Homeಮುಖಪುಟ'ಕಾಂಗ್ರೆಸ್‌ ನಾಯಕರ ಅಪಪ್ರಚಾರದಿಂದ ಖಿನ್ನತೆಗೆ ಒಳಗಾಗಿದ್ದೆ..'; ಅಜ್ಞಾತ ಸ್ಥಳದಿಂದ ವಿಡಿಯೊ ಹರಿಬಿಟ್ಟ ಪ್ರಜ್ವಲ್

‘ಕಾಂಗ್ರೆಸ್‌ ನಾಯಕರ ಅಪಪ್ರಚಾರದಿಂದ ಖಿನ್ನತೆಗೆ ಒಳಗಾಗಿದ್ದೆ..’; ಅಜ್ಞಾತ ಸ್ಥಳದಿಂದ ವಿಡಿಯೊ ಹರಿಬಿಟ್ಟ ಪ್ರಜ್ವಲ್

- Advertisement -
- Advertisement -

ತನ್ನ ಅಶ್ಲೀಲ ವಿಡಿಯೊ ಮತ್ತು ಲೈಂಗಿಕ ದೌರ್ಜನ್ಯದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸುತ್ತಿದ್ದಂತೆಯೇ ವಿದೇಶಕ್ಕೆ ಪಲಾಯನ ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದಾರೆ. ಸದ್ಯಕ್ಕೆ ವಿದೇಶದಲ್ಲಿರುವ ಅವರು, ‘ಕಾಂಗ್ರೆಸ್‌ ನಾಯಕರ ಅಪಪ್ರಚಾರದಿಂದ ಖಿನ್ನತೆಗೆ ಒಳಗಾಗಿದ್ದೆ..’ ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ ಪ್ರಜ್ವಲ್ ಹೇಳಿದ್ದೇನು?

“ಮೊದಲಿಗೆ ನನ್ನ ತಂದೆ-ತಾಯಿ ಹಾಗೂ ತಾತನಿಗೆ, ನನ್ನ ಕುಮಾರಣ್ಣ, ನಾಡಿನ ಜನತೆ ಹಾಗೂ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಕ್ಷಮೆ ಕೇಳುತ್ತೇನೆ” ಎಂದು ಮಾತು ಆರಂಭಿಸಿದ್ದಾರೆ.

“ನಾನು 27ಕ್ಕೆ ದೇಶ ಬಿಟ್ಟಾಗ ನನ್ನ ಮೇಲೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ನಾನು ಫಾರಿನ್‌ನಲ್ಲಿ ಎಲ್ಲಿದ್ದೇನೆ ಎಂದು ಮಾಹಿತಿ ಕೊಡದಿರುವುದಕ್ಕೆ ಖಂಡಿತವಾಗಿಯೂ ಕ್ಷಮೆ ಕೇಳುತ್ತೇನೆ. ನಾನು ಮತದಾನ ಮಾಡಿ ವಿದೇಶಕ್ಕೆ ಹೋಗುವ ದಿನ ನನ್ನ ಮೇಲೆ ಯಾವುದೇ ಪ್ರಕರಣವೂ ದಾಖಲಾಗಿರಲಿಲ್ಲ. ಎಸ್‌ಐಟಿ ಕೂಡ ರಚನೆ ಆಗಿರಲಿಲ್ಲ. ಏ.26ರಂದು ನಾನು ವಿದೇಶಕ್ಕೆ ಹೋಗುವುದು ಕೂಡ ಪೂರ್ವ ನಿರ್ಧರಿತವಾಗಿರುತ್ತದೆ. ಮೂರ್ನಾಲ್ಕು ದಿನದ ಬಳಿಕ ಯೂಟ್ಯೂಬ್‌ನಲ್ಲಿ ನ್ಯೂಸ್ ಚಾನೆಲ್ ನೋಡುವ ವೇಳೆ ಈ ಮಾಹಿತಿ ನನಗೆ ತಿಳಿದುಬಂದಿತು. ಇದಾದ ನಂತರ ಎಸ್ಐಟಿ ಕೂಡ ನನಗೆ ನೋಟಿಸ್ ಕೊಡುವ ಕೆಲಸ ಮಾಡಿತು. ಎಸ್‌ಐಟಿ ನೋಟಿಸ್‌ಗೆ ಎಕ್ಸ್‌ ಖಾತೆ ಮತ್ತು ನಮ್ಮ ಲಾಯರ್ ಮೂಲಕ ವಿಚಾರಣೆಗೆ ಹಾಜರಾಜಲು 7 ದಿನಗಳ ಕಾಲಾವಕಾಶ ಕೇಳಿದ್ದೆನು” ಎಂದಿದ್ದಾರೆ.

ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡಿರುವ ಅವರು, “ಈ ಏಳು ದಿನ ಸಮಯಾವಕಾಶ ಕೇಳಿದ ನಂತರ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ಅನೇಕರು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಮಾತನಾಡುವುದನ್ನು ನಾನು ನೋಡಿದೆ. ಇದೆಲ್ಲವನ್ನು ನೋಡಿ ನಾನು ಡಿಪ್ರೆಶನ್‌ಗೆ ಒಳಗಾಗಿ, ಒಂದೆಡೆ ಐಸೋಲೇಷನ್‌ಗೆ ಒಳಗಾಗಿದ್ದೆನು. ಇದರಿಂದಾಗಿ ನಿಮ್ಮೆಲ್ಲರ ಮುಂದೆ ನಾನು ಕ್ಷಮೆ ಕೇಳುತ್ತೇನೆ” ಎಂದು ಹೇಳಿದ್ದಾರೆ.

“ಹಾಸನದಲ್ಲಿ ನನ್ನ ವಿರುದ್ಧದ ಎಲ್ಲ ಶಕ್ತಿಗಳು ಒಟ್ಟುಗೂಡಿ ಪಿತೂರಿ ಮಾಡುವ ಕೆಲಸ ಮಾಡಿದ್ದಾರೆ. ರಾಜಕೀಯವಾಗಿ ನಾನು ಬೆಳೆಯುತ್ತಿದ್ದೇನೆ, ಅದನ್ನು ಮುಗಿಸಬೇಕು ಎಂಬ ನಿಟ್ಟಿನಲ್ಲಿ ನನ್ನನ್ನು ಈ ಪ್ರಕರಣಗಳಲ್ಲಿ ಸಿಲುಕಿಸುವ ಕೆಲಸ ಮಾಡಿದ್ದಾರೆ. ಇದರಿಂದ ನಾನು ಮತ್ತಷ್ಟು ಆಘಾತಕ್ಕೆ ಒಳಗಾಗಿದ್ದೇನೆ” ಎಂದಿದ್ದಾರೆ.

“ಈ ಘಟನೆಯಿಂದ ಯಾರೂ ಕೂಡ ಅನ್ಯಥಾ ಭಾವಿಸುವುದು ಬೇಡ. ನಾನೇ ಸ್ವತಃ ಶುಕ್ರವಾರ ಮೇ 31ರಂದು ಎಸ್‌ಯಟಿ ಮುಂದೆ ಬಂದು ಸಂಪೂರ್ಣವಾಗಿ ಪ್ರಕರಣದ ತನಿಖೆಯಲ್ಲಿ ಭಾಗಿಯಾಗುತ್ತೇನೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ನನ್ನ ಮೇಲೆ ದಾಖಲಾಗಿರುವಂತಹ ಸುಳ್ಳು ಪ್ರಕರಣಗಳಿಂದ ಮುಕ್ತವಾಗಿ ಹೊರಗೆ ಬರುವ ವಿಶ್ವಾಸವಿದೆ. ನನ್ನ ಮೇಲೆ ದೇವರು, ಜನರು ಹಾಗೂ ನನ್ನ ಕುಟುಂಬದ ಆಶೀರ್ವಾದ ಇರಲಿ ಎಂದು ಬೇಡಿಕೊಳ್ಳುತ್ತೇನೆ. ನಾನು ಮೇ 31ರಂದು ಬಂದು ಈ ಎಲ್ಲದಕ್ಕೂ ತೆರೆ ಎಳೆಯುತ್ತೇನೆ” ಎಂದು ಮಾಹಿತಿ ನೀಡಿರುವ ಪ್ರಜ್ವಲ್, ಯಾವ ದೇಶದಲ್ಲಿದ್ದೇನೆ ಎಂಬ ಗುಟ್ಟನ್ನು ಮಾತ್ರ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ; ‘ಹಾಸನ ಚಲೋ’ ಪ್ರತಿಭಟನೆಗೆ ಬೆಂಬಲ ಸೂಚಿಸಿದ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...