Homeಮುಖಪುಟ'ಕಾಂಗ್ರೆಸ್‌ ನಾಯಕರ ಅಪಪ್ರಚಾರದಿಂದ ಖಿನ್ನತೆಗೆ ಒಳಗಾಗಿದ್ದೆ..'; ಅಜ್ಞಾತ ಸ್ಥಳದಿಂದ ವಿಡಿಯೊ ಹರಿಬಿಟ್ಟ ಪ್ರಜ್ವಲ್

‘ಕಾಂಗ್ರೆಸ್‌ ನಾಯಕರ ಅಪಪ್ರಚಾರದಿಂದ ಖಿನ್ನತೆಗೆ ಒಳಗಾಗಿದ್ದೆ..’; ಅಜ್ಞಾತ ಸ್ಥಳದಿಂದ ವಿಡಿಯೊ ಹರಿಬಿಟ್ಟ ಪ್ರಜ್ವಲ್

- Advertisement -
- Advertisement -

ತನ್ನ ಅಶ್ಲೀಲ ವಿಡಿಯೊ ಮತ್ತು ಲೈಂಗಿಕ ದೌರ್ಜನ್ಯದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸುತ್ತಿದ್ದಂತೆಯೇ ವಿದೇಶಕ್ಕೆ ಪಲಾಯನ ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದಾರೆ. ಸದ್ಯಕ್ಕೆ ವಿದೇಶದಲ್ಲಿರುವ ಅವರು, ‘ಕಾಂಗ್ರೆಸ್‌ ನಾಯಕರ ಅಪಪ್ರಚಾರದಿಂದ ಖಿನ್ನತೆಗೆ ಒಳಗಾಗಿದ್ದೆ..’ ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ ಪ್ರಜ್ವಲ್ ಹೇಳಿದ್ದೇನು?

“ಮೊದಲಿಗೆ ನನ್ನ ತಂದೆ-ತಾಯಿ ಹಾಗೂ ತಾತನಿಗೆ, ನನ್ನ ಕುಮಾರಣ್ಣ, ನಾಡಿನ ಜನತೆ ಹಾಗೂ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಕ್ಷಮೆ ಕೇಳುತ್ತೇನೆ” ಎಂದು ಮಾತು ಆರಂಭಿಸಿದ್ದಾರೆ.

“ನಾನು 27ಕ್ಕೆ ದೇಶ ಬಿಟ್ಟಾಗ ನನ್ನ ಮೇಲೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ನಾನು ಫಾರಿನ್‌ನಲ್ಲಿ ಎಲ್ಲಿದ್ದೇನೆ ಎಂದು ಮಾಹಿತಿ ಕೊಡದಿರುವುದಕ್ಕೆ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ನಾನು ಮತದಾನ ಮಾಡಿ ವಿದೇಶಕ್ಕೆ ಹೋಗುವ ದಿನ ನನ್ನ ಮೇಲೆ ಯಾವುದೇ ಪ್ರಕರಣವೂ ದಾಖಲಾಗಿರಲಿಲ್ಲ. ಎಸ್‌ಐಟಿ ಕೂಡ ರಚನೆ ಆಗಿರಲಿಲ್ಲ. ಏ.26ರಂದು ನಾನು ವಿದೇಶಕ್ಕೆ ಹೋಗುವುದು ಕೂಡ ಪೂರ್ವ ನಿರ್ಧರಿತವಾಗಿರುತ್ತದೆ. ಮೂರ್ನಾಲ್ಕು ದಿನದ ಬಳಿಕ ಯೂಟ್ಯೂಬ್‌ನಲ್ಲಿ ನ್ಯೂಸ್ ಚಾನೆಲ್ ನೋಡುವ ವೇಳೆ ಈ ಮಾಹಿತಿ ನನಗೆ ತಿಳಿದುಬಂದಿತು. ಇದಾದ ನಂತರ ಎಸ್ಐಟಿ ಕೂಡ ನನಗೆ ನೋಟಿಸ್ ಕೊಡುವ ಕೆಲಸ ಮಾಡಿತು. ಎಸ್‌ಐಟಿ ನೋಟಿಸ್‌ಗೆ ಎಕ್ಸ್‌ ಖಾತೆ ಮತ್ತು ನಮ್ಮ ಲಾಯರ್ ಮೂಲಕ ವಿಚಾರಣೆಗೆ ಹಾಜರಾಜಲು 7 ದಿನಗಳ ಕಾಲಾವಕಾಶ ಕೇಳಿದ್ದೆನು” ಎಂದಿದ್ದಾರೆ.

ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡಿರುವ ಅವರು, “ಈ ಏಳು ದಿನ ಸಮಯಾವಕಾಶ ಕೇಳಿದ ನಂತರ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ಅನೇಕರು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಮಾತನಾಡುವುದನ್ನು ನಾನು ನೋಡಿದೆ. ಇದೆಲ್ಲವನ್ನು ನೋಡಿ ನಾನು ಡಿಪ್ರೆಶನ್‌ಗೆ ಒಳಗಾಗಿ, ಒಂದೆಡೆ ಐಸೋಲೇಷನ್‌ಗೆ ಒಳಗಾಗಿದ್ದೆನು. ಇದರಿಂದಾಗಿ ನಿಮ್ಮೆಲ್ಲರ ಮುಂದೆ ನಾನು ಕ್ಷಮೆ ಕೇಳುತ್ತೇನೆ” ಎಂದು ಹೇಳಿದ್ದಾರೆ.

“ಹಾಸನದಲ್ಲಿ ನನ್ನ ವಿರುದ್ಧದ ಎಲ್ಲ ಶಕ್ತಿಗಳು ಒಟ್ಟುಗೂಡಿ ಪಿತೂರಿ ಮಾಡುವ ಕೆಲಸ ಮಾಡಿದ್ದಾರೆ. ರಾಜಕೀಯವಾಗಿ ನಾನು ಬೆಳೆಯುತ್ತಿದ್ದೇನೆ, ಅದನ್ನು ಮುಗಿಸಬೇಕು ಎಂಬ ನಿಟ್ಟಿನಲ್ಲಿ ನನ್ನನ್ನು ಈ ಪ್ರಕರಣಗಳಲ್ಲಿ ಸಿಲುಕಿಸುವ ಕೆಲಸ ಮಾಡಿದ್ದಾರೆ. ಇದರಿಂದ ನಾನು ಮತ್ತಷ್ಟು ಆಘಾತಕ್ಕೆ ಒಳಗಾಗಿದ್ದೇನೆ” ಎಂದಿದ್ದಾರೆ.

“ಈ ಘಟನೆಯಿಂದ ಯಾರೂ ಕೂಡ ಅನ್ಯಥಾ ಭಾವಿಸುವುದು ಬೇಡ. ನಾನೇ ಸ್ವತಃ ಶುಕ್ರವಾರ ಮೇ 31ರಂದು ಎಸ್‌ಯಟಿ ಮುಂದೆ ಬಂದು ಸಂಪೂರ್ಣವಾಗಿ ಪ್ರಕರಣದ ತನಿಖೆಯಲ್ಲಿ ಭಾಗಿಯಾಗುತ್ತೇನೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ನನ್ನ ಮೇಲೆ ದಾಖಲಾಗಿರುವಂತಹ ಸುಳ್ಳು ಪ್ರಕರಣಗಳಿಂದ ಮುಕ್ತವಾಗಿ ಹೊರಗೆ ಬರುವ ವಿಶ್ವಾಸವಿದೆ. ನನ್ನ ಮೇಲೆ ದೇವರು, ಜನರು ಹಾಗೂ ನನ್ನ ಕುಟುಂಬದ ಆಶೀರ್ವಾದ ಇರಲಿ ಎಂದು ಬೇಡಿಕೊಳ್ಳುತ್ತೇನೆ. ನಾನು ಮೇ 31ರಂದು ಬಂದು ಈ ಎಲ್ಲದಕ್ಕೂ ತೆರೆ ಎಳೆಯುತ್ತೇನೆ” ಎಂದು ಮಾಹಿತಿ ನೀಡಿರುವ ಪ್ರಜ್ವಲ್, ಯಾವ ದೇಶದಲ್ಲಿದ್ದೇನೆ ಎಂಬ ಗುಟ್ಟನ್ನು ಮಾತ್ರ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ; ‘ಹಾಸನ ಚಲೋ’ ಪ್ರತಿಭಟನೆಗೆ ಬೆಂಬಲ ಸೂಚಿಸಿದ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...