷಿಕೆಯೊಂದಿಗೆ ದೀಪಿಕಾ ಸಿಂಗ್ ಪೋಸ್ಟ್ ಮಾಡಿದ ವ್ಯಂಗ್ಯ ಚಿತ್ರವು ಎರಡು ವಿರೋಧಾಭಾಸದ ದೃಶ್ಯಗಳನ್ನು ಸಾರಾಸಗಟಾಗಿ ತೋರಿಸಿದೆ. ಒಂದು ಚಿತ್ರದಲ್ಲಿ, ನವರಾತ್ರಿಯ ಒಂಬತ್ತು ದಿನಗಳ ಹಿಂದೂ ಹಬ್ಬದ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಸ್ತ್ರೀ ಹಿಂದೂ ದೇವತೆಯ ಪಾದಗಳನ್ನು ಸ್ಪರ್ಶಿಸುತ್ತಾನೆ. ಇತರದ  ಚಿತ್ರದಲ್ಲಿ, “ಇತರೆ ದಿನಗಳು” ಎಂಬ ಶೀರ್ಷಿಕೆಯೊಂದಿಗೆ, ಅದೇ ಪುರುಷನು ಮಹಿಳೆಯ ಎರಡೂ ಕಾಲುಗಳನ್ನು ಆಕ್ರಮಣಕಾರಿಯಾಗಿ ಹಿಡಿದುಕೊಂಡಿರುತ್ತಾನೆ. ಇದು ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಧ್ವನಿಸುತ್ತದೆ.

ಇದನ್ನೂ ಓದಿ: ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ಈ ಕಾರ್ಟೂನ್ ಹಿಂದೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಿ, ಇದರ ಪರಿಣಾಮವಾಗಿ ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ದೀಪಿಕಾ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಅಂದಿನಿಂದ, ಅವರು ಮತ್ತು ಅವರ ಕುಟುಂಬವು ಕಾರ್ಟೂನ್ ತೆಗೆದುಹಾಕಿ ಮತ್ತು ಕ್ಷಮೆಯಾಚಿಸುವಂತೆ ಬೆದರಿಕೆ ಹಾಕುವ ಕರೆಗಳನ್ನು ಸ್ವೀಕರಿಸುತ್ತಿದೆ ಎಂದು ದೀಪಿಕಾ ಸಿಂಗ್ ಹೇಳಿದ್ದಾರೆ.

ಇವುಗಳಿಗೆ ಪ್ರತಿಕ್ರಿಯಿಸಿದ ಅವರು “ಇಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲವೇ? ಭಾರತದಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲ ಎಂದು ಸಾಬೀತುಪಡಿಸಿದರೆ ನಾನು ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆ. ನಾನು ವ್ಯಂಗ್ಯಚಿತ್ರವನ್ನು ತೆಗೆದುಹಾಕಿಲ್ಲ. ಏಕೆಂದರೆ ಅದು ಧಾರ್ಮಿಕ ಭಾವನೆಗಳನ್ನು ನೋಯಿಸುವುದಿಲ್ಲ. ಆದರೆ ಮಹಿಳೆಯರ ಬಗ್ಗೆ ಸಮಾಜದ ಬೂಟಾಟಿಕೆಗಳನ್ನು ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

“ಈ ಜನಸಮೂಹ ಬಲಪಂಥೀಯ ಹಿಂದೂ ಗುಂಪುಗಳಿಗೆ ಸಂಬಂಧಿಸಿದವರು ಎಂದು ದೀಪಿಕಾ ಸಿಂಗ್ ಗುರುತಿಸಿದ್ದು, ಇದು ನನ್ನನ್ನು ಶಮನಗೊಳಿಸುವ ಪ್ರಯತ್ನವಾಗಿದ್ದು, ಆ ಸಮಯದಲ್ಲಿ, ನನಗೆ ಗೌರಿ ಲಂಕೇಶ್ ನೆನಪಾದರು. ಅವರ ಚಿತ್ರ ನನ್ನ ಮನಸ್ಸಿನಲ್ಲಿ ಸುಳಿಯುತ್ತಲೇ ಇತ್ತು. ನಾನು ನಡುಗುತ್ತಿದ್ದೆ. ಪತ್ರಕರ್ತೆ ಗೌರಿ ಲಂಕೇಶ್ ಅವರು ಬಲಪಂಥೀಯರನ್ನು ಟೀಕಿಸಿದ್ದರು ಎಂಬ ಆರೋಪದ ಮೇಲೆ ಅವರನ್ನು ಸೆಪ್ಟೆಂಬರ್ 5, 2017 ರಂದು ಗುಂಡಿಕ್ಕಿ ಕೊಲ್ಲಲಾಯಿತು. ಮೋದಿ ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ನಾನು ಧ್ವನಿ ಎತ್ತಿದ್ದರಿಂದ ನನ್ನ ಮೇಲೆ ಇಂತಹ ಬೆದರಿಕೆಗಳು ಸಹಜವಾಗಿವೆ” ಎಂದು ಹೇಳಿದರು.

#IStandWithDeepikaRajawat ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿರುವ ಬಾಲಿವುಡ್ ನಟರು, ನಿರ್ದೇಶಕರು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವಾರು ವಿಭಾಗಗಳಿಂದ ದೀಪಿಕಾ ಸಿಂಗ್ ಅವರಿಗೆ ಹೆಚ್ಚಿನ ಬೆಂಬಲ ಸೂಚಿಸಲಾಗಿದೆ.

ಈ ಹಿಂದೆಯೂ ಕೂಡ ಅತ್ಯಾಚಾರ ಪ್ರಕರಣವೊಂದರಲ್ಲಿ ಸಂತ್ರಸ್ತರ ಪರವಾಗಿ ಹಾಜರಾಗಿದ್ದಕ್ಕೆ ಇದೇ ರೀತಿಯ ತೊಂದರೆಗಳನ್ನು ಇವರು ಅನುಭವಿಸಬೇಕಾಯಿತು.


ಇದನ್ನೂ ಓದಿ: ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...