Homeಮುಖಪುಟರ‍್ಯಾಲಿಯಲ್ಲಿ ಬೃಹತ್ ಜನಸ್ತೋಮ ಕಂಡು ಉಲ್ಲಸಿತರಾದ ಪ್ರಧಾನಿ: ಮೋದಿಯನ್ನು ರೋಮ್ ದೊರೆ ನೀರೊಗೆ ಹೋಲಿಸಿದ ಕಾಂಗ್ರೆಸ್

ರ‍್ಯಾಲಿಯಲ್ಲಿ ಬೃಹತ್ ಜನಸ್ತೋಮ ಕಂಡು ಉಲ್ಲಸಿತರಾದ ಪ್ರಧಾನಿ: ಮೋದಿಯನ್ನು ರೋಮ್ ದೊರೆ ನೀರೊಗೆ ಹೋಲಿಸಿದ ಕಾಂಗ್ರೆಸ್

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬಂಗಾಳದಲ್ಲಿ ಪ್ರಚಾರ ಮಾಡಿದ್ದು, ಅಸನ್ಸೋಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹೆಚ್ಚಿನ ಜನಸಮೂಹವನ್ನು ನೋಡಿ, ನಾನು ಇಂತಹ ರ‍್ಯಾಲಿ ಎಂದೂ ನೋಡಿರಲಿಲ್ಲ ಎಂದು ಉದ್ಘರಿಸಿದ್ದಾರೆ. ನಂತರ ಕಾಂಗ್ರೆಸ್ ಸೇರಿದಂತೆ ಹಲವರು ಇದನ್ನು ವ್ಯಾಪಕವಾಗಿ ಟೀಕಿಸಿದ್ದು, ಕಾಂಗ್ರೆಸ್ ಪ್ರಧಾನಿಯವರನ್ನು ರೋಮ್ ದೊರೆ ನೀರೊಗೆ ಹೋಲಿಕೆ ಮಾಡಿದೆ.

ಒಂದು ದಿನದಲ್ಲಿ ಭಾರತವು 2.6 ಲಕ್ಷ ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ ಮತ್ತು ಸಕ್ರಿಯ ಪ್ರಕರಣಗಳು ಹೆಚ್ಚಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 16.8 ಲಕ್ಷ ತಲುಪಿರುವಾಗ ಪ್ರಧಾನಿ ಭಾರಿ ಜನಸ್ತೋಮ ಸೇರಿದ್ದನ್ನು ಹೊಗಳಿದ್ದು ಕೆಲವರ ಟೀಕೆಗೆ ಕಾರಣವಾಗಿದೆ.
ಕಾಂಗ್ರೆಸ್ ಪ್ರಧಾನಿಯವರನ್ನು ರೋಮ್ ದೊರೆ ನೋರೊಗೆ ಹೋಲಿಸಿ ಟ್ವಿಟರ್‌ನಲ್ಲಿ ವಿಡಿಯೋ ಒಂದನ್ನು ಹಾಕಿ ವ್ಯಂಗ್ಯ ಮಾಡಿದೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ನಾನು ಎರಡು ಬಾರಿ ಇಲ್ಲಿಗೆ ಬಂದಿದ್ದೇನೆ. ಕೊನೆಯ ಬಾರಿ ನಾನು ಬಾಬುಲ್ಜಿಗೆ (ಅಸನ್ಸೋಲ್ ಸಂಸದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ) ಮತ ಕೇಳಲು ಬಂದಿದ್ದೆ. ಆಗ ಜನಸಮೂಹವು ಇದರಲ್ಲಿ ಕಾಲು ಭಾಗ ಮಾತ್ರವಿತ್ತು’ ಎಂದು ಅವರು ಹೇಳಿದರು.

