Homeಮುಖಪುಟ'ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

‘ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

- Advertisement -
- Advertisement -

ರೈತರ ಪ್ರತಿಭಟನೆಗೆ ಸಂಬಂಧಿಸಿದ ವಿವಾದಾತ್ಮಕ “ಟೂಲ್‌ಕಿಟ್” ಡಾಕ್ಯುಮೆಂಟ್ ಪ್ರಕರಣದಲ್ಲಿ ಆರೋಪಿತರಾಗಿರುವ ವಕೀಲೆ ಮತ್ತು ಪರಿಸರ ಕಾರ್ಯಕರ್ತೆ ನಿಕಿತಾ ಜಾಕೋಬ್, ‘ಗಣರಾಜ್ಯೋತ್ಸವದ ಮೊದಲು ಜೂಮ್ ಸಭೆ ನಡೆದಿತ್ತು. ಇದರಲ್ಲಿ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ. ಧಲಿವಾಲ್, ದಿಶಾ ರವಿ ಮತ್ತು ತಾವು ಸೇರಿದಂತೆ ಹಲವು ಆಕ್ಟಿವಿಸ್ಟ್‌ಗಳು ಪಾಲ್ಗೊಂಡಿದ್ದೆವು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಕಿತಾ ಜಾಕೋಬ್ ಅವರ ವಕೀಲರು ಮುಂಬೈ ಪೊಲೀಸರಿಗೆ ಸಲ್ಲಿಸಿದ ದಾಖಲೆಯಲ್ಲಿ, “ಟೂಲ್‌ಕಿಟ್” ಅನ್ನು ಎಕ್ಸ್ಆರ್ ಇಂಡಿಯಾ ಸ್ವಯಂಸೇವಕರು ಸಿದ್ಧಪಡಿಸುತ್ತಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ರೈತ ಹೋರಾಟದ ಚಿತ್ರಣವನ್ನು ಕೊಡುವುದು ಮತ್ತು ಹೋರಾಟಕ್ಕೆ ಬೆಂಬಲ ಪಡೆಯುವುದು ಇದರ ಉದ್ದೇಶವಾಗಿತ್ತು ಎಂದು ನಿಕಿತಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಒಪ್ಪಿಗೆಯ ಹೊರತಾಗಿಯೂ, ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರೊಂದಿಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿದ್ದನ್ನು ನಿಕಿತಾ ನಿರಾಕರಿಸಿದ್ದಾರೆ. ಟೂಲ್‌ಕಿಟ್ ಡಾಕ್ಯುಮೆಂಟ್ ಒಂದು “ಮಾಹಿತಿಯ ಗುಚ್ಛ” ಆಗಿದೆಯಷ್ಟೇ ಮತ್ತು ಅದು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ವಕೀಲೆ ತಿಳಿಸಿದ್ದಾರೆ.

“ಜಾಗೃತಿ ಮೂಡಿಸುವ ಉದ್ದೇಶದಿಂದ ಟೂಲ್‌ಕಿಟ್‌ಗಳನ್ನು ಸಂಶೋಧಿಸಲು, ಚರ್ಚಿಸಲು, ಸಂಪಾದಿಸಲು ಮತ್ತು ಪ್ರಸಾರ ಮಾಡಲು ತಾನು ಯಾವುದೇ ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಉದ್ದೇಶ ಅಥವಾ ಕಾರ್ಯಸೂಚಿಯನ್ನು ಹೊಂದಿಲ್ಲ” ಎಂದೂ ನಿಕಿತಾ ಜಾಕೋಬ್ ಅವರು ಹೇಳಿದ್ದಾರೆ.

