Homeಮುಖಪುಟ'ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

‘ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

- Advertisement -
- Advertisement -

ರೈತರ ಪ್ರತಿಭಟನೆಗೆ ಸಂಬಂಧಿಸಿದ ವಿವಾದಾತ್ಮಕ “ಟೂಲ್‌ಕಿಟ್” ಡಾಕ್ಯುಮೆಂಟ್ ಪ್ರಕರಣದಲ್ಲಿ ಆರೋಪಿತರಾಗಿರುವ ವಕೀಲೆ ಮತ್ತು ಪರಿಸರ ಕಾರ್ಯಕರ್ತೆ ನಿಕಿತಾ ಜಾಕೋಬ್, ‘ಗಣರಾಜ್ಯೋತ್ಸವದ ಮೊದಲು ಜೂಮ್ ಸಭೆ ನಡೆದಿತ್ತು. ಇದರಲ್ಲಿ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ. ಧಲಿವಾಲ್, ದಿಶಾ ರವಿ ಮತ್ತು ತಾವು ಸೇರಿದಂತೆ ಹಲವು ಆಕ್ಟಿವಿಸ್ಟ್‌ಗಳು ಪಾಲ್ಗೊಂಡಿದ್ದೆವು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಕಿತಾ ಜಾಕೋಬ್ ಅವರ ವಕೀಲರು ಮುಂಬೈ ಪೊಲೀಸರಿಗೆ ಸಲ್ಲಿಸಿದ ದಾಖಲೆಯಲ್ಲಿ, “ಟೂಲ್‌ಕಿಟ್” ಅನ್ನು ಎಕ್ಸ್ಆರ್ ಇಂಡಿಯಾ ಸ್ವಯಂಸೇವಕರು ಸಿದ್ಧಪಡಿಸುತ್ತಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ರೈತ ಹೋರಾಟದ ಚಿತ್ರಣವನ್ನು ಕೊಡುವುದು ಮತ್ತು ಹೋರಾಟಕ್ಕೆ ಬೆಂಬಲ ಪಡೆಯುವುದು ಇದರ ಉದ್ದೇಶವಾಗಿತ್ತು ಎಂದು ನಿಕಿತಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಒಪ್ಪಿಗೆಯ ಹೊರತಾಗಿಯೂ, ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರೊಂದಿಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿದ್ದನ್ನು ನಿಕಿತಾ ನಿರಾಕರಿಸಿದ್ದಾರೆ. ಟೂಲ್‌ಕಿಟ್ ಡಾಕ್ಯುಮೆಂಟ್ ಒಂದು “ಮಾಹಿತಿಯ ಗುಚ್ಛ” ಆಗಿದೆಯಷ್ಟೇ ಮತ್ತು ಅದು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ವಕೀಲೆ ತಿಳಿಸಿದ್ದಾರೆ.

“ಜಾಗೃತಿ ಮೂಡಿಸುವ ಉದ್ದೇಶದಿಂದ ಟೂಲ್‌ಕಿಟ್‌ಗಳನ್ನು ಸಂಶೋಧಿಸಲು, ಚರ್ಚಿಸಲು, ಸಂಪಾದಿಸಲು ಮತ್ತು ಪ್ರಸಾರ ಮಾಡಲು ತಾನು ಯಾವುದೇ ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಉದ್ದೇಶ ಅಥವಾ ಕಾರ್ಯಸೂಚಿಯನ್ನು ಹೊಂದಿಲ್ಲ” ಎಂದೂ ನಿಕಿತಾ ಜಾಕೋಬ್ ಅವರು ಹೇಳಿದ್ದಾರೆ.