“ಆದರೆ ಇಂದು, ಎಲ್ಲಾ ದಿಕ್ಕುಗಳಲ್ಲಿಯೂ ನಾನು ಅಪಾರ ಜನಸಂದಣಿಯನ್ನು ನೋಡುತ್ತಿದ್ದೇನೆ … ಮೊದಲ ಬಾರಿಗೆ ಇಂತಹ ರ‍್ಯಾಲಿಗೆ ಸಾಕ್ಷಿಯಾಗಿದ್ದೇನೆ… ಇಂದು, ನೀವು ನಿಮ್ಮ ಶಕ್ತಿಯನ್ನು ತೋರಿಸಿದ್ದೀರಿ. ಮುಂದಿನ ಹಂತವು ಹೆಚ್ಚು ಮುಖ್ಯವಾಗಿದೆ – ಹೋಗಿ ಮತ ಚಲಾಯಿಸಿ ಇತರರನ್ನು ಸಹ ನಿಮ್ಮ ಜೊತೆ ಕರೆದೊಯಿರಿ’ ಎಂದು ಪ್ರಧಾನಿ ಮೋದಿ ಹೇಳಿದರು. ಏಪ್ರಿಲ್ 26 ರಂದು ಅಸನ್ಸೋಲ್‌ನಲ್ಲಿ ಮತದಾನ ನಡೆಯಲಿದೆ.

ಸೋಂಕಿನ ಎರಡನೇ ಅಲೆಯನ್ನು ದೇಶವು ಎದುರಿಸುತ್ತಿರುವ ಕಾರಣ ಚುನಾವಣಾ ರ‍್ಯಾಲಿಗಳಲ್ಲಿ ಪ್ರಧಾನಮಂತ್ರಿ ನಿರಂತರವಾಗಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ಪ್ರತಿಪಕ್ಷಗಳು ಪ್ರಶ್ನಿಸುತ್ತಿವೆ.
ರಾಜ್ಯ ಚುನಾವಣೆಗೆ ಪ್ರಚಾರ ಮಾಡುತ್ತಿರುವ ಪ್ರಧಾನಿ ಮತ್ತು ಇತರ ರಾಜಕೀಯ ಮುಖಂಡರನ್ನು ಸ್ಪಷ್ಟವಾಗಿ ಟೀಕಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ: “ಇಂತಹ ದೊಡ್ಡ ಸಂಖ್ಯೆಯ ಅನಾರೋಗ್ಯ ಪೀಡಿತರು ಮತ್ತು ದಾಖಲೆಯ ಸಾವುಗಳು ಕಂಡುಬರುತ್ತಿರುವುದು ಇದೇ ಮೊದಲು” ಎಂದು ಅವರು ಪ್ರಧಾನಿಗೆ ಕುಟುಕಿದ್ದಾರೆ. ಅಲ್ಲದೇ ತಮ್ಮ ಬಂಗಾಳದ ಎಲ್ಲಾ ಚುನಾವಣಾ ರ‍್ಯಾಲಿಗಳನ್ನು ರಾಹುಲ್ ರದ್ದು ಮಾಡಿದ್ದಾರೆ.

“ರೋಮ್ ಸುಟ್ಟುಹೋದಾಗ (ಚಕ್ರವರ್ತಿ) ನೀರೋ ಪಿಟೀಲು ಬಾರಿಸಿದಂತೆ ಸಾಂಕ್ರಾಮಿಕ ಸಮಯದಲ್ಲಿ ಪ್ರಚಾರಕ್ಕೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿಯನ್ನು ಟೀಕಿಸಿದ ಕಾಂಗ್ರೆಸ್ ಟ್ವಿಟ್ಟರ್‌ನಲ್ಲಿ ಎರಡೂವರೆ ನಿಮಿಷಗಳ ವೀಡಿಯೊವನ್ನು ಪೋಸ್ಟ್ ಮಾಡಿದೆ.
ಬಿಜೆಪಿ, ಕಾಂಗ್ರೆಸ್, ಮತ್ತು ಬಂಗಾಳದ ಆಡಳಿತಾರೂಡ ತೃಣಮೂಲ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಚುನಾವಣಾ ರ‍್ಯಾಲಿಗಳಲ್ಲಿ ಕೊವಿಡ್ ಮಾರ್ಗಸೂಚಿಗಳು ಪಾಲನೆಯಾಗುತ್ತಿಲ್ಲ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಕಾರಣಕ್ಕೆ ಬಂಗಾಳದ ನನ್ನ ಎಲ್ಲಾ ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...