Homeಮುಖಪುಟ'ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

‘ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

- Advertisement -
- Advertisement -

ರೈತರ ಪ್ರತಿಭಟನೆಗೆ ಸಂಬಂಧಿಸಿದ ವಿವಾದಾತ್ಮಕ “ಟೂಲ್‌ಕಿಟ್” ಡಾಕ್ಯುಮೆಂಟ್ ಪ್ರಕರಣದಲ್ಲಿ ಆರೋಪಿತರಾಗಿರುವ ವಕೀಲೆ ಮತ್ತು ಪರಿಸರ ಕಾರ್ಯಕರ್ತೆ ನಿಕಿತಾ ಜಾಕೋಬ್, ‘ಗಣರಾಜ್ಯೋತ್ಸವದ ಮೊದಲು ಜೂಮ್ ಸಭೆ ನಡೆದಿತ್ತು. ಇದರಲ್ಲಿ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ. ಧಲಿವಾಲ್, ದಿಶಾ ರವಿ ಮತ್ತು ತಾವು ಸೇರಿದಂತೆ ಹಲವು ಆಕ್ಟಿವಿಸ್ಟ್‌ಗಳು ಪಾಲ್ಗೊಂಡಿದ್ದೆವು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಕಿತಾ ಜಾಕೋಬ್ ಅವರ ವಕೀಲರು ಮುಂಬೈ ಪೊಲೀಸರಿಗೆ ಸಲ್ಲಿಸಿದ ದಾಖಲೆಯಲ್ಲಿ, “ಟೂಲ್‌ಕಿಟ್” ಅನ್ನು ಎಕ್ಸ್ಆರ್ ಇಂಡಿಯಾ ಸ್ವಯಂಸೇವಕರು ಸಿದ್ಧಪಡಿಸುತ್ತಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ರೈತ ಹೋರಾಟದ ಚಿತ್ರಣವನ್ನು ಕೊಡುವುದು ಮತ್ತು ಹೋರಾಟಕ್ಕೆ ಬೆಂಬಲ ಪಡೆಯುವುದು ಇದರ ಉದ್ದೇಶವಾಗಿತ್ತು ಎಂದು ನಿಕಿತಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಒಪ್ಪಿಗೆಯ ಹೊರತಾಗಿಯೂ, ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರೊಂದಿಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿದ್ದನ್ನು ನಿಕಿತಾ ನಿರಾಕರಿಸಿದ್ದಾರೆ. ಟೂಲ್‌ಕಿಟ್ ಡಾಕ್ಯುಮೆಂಟ್ ಒಂದು “ಮಾಹಿತಿಯ ಗುಚ್ಛ” ಆಗಿದೆಯಷ್ಟೇ ಮತ್ತು ಅದು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ವಕೀಲೆ ತಿಳಿಸಿದ್ದಾರೆ.

“ಜಾಗೃತಿ ಮೂಡಿಸುವ ಉದ್ದೇಶದಿಂದ ಟೂಲ್‌ಕಿಟ್‌ಗಳನ್ನು ಸಂಶೋಧಿಸಲು, ಚರ್ಚಿಸಲು, ಸಂಪಾದಿಸಲು ಮತ್ತು ಪ್ರಸಾರ ಮಾಡಲು ತಾನು ಯಾವುದೇ ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಉದ್ದೇಶ ಅಥವಾ ಕಾರ್ಯಸೂಚಿಯನ್ನು ಹೊಂದಿಲ್ಲ” ಎಂದೂ ನಿಕಿತಾ ಜಾಕೋಬ್ ಅವರು ಹೇಳಿದ್ದಾರೆ.