ಇದಲ್ಲದೆ, ನಿಕಿತಾ ಜಾಕೋಬ್ ನಾಲ್ಕು ವಾರಗಳ ಕಾಲ ಬಂಧನದಿಂದ ರಕ್ಷಣೆ, ಯಾವುದೇ ಬಲವಂತದ ಕ್ರಮದಿಂದ ಮಧ್ಯಂತರ ರಕ್ಷಣೆ ಮತ್ತು ತನ್ನ ವಿರುದ್ಧ ನೋಂದಾಯಿಸಲಾದ ಎಎಫ್‌ಐಆರ್ ಪ್ರತಿಯನ್ನು ತನ್ನೊಂದಿಗೆ ಹಂಚಿಕೊಳ್ಳಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಮುಂಬೈ ಪೊಲೀಸರಿಗೆ ಸಲ್ಲಿಸಿದ ಪತ್ರದಲ್ಲಿ ಕೋರಿದ್ದಾರೆ.

‘ಖಲಿಸ್ತಾನ್ ಪರ ಇರುವ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ.ಧಲಿವಾಲ್ ಅವರು ಗಣರಾಜ್ಯೋತ್ಸವದ ಮುನ್ನ ಟ್ವಿಟರ್‌ನಲ್ಲಿ ಚಂಡಮಾರುತವನ್ನು ಸೃಷ್ಟಿಸಲು ನಿಕಿತಾ ಜಾಕೋಬ್ ಅವರನ್ನು ಕೆನಡಾದ ಪ್ರಜೆಯಾದ ತನ್ನ ಸಹೋದ್ಯೋಗಿ ಪುನೀತ್ ಮೂಲಕ ಸಂಪರ್ಕಿಸಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ನಿನ್ನೆ ತಿಳಿಸಿದ್ದವು ಎಂದು ಎನ್‌ಡಿಟಿವಿ ವರದಿ ಪ್ರಸ್ತಾಪಿಸಿದೆ.

ಈ ಮೊದಲು, ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್ ದಾಖಲೆಯ ಸೂತ್ರೀಕರಣ ಮತ್ತು ಪ್ರಸಾರಕ್ಕೆ ಸಂಬಂಧಿಸಿದಂತೆ 21 ವರ್ಷದ ದಿಶಾ ರವಿ ಅವರನ್ನು ಬೆಂಗಳೂರಿನಿಂದ ಬಂಧಿಸಲಾಗಿತ್ತು. ಅವರು ‘ಟೂಲ್‌ಕಿಟ್’ ಡಾಕ್ಯುಮೆಂಟ್ ಎಡಿಟ್ ಮಾಡಿದವರಲ್ಲಿ ಒಬ್ಬರು ಎಂಬುದು ಪೊಲೀಸರ ಆರೋಪ.

ನಂತರ ದಿಶಾ ರವಿ ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ಸೋಮವಾರ, ನಿಕಿತಾ ಜಾಕೋಬ್ ಮತ್ತು ಮಹಾರಾಷ್ಟ್ರದ ಬೀಡ್ ನಿವಾಸಿ ಶಾಂತನು ವಿರುದ್ಧ ಪೊಲೀಸರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ. ಆದರೆ ಶಾಂತನು ಬಂಧಿಸಿ ಬೇರೆ ರಾಜ್ಯಕ್ಕೆ ಕರೆದೊಯ್ಯುವುದರ ವಿರುದ್ಧ ಜಾಮೀನು ಪಡೆದುಕೊಂಡಿದ್ದಾರೆ.

ದಿಶಾ ರವಿ ಅವರ ಬಂಧನವೇ ಅಕ್ರಮವಾಗಿದೆ, ಬೆಂಗಳೂರು ಪೊಲೀಸರ ಅನುಮತಿಯಿಲ್ಲದೇ ಮತ್ತು ಬೆಂಗಳೂರು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸದೇ ಸೀದಾ ಅವರನ್ನು ದಹಲಿಗೆ ಕರೆದೊಯ್ದಿದ್ದು ಅಕ್ರಮವಾಗಿದೆ ಎಂದು ಹಲವಾರು ಪ್ರಗತಿಪರ ಸಂಘಟನೆಗಳು, ವಕೀಲರು ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ‘ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...