Homeಮುಖಪುಟರ‍್ಯಾಲಿಯಲ್ಲಿ ಬೃಹತ್ ಜನಸ್ತೋಮ ಕಂಡು ಉಲ್ಲಸಿತರಾದ ಪ್ರಧಾನಿ: ಮೋದಿಯನ್ನು ರೋಮ್ ದೊರೆ ನೀರೊಗೆ ಹೋಲಿಸಿದ ಕಾಂಗ್ರೆಸ್

ರ‍್ಯಾಲಿಯಲ್ಲಿ ಬೃಹತ್ ಜನಸ್ತೋಮ ಕಂಡು ಉಲ್ಲಸಿತರಾದ ಪ್ರಧಾನಿ: ಮೋದಿಯನ್ನು ರೋಮ್ ದೊರೆ ನೀರೊಗೆ ಹೋಲಿಸಿದ ಕಾಂಗ್ರೆಸ್

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬಂಗಾಳದಲ್ಲಿ ಪ್ರಚಾರ ಮಾಡಿದ್ದು, ಅಸನ್ಸೋಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹೆಚ್ಚಿನ ಜನಸಮೂಹವನ್ನು ನೋಡಿ, ನಾನು ಇಂತಹ ರ‍್ಯಾಲಿ ಎಂದೂ ನೋಡಿರಲಿಲ್ಲ ಎಂದು ಉದ್ಘರಿಸಿದ್ದಾರೆ. ನಂತರ ಕಾಂಗ್ರೆಸ್ ಸೇರಿದಂತೆ ಹಲವರು ಇದನ್ನು ವ್ಯಾಪಕವಾಗಿ ಟೀಕಿಸಿದ್ದು, ಕಾಂಗ್ರೆಸ್ ಪ್ರಧಾನಿಯವರನ್ನು ರೋಮ್ ದೊರೆ ನೀರೊಗೆ ಹೋಲಿಕೆ ಮಾಡಿದೆ.

ಒಂದು ದಿನದಲ್ಲಿ ಭಾರತವು 2.6 ಲಕ್ಷ ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ ಮತ್ತು ಸಕ್ರಿಯ ಪ್ರಕರಣಗಳು ಹೆಚ್ಚಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 16.8 ಲಕ್ಷ ತಲುಪಿರುವಾಗ ಪ್ರಧಾನಿ ಭಾರಿ ಜನಸ್ತೋಮ ಸೇರಿದ್ದನ್ನು ಹೊಗಳಿದ್ದು ಕೆಲವರ ಟೀಕೆಗೆ ಕಾರಣವಾಗಿದೆ.
ಕಾಂಗ್ರೆಸ್ ಪ್ರಧಾನಿಯವರನ್ನು ರೋಮ್ ದೊರೆ ನೋರೊಗೆ ಹೋಲಿಸಿ ಟ್ವಿಟರ್‌ನಲ್ಲಿ ವಿಡಿಯೋ ಒಂದನ್ನು ಹಾಕಿ ವ್ಯಂಗ್ಯ ಮಾಡಿದೆ.

“ಲೋಕಸಭಾ ಚುನಾವಣೆಯ ಸಮಯದಲ್ಲಿ ನಾನು ಎರಡು ಬಾರಿ ಇಲ್ಲಿಗೆ ಬಂದಿದ್ದೇನೆ. ಕೊನೆಯ ಬಾರಿ ನಾನು ಬಾಬುಲ್ಜಿಗೆ (ಅಸನ್ಸೋಲ್ ಸಂಸದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ) ಮತ ಕೇಳಲು ಬಂದಿದ್ದೆ. ಆಗ ಜನಸಮೂಹವು ಇದರಲ್ಲಿ ಕಾಲು ಭಾಗ ಮಾತ್ರವಿತ್ತು’ ಎಂದು ಅವರು ಹೇಳಿದರು.