ಇದಲ್ಲದೆ, ನಿಕಿತಾ ಜಾಕೋಬ್ ನಾಲ್ಕು ವಾರಗಳ ಕಾಲ ಬಂಧನದಿಂದ ರಕ್ಷಣೆ, ಯಾವುದೇ ಬಲವಂತದ ಕ್ರಮದಿಂದ ಮಧ್ಯಂತರ ರಕ್ಷಣೆ ಮತ್ತು ತನ್ನ ವಿರುದ್ಧ ನೋಂದಾಯಿಸಲಾದ ಎಎಫ್‌ಐಆರ್ ಪ್ರತಿಯನ್ನು ತನ್ನೊಂದಿಗೆ ಹಂಚಿಕೊಳ್ಳಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಮುಂಬೈ ಪೊಲೀಸರಿಗೆ ಸಲ್ಲಿಸಿದ ಪತ್ರದಲ್ಲಿ ಕೋರಿದ್ದಾರೆ.

‘ಖಲಿಸ್ತಾನ್ ಪರ ಇರುವ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ.ಧಲಿವಾಲ್ ಅವರು ಗಣರಾಜ್ಯೋತ್ಸವದ ಮುನ್ನ ಟ್ವಿಟರ್‌ನಲ್ಲಿ ಚಂಡಮಾರುತವನ್ನು ಸೃಷ್ಟಿಸಲು ನಿಕಿತಾ ಜಾಕೋಬ್ ಅವರನ್ನು ಕೆನಡಾದ ಪ್ರಜೆಯಾದ ತನ್ನ ಸಹೋದ್ಯೋಗಿ ಪುನೀತ್ ಮೂಲಕ ಸಂಪರ್ಕಿಸಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ನಿನ್ನೆ ತಿಳಿಸಿದ್ದವು ಎಂದು ಎನ್‌ಡಿಟಿವಿ ವರದಿ ಪ್ರಸ್ತಾಪಿಸಿದೆ.

ಈ ಮೊದಲು, ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್ ದಾಖಲೆಯ ಸೂತ್ರೀಕರಣ ಮತ್ತು ಪ್ರಸಾರಕ್ಕೆ ಸಂಬಂಧಿಸಿದಂತೆ 21 ವರ್ಷದ ದಿಶಾ ರವಿ ಅವರನ್ನು ಬೆಂಗಳೂರಿನಿಂದ ಬಂಧಿಸಲಾಗಿತ್ತು. ಅವರು ‘ಟೂಲ್‌ಕಿಟ್’ ಡಾಕ್ಯುಮೆಂಟ್ ಎಡಿಟ್ ಮಾಡಿದವರಲ್ಲಿ ಒಬ್ಬರು ಎಂಬುದು ಪೊಲೀಸರ ಆರೋಪ.

ನಂತರ ದಿಶಾ ರವಿ ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ಸೋಮವಾರ, ನಿಕಿತಾ ಜಾಕೋಬ್ ಮತ್ತು ಮಹಾರಾಷ್ಟ್ರದ ಬೀಡ್ ನಿವಾಸಿ ಶಾಂತನು ವಿರುದ್ಧ ಪೊಲೀಸರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ. ಆದರೆ ಶಾಂತನು ಬಂಧಿಸಿ ಬೇರೆ ರಾಜ್ಯಕ್ಕೆ ಕರೆದೊಯ್ಯುವುದರ ವಿರುದ್ಧ ಜಾಮೀನು ಪಡೆದುಕೊಂಡಿದ್ದಾರೆ.

ದಿಶಾ ರವಿ ಅವರ ಬಂಧನವೇ ಅಕ್ರಮವಾಗಿದೆ, ಬೆಂಗಳೂರು ಪೊಲೀಸರ ಅನುಮತಿಯಿಲ್ಲದೇ ಮತ್ತು ಬೆಂಗಳೂರು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸದೇ ಸೀದಾ ಅವರನ್ನು ದಹಲಿಗೆ ಕರೆದೊಯ್ದಿದ್ದು ಅಕ್ರಮವಾಗಿದೆ ಎಂದು ಹಲವಾರು ಪ್ರಗತಿಪರ ಸಂಘಟನೆಗಳು, ವಕೀಲರು ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ‘ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...