Homeಮುಖಪುಟ'ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

‘ಜೂಮ್’ ಮೀಟಿಂಗ್‌ನಲ್ಲಿದ್ದೆ, ಟೂಲ್‌ಕಿಟ್‌ನಲ್ಲಿ ಪ್ರಚೋದನೆಯೇನೂ ಇಲ್ಲ’: ವಕೀಲೆ ನಿಕಿತಾ ಜಾಕೊಬ್

- Advertisement -
- Advertisement -

ರೈತರ ಪ್ರತಿಭಟನೆಗೆ ಸಂಬಂಧಿಸಿದ ವಿವಾದಾತ್ಮಕ “ಟೂಲ್‌ಕಿಟ್” ಡಾಕ್ಯುಮೆಂಟ್ ಪ್ರಕರಣದಲ್ಲಿ ಆರೋಪಿತರಾಗಿರುವ ವಕೀಲೆ ಮತ್ತು ಪರಿಸರ ಕಾರ್ಯಕರ್ತೆ ನಿಕಿತಾ ಜಾಕೋಬ್, ‘ಗಣರಾಜ್ಯೋತ್ಸವದ ಮೊದಲು ಜೂಮ್ ಸಭೆ ನಡೆದಿತ್ತು. ಇದರಲ್ಲಿ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ. ಧಲಿವಾಲ್, ದಿಶಾ ರವಿ ಮತ್ತು ತಾವು ಸೇರಿದಂತೆ ಹಲವು ಆಕ್ಟಿವಿಸ್ಟ್‌ಗಳು ಪಾಲ್ಗೊಂಡಿದ್ದೆವು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಕಿತಾ ಜಾಕೋಬ್ ಅವರ ವಕೀಲರು ಮುಂಬೈ ಪೊಲೀಸರಿಗೆ ಸಲ್ಲಿಸಿದ ದಾಖಲೆಯಲ್ಲಿ, “ಟೂಲ್‌ಕಿಟ್” ಅನ್ನು ಎಕ್ಸ್ಆರ್ ಇಂಡಿಯಾ ಸ್ವಯಂಸೇವಕರು ಸಿದ್ಧಪಡಿಸುತ್ತಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ರೈತ ಹೋರಾಟದ ಚಿತ್ರಣವನ್ನು ಕೊಡುವುದು ಮತ್ತು ಹೋರಾಟಕ್ಕೆ ಬೆಂಬಲ ಪಡೆಯುವುದು ಇದರ ಉದ್ದೇಶವಾಗಿತ್ತು ಎಂದು ನಿಕಿತಾ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಒಪ್ಪಿಗೆಯ ಹೊರತಾಗಿಯೂ, ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೆಟಾ ಥನ್ಬರ್ಗ್ ಅವರೊಂದಿಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿದ್ದನ್ನು ನಿಕಿತಾ ನಿರಾಕರಿಸಿದ್ದಾರೆ. ಟೂಲ್‌ಕಿಟ್ ಡಾಕ್ಯುಮೆಂಟ್ ಒಂದು “ಮಾಹಿತಿಯ ಗುಚ್ಛ” ಆಗಿದೆಯಷ್ಟೇ ಮತ್ತು ಅದು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ವಕೀಲೆ ತಿಳಿಸಿದ್ದಾರೆ.

“ಜಾಗೃತಿ ಮೂಡಿಸುವ ಉದ್ದೇಶದಿಂದ ಟೂಲ್‌ಕಿಟ್‌ಗಳನ್ನು ಸಂಶೋಧಿಸಲು, ಚರ್ಚಿಸಲು, ಸಂಪಾದಿಸಲು ಮತ್ತು ಪ್ರಸಾರ ಮಾಡಲು ತಾನು ಯಾವುದೇ ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಉದ್ದೇಶ ಅಥವಾ ಕಾರ್ಯಸೂಚಿಯನ್ನು ಹೊಂದಿಲ್ಲ” ಎಂದೂ ನಿಕಿತಾ ಜಾಕೋಬ್ ಅವರು ಹೇಳಿದ್ದಾರೆ.

ಇದಲ್ಲದೆ, ನಿಕಿತಾ ಜಾಕೋಬ್ ನಾಲ್ಕು ವಾರಗಳ ಕಾಲ ಬಂಧನದಿಂದ ರಕ್ಷಣೆ, ಯಾವುದೇ ಬಲವಂತದ ಕ್ರಮದಿಂದ ಮಧ್ಯಂತರ ರಕ್ಷಣೆ ಮತ್ತು ತನ್ನ ವಿರುದ್ಧ ನೋಂದಾಯಿಸಲಾದ ಎಎಫ್‌ಐಆರ್ ಪ್ರತಿಯನ್ನು ತನ್ನೊಂದಿಗೆ ಹಂಚಿಕೊಳ್ಳಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಮುಂಬೈ ಪೊಲೀಸರಿಗೆ ಸಲ್ಲಿಸಿದ ಪತ್ರದಲ್ಲಿ ಕೋರಿದ್ದಾರೆ.

‘ಖಲಿಸ್ತಾನ್ ಪರ ಇರುವ ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ಸಂಸ್ಥಾಪಕ ಎಂ.ಒ.ಧಲಿವಾಲ್ ಅವರು ಗಣರಾಜ್ಯೋತ್ಸವದ ಮುನ್ನ ಟ್ವಿಟರ್‌ನಲ್ಲಿ ಚಂಡಮಾರುತವನ್ನು ಸೃಷ್ಟಿಸಲು ನಿಕಿತಾ ಜಾಕೋಬ್ ಅವರನ್ನು ಕೆನಡಾದ ಪ್ರಜೆಯಾದ ತನ್ನ ಸಹೋದ್ಯೋಗಿ ಪುನೀತ್ ಮೂಲಕ ಸಂಪರ್ಕಿಸಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ನಿನ್ನೆ ತಿಳಿಸಿದ್ದವು ಎಂದು ಎನ್‌ಡಿಟಿವಿ ವರದಿ ಪ್ರಸ್ತಾಪಿಸಿದೆ.

ಈ ಮೊದಲು, ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್ ದಾಖಲೆಯ ಸೂತ್ರೀಕರಣ ಮತ್ತು ಪ್ರಸಾರಕ್ಕೆ ಸಂಬಂಧಿಸಿದಂತೆ 21 ವರ್ಷದ ದಿಶಾ ರವಿ ಅವರನ್ನು ಬೆಂಗಳೂರಿನಿಂದ ಬಂಧಿಸಲಾಗಿತ್ತು. ಅವರು ‘ಟೂಲ್‌ಕಿಟ್’ ಡಾಕ್ಯುಮೆಂಟ್ ಎಡಿಟ್ ಮಾಡಿದವರಲ್ಲಿ ಒಬ್ಬರು ಎಂಬುದು ಪೊಲೀಸರ ಆರೋಪ.

ನಂತರ ದಿಶಾ ರವಿ ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ಸೋಮವಾರ, ನಿಕಿತಾ ಜಾಕೋಬ್ ಮತ್ತು ಮಹಾರಾಷ್ಟ್ರದ ಬೀಡ್ ನಿವಾಸಿ ಶಾಂತನು ವಿರುದ್ಧ ಪೊಲೀಸರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ. ಆದರೆ ಶಾಂತನು ಬಂಧಿಸಿ ಬೇರೆ ರಾಜ್ಯಕ್ಕೆ ಕರೆದೊಯ್ಯುವುದರ ವಿರುದ್ಧ ಜಾಮೀನು ಪಡೆದುಕೊಂಡಿದ್ದಾರೆ.

ದಿಶಾ ರವಿ ಅವರ ಬಂಧನವೇ ಅಕ್ರಮವಾಗಿದೆ, ಬೆಂಗಳೂರು ಪೊಲೀಸರ ಅನುಮತಿಯಿಲ್ಲದೇ ಮತ್ತು ಬೆಂಗಳೂರು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸದೇ ಸೀದಾ ಅವರನ್ನು ದಹಲಿಗೆ ಕರೆದೊಯ್ದಿದ್ದು ಅಕ್ರಮವಾಗಿದೆ ಎಂದು ಹಲವಾರು ಪ್ರಗತಿಪರ ಸಂಘಟನೆಗಳು, ವಕೀಲರು ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ‘ದಿಶಾ ಕೆಲಸದ ಬಗ್ಗೆ ಹೆಮ್ಮೆಪಡುತ್ತೇವೆ’: ಬೆನ್ನಿಗೆ ನಿಂತ ’ಮೌಂಟ್ ಕಾರ್ಮೆಲ್ ಹಳೆಯ ವಿದ್ಯಾರ್ಥಿ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...