Homeಮುಖಪುಟ'ಕಾಂಗ್ರೆಸ್‌ ನಾಯಕರ ಅಪಪ್ರಚಾರದಿಂದ ಖಿನ್ನತೆಗೆ ಒಳಗಾಗಿದ್ದೆ..'; ಅಜ್ಞಾತ ಸ್ಥಳದಿಂದ ವಿಡಿಯೊ ಹರಿಬಿಟ್ಟ ಪ್ರಜ್ವಲ್

‘ಕಾಂಗ್ರೆಸ್‌ ನಾಯಕರ ಅಪಪ್ರಚಾರದಿಂದ ಖಿನ್ನತೆಗೆ ಒಳಗಾಗಿದ್ದೆ..’; ಅಜ್ಞಾತ ಸ್ಥಳದಿಂದ ವಿಡಿಯೊ ಹರಿಬಿಟ್ಟ ಪ್ರಜ್ವಲ್

- Advertisement -
- Advertisement -

ತನ್ನ ಅಶ್ಲೀಲ ವಿಡಿಯೊ ಮತ್ತು ಲೈಂಗಿಕ ದೌರ್ಜನ್ಯದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸುತ್ತಿದ್ದಂತೆಯೇ ವಿದೇಶಕ್ಕೆ ಪಲಾಯನ ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದಾರೆ. ಸದ್ಯಕ್ಕೆ ವಿದೇಶದಲ್ಲಿರುವ ಅವರು, ‘ಕಾಂಗ್ರೆಸ್‌ ನಾಯಕರ ಅಪಪ್ರಚಾರದಿಂದ ಖಿನ್ನತೆಗೆ ಒಳಗಾಗಿದ್ದೆ..’ ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ ಪ್ರಜ್ವಲ್ ಹೇಳಿದ್ದೇನು?

“ಮೊದಲಿಗೆ ನನ್ನ ತಂದೆ-ತಾಯಿ ಹಾಗೂ ತಾತನಿಗೆ, ನನ್ನ ಕುಮಾರಣ್ಣ, ನಾಡಿನ ಜನತೆ ಹಾಗೂ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಕ್ಷಮೆ ಕೇಳುತ್ತೇನೆ” ಎಂದು ಮಾತು ಆರಂಭಿಸಿದ್ದಾರೆ.

“ನಾನು 27ಕ್ಕೆ ದೇಶ ಬಿಟ್ಟಾಗ ನನ್ನ ಮೇಲೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ನಾನು ಫಾರಿನ್‌ನಲ್ಲಿ ಎಲ್ಲಿದ್ದೇನೆ ಎಂದು ಮಾಹಿತಿ ಕೊಡದಿರುವುದಕ್ಕೆ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ನಾನು ಮತದಾನ ಮಾಡಿ ವಿದೇಶಕ್ಕೆ ಹೋಗುವ ದಿನ ನನ್ನ ಮೇಲೆ ಯಾವುದೇ ಪ್ರಕರಣವೂ ದಾಖಲಾಗಿರಲಿಲ್ಲ. ಎಸ್‌ಐಟಿ ಕೂಡ ರಚನೆ ಆಗಿರಲಿಲ್ಲ. ಏ.26ರಂದು ನಾನು ವಿದೇಶಕ್ಕೆ ಹೋಗುವುದು ಕೂಡ ಪೂರ್ವ ನಿರ್ಧರಿತವಾಗಿರುತ್ತದೆ. ಮೂರ್ನಾಲ್ಕು ದಿನದ ಬಳಿಕ ಯೂಟ್ಯೂಬ್‌ನಲ್ಲಿ ನ್ಯೂಸ್ ಚಾನೆಲ್ ನೋಡುವ ವೇಳೆ ಈ ಮಾಹಿತಿ ನನಗೆ ತಿಳಿದುಬಂದಿತು. ಇದಾದ ನಂತರ ಎಸ್ಐಟಿ ಕೂಡ ನನಗೆ ನೋಟಿಸ್ ಕೊಡುವ ಕೆಲಸ ಮಾಡಿತು. ಎಸ್‌ಐಟಿ ನೋಟಿಸ್‌ಗೆ ಎಕ್ಸ್‌ ಖಾತೆ ಮತ್ತು ನಮ್ಮ ಲಾಯರ್ ಮೂಲಕ ವಿಚಾರಣೆಗೆ ಹಾಜರಾಜಲು 7 ದಿನಗಳ ಕಾಲಾವಕಾಶ ಕೇಳಿದ್ದೆನು” ಎಂದಿದ್ದಾರೆ.

ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡಿರುವ ಅವರು, “ಈ ಏಳು ದಿನ ಸಮಯಾವಕಾಶ ಕೇಳಿದ ನಂತರ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ಅನೇಕರು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಮಾತನಾಡುವುದನ್ನು ನಾನು ನೋಡಿದೆ. ಇದೆಲ್ಲವನ್ನು ನೋಡಿ ನಾನು ಡಿಪ್ರೆಶನ್‌ಗೆ ಒಳಗಾಗಿ, ಒಂದೆಡೆ ಐಸೋಲೇಷನ್‌ಗೆ ಒಳಗಾಗಿದ್ದೆನು. ಇದರಿಂದಾಗಿ ನಿಮ್ಮೆಲ್ಲರ ಮುಂದೆ ನಾನು ಕ್ಷಮೆ ಕೇಳುತ್ತೇನೆ” ಎಂದು ಹೇಳಿದ್ದಾರೆ.

“ಹಾಸನದಲ್ಲಿ ನನ್ನ ವಿರುದ್ಧದ ಎಲ್ಲ ಶಕ್ತಿಗಳು ಒಟ್ಟುಗೂಡಿ ಪಿತೂರಿ ಮಾಡುವ ಕೆಲಸ ಮಾಡಿದ್ದಾರೆ. ರಾಜಕೀಯವಾಗಿ ನಾನು ಬೆಳೆಯುತ್ತಿದ್ದೇನೆ, ಅದನ್ನು ಮುಗಿಸಬೇಕು ಎಂಬ ನಿಟ್ಟಿನಲ್ಲಿ ನನ್ನನ್ನು ಈ ಪ್ರಕರಣಗಳಲ್ಲಿ ಸಿಲುಕಿಸುವ ಕೆಲಸ ಮಾಡಿದ್ದಾರೆ. ಇದರಿಂದ ನಾನು ಮತ್ತಷ್ಟು ಆಘಾತಕ್ಕೆ ಒಳಗಾಗಿದ್ದೇನೆ” ಎಂದಿದ್ದಾರೆ.

“ಈ ಘಟನೆಯಿಂದ ಯಾರೂ ಕೂಡ ಅನ್ಯಥಾ ಭಾವಿಸುವುದು ಬೇಡ. ನಾನೇ ಸ್ವತಃ ಶುಕ್ರವಾರ ಮೇ 31ರಂದು ಎಸ್‌ಯಟಿ ಮುಂದೆ ಬಂದು ಸಂಪೂರ್ಣವಾಗಿ ಪ್ರಕರಣದ ತನಿಖೆಯಲ್ಲಿ ಭಾಗಿಯಾಗುತ್ತೇನೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ನನ್ನ ಮೇಲೆ ದಾಖಲಾಗಿರುವಂತಹ ಸುಳ್ಳು ಪ್ರಕರಣಗಳಿಂದ ಮುಕ್ತವಾಗಿ ಹೊರಗೆ ಬರುವ ವಿಶ್ವಾಸವಿದೆ. ನನ್ನ ಮೇಲೆ ದೇವರು, ಜನರು ಹಾಗೂ ನನ್ನ ಕುಟುಂಬದ ಆಶೀರ್ವಾದ ಇರಲಿ ಎಂದು ಬೇಡಿಕೊಳ್ಳುತ್ತೇನೆ. ನಾನು ಮೇ 31ರಂದು ಬಂದು ಈ ಎಲ್ಲದಕ್ಕೂ ತೆರೆ ಎಳೆಯುತ್ತೇನೆ” ಎಂದು ಮಾಹಿತಿ ನೀಡಿರುವ ಪ್ರಜ್ವಲ್, ಯಾವ ದೇಶದಲ್ಲಿದ್ದೇನೆ ಎಂಬ ಗುಟ್ಟನ್ನು ಮಾತ್ರ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ; ‘ಹಾಸನ ಚಲೋ’ ಪ್ರತಿಭಟನೆಗೆ ಬೆಂಬಲ ಸೂಚಿಸಿದ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...