Homeಮುಖಪುಟರ‍್ಯಾಲಿಯಲ್ಲಿ ಬೃಹತ್ ಜನಸ್ತೋಮ ಕಂಡು ಉಲ್ಲಸಿತರಾದ ಪ್ರಧಾನಿ: ಮೋದಿಯನ್ನು ರೋಮ್ ದೊರೆ ನೀರೊಗೆ ಹೋಲಿಸಿದ ಕಾಂಗ್ರೆಸ್

ರ‍್ಯಾಲಿಯಲ್ಲಿ ಬೃಹತ್ ಜನಸ್ತೋಮ ಕಂಡು ಉಲ್ಲಸಿತರಾದ ಪ್ರಧಾನಿ: ಮೋದಿಯನ್ನು ರೋಮ್ ದೊರೆ ನೀರೊಗೆ ಹೋಲಿಸಿದ ಕಾಂಗ್ರೆಸ್

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬಂಗಾಳದಲ್ಲಿ ಪ್ರಚಾರ ಮಾಡಿದ್ದು, ಅಸನ್ಸೋಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹೆಚ್ಚಿನ ಜನಸಮೂಹವನ್ನು ನೋಡಿ, ನಾನು ಇಂತಹ ರ‍್ಯಾಲಿ ಎಂದೂ ನೋಡಿರಲಿಲ್ಲ ಎಂದು ಉದ್ಘರಿಸಿದ್ದಾರೆ. ನಂತರ ಕಾಂಗ್ರೆಸ್ ಸೇರಿದಂತೆ ಹಲವರು ಇದನ್ನು ವ್ಯಾಪಕವಾಗಿ ಟೀಕಿಸಿದ್ದು, ಕಾಂಗ್ರೆಸ್ ಪ್ರಧಾನಿಯವರನ್ನು ರೋಮ್ ದೊರೆ ನೀರೊಗೆ ಹೋಲಿಕೆ ಮಾಡಿದೆ.

ಒಂದು ದಿನದಲ್ಲಿ ಭಾರತವು 2.6 ಲಕ್ಷ ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ ಮತ್ತು ಸಕ್ರಿಯ ಪ್ರಕರಣಗಳು ಹೆಚ್ಚಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 16.8 ಲಕ್ಷ ತಲುಪಿರುವಾಗ ಪ್ರಧಾನಿ ಭಾರಿ ಜನಸ್ತೋಮ ಸೇರಿದ್ದನ್ನು ಹೊಗಳಿದ್ದು ಕೆಲವರ ಟೀಕೆಗೆ ಕಾರಣವಾಗಿದೆ.
ಕಾಂಗ್ರೆಸ್ ಪ್ರಧಾನಿಯವರನ್ನು ರೋಮ್ ದೊರೆ ನೋರೊಗೆ ಹೋಲಿಸಿ ಟ್ವಿಟರ್‌ನಲ್ಲಿ ವಿಡಿಯೋ ಒಂದನ್ನು ಹಾಕಿ ವ್ಯಂಗ್ಯ ಮಾಡಿದೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ನಾನು ಎರಡು ಬಾರಿ ಇಲ್ಲಿಗೆ ಬಂದಿದ್ದೇನೆ. ಕೊನೆಯ ಬಾರಿ ನಾನು ಬಾಬುಲ್ಜಿಗೆ (ಅಸನ್ಸೋಲ್ ಸಂಸದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ) ಮತ ಕೇಳಲು ಬಂದಿದ್ದೆ. ಆಗ ಜನಸಮೂಹವು ಇದರಲ್ಲಿ ಕಾಲು ಭಾಗ ಮಾತ್ರವಿತ್ತು’ ಎಂದು ಅವರು ಹೇಳಿದರು.