“ಆದರೆ ಇಂದು, ಎಲ್ಲಾ ದಿಕ್ಕುಗಳಲ್ಲಿಯೂ ನಾನು ಅಪಾರ ಜನಸಂದಣಿಯನ್ನು ನೋಡುತ್ತಿದ್ದೇನೆ … ಮೊದಲ ಬಾರಿಗೆ ಇಂತಹ ರ‍್ಯಾಲಿಗೆ ಸಾಕ್ಷಿಯಾಗಿದ್ದೇನೆ… ಇಂದು, ನೀವು ನಿಮ್ಮ ಶಕ್ತಿಯನ್ನು ತೋರಿಸಿದ್ದೀರಿ. ಮುಂದಿನ ಹಂತವು ಹೆಚ್ಚು ಮುಖ್ಯವಾಗಿದೆ – ಹೋಗಿ ಮತ ಚಲಾಯಿಸಿ ಇತರರನ್ನು ಸಹ ನಿಮ್ಮ ಜೊತೆ ಕರೆದೊಯಿರಿ’ ಎಂದು ಪ್ರಧಾನಿ ಮೋದಿ ಹೇಳಿದರು. ಏಪ್ರಿಲ್ 26 ರಂದು ಅಸನ್ಸೋಲ್‌ನಲ್ಲಿ ಮತದಾನ ನಡೆಯಲಿದೆ.

ಸೋಂಕಿನ ಎರಡನೇ ಅಲೆಯನ್ನು ದೇಶವು ಎದುರಿಸುತ್ತಿರುವ ಕಾರಣ ಚುನಾವಣಾ ರ‍್ಯಾಲಿಗಳಲ್ಲಿ ಪ್ರಧಾನಮಂತ್ರಿ ನಿರಂತರವಾಗಿ ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು ಪ್ರತಿಪಕ್ಷಗಳು ಪ್ರಶ್ನಿಸುತ್ತಿವೆ.
ರಾಜ್ಯ ಚುನಾವಣೆಗೆ ಪ್ರಚಾರ ಮಾಡುತ್ತಿರುವ ಪ್ರಧಾನಿ ಮತ್ತು ಇತರ ರಾಜಕೀಯ ಮುಖಂಡರನ್ನು ಸ್ಪಷ್ಟವಾಗಿ ಟೀಕಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ: “ಇಂತಹ ದೊಡ್ಡ ಸಂಖ್ಯೆಯ ಅನಾರೋಗ್ಯ ಪೀಡಿತರು ಮತ್ತು ದಾಖಲೆಯ ಸಾವುಗಳು ಕಂಡುಬರುತ್ತಿರುವುದು ಇದೇ ಮೊದಲು” ಎಂದು ಅವರು ಪ್ರಧಾನಿಗೆ ಕುಟುಕಿದ್ದಾರೆ. ಅಲ್ಲದೇ ತಮ್ಮ ಬಂಗಾಳದ ಎಲ್ಲಾ ಚುನಾವಣಾ ರ‍್ಯಾಲಿಗಳನ್ನು ರಾಹುಲ್ ರದ್ದು ಮಾಡಿದ್ದಾರೆ.

“ರೋಮ್ ಸುಟ್ಟುಹೋದಾಗ (ಚಕ್ರವರ್ತಿ) ನೀರೋ ಪಿಟೀಲು ಬಾರಿಸಿದಂತೆ ಸಾಂಕ್ರಾಮಿಕ ಸಮಯದಲ್ಲಿ ಪ್ರಚಾರಕ್ಕೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿಯನ್ನು ಟೀಕಿಸಿದ ಕಾಂಗ್ರೆಸ್ ಟ್ವಿಟ್ಟರ್‌ನಲ್ಲಿ ಎರಡೂವರೆ ನಿಮಿಷಗಳ ವೀಡಿಯೊವನ್ನು ಪೋಸ್ಟ್ ಮಾಡಿದೆ.
ಬಿಜೆಪಿ, ಕಾಂಗ್ರೆಸ್, ಮತ್ತು ಬಂಗಾಳದ ಆಡಳಿತಾರೂಡ ತೃಣಮೂಲ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಚುನಾವಣಾ ರ‍್ಯಾಲಿಗಳಲ್ಲಿ ಕೊವಿಡ್ ಮಾರ್ಗಸೂಚಿಗಳು ಪಾಲನೆಯಾಗುತ್ತಿಲ್ಲ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಕಾರಣಕ್ಕೆ ಬಂಗಾಳದ ನನ್ನ ಎಲ್ಲಾ ಚುನಾವಣಾ ರ್ಯಾಲಿಗಳನ್ನು ರದ್ದುಗೊಳಿಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...