Homeಮುಖಪುಟಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಗೌರಿ ಲಂಕೇಶರಂತೆ ಈಗ ನನ್ನನ್ನೂ ಕೊಲ್ಲಬಹುದು ಎಂದು ಭಯವಾಗಿತ್ತು: ವಕೀಲೆ ದೀಪಿಕಾ ಸಿಂಗ್

ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ, ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು ಎಂದು ಕೂಗುತ್ತಿತ್ತು.

- Advertisement -
- Advertisement -

ಜಮ್ಮುವಿನಲ್ಲಿರುವ ವಕೀಲೆ ದೀಪಿಕಾ ಸಿಂಗ್ ರಾಜಾವತ್, ಮೈಕ್ರೊ ಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನಲ್ಲಿ ಕಾರ್ಟೂನ್ ಒಂದನ್ನು ಪೋಸ್ಟ್ ಮಾಡಿದ ನಂತರ, ಪುರುಷರ ಗುಂಪೊಂದು ಮಂಗಳವಾರ ತಡರಾತ್ರಿ ಅವರ ನಿವಾಸದ ಹೊರಗೆ ಘೋಷಣೆಗಳನ್ನು ಕೂಗುತ್ತಾ ಜಮಾಯಿಸಿತ್ತು ಎಂದು ವರದಿಯಾಗಿದೆ.

“ಜನಸಮೂಹವೊಂದು ನನ್ನ ನಿವಾಸದ ಹೊರಗೆ ಜಮಾಯಿಸಿ, ಘೋಷಣೆಗಳನ್ನು ಕೂಗುತ್ತಾ ನನ್ನನ್ನು ಸಾಯಿಸುವುದಾಗಿ ಬೆದರಿಕೆ ಹಾಕಿತು. ದೀಪಿಕಾ ನಿಮ್ಮ ಸಮಾಧಿಯನ್ನು ಜಮ್ಮು ಮತ್ತು ಕಾಶ್ಮೀರದ ಭೂಮಿಯಲ್ಲಿ ಅಗೆಯಲಾಗುವುದು” ಎಂದು ಕೂಗುತ್ತಿದ್ದರು ಎಂದು ದೀಪಿಕಾ ಸಿಂಗ್ ನ್ಯೂಸ್‌ಕ್ಲಿಕ್‌ಗೆ ತಿಳಿಸಿದ್ದಾರೆ.

“ಕೆಲವರು ನನ್ನ ಹೆಸರನ್ನು ಕೂಗಿದಾಗ ರಾತ್ರಿ 12.30 ಆಗಿತ್ತು. ನಾನು ಸಾವಿಗೆ ಹೆದರುತ್ತಿದ್ದೆ. ನಾನು ನನ್ನ ಪಿಎಸ್‌ಒಗಳನ್ನು ಎಚ್ಚರಿಸಿದೆ. ನಂತರ ತಕ್ಷಣ ಪ್ರತಿಕ್ರಿಯಿಸಿದ ಐಜಿಗೆ ಫೋನ್ ಮಾಡಿದೆ. ಆಗ ಕೆಲವು ಪೊಲೀಸರು ಬಂದು ಜನಸಮೂಹವನ್ನು ಚದುರಿಸಿದರು” ಎಂದು ಅವರು ವಿವರಿಸಿದರು.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿ ನವೀನ್‌ಗೆ ಜಾಮೀನು

“ವ್ಯಂಗ್ಯ” ಎಂಬ ಶೀರ್ಷಿಕೆಯೊಂದಿಗೆ ದೀಪಿಕಾ ಸಿಂಗ್ ಪೋಸ್ಟ್ ಮಾಡಿದ ವ್ಯಂಗ್ಯ ಚಿತ್ರವು ಎರಡು ವಿರೋಧಾಭಾಸದ ದೃಶ್ಯಗಳನ್ನು ಸಾರಾಸಗಟಾಗಿ ತೋರಿಸಿದೆ. ಒಂದು ಚಿತ್ರದಲ್ಲಿ, ನವರಾತ್ರಿಯ ಒಂಬತ್ತು ದಿನಗಳ ಹಿಂದೂ ಹಬ್ಬದ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಸ್ತ್ರೀ ಹಿಂದೂ ದೇವತೆಯ ಪಾದಗಳನ್ನು ಸ್ಪರ್ಶಿಸುತ್ತಾನೆ. ಇತರದ  ಚಿತ್ರದಲ್ಲಿ, “ಇತರೆ ದಿನಗಳು” ಎಂಬ ಶೀರ್ಷಿಕೆಯೊಂದಿಗೆ, ಅದೇ ಪುರುಷನು ಮಹಿಳೆಯ ಎರಡೂ ಕಾಲುಗಳನ್ನು ಆಕ್ರಮಣಕಾರಿಯಾಗಿ ಹಿಡಿದುಕೊಂಡಿರುತ್ತಾನೆ. ಇದು ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಧ್ವನಿಸುತ್ತದೆ.

ಇದನ್ನೂ ಓದಿ: ಕಟೀಲ್ ವಿರುದ್ಧ ಟೀಕಾಸ್ತ್ರ: ಸಿದ್ದರಾಮಯ್ಯ ಕಾಂಗ್ರೆಸ್ ’ವಿದೂಷಕ’ ಎಂದ ಬಿಜೆಪಿ!

ಈ ಕಾರ್ಟೂನ್ ಹಿಂದೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಿ, ಇದರ ಪರಿಣಾಮವಾಗಿ ಸಾಮಾಜಿಕ ಮಾಧ್ಯಮದಲ್ಲಿ ಕೆಲವರು ದೀಪಿಕಾ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು. ಅಂದಿನಿಂದ, ಅವರು ಮತ್ತು ಅವರ ಕುಟುಂಬವು ಕಾರ್ಟೂನ್ ತೆಗೆದುಹಾಕಿ ಮತ್ತು ಕ್ಷಮೆಯಾಚಿಸುವಂತೆ ಬೆದರಿಕೆ ಹಾಕುವ ಕರೆಗಳನ್ನು ಸ್ವೀಕರಿಸುತ್ತಿದೆ ಎಂದು ದೀಪಿಕಾ ಸಿಂಗ್ ಹೇಳಿದ್ದಾರೆ.

ಇವುಗಳಿಗೆ ಪ್ರತಿಕ್ರಿಯಿಸಿದ ಅವರು “ಇಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲವೇ? ಭಾರತದಲ್ಲಿ ಅತ್ಯಾಚಾರಗಳು ನಡೆಯುವುದಿಲ್ಲ ಎಂದು ಸಾಬೀತುಪಡಿಸಿದರೆ ನಾನು ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆ. ನಾನು ವ್ಯಂಗ್ಯಚಿತ್ರವನ್ನು ತೆಗೆದುಹಾಕಿಲ್ಲ. ಏಕೆಂದರೆ ಅದು ಧಾರ್ಮಿಕ ಭಾವನೆಗಳನ್ನು ನೋಯಿಸುವುದಿಲ್ಲ. ಆದರೆ ಮಹಿಳೆಯರ ಬಗ್ಗೆ ಸಮಾಜದ ಬೂಟಾಟಿಕೆಗಳನ್ನು ಎತ್ತಿ ತೋರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೀದಿ ಅಲೆಯುತ್ತಿದ್ದವ ಬಿಜೆಪಿ ರಾಜ್ಯಾಧ್ಯಕ್ಷ- ಸಿದ್ದರಾಮಯ್ಯ ವ್ಯಂಗ್ಯ

“ಈ ಜನಸಮೂಹ ಬಲಪಂಥೀಯ ಹಿಂದೂ ಗುಂಪುಗಳಿಗೆ ಸಂಬಂಧಿಸಿದವರು ಎಂದು ದೀಪಿಕಾ ಸಿಂಗ್ ಗುರುತಿಸಿದ್ದು, ಇದು ನನ್ನನ್ನು ಶಮನಗೊಳಿಸುವ ಪ್ರಯತ್ನವಾಗಿದ್ದು, ಆ ಸಮಯದಲ್ಲಿ, ನನಗೆ ಗೌರಿ ಲಂಕೇಶ್ ನೆನಪಾದರು. ಅವರ ಚಿತ್ರ ನನ್ನ ಮನಸ್ಸಿನಲ್ಲಿ ಸುಳಿಯುತ್ತಲೇ ಇತ್ತು. ನಾನು ನಡುಗುತ್ತಿದ್ದೆ. ಪತ್ರಕರ್ತೆ ಗೌರಿ ಲಂಕೇಶ್ ಅವರು ಬಲಪಂಥೀಯರನ್ನು ಟೀಕಿಸಿದ್ದರು ಎಂಬ ಆರೋಪದ ಮೇಲೆ ಅವರನ್ನು ಸೆಪ್ಟೆಂಬರ್ 5, 2017 ರಂದು ಗುಂಡಿಕ್ಕಿ ಕೊಲ್ಲಲಾಯಿತು. ಮೋದಿ ಸರ್ಕಾರ ಮತ್ತು ಅದರ ನೀತಿಗಳ ವಿರುದ್ಧ ನಾನು ಧ್ವನಿ ಎತ್ತಿದ್ದರಿಂದ ನನ್ನ ಮೇಲೆ ಇಂತಹ ಬೆದರಿಕೆಗಳು ಸಹಜವಾಗಿವೆ” ಎಂದು ಹೇಳಿದರು.

#IStandWithDeepikaRajawat ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿರುವ ಬಾಲಿವುಡ್ ನಟರು, ನಿರ್ದೇಶಕರು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವಾರು ವಿಭಾಗಗಳಿಂದ ದೀಪಿಕಾ ಸಿಂಗ್ ಅವರಿಗೆ ಹೆಚ್ಚಿನ ಬೆಂಬಲ ಸೂಚಿಸಲಾಗಿದೆ.

ಈ ಹಿಂದೆಯೂ ಕೂಡ ಅತ್ಯಾಚಾರ ಪ್ರಕರಣವೊಂದರಲ್ಲಿ ಸಂತ್ರಸ್ತರ ಪರವಾಗಿ ಹಾಜರಾಗಿದ್ದಕ್ಕೆ ಇದೇ ರೀತಿಯ ತೊಂದರೆಗಳನ್ನು ಇವರು ಅನುಭವಿಸಬೇಕಾಯಿತು.


ಇದನ್ನೂ ಓದಿ: ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...