ಇದಲ್ಲದೆ, ನಿಕಿತಾ ಜಾಕೋಬ್ ನಾಲ್ಕು ವಾರಗಳ ಕಾಲ ಬಂಧನದಿಂದ ರಕ್ಷಣೆ, ಯಾವುದೇ ಬಲವಂತದ ಕ್ರಮದಿಂದ ಮಧ್ಯಂತರ ರಕ್ಷಣೆ ಮತ್ತು ತನ್ನ ವಿರುದ್ಧ ನೋಂದಾಯಿಸಲಾದ ಎಎಫ್‌ಐಆರ್ ಪ್ರತಿಯನ್ನು ತನ್ನೊಂದಿಗೆ ಹಂಚಿಕೊಳ್ಳಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಮುಂಬೈ ಪೊಲೀಸರಿಗೆ ಸಲ್ಲಿಸಿದ ಪತ್ರದಲ್ಲಿ ಕೋರಿದ್ದಾರೆ.

‘ಖಲಿಸ್ತಾನ್ ಪರ ಇರುವ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ.ಧಲಿವಾಲ್ ಅವರು ಗಣರಾಜ್ಯೋತ್ಸವದ ಮುನ್ನ ಟ್ವಿಟರ್‌ನಲ್ಲಿ ಚಂಡಮಾರುತವನ್ನು ಸೃಷ್ಟಿಸಲು ನಿಕಿತಾ ಜಾಕೋಬ್ ಅವರನ್ನು ಕೆನಡಾದ ಪ್ರಜೆಯಾದ ತನ್ನ ಸಹೋದ್ಯೋಗಿ ಪುನೀತ್ ಮೂಲಕ ಸಂಪರ್ಕಿಸಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ನಿನ್ನೆ ತಿಳಿಸಿದ್ದವು ಎಂದು ಎನ್‌ಡಿಟಿವಿ ವರದಿ ಪ್ರಸ್ತಾಪಿಸಿದೆ.

ಈ ಮೊದಲು, ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್ ದಾಖಲೆಯ ಸೂತ್ರೀಕರಣ ಮತ್ತು ಪ್ರಸಾರಕ್ಕೆ ಸಂಬಂಧಿಸಿದಂತೆ 21 ವರ್ಷದ ದಿಶಾ ರವಿ ಅವರನ್ನು ಬೆಂಗಳೂರಿನಿಂದ ಬಂಧಿಸಲಾಗಿತ್ತು. ಅವರು ‘ಟೂಲ್‌ಕಿಟ್’ ಡಾಕ್ಯುಮೆಂಟ್ ಎಡಿಟ್ ಮಾಡಿದವರಲ್ಲಿ ಒಬ್ಬರು ಎಂಬುದು ಪೊಲೀಸರ ಆರೋಪ.

ನಂತರ ದಿಶಾ ರವಿ ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ಸೋಮವಾರ, ನಿಕಿತಾ ಜಾಕೋಬ್ ಮತ್ತು ಮಹಾರಾಷ್ಟ್ರದ ಬೀಡ್ ನಿವಾಸಿ ಶಾಂತನು ವಿರುದ್ಧ ಪೊಲೀಸರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ. ಆದರೆ ಶಾಂತನು ಬಂಧಿಸಿ ಬೇರೆ ರಾಜ್ಯಕ್ಕೆ ಕರೆದೊಯ್ಯುವುದರ ವಿರುದ್ಧ ಜಾಮೀನು ಪಡೆದುಕೊಂಡಿದ್ದಾರೆ.

ದಿಶಾ ರವಿ ಅವರ ಬಂಧನವೇ ಅಕ್ರಮವಾಗಿದೆ, ಬೆಂಗಳೂರು ಪೊಲೀಸರ ಅನುಮತಿಯಿಲ್ಲದೇ ಮತ್ತು ಬೆಂಗಳೂರು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸದೇ ಸೀದಾ ಅವರನ್ನು ದಹಲಿಗೆ ಕರೆದೊಯ್ದಿದ್ದು ಅಕ್ರಮವಾಗಿದೆ ಎಂದು ಹಲವಾರು ಪ್ರಗತಿಪರ ಸಂಘಟನೆಗಳು, ವಕೀಲರು ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ‘ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...