“ಆದರೆ ಇಂದು, ಎಲ್ಲಾ ದಿಕ್ಕುಗಳಲ್ಲಿಯೂ ನಾನು ಅಪಾರ ಜನಸಂದಣಿಯನ್ನು ನೋಡುತ್ತಿದ್ದೇನೆ … ಮೊದಲ ಬಾರಿಗೆ ಇಂತಹ ರ‍್ಯಾಲಿಗೆ ಸಾಕ್ಷಿಯಾಗಿದ್ದೇನೆ… ಇಂದು, ನೀವು ನಿಮ್ಮ ಶಕ್ತಿಯನ್ನು ತೋರಿಸಿದ್ದೀರಿ. ಮುಂದಿನ ಹಂತವು ಹೆಚ್ಚು ಮುಖ್ಯವಾಗಿದೆ – ಹೋಗಿ ಮತ ಚಲಾಯಿಸಿ ಇತರರನ್ನು ಸಹ ನಿಮ್ಮ ಜೊತೆ ಕರೆದೊಯಿರಿ’ ಎಂದು ಪ್ರಧಾನಿ ಮೋದಿ ಹೇಳಿದರು. ಏಪ್ರಿಲ್ 26 ರಂದು ಅಸನ್ಸೋಲ್‌ನಲ್ಲಿ ಮತದಾನ ನಡೆಯಲಿದೆ.

ಸೋಂಕಿನ ಎರಡನೇ ಅಲೆಯನ್ನು ದೇಶವು ಎದುರಿಸುತ್ತಿರುವ ಕಾರಣ ಚುನಾವಣಾ ರ‍್ಯಾಲಿಗಳಲ್ಲಿ ಪ್ರಧಾನಮಂತ್ರಿ ನಿರಂತರವಾಗಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ಪ್ರತಿಪಕ್ಷಗಳು ಪ್ರಶ್ನಿಸುತ್ತಿವೆ.
ರಾಜ್ಯ ಚುನಾವಣೆಗೆ ಪ್ರಚಾರ ಮಾಡುತ್ತಿರುವ ಪ್ರಧಾನಿ ಮತ್ತು ಇತರ ರಾಜಕೀಯ ಮುಖಂಡರನ್ನು ಸ್ಪಷ್ಟವಾಗಿ ಟೀಕಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ: “ಇಂತಹ ದೊಡ್ಡ ಸಂಖ್ಯೆಯ ಅನಾರೋಗ್ಯ ಪೀಡಿತರು ಮತ್ತು ದಾಖಲೆಯ ಸಾವುಗಳು ಕಂಡುಬರುತ್ತಿರುವುದು ಇದೇ ಮೊದಲು” ಎಂದು ಅವರು ಪ್ರಧಾನಿಗೆ ಕುಟುಕಿದ್ದಾರೆ. ಅಲ್ಲದೇ ತಮ್ಮ ಬಂಗಾಳದ ಎಲ್ಲಾ ಚುನಾವಣಾ ರ‍್ಯಾಲಿಗಳನ್ನು ರಾಹುಲ್ ರದ್ದು ಮಾಡಿದ್ದಾರೆ.

“ರೋಮ್ ಸುಟ್ಟುಹೋದಾಗ (ಚಕ್ರವರ್ತಿ) ನೀರೋ ಪಿಟೀಲು ಬಾರಿಸಿದಂತೆ ಸಾಂಕ್ರಾಮಿಕ ಸಮಯದಲ್ಲಿ ಪ್ರಚಾರಕ್ಕೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿಯನ್ನು ಟೀಕಿಸಿದ ಕಾಂಗ್ರೆಸ್ ಟ್ವಿಟ್ಟರ್‌ನಲ್ಲಿ ಎರಡೂವರೆ ನಿಮಿಷಗಳ ವೀಡಿಯೊವನ್ನು ಪೋಸ್ಟ್ ಮಾಡಿದೆ.
ಬಿಜೆಪಿ, ಕಾಂಗ್ರೆಸ್, ಮತ್ತು ಬಂಗಾಳದ ಆಡಳಿತಾರೂಡ ತೃಣಮೂಲ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಚುನಾವಣಾ ರ‍್ಯಾಲಿಗಳಲ್ಲಿ ಕೊವಿಡ್ ಮಾರ್ಗಸೂಚಿಗಳು ಪಾಲನೆಯಾಗುತ್ತಿಲ್ಲ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಕಾರಣಕ್ಕೆ ಬಂಗಾಳದ ನನ್ನ ಎಲ್ಲಾ ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...