Homeಮುಖಪುಟ'ಕಾಂಗ್ರೆಸ್‌ ನಾಯಕರ ಅಪಪ್ರಚಾರದಿಂದ ಖಿನ್ನತೆಗೆ ಒಳಗಾಗಿದ್ದೆ..'; ಅಜ್ಞಾತ ಸ್ಥಳದಿಂದ ವಿಡಿಯೊ ಹರಿಬಿಟ್ಟ ಪ್ರಜ್ವಲ್

‘ಕಾಂಗ್ರೆಸ್‌ ನಾಯಕರ ಅಪಪ್ರಚಾರದಿಂದ ಖಿನ್ನತೆಗೆ ಒಳಗಾಗಿದ್ದೆ..’; ಅಜ್ಞಾತ ಸ್ಥಳದಿಂದ ವಿಡಿಯೊ ಹರಿಬಿಟ್ಟ ಪ್ರಜ್ವಲ್

- Advertisement -
- Advertisement -

ತನ್ನ ಅಶ್ಲೀಲ ವಿಡಿಯೊ ಮತ್ತು ಲೈಂಗಿಕ ದೌರ್ಜನ್ಯದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸುತ್ತಿದ್ದಂತೆಯೇ ವಿದೇಶಕ್ಕೆ ಪಲಾಯನ ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದಾರೆ. ಸದ್ಯಕ್ಕೆ ವಿದೇಶದಲ್ಲಿರುವ ಅವರು, ‘ಕಾಂಗ್ರೆಸ್‌ ನಾಯಕರ ಅಪಪ್ರಚಾರದಿಂದ ಖಿನ್ನತೆಗೆ ಒಳಗಾಗಿದ್ದೆ..’ ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ ಪ್ರಜ್ವಲ್ ಹೇಳಿದ್ದೇನು?

“ಮೊದಲಿಗೆ ನನ್ನ ತಂದೆ-ತಾಯಿ ಹಾಗೂ ತಾತನಿಗೆ, ನನ್ನ ಕುಮಾರಣ್ಣ, ನಾಡಿನ ಜನತೆ ಹಾಗೂ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಕ್ಷಮೆ ಕೇಳುತ್ತೇನೆ” ಎಂದು ಮಾತು ಆರಂಭಿಸಿದ್ದಾರೆ.

“ನಾನು 27ಕ್ಕೆ ದೇಶ ಬಿಟ್ಟಾಗ ನನ್ನ ಮೇಲೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ನಾನು ಫಾರಿನ್‌ನಲ್ಲಿ ಎಲ್ಲಿದ್ದೇನೆ ಎಂದು ಮಾಹಿತಿ ಕೊಡದಿರುವುದಕ್ಕೆ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ನಾನು ಮತದಾನ ಮಾಡಿ ವಿದೇಶಕ್ಕೆ ಹೋಗುವ ದಿನ ನನ್ನ ಮೇಲೆ ಯಾವುದೇ ಪ್ರಕರಣವೂ ದಾಖಲಾಗಿರಲಿಲ್ಲ. ಎಸ್‌ಐಟಿ ಕೂಡ ರಚನೆ ಆಗಿರಲಿಲ್ಲ. ಏ.26ರಂದು ನಾನು ವಿದೇಶಕ್ಕೆ ಹೋಗುವುದು ಕೂಡ ಪೂರ್ವ ನಿರ್ಧರಿತವಾಗಿರುತ್ತದೆ. ಮೂರ್ನಾಲ್ಕು ದಿನದ ಬಳಿಕ ಯೂಟ್ಯೂಬ್‌ನಲ್ಲಿ ನ್ಯೂಸ್ ಚಾನೆಲ್ ನೋಡುವ ವೇಳೆ ಈ ಮಾಹಿತಿ ನನಗೆ ತಿಳಿದುಬಂದಿತು. ಇದಾದ ನಂತರ ಎಸ್ಐಟಿ ಕೂಡ ನನಗೆ ನೋಟಿಸ್ ಕೊಡುವ ಕೆಲಸ ಮಾಡಿತು. ಎಸ್‌ಐಟಿ ನೋಟಿಸ್‌ಗೆ ಎಕ್ಸ್‌ ಖಾತೆ ಮತ್ತು ನಮ್ಮ ಲಾಯರ್ ಮೂಲಕ ವಿಚಾರಣೆಗೆ ಹಾಜರಾಜಲು 7 ದಿನಗಳ ಕಾಲಾವಕಾಶ ಕೇಳಿದ್ದೆನು” ಎಂದಿದ್ದಾರೆ.

ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡಿರುವ ಅವರು, “ಈ ಏಳು ದಿನ ಸಮಯಾವಕಾಶ ಕೇಳಿದ ನಂತರ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ಅನೇಕರು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಮಾತನಾಡುವುದನ್ನು ನಾನು ನೋಡಿದೆ. ಇದೆಲ್ಲವನ್ನು ನೋಡಿ ನಾನು ಡಿಪ್ರೆಶನ್‌ಗೆ ಒಳಗಾಗಿ, ಒಂದೆಡೆ ಐಸೋಲೇಷನ್‌ಗೆ ಒಳಗಾಗಿದ್ದೆನು. ಇದರಿಂದಾಗಿ ನಿಮ್ಮೆಲ್ಲರ ಮುಂದೆ ನಾನು ಕ್ಷಮೆ ಕೇಳುತ್ತೇನೆ” ಎಂದು ಹೇಳಿದ್ದಾರೆ.

“ಹಾಸನದಲ್ಲಿ ನನ್ನ ವಿರುದ್ಧದ ಎಲ್ಲ ಶಕ್ತಿಗಳು ಒಟ್ಟುಗೂಡಿ ಪಿತೂರಿ ಮಾಡುವ ಕೆಲಸ ಮಾಡಿದ್ದಾರೆ. ರಾಜಕೀಯವಾಗಿ ನಾನು ಬೆಳೆಯುತ್ತಿದ್ದೇನೆ, ಅದನ್ನು ಮುಗಿಸಬೇಕು ಎಂಬ ನಿಟ್ಟಿನಲ್ಲಿ ನನ್ನನ್ನು ಈ ಪ್ರಕರಣಗಳಲ್ಲಿ ಸಿಲುಕಿಸುವ ಕೆಲಸ ಮಾಡಿದ್ದಾರೆ. ಇದರಿಂದ ನಾನು ಮತ್ತಷ್ಟು ಆಘಾತಕ್ಕೆ ಒಳಗಾಗಿದ್ದೇನೆ” ಎಂದಿದ್ದಾರೆ.

“ಈ ಘಟನೆಯಿಂದ ಯಾರೂ ಕೂಡ ಅನ್ಯಥಾ ಭಾವಿಸುವುದು ಬೇಡ. ನಾನೇ ಸ್ವತಃ ಶುಕ್ರವಾರ ಮೇ 31ರಂದು ಎಸ್‌ಯಟಿ ಮುಂದೆ ಬಂದು ಸಂಪೂರ್ಣವಾಗಿ ಪ್ರಕರಣದ ತನಿಖೆಯಲ್ಲಿ ಭಾಗಿಯಾಗುತ್ತೇನೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ನನ್ನ ಮೇಲೆ ದಾಖಲಾಗಿರುವಂತಹ ಸುಳ್ಳು ಪ್ರಕರಣಗಳಿಂದ ಮುಕ್ತವಾಗಿ ಹೊರಗೆ ಬರುವ ವಿಶ್ವಾಸವಿದೆ. ನನ್ನ ಮೇಲೆ ದೇವರು, ಜನರು ಹಾಗೂ ನನ್ನ ಕುಟುಂಬದ ಆಶೀರ್ವಾದ ಇರಲಿ ಎಂದು ಬೇಡಿಕೊಳ್ಳುತ್ತೇನೆ. ನಾನು ಮೇ 31ರಂದು ಬಂದು ಈ ಎಲ್ಲದಕ್ಕೂ ತೆರೆ ಎಳೆಯುತ್ತೇನೆ” ಎಂದು ಮಾಹಿತಿ ನೀಡಿರುವ ಪ್ರಜ್ವಲ್, ಯಾವ ದೇಶದಲ್ಲಿದ್ದೇನೆ ಎಂಬ ಗುಟ್ಟನ್ನು ಮಾತ್ರ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ; ‘ಹಾಸನ ಚಲೋ’ ಪ್ರತಿಭಟನೆಗೆ ಬೆಂಬಲ ಸೂಚಿಸಿದ